ದಿನದ ಸುದ್ದಿ
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

- ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ ಕೋರ್ಟ್ ಗೆ ಹಾಜರಾಗದ್ದಾಗ ಪ್ರಶ್ನೆ ಕೇಳಲು ಮುಂದಾದ ಪತ್ರಕರ್ತರಿಗೆ .ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ಕೊಲೆ ಬೆದರಿಕೆ ಹಾಕಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ವಿಡಿಯೋ ಮಾಡಿದಕ್ಕೆ ವಾರ್ತಾ ಭಾರತಿಯ ಪತ್ರಿಕೆಯ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ಮೇಲೆ ಕೆ.ಎಂ.ಎಫ್ ನ ಅಧ್ಯಕ್ಷ ಭೀಮಾ ನಾಯ್ಕ ಹಲ್ಲೆ ಮಾಡಿ, ಕೊಲೆ
ಬೆದರಿಕೆ ಹಾಕಿದ ದುರ್ಘಟನೆ ವಿಜಯನಗರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಕರ್ನಾಟಕ ರಾಜ್ಯ ಸರ್ಕಾರದ ಕೆ.ಎಂ.ಎಫ್ ಹಾಲಿ ಅಧ್ಯಕ್ಷ ಭೀಮಾನಾಯ್ಕ್, ತನ್ನ ಕಾರಿಗೆ ಭೀಮಾನಾಯ್ಕ್ , ಹಗರಿಬೊಮ್ಮನಹಳ್ಳಿ ತಾಲೂಕಿನ ಎಂ.ಎಲ್.ಎ ಶಾಸಕರು ಎನ್ನುವ ಪಾಸು ಅಂಟಿಸಿಕೊಂಡು ಹಗರಿಬೊಮ್ಮನಹಳ್ಳಿಯಿಂದ ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ತಹಶಿಲ್ದಾರರ ಕಂದಾಯ ಇಲಾಖೆಗೆ ಹಾಗೂ ಕೋರ್ಟ್ ಗೆ ಆಗಮಿಸಿದ್ದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಹಶಿಲ್ದಾರರ ಕಚೇರಿಗೆ ರಿಜಿಸ್ಟರ್ ಹಾಗೂ ಆಸ್ತಿ ವಿಚಾರವಾಗಿ ಹೊಸಪೇಟೆ ಕೋರ್ಟ್ ಹಾಜರಾದಾಗ ಎರಡು ದಿನಗಳಿಂದ ಭೀಮಾನಾಯ್ಕ್ ಅವರು ಕಾರಿಗೆ ಕೆ.ಎ 41 ಎಂ.ಎಫ್ 4599 ಈ ವಾಹನಕ್ಕೆ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದೆವೆ ಎನ್ನುವ ಕಾರು ಚಾಲಕ, ಈ ರೀತಿ ಸಂಚಾರ ಮಾಡಿದ್ದು ದುರ್ಘಟನೆ ನಡೆದಿದೆ.
ಇನ್ನು ಈ ವಿಚಾರವಾಗಿ ಏಕೆ ? ತಹಶಿಲ್ದಾರರ ಕಚೇರಿ ಬಂದಿರಾ, ಪತ್ರಕರ್ತರ ವಿಡಿಯೋ ಮಾಡಿ, ಪ್ರಶ್ನೆ ಕೇಳಿದಕ್ಕೆ , ಏಕೆ ? ರೀ ವಿಡಿಯೋ ಮಾಡ್ತಿರಾ ಕಂದಾಯ ಇಲಾಖೆಗೆ ಬರಬಾರದ ಎಂದು ಏರು ಧ್ವನಿಯಲ್ಲಿ ಮಾತನಾಡಿದರು.
ಹೊಸಪೇಟೆ ಈಟಿವಿ ಭಾರತ್ ವರದಿಗಾರ ಗಿರೀಶ್ ಕುಮಾರ್ ಗೌಡ ಹಾಗೂ ವಾರ್ತಾ ಭಾರತೀ ಪತ್ರಿಕೆಯ ವರದಿಗಾರರಾದ ಮಹಮ್ಮದ್ ಗೌಸ್ ಅವರು ಭೀಮಾನಾಯ್ಕ್ ಅವರು ಹೊಸಪೇಟೆ ಬಂದ ವಿಚಾರ ಬಗ್ಗೆ ಹಾಗೂ ಇನ್ನಿತರ ಕಾಂಗ್ರೆಸ್ ಪಕ್ಷದ ಬೆಳವಣಿಗೆ ವಿಚಾರವಾಗಿ ಕೇಳಬೇಕೆಂದು ಇದ್ದರೆ ಭೀಮಾನಾಯ್ಕ್ “ನೋ ಕಾಮೆಂಟ್ಸ್’ ಎನ್ನುವ ಉತ್ತರ ನೀಡಿದ್ದರು. ನಂತರ ಕಾರು ಮುಂದಕ್ಕೆ ಹೋಗಿ ನಂತರ ವಾಪಾಸ್ಸು ಬಂದು, ಪತ್ರಕರ್ತರಾದ ವಿಜಯನಗರ ಜಿಲ್ಲೆ ವಾರ್ತಾ ಭಾರತಿ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ವಿಡಿಯೋ ಮಾಡಿದಕ್ಕೆ ಅವರಿಗೆ ಅವಾಚ್ಯ ಶಬ್ಧಗಳಿಂದ ಬೈದು, ಅವರ ಮೊಬೈಲ್ ಕಳಿಸಿಕೊಂಡು, ಕೈ ಮುರಿದು ಹಲ್ಲೆ ಮಾಡಿದ್ದಾರೆ. ಅವರ ಬೆಂಬಲಿಗರು ನಿಮ್ಮನ್ನ ನೋಡಿ ಕೊಳ್ಳುತ್ತೇವೆ, ಕೊಲೆ ಮಾಡುವ ಬೆದರಿಕೆ ಹಾಗೂ ದಬ್ಬಾಳಿಕೆ ಮಾಡಿದರು. ನಂತರ ಕೋರ್ಟ್ ನಲ್ಲಿ ಇದ್ದ ವಕೀಲರು ಇನ್ನಿತರರು ಆಗಮಿಸಿದ ನಂತರ ಅಲ್ಲಿಂದ ಕಾಲು ಕಿತ್ತಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಭೀಮಾನಾಯ್ಕ್ ರಿಂದ ನಾಚಿಕೆಗೇಡು
ಇನ್ನು ನಾಚಿಕೆಗೆಡಿನ ಸಂಗತಿಯಾಗಿ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಹಗರಿಬೊಮ್ಮನಹಳ್ಳಿ ಶಾಸಕ ಎಂದು ಪಾಸು ಇಟ್ಟುಕೊಂಡು ಊರೆಲ್ಲಾ ಸುತ್ತಿದ್ದು ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿ ಆಗಿದೆ.
ಇನ್ನು ಈ ವಿಚಾರವಾಗಿ ಕೋರ್ಟ್ ನಲ್ಲಿ ಇದ್ದ ಕಾರಿನ ಮೇಲೆ ಪಾಸು ಇರುವ ಬಗ್ಗೆ ವಿಡಿಯೋ ಮಾಡಿದ ನಂತರ ಕಾರು ಚಾಲಕ ಇಲ್ಲ ಸರ್, ಎರಡು ದಿನಗಳಿಂದ ಅದೇ ಪಾಸು ಇಟ್ಟುಕೊಂಡು ಓಡಾಡಿದ್ದೆವೆ. ಈಗ ತೆಗೆದಿದ್ದೆವೆ ವಿಡಿಯೋ ಡಿಲಿಟ್ ಮಾಡಿ ಎಂದರು. ಇನ್ನು ಭೀಮಾನಾಯ್ಕ್ ಗನ್ ಮ್ಯಾನ್ ಹಾಗೂ ಅವರ ಬೆಂಬಲಿಗರು ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ದೌರ್ಜನ್ಯ ಮಾಡಿ, ದಬ್ಬಾಳಿಕೆಯನ್ನು ಮಾಡಿದ್ದಾರೆ. ಅವರದ್ದೆ ತಪ್ಪು ಹಿಡಿದುಕೊಂಡು ಪತ್ರಕರ್ತರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಸಂಗತಿ ಇದು ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿಯಾಗಿದೆ.
ಭೀಮಾನಾಯ್ಕ್ ಕಾರಿನ, ಕಾರು ಚಾಲಕನ ಮುಂಭಾಗದ ಗ್ಲಾಸ್ ನಲ್ಲಿ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದರು. ಭೀಮಾನಾಯ್ಕ್ ಹಾಗೂ ಗನ್ ಮ್ಯಾನ್ ಹಾಗೂ ಬೆಂಬಲಿಗರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ.
ಮಾಧ್ಯಮದ ಮಿತ್ರರ ಮೇಲೆ ಹಲ್ಲೆ ಮಾಡೋ ಅಧಿಕಾರ ಇಲ್ಲ, ಮಾಧ್ಯಮದವರು ಪ್ರಶ್ನೆ ಕೇಳಿದರೆ ಉತ್ತರ ಕೊಡಬೇಕು ಇಲ್ಲದಿದ್ದರೆ ಆಮೇಲೆ ಮಾತನಾಡುವೆ ಎಂದು ಹೇಳಬೇಕು. ಅವರ ಮೇಲೆ ಹಲ್ಲೆ ಮಾಡೋದ್ ಒಳ್ಳೆಯದಲ್ಲ. ಭೀಮಾನಾಯ್ಕ್ ಎಸ್, ಶಾಸಕರು, ಎಂ.ಎಲ್.ಎ ಅಂತ ಇಟ್ಟುಕೊಂಡು ಓಡಾಡೋದ್ ಸರಿಯಲ್ಲ ಎಂದರು.
|ನೇಮರಾಜ್ ನಾಯ್ಕ್, ಹಾಲಿ ಶಾಸಕರು ಕ್ಷೇತ್ರ,ವಿಜಯನಗರ ಜಿಲ್ಲೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ6 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ6 days ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ5 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ6 days ago
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
-
ದಿನದ ಸುದ್ದಿ6 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ದಿನದ ಸುದ್ದಿ5 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು