ರಾಜಕೀಯ
ಬಿಜೆಪಿಯವರಂತೆ ಸದನದಲ್ಲಿ ಕೂತು ಬ್ಲೂ ಪಿಲ್ಮ್ ನೋಡೋಕಾಗುತ್ತಾ | ಎಸ್.ಎಲ್.ಭೈರೇಗೌಡ ವ್ಯಂಗ್ಯ

ಸುದ್ದಿದಿನ,ಚಿಕ್ಕಮಗಳೂರು | ರೈತನ ಮಗ ನಾಟಿ ಮಾಡ್ದೆ, ಕ್ಲಬ್ ನಲ್ಲಿ ಡ್ಯಾನ್ಸ್ ಮಾಡೋಕಾಗುತ್ತಾ, ಇಲ್ಲ ಬಿಜೆಪಿಯವರಂತೆ ಸದನದಲ್ಲಿ ಕೂತು ಬ್ಲೂ ಫಿಲ್ಮಂ ನೋಡೋಕಾಗುತ್ತಾ,ಬಿಜೆಪಿಯವ್ರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡ್ತಿದ್ದಾರೆ ಎಂದು ಈಶ್ವರಪ್ಪಗೆ ಚಿಕ್ಕಮಗಳೂರಿನಲ್ಲಿ ತಿರುಗೇಟು ನೀಡಿದರು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಧರ್ಮೇಗೌಡ.
ನಾವು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಬಿಜೆಪಿಯವ್ರಿಗೆ ಚೆಂದ ಕಾಣಲ್ಲ.ನಮ್ಮ ಬಗ್ಗೆ ಪ್ರತಿನಿತ್ಯ ಮಾತನಾಡದಿದ್ರೆ ಬಿಜೆಪಿಯವರಿಗೆ ಸಮಾಧಾನ ಆಗಲ್ಲ.ನಾವು ಕೂತ್ರು ನಿಂತ್ರು ಅವರು ಮಾತನಾಡೋದನ್ನು ನಿಲ್ಲುಸುತ್ತಿಲ್ಲ.
ನಮ್ಮ ಬಗ್ಗೆ ಮಾತನಾಡದಿದ್ರೆ ತಿಂದ ಅನ್ನ ಮೈಗೆ ಹತ್ತಲ್ಲ.ನಾವು ಏನೇ ಮಾಡಿದ್ರು ಅವ್ರು ಮಾತಾಡ್ಬೇಕು, ಮಾತಾಡ್ತಾರೆ,ಸತ್ಯ ಏನೆಂಬುದು ಜನರಿಗೆ ಗೊತ್ತು ಎಂದು ಬಿಜೆಪಿ ವಿರುದ್ದವಾಗ್ದಾಳಿ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಹರಿಹರ – ಹೊನ್ನಾಳಿ ತಾಲೂಕಿನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ಹರಿಹರ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ24(12) 4(2) 3(2) 4(2) 1(1) 12(5)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ |ಉಪಾಧ್ಯಕ್ಷ
- ಸಾರಥಿ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕೊಂಡಜ್ಜಿ : ಸಾಮಾನ್ಯ ಸಾಮಾನ್ಯ(ಮಹಿಳೆ)
- ಗುತ್ತೂರು : ಅನುಸೂಚಿತ ಜಾತಿ(ಮಹಿಳೆ) ಸಾಮಾನ್ಯ
- ಹನಗವಾಡಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಜನಹಳ್ಳಿ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ನಂದಿಗಾವಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಬೆಳ್ಳೂಡಿ: ಸಾಮಾನ್ಯ(ಮಹಿಳೆ), ಸಾಮಾನ್ಯ
- ಬನ್ನಿಕೋಡು: ಅನುಸೂಚಿತ ಪಂಗಡ(ಮಹಿಳೆ), ಹಿಂದುಳಿದ ಅ ವರ್ಗ
- ಸಾಲಕಟ್ಟೆ: ಸಾಮಾನ್ಯ , ಸಾಮಾನ್ಯ
- ದೇವರಬೆಳೆಕೆರೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಕುಣಿಬೆಳಕೆರೆ : ಹಿಂದುಳಿದ ಅ ವರ್ಗ(ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಭಾನುವಳ್ಳಿ: ಹಿಂದುಳಿದ ಬ ವರ್ಗ(ಮಹಿಳೆ), ಸಾಮಾನ್ಯ
- ಸಿರಿಗೆರೆ : ಅನುಸೂಚಿತ ಪಂಗಡ(ಮಹಿಳೆ) , ಹಿಂದುಳಿದ ಬ ವರ್ಗ(ಮಹಿಳೆ)
- ಕಡರನಾಯ್ಕನಹಳ್ಳಿ : ಸಾಮಾನ್ಯ , ಹಿದುಳಿದ ಅ ವರ್ಗ(ಮಹಿಳೆ)
- ಉಕ್ಕಡಗಾತ್ರಿ : ಅನುಸೂಚಿತ ಜಾತಿ, ಹಿಂದುಳಿದ ಅ ವರ್ಗ(ಮಹಿಳೆ)
- ಯಲವಟ್ಟಿ : ಸಾಮಾನ್ಯ, ಅನುಸೂಚಿತ ಜಾತಿ
- ಕುಂಬಳೂರು : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಜಿಗಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕೊಕ್ಕನೂರು : ಸಾಮಾನ್ಯ , ಅನುಸೂಚಿತ ಜಾತಿ(ಮಹಿಳೆ)
- ವಾಸನ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಹರಳಹಳ್ಳಿ : ಹಿಂದುಳಿದ ಅ ವರ್ಗ(ಮಹಿಳೆ), ಸಾಮಾನ್ಯ(ಮಹಿಳೆ)
- ಹಾಲಿವಾಣ : ಹಿಂದುಳಿದ ‘ಅ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಎಳೆಹೊಳೆ : ಸಾಮಾನ್ಯ ,ಸಾಮಾನ್ಯ(ಮಹಿಳೆ)
- ಕೆ.ಬೇವಿನಹಳ್ಳಿ : ಸಾಮಾನ್ಯ, ಹಿಂದುಳಿದ ಅ ವರ್ಗ
ಹೊನ್ನಾಳಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ29(15) 5(3) 2(1) 6(3) 1(1) 15(7)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಕತ್ತಿಗೆ : ಸಾಮಾನ್ಯ, ಅನುಸೂಚಿ ಪಂಗಡ(ಮಹಿಳೆ)
- ಹತ್ತೂರು : ಸಾಮಾನ್ಯ, ಅನುಸೂಚಿ ಪಂಗಡ
- ಹೆಚ್ ಗೋಪಗೊಂಡನಹಳ್ಳಿ: ಹಿಂದುಳಿದ ‘ಅ’ ವರ್ಗ, ಸಾಮಾನ್ಯ
- ಹನುಮಸಾಗರ: ಅನುಸೂಚಿ ಪಂಗಡ, ಸಾಮಾನ್ಯ(ಮಹಿಳೆ)
- ಸೊರಟೂರು : ಹಿಂದುಳಿದ ‘ಅ’ ವರ್ಗ (ಮಹಿಳೆ), ಹಿಂದುಳಿದ ‘ಬ’ ವರ್ಗ(ಮಹಿಳೆ)
- ಹೆಚ್ ಕಡದಕಟ್ಟೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಅರಬಗಟ್ಟ ಸಾಮಾನ್ಯ(ಮಹಿಳೆ) ಹಿಂದುಳಿದ ‘ಅ’ ವರ್ಗ (ಮಹಿಳೆ)
- ಹರಳಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೇಗೋಣಿಗೆರೆ : ಸಾಮಾನ್ಯ(ಮಹಿಳೆ) , ಸಾಮಾನ್ಯ
- ಬೇಲಿಮಲ್ಲೂರು : ಹಿಂದುಳಿದ ‘ಅ’ ವರ್ಗ (ಮಹಿಳೆ) ಅನುಸೂಚಿತ ಜಾತಿ
- ಅರಕೆರೆ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಮಾಸಡಿ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಕಮ್ಮಾರಗಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ತಿಮ್ಲಾಪುರ : ಸಾಮಾನ್ಯ(ಮಹಿಳೆ) , ಅನುಸೂಚಿ ಜಾತಿ(ಮಹಿಳೆ)
- ಕುಂಬಳೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಕುಂದೂರು ಹಿಂದುಳಿದ ‘ಅ’ ವರ್ಗ ಸಾಮಾನ್ಯ(ಮಹಿಳೆ)
- ಯಕ್ಕನಹಳ್ಳಿ , ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೂಲಂಬಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮುಕ್ತೇನಹಳ್ಳಿ : ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ
- ಬನ್ನಿಕೋಡು : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಬೆನಕನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ) , ಸಾಮಾನ್ಯ
- ಬೀರಗೊಂಡನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಂಪುರ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಸಾಸ್ವೇಹಳ್ಳಿ : ಹಿಂದುಳಿದ ‘ಬ’ ವರ್ಗ (ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಕುಳಗಟ್ಟೆ: ಹಿಂದುಳಿದ ‘ಅ’ ವರ್ಗ , ಸಾಮಾನ್ಯ(ಮಹಿಳೆ)
- ಕ್ಯಾಸನಕೆರೆ : ಸಾಮಾನ್ಯ, ಸಾಮಾನ್ಯ((ಮಹಿಳೆ)
- ಹೊಸಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಲಿಂಗಾಪುರ : ಅನುಸೂಚಿತ ಜಾತಿ, ಸಾಮಾನ್ಯ
- ಹುಣಸಘಟ್ಟೆ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಬುಧವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ರಾಜಕೀಯ
ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಖಚಿತ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಏಕೆ ಬಂಧಿಸಿಲ್ಲ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? ಎಂದು ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ? 3/4
— Siddaramaiah (@siddaramaiah) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ2 days ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ2 days ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ದಿನದ ಸುದ್ದಿ3 days ago
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?
-
ಬಹಿರಂಗ4 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ಅಂತರಂಗ2 days ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ದಿನದ ಸುದ್ದಿ3 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ2 days ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ