ದಿನದ ಸುದ್ದಿ
ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್
![](https://suddidina.com/wp-content/uploads/2019/03/Dr.b.r.ambedkar-suddidina-17.jpg)
- ಶಿವರಾಜು ಎ ಆರ್, ತುಮಕೂರು
ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರು ಪ್ರಶ್ನಾತೀತವಾಗಿ, ಕಾಲಾತೀತವಾಗಿ ಈವರೆಗೆ ಭಾರತ ಕಂಡ ಮಹಾನ್ ಮೇಧಾವಿಗಳಲ್ಲಿ ಅಗ್ರಗಣ್ಯರು.
ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಅಂಬವಾಡೆ ಎಂಬ ಗ್ರಾಮದ ಮಹರ್ ಎಂಬ ಜಾತಿಯಲ್ಲಿ ರಾಮ್ ಜಿ ಸಕ್ಪಾಲ್ ಮತ್ತು ಭೀಮಾಬಾಯಿ ದಂಪತಿಗಳ 14ನೇ ಮಗನಾಗಿ 1891ಏಪ್ರಿಲ್14ರಂದು ಜನಿಸಿದ ಅಂಬೇಡ್ಕರ್ ರವರ ಮೂಲ ಹೆಸರು ಭೀಮ ಎಂದು. ಬಾಲ್ಯದಲ್ಲಿ ಜಾತಿಯ ಕಾರಣಕ್ಕೆ ಅನೇಕ ಅವಮಾನ, ತಿರಸ್ಕಾರ, ಭೇದವನ್ನು, ಕೀಳಿರಿಮೆಯನ್ನು ಅನುಭವಿಸಿದ ಅಂಬೇಡ್ಕರ್ ರವರು ತಮ್ಮ ಬಡತನ, ಸಂಕಷ್ಟಗಳ ನಡುವೆ ರಮಾಬಾಯಿರವರನ್ನು ಬಾಲ್ಯವಿವಾಹವಾದರೂ ಸಹ ಓದಿನ ಕಡೆ ಅಪಾರ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.
ತೀವ್ರ ಬಡತನದ ನಡುವೆ ಬರೊಡ ಮಹಾರಾಜರ ನೆರವಿನೊಂದಿಗೆ ಮುಂಬೈ ವಿಶ್ವವಿದ್ಯಾಲಯ,
ಕೊಲಂಬಿಯಾ ವಿಶ್ವವಿದ್ಯಾಲಯ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿ ಆ ಕಾಲಘಟ್ಟದಲ್ಲಿ ಇಡೀ ಭಾರತದಲ್ಲಿಯೇ ಯಾರೂ ಸಹ ಸಂಪಾದಿಸಿರದ ವಿದ್ಯಾರ್ಹತೆಗಳನ್ನು ಸಂಪಾದಿಸಿದರು. ಈಗಲೂ ಸಹ ಜಗತ್ತಿನ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬಲ್ಲವರು. ಇಡೀ ಭಾರತದ ಎಲ್ಲಾ ಸಾಮಾಜಿಕ ಸಮಸ್ಯೆಗಳಿಗೆ ಯಾವುದೇ ಭೇದ ಭಾವವಿಲ್ಲದೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿದರು.
ಮೂಲತಃ ಅವರೊಬ್ಬ ಅರ್ಥಶಾಸ್ತ್ರಜ್ಞರಾದರೂ ಅವರೊಬ್ಬ ಸಮಾಜಶಾಸ್ತ್ರಜ್ಞ, ಇತಿಹಾಸ ತಜ್ಞ, ಸಮಾನತೆಯ ಹೋರಾಟಗಾರ, ಒಬ್ಬ ಅದ್ಬುತ ವಕೀಲರು,
ಕಾರ್ಮಿಕರ, ಮಹಿಳೆಯರ,ಅಲ್ಪಸಂಖ್ಯಾತರ, ದೀನ ದಲಿತರ ಹಕ್ಕುಗಳ ಪರ ಧಣಿವರಿಯದ ಹೋರಾಟಗಾರ, ನೀರಾವರಿ ತಜ್ಞ ಇತ್ಯಾದಿ ಬಹುಮುಖ ಪಾಂಡಿತ್ಯ ಹೊಂದಿದ್ದವರು.
ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಪ್ರಪಂಚದ ಬಹುದೊಡ್ಡ, ಅತ್ಯಂತ ಶ್ರೇಷ್ಠ ಎನಿಸಿದ ಭಾರತದ ಸಂವಿಧಾನವನ್ನು ಉಳಿದ ಸದಸ್ಯರ ರಾಜೀನಾಮೆ, ಸಾವು, ತೀವ್ರ ನಿರ್ಲಕ್ಷ್ಯ ಮತ್ತು ಉದಾಸೀನಗಳ ನಡುವೆ ಏಕಾಂಗಿಯಾಗಿ ಸಿದ್ಧಗೊಳಿಸಿದ ಪ್ರಚಂಡ ಬುದ್ಧಿವಂತ, ಮಹಾನ್ ಮೇಧಾವಿ. ಅಲ್ಲದೇ ಸಂವಿಧಾನದ ಮೇಲೆ ಸುಮಾರು ಎರಡೂವರೆ ವರ್ಷಗಳ ಕಾಲ ನಡೆದ ಚರ್ಚೆಯಲ್ಲಿ ಇಡೀ ಸಂಸತ್ತಿಗೆ ಏಕಾಂಗಿಯಾಗಿ ಉತ್ತರಿಸಿದ ಮಹಾನ್ ಜ್ಞಾನಿ.
ಪ್ರಾಬ್ಲಮ್ ಆಫ್ ರೂಪೀ, ಹೂ ವರ್ ದಿ ಶೂದ್ರಾಸ್, ಹೂ ವರ್ ದಿ ಅನ್ ಟಚಬಲ್ಸ್ ಮುಂತಾದ ಅವರ ಬರಹಗಳು ಮಾನವಕುಲವನ್ನು ಕಣ್ತೆರೆಸುವಂತಿವೆ. ವೇದ ಉಪನಿಷತ್ತು ಇತ್ಯಾದಿಗಳನ್ನು ಓದಿಕೊಂಡು ಸಮಕಾಲೀನ ಸಾಮಾಜಿಕ ಸ್ಥಿತಿಗಳ ಹಿನ್ನೆಲೆಯಲ್ಲಿ ವಿಶ್ಲೇಷಣೆ ಮಾಡಿದ ಸಮಾಜಮುಖಿ ಚಿಂತಕ. ಅವರ ಸಾಧನೆಗಳನ್ನು ಈ ಒಂದು ಪುಟ್ಟ ಲೇಖನದಲ್ಲಿ ಹಿಡಿದಿಡಲು ಸಾಧ್ಯವಿಲ್ಲ.
ಅವರ ಎಲ್ಲಾ ಸಾಧನೆಗಳನ್ನು ಬದಿಗಿರಿಸಿ ಅವರನ್ನು ಒಬ್ಬ ದಲಿತರ ನಾಯಕ, ದಲಿತರಿಗೆ ಮೀಸಲಾತಿ ಕೊಡಿಸಿದವರು ಇತ್ಯಾದಿ ಸೀಮಿತಗೊಳಿಸಿ ಅವರಮೇಲೆ ಐತಿಹಾಸಿಕ ಅನ್ಯಾಯ ಮಾಡುತ್ತಿರುವುದು. ನಿಜವಾಗಿಯೂ ದೇಶದ್ರೋಹದ ಹಾಗೂ ಅತ್ಯಂತ ಅಮ ಅಮಾನವೀಯವಾದ ನಡವಳಿಕೆಯೇ ಸರಿ.
ಅವರ ಬಗೆಗಿನ ಎಲ್ಲಾ ರೀತಿಯ ಪೂರ್ವಾಗ್ರಹಗಳನ್ನು ತ್ಯಜಿಸಿ, ಅವರ ಬಗ್ಗೆ ತಿಳಿಯಬೇಕಾದರೆ ಅವರ ಪುಸ್ತಕಗಳನ್ನು ಓದುವುದು ಮತ್ತು ಅವುಗಳನ್ನು ಗ್ರಹಿಸಿ ವೈಯಕ್ತಿಕವಾಗಿ ಜೀವನದಲ್ಲಿ ಸಾರವಜನಿಕ ನೀತಿ ನಿರೂಪಣೆಯ ಸಂದರ್ಭದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರನ್ನು ಗೌರವಿಸುವ, ಅವರನ್ನು ಸತ್ಕರಿಸುವ ಹಾಗೂ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸರಿಯಾದ ಮಾರ್ಗ ಎಂಬುದು ನನ್ನ ಭಾವನೆ.. ಅವರ ಪುಸ್ತಕ ಓದುವ ಮನುಷ್ಯ ಒಬ್ಬ ಅತ್ಯುತ್ತಮ ಜ್ಞಾನಿಯಾಗಿ, ಮಾನವೀಯ ಕಾಳಜಿಯುಳ್ಳ ನಾಗರೀಕನಾಗಿ ರೂಪುಗೊಳ್ಳುತ್ತಾನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!