ದಿನದ ಸುದ್ದಿ
ಭಾರತ್ ಬಂದ್ ಸಮ್ಮಿಶ್ರ ಸರ್ಕಾರದ ಷಡ್ಯಂತ್ರ
ಸುದ್ದಿದಿನ ಡೆಸ್ಕ್: ಸೋಮವಾರ ಕರೆ ನೀಡಿದ ಭಾರತ್ ಬಂದ್ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತ್ರವಾಗಿದ್ದು, ದುರುದ್ದೇಶದಿಂದ ಕೂಡಿದೆ. ಇಂಧನ ಬೆಲೆ ಏರಿಕೆ ಯಾಕಾಗಿದೆ ಎಂಬುದು ಜಗತ್ತಿಗೇ ಗೊತ್ತಿರುವ ವಿಷಯ. ಆದರೆ, ಸಮ್ಮಿಶ್ರ ಸರ್ಕಾರ ವ್ಯವಸ್ಥಿತವಾಗಿ ಬಂದ್ ಮಾಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ತೈಲ ಬೆಲೆ ಏರಿಕೆ ಹೆಸರಿನಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಒಂದು ಬಂದ್ ಮಾಡಬೇಕೆಮದಿದ್ದರೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದ್ ಮಾಡಲಿ. ಇದಕ್ಕೆ ನಾವು ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.