ದಿನದ ಸುದ್ದಿ
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
- ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ ಕೋರ್ಟ್ ಗೆ ಹಾಜರಾಗದ್ದಾಗ ಪ್ರಶ್ನೆ ಕೇಳಲು ಮುಂದಾದ ಪತ್ರಕರ್ತರಿಗೆ .ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ಕೊಲೆ ಬೆದರಿಕೆ ಹಾಕಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ವಿಡಿಯೋ ಮಾಡಿದಕ್ಕೆ ವಾರ್ತಾ ಭಾರತಿಯ ಪತ್ರಿಕೆಯ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ಮೇಲೆ ಕೆ.ಎಂ.ಎಫ್ ನ ಅಧ್ಯಕ್ಷ ಭೀಮಾ ನಾಯ್ಕ ಹಲ್ಲೆ ಮಾಡಿ, ಕೊಲೆ
ಬೆದರಿಕೆ ಹಾಕಿದ ದುರ್ಘಟನೆ ವಿಜಯನಗರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಕರ್ನಾಟಕ ರಾಜ್ಯ ಸರ್ಕಾರದ ಕೆ.ಎಂ.ಎಫ್ ಹಾಲಿ ಅಧ್ಯಕ್ಷ ಭೀಮಾನಾಯ್ಕ್, ತನ್ನ ಕಾರಿಗೆ ಭೀಮಾನಾಯ್ಕ್ , ಹಗರಿಬೊಮ್ಮನಹಳ್ಳಿ ತಾಲೂಕಿನ ಎಂ.ಎಲ್.ಎ ಶಾಸಕರು ಎನ್ನುವ ಪಾಸು ಅಂಟಿಸಿಕೊಂಡು ಹಗರಿಬೊಮ್ಮನಹಳ್ಳಿಯಿಂದ ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ತಹಶಿಲ್ದಾರರ ಕಂದಾಯ ಇಲಾಖೆಗೆ ಹಾಗೂ ಕೋರ್ಟ್ ಗೆ ಆಗಮಿಸಿದ್ದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಹಶಿಲ್ದಾರರ ಕಚೇರಿಗೆ ರಿಜಿಸ್ಟರ್ ಹಾಗೂ ಆಸ್ತಿ ವಿಚಾರವಾಗಿ ಹೊಸಪೇಟೆ ಕೋರ್ಟ್ ಹಾಜರಾದಾಗ ಎರಡು ದಿನಗಳಿಂದ ಭೀಮಾನಾಯ್ಕ್ ಅವರು ಕಾರಿಗೆ ಕೆ.ಎ 41 ಎಂ.ಎಫ್ 4599 ಈ ವಾಹನಕ್ಕೆ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದೆವೆ ಎನ್ನುವ ಕಾರು ಚಾಲಕ, ಈ ರೀತಿ ಸಂಚಾರ ಮಾಡಿದ್ದು ದುರ್ಘಟನೆ ನಡೆದಿದೆ.
ಇನ್ನು ಈ ವಿಚಾರವಾಗಿ ಏಕೆ ? ತಹಶಿಲ್ದಾರರ ಕಚೇರಿ ಬಂದಿರಾ, ಪತ್ರಕರ್ತರ ವಿಡಿಯೋ ಮಾಡಿ, ಪ್ರಶ್ನೆ ಕೇಳಿದಕ್ಕೆ , ಏಕೆ ? ರೀ ವಿಡಿಯೋ ಮಾಡ್ತಿರಾ ಕಂದಾಯ ಇಲಾಖೆಗೆ ಬರಬಾರದ ಎಂದು ಏರು ಧ್ವನಿಯಲ್ಲಿ ಮಾತನಾಡಿದರು.
ಹೊಸಪೇಟೆ ಈಟಿವಿ ಭಾರತ್ ವರದಿಗಾರ ಗಿರೀಶ್ ಕುಮಾರ್ ಗೌಡ ಹಾಗೂ ವಾರ್ತಾ ಭಾರತೀ ಪತ್ರಿಕೆಯ ವರದಿಗಾರರಾದ ಮಹಮ್ಮದ್ ಗೌಸ್ ಅವರು ಭೀಮಾನಾಯ್ಕ್ ಅವರು ಹೊಸಪೇಟೆ ಬಂದ ವಿಚಾರ ಬಗ್ಗೆ ಹಾಗೂ ಇನ್ನಿತರ ಕಾಂಗ್ರೆಸ್ ಪಕ್ಷದ ಬೆಳವಣಿಗೆ ವಿಚಾರವಾಗಿ ಕೇಳಬೇಕೆಂದು ಇದ್ದರೆ ಭೀಮಾನಾಯ್ಕ್ “ನೋ ಕಾಮೆಂಟ್ಸ್’ ಎನ್ನುವ ಉತ್ತರ ನೀಡಿದ್ದರು. ನಂತರ ಕಾರು ಮುಂದಕ್ಕೆ ಹೋಗಿ ನಂತರ ವಾಪಾಸ್ಸು ಬಂದು, ಪತ್ರಕರ್ತರಾದ ವಿಜಯನಗರ ಜಿಲ್ಲೆ ವಾರ್ತಾ ಭಾರತಿ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ವಿಡಿಯೋ ಮಾಡಿದಕ್ಕೆ ಅವರಿಗೆ ಅವಾಚ್ಯ ಶಬ್ಧಗಳಿಂದ ಬೈದು, ಅವರ ಮೊಬೈಲ್ ಕಳಿಸಿಕೊಂಡು, ಕೈ ಮುರಿದು ಹಲ್ಲೆ ಮಾಡಿದ್ದಾರೆ. ಅವರ ಬೆಂಬಲಿಗರು ನಿಮ್ಮನ್ನ ನೋಡಿ ಕೊಳ್ಳುತ್ತೇವೆ, ಕೊಲೆ ಮಾಡುವ ಬೆದರಿಕೆ ಹಾಗೂ ದಬ್ಬಾಳಿಕೆ ಮಾಡಿದರು. ನಂತರ ಕೋರ್ಟ್ ನಲ್ಲಿ ಇದ್ದ ವಕೀಲರು ಇನ್ನಿತರರು ಆಗಮಿಸಿದ ನಂತರ ಅಲ್ಲಿಂದ ಕಾಲು ಕಿತ್ತಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಭೀಮಾನಾಯ್ಕ್ ರಿಂದ ನಾಚಿಕೆಗೇಡು
ಇನ್ನು ನಾಚಿಕೆಗೆಡಿನ ಸಂಗತಿಯಾಗಿ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಹಗರಿಬೊಮ್ಮನಹಳ್ಳಿ ಶಾಸಕ ಎಂದು ಪಾಸು ಇಟ್ಟುಕೊಂಡು ಊರೆಲ್ಲಾ ಸುತ್ತಿದ್ದು ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿ ಆಗಿದೆ.
ಇನ್ನು ಈ ವಿಚಾರವಾಗಿ ಕೋರ್ಟ್ ನಲ್ಲಿ ಇದ್ದ ಕಾರಿನ ಮೇಲೆ ಪಾಸು ಇರುವ ಬಗ್ಗೆ ವಿಡಿಯೋ ಮಾಡಿದ ನಂತರ ಕಾರು ಚಾಲಕ ಇಲ್ಲ ಸರ್, ಎರಡು ದಿನಗಳಿಂದ ಅದೇ ಪಾಸು ಇಟ್ಟುಕೊಂಡು ಓಡಾಡಿದ್ದೆವೆ. ಈಗ ತೆಗೆದಿದ್ದೆವೆ ವಿಡಿಯೋ ಡಿಲಿಟ್ ಮಾಡಿ ಎಂದರು. ಇನ್ನು ಭೀಮಾನಾಯ್ಕ್ ಗನ್ ಮ್ಯಾನ್ ಹಾಗೂ ಅವರ ಬೆಂಬಲಿಗರು ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ದೌರ್ಜನ್ಯ ಮಾಡಿ, ದಬ್ಬಾಳಿಕೆಯನ್ನು ಮಾಡಿದ್ದಾರೆ. ಅವರದ್ದೆ ತಪ್ಪು ಹಿಡಿದುಕೊಂಡು ಪತ್ರಕರ್ತರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಸಂಗತಿ ಇದು ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿಯಾಗಿದೆ.
ಭೀಮಾನಾಯ್ಕ್ ಕಾರಿನ, ಕಾರು ಚಾಲಕನ ಮುಂಭಾಗದ ಗ್ಲಾಸ್ ನಲ್ಲಿ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದರು. ಭೀಮಾನಾಯ್ಕ್ ಹಾಗೂ ಗನ್ ಮ್ಯಾನ್ ಹಾಗೂ ಬೆಂಬಲಿಗರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ.
ಮಾಧ್ಯಮದ ಮಿತ್ರರ ಮೇಲೆ ಹಲ್ಲೆ ಮಾಡೋ ಅಧಿಕಾರ ಇಲ್ಲ, ಮಾಧ್ಯಮದವರು ಪ್ರಶ್ನೆ ಕೇಳಿದರೆ ಉತ್ತರ ಕೊಡಬೇಕು ಇಲ್ಲದಿದ್ದರೆ ಆಮೇಲೆ ಮಾತನಾಡುವೆ ಎಂದು ಹೇಳಬೇಕು. ಅವರ ಮೇಲೆ ಹಲ್ಲೆ ಮಾಡೋದ್ ಒಳ್ಳೆಯದಲ್ಲ. ಭೀಮಾನಾಯ್ಕ್ ಎಸ್, ಶಾಸಕರು, ಎಂ.ಎಲ್.ಎ ಅಂತ ಇಟ್ಟುಕೊಂಡು ಓಡಾಡೋದ್ ಸರಿಯಲ್ಲ ಎಂದರು.
|ನೇಮರಾಜ್ ನಾಯ್ಕ್, ಹಾಲಿ ಶಾಸಕರು ಕ್ಷೇತ್ರ,ವಿಜಯನಗರ ಜಿಲ್ಲೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


