Connect with us

ಬಹಿರಂಗ

‘ಭೀಮ ಕೋರೆಗಾಂವ್ ದಂಗೆ’ಯ ಬಗ್ಗೆ ನೀವು ಓದಲೇ ಬೇಕಾದ ಲೇಖನ..!

Published

on

ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ )

ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು

1 . ಸಿದ್ದನಾಕ ಮಕಲನಾಕ ನಾಯಕ
2 . ರಾಮನಾಕ ಯಶನಾಕ ಸಿಪಾಯಿ
3 , ಗೋದನಾಕ ಮೋಡೆನಾಕ ಸಿಪಾಯಿ
4 , ರಾಮನಾಕ ಯಶನಾಕ ಸಿಪಾಯಿ
5 . ಭಾಗನಾಕ ಹರನಾಕ ಸಿಪಾಯಿ
6 . ಅಂಬನಾಕ ಕಾನನಾಕ ಸಿಪಾಯಿ
7 . ಗಣನಾಕ ಬಾಳನಾಕ ಸಿಪಾಯಿ
8 . ಬಾಳನಾಖ ದೊಂಡನಾಕ ಸಿಪಾಯಿ
9 , ರೂಪನಾಕ ಲಖನಾಕ ಸಿಪಾಯಿ
10 . ಬಾಲನಾಕ ರಾಮನಾಕ ಸಿಪಾಯಿ
11 . ವಟಿನಾಕ ಧಾನನಾಕ ಸಿಪಾಯಿ
12 . ಗಜನಾಕ ಗಣನಾಕ gಸಿಪಾಯಿ
13 . ಬಾಪನಾಕ ಹಬನಾಕ ಸಿಪಾಯಿ
14 . ಕೋನಾಕ ಜಾನನಾಕ ಸಿಪಾಯಿ
15 . ಸಮನಾಕ ಯಸನಾಕ ಸಿಪಾಯಿ
16 , ಗಣನಾಕ ಧರಮನಾಕ ಸಿಪಾಯಿ
17 . ದೇವನಾಕ ಅಂಕನಾಕ ಸಿಪಾಯಿ
18 . ಗೋಪಾಲನಾಕ ಬಾಲಿನಾಕ ಸಿಪಾಯಿ
19 , ಹರನಾಕ ಹರಿನಾಕ ಸಿಪಾಯಿ
20 . ಜೇಠನಾಕ ದೌನಾಕ ಸಿಪಾಯಿ
21 . ಗಣನಾಕ ಲಖನಾಕ ಸಿಪಾಯಿ
22 . ಸೀನನಾಕ ಮಕಲನಾಕ ಸಿಪಾಯಿ
ಅಸ್ಪಶ್ಯರನ್ನು ಗುರುತಿಸಲು ಅಂದು ಅವರ ಹೆಸರಿನ ಮುಂದೆ ನಾಕ ಎಂದು ಸೇರಿಸಲಾಗುತ್ತಿತ್ತು .

ಡಾ . ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಎಷ್ಟೇ ತುರ್ತು ಕೆಲಸಕಾರ್ಯಗಳಿದ್ದರೂ ಸಹ ಅವುಗಳೆಲ್ಲವನ್ನೂ ಬದಿಗಿರಿಸಿ , ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸಹ ಅಲ್ಲಿಂದ ಹೊರಟು ಜನವರಿ ಒಂದನೇ ತಾರೀಖಿನಂದು ‘ ಕೋರೆಗಾಂವ್ ‘ ಗೆ ತಮ್ಮ ಕುಟುಂಬ ಸಮೇತರಾಗಿ ಬಂದು , ಅಲ್ಲಿರುವ ಹುತಾತ್ಮ ಅಸ್ಪಶ್ಯ ಯೋಧರ ಸ್ಮಾರಕಕ್ಕೆ ( ವಿಜಯ ಸ್ಥಂಬಕ್ಕೆ ) ಶ್ರದ್ದಾಂಜಲಿ ಸಲ್ಲಿಸುತ್ತಿದ್ದ ಅವರು ಬದುಕಿರುವ ತನಕವೂ ಒಂದೇ ಒಂದು ವರ್ಷವೂ ಸಹ ಜನವರಿ 1ನೇ ತಾರೀಖು ಇಲ್ಲಿ ಬರುವುದನ್ನು ಬಾಬಾಸಾಹೇಬರು ತಪಿಸಲಿಲ್ಲ . ಪ್ರತಿವರ್ಷ ಜನವರಿ 1ನೇ ತಾರೀಖು ಜಗತ್ತಿಗೆ ಹೊಸವರ್ಷದ ಸಂಭ್ರಮದ ದಿನವಾದರೆ ಭಾರತದ ದಲಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ ಶರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್‌ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . 1800ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸಶರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು .ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನೇ ನಿಷೇಧಿಸಲಾಗಿತ್ತು . ಅಸ ಶ್ಯರು ಊರ ಮಧ್ಯೆ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮಾತ್ರ ನಡೆದುಕೊಂಡು ಹೋಗಬೇಕಾಗಿತ್ತು .

ಏಕೆಂದರೆ ಈ ಸಮಯದಲ್ಲಿ ಅವನ ನೆರಳು ಬೇರೆಕಡೆ ಬೀಳುವುದಿಲ್ಲ ಎನ್ನುವ ಕಾರಣಕ್ಕಾಗಿ . ಹೋಗುವಾಗ ಕುತ್ತಿಗೆಗೆ ಒಂದು ಮಣ್ಣಿನ ಮಡಿಕೆಯನ್ನು ನೇತು ಹಾಕಿಕೊಳ್ಳಬೇಕಾಗಿತ್ತು . ಏಕೆಂದರೆ ಅಸ್ಪಶ್ಯರು ನೆಲಕ್ಕೆ ಉಗುಳುವ ಹಾಗಿರಲಿಲ್ಲ . ಆ ಮಡಿಕೆಯಲ್ಲಿ ಉಗುಳಿಕೊಳ್ಳಬೇಕಾಗಿತ್ತು . ಅದೇ ರೀತಿ ಸೊಂಟಕ್ಕೆ ಒಂದು ಕಸಪೊರಕೆ ಕಟ್ಟಿಕೊಂಡು ತಾನು ನಡೆದ ದಾರಿಯನ್ನು ತಾನೇ ಗುಡಿಸಿಕೊಂಡು ಹೋಗಬೇಕಾಗಿತ್ತು . ಅಸ್ಪಶ್ಯರು ತಮ್ಮ ಗುರುತು ಪತ್ತೆಗಾಗಿ ತಮ್ಮ ಕುತ್ತಿಗೆ ಮತ್ತು ಮುಂಗೈಗೆ ದಪ್ಪದಾದ ಕಪ್ಪು ದಾರವನ್ನು ಕಡ್ಡಾಯವಾಗಿ ಕಟ್ಟಿಕೊಳ್ಳಬೇಕಾಗಿತ್ತು . ಊರಿನೊಳಗೆ ಸತ್ತ ದನಗಳನ್ನು ಊರಿನಿಂದ ಹೊರಗೆ ಹೊತ್ತುಕೊಂಡು ಹೋಗಿ ಅದರ ಮಾಂಸವನ್ನು ಬೇಯಿಸಿ ತಿನ್ನಬೇಕಾಗಿತ್ತು . ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು . ಅಸ್ಪಶ್ಯ ಹೆಂಗಸರು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ತೊಡುವ ಹಾಗಿರಲಿಲ್ಲ . ಹಿಂದೂ ಸವರ್ಣಿಯರು ಮತ್ತು ಪೇಳ್ವೆ ಸೈನಿಕರು ಅಸ್ಪಶ್ಯ ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು . ಈ ಎಲ್ಲಾ ಅನ್ಯಾಯ ಮತ್ತು ದೌರ್ಜನ್ಯಗಳನ್ನು ನಿಲ್ಲಿಸಬೇಕೆಂದು ಅಸ್ಪೃಶ್ಯರು 1817ರಲ್ಲಿ ರಾಜ್ಯಭಾರ ನಡೆಸುತ್ತಿದ್ದ ಪೇಶ್ವಿರಾಜ ಎರಡನೇ ಬಾಜೀರಾಯನಲ್ಲಿ ವಿನಂತಿಸಿಕೊಂಡಾಗ ಎರಡನೇ ಬಾಜೀರಾಯನು “ ನೀವುಗಳು ಹುಟ್ಟಿರುವುದೇ ನಮ್ಮಗಳ ಸೇವೆ ಮಾಡಲಿಕ್ಕಾಗಿ & ನಿಮ್ಮ ಹೆಂಗಸರು ಇರುವುದೇ ನಮ್ಮನ್ನು ಸುಖಪಡಿಸಲಿಕ್ಕಾಗಿ , ಇದೇ ನಮ್ಮ ಮನು ಸಂವಿಧಾನ ” ಎಂದು ಅಸ್ಪೃಶ್ಯರಿಗೆ ಖಡಕ್ಕಾಗಿ ತಿಳಿಸಿದನು . ಇದರಿಂದ ಗಾಯಗೊಂಡ ವ್ಯಾಘ್ರಗಳಂತಾದ ಅಸ್ಪೃಶ್ಯರು ಸೇಡುತೀರಿಸಿಕೊಳ್ಳಲಿಕ್ಕಾಗಿ ಸಮಯ ಕಾಯತೊಡಗಿದರು . ಇದೇ ಸಮಯದಲ್ಲಿ ಸರಿಯಾಗಿ ಕೊಲ್ಕತ್ತಾವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಬಹುತೇಕ ಉತ್ತರ ಭಾರತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವ ರಾಜ ಎರಡನೇ ಬಾಜೀರಾಯನನ್ನು ಬಗ್ಗುಬಡಿದು ದಕ್ಷಿಣ ಭಾರತದಲ್ಲಿ ಅಮ್ಮಗಳ ಆಳ್ವಿಕೆಗೆ ವಿಸ್ತರಿಸಿಕೊಳ್ಳಲು ಸಮಯ ಕಾಯುತ್ತಿದ್ದರು .

ಪೇಶ್ವಗಳ ದೌರ್ಜನ್ಯ , ದಬ್ಬಾಳಿಕೆಗಳಿಂದ ಇನ್ನಿಲ್ಲದಂತೆ ರೋಸಿಹೋಗಿದ್ದ ಮಹಾರಾಷ್ಟ್ರದ ಅಸ್ಪ ಶ್ಯರು ಅದರಲ್ಲೂ ಅಸ್ಪಶ್ಯ ಯುವಕರು ಪೇಶ್ವಗಳ ಬಿಸಿ ರಕ್ತ ಕುಡಿಯಲು ಹಾತೊರೆಯುತ್ತಿದ್ದರು . ಇದನ್ನು ಗಮನಿಸಿದ ಚಾಣಾಕ್ಷ ಬ್ರಿಟೀಷರು ಪೇಶ್ವಗಳ ವಿರುದ್ಧ ಯುದ್ಧ ಮಾಡಲು ಅಸ್ಪಶ್ಯರನ್ನು ಕೋರಿಕೊಂಡರು , ತಮ್ಮಗಳ ಕಷ್ಟ – ಅಪಮಾನಗಳ ಪರಿಹಾರಕಾಗಿ ಒದಗಿ ಬಂದ ಈ ಸುವರ್ಣಾವಕಾಶವನ್ನು ಮನಃಪೂರ್ವಕವಾಗಿ ಸ್ವೀಕರಿಸಿದ ಅಸ್ಪಶ್ಯರು “ ಸಿದನಾಕ , ಎಂಬ ಅಸ್ಪಶ್ಯ ಯುವಕನ ನಾಯಕತ್ವದಲ್ಲಿ 500 ಜನ ಅಸ್ಪಶ್ಯ ಯುವಕರು ಪೇಶೆಗಳ ವಿರುದ ಯುದ್ಧ ಮಾಡಲು ಬ್ರಿಟೀಷರ ಕೋರಿಕೆಗೆ ಒಪ್ಪಿಕೊಂಡರು . ಕಡೆಗೂ ಆ ಐತಿಹಾಸಿಕ ಯುದ್ದದ ದಿನ ಬಂದೇ ಬಿಟ್ಟಿತು . ಅದೇ 1818ರ ಜನವರಿ 1ನೇ ತಾರೀಖು . ಬ್ರಿಟೀಷ್ ಕ್ಯಾಪನ್ ಎಸ್ . ಎಸ್ . ಸಂಡನ್ ನೇತೃತ್ವದಲ್ಲಿ ಸಿದ್ದನಾಕ ‘ ನ ನಾಯಕತ್ವದ 500 ಅಸ ಶ ಯೋಧರ ಪಡೆ ( ಈ ಎಲ್ಲಾ ಯೋಧರಿಗೆ ಬಂದೂಕು ಉಪಯೋಗಿಸುವ ತರಬೇತಿಯನು . ಬ್ರಿಟೀಷರು ಚೆನ್ನಾಗಿ ನೀಡಿರುತ್ತಾರೆ . ) 1817ರ ಡಿಸೆಂಬರ್ 31ನೇ ತಾರೀಖು ರಾತ್ರಿ ಸಿರೂರ್‌ನಿಂದ ಹೊರಡುತ್ತಾರೆ . ಆ ಇಡೀ ರಾತ್ರಿ ಸತತವಾಗಿ 27 ಕಿಲೋಮೀಟರ್ ನಡೆದು ಮಾರನೇ ದಿನ ಅಂದರೆ 1818ರ ಜನವರಿ 1ರಂದು ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಬೀಮಾ ನದಿ ತೀರದಲ್ಲಿರುವ ಕೋರೆಗಾಂವ್ ಎಂಬ ಸ್ಥಳವನ್ನು ಸಿದ್ಧನಾಕನ ಪಡೆ ತಲುಪುತ್ತದೆ . ಇಡೀ ರಾತ್ರಿ ನಿದ್ದೆಯಿಲ್ಲದೆ 27 ಕಿ . ಮೀ . ದೂರವನ್ನು ನಡೆದುಕೊಂಡು ಬಂದಿದ್ದ ಈ ಅಸ್ಪಶ್ಯ ಯೋಧರ ಪಡೆ ನಿದ್ದೆ , ಅನ್ನ – ನೀರು ಯಾವುದನ್ನೂ ಬಯಸದೆ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಪೇಶ್ವ ಸೈನಿಕರ ಮೇಲೆ ಎರಗುತ್ತಾರೆ . 20 ಸಾವಿರ ಅಶ್ವದಳ , 8 ಸಾವಿರ ಕಾಲ್ದಳ ಸೇರಿ ಒಟ್ಟು 28 ಸಾವಿರ ಪೇಳ್ವೆ ಸೈನಿಕರು ಮೂರೂ ದಿಕ್ಕಿನಿಂದ ಅಸ್ಪಶ್ಯ ಯೋಧರಿಗೆ ಎದುರಾಗುತ್ತಾರೆ . ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಯುದ್ದದಲ್ಲಿ ಹಸಿದ ಹೆಬ್ಬುಲಿಗಳಂತಿದ್ದ ಅಸ್ಪಶ್ಯಯೋಧರು ಪೇಶ್ವ ಸೈನ್ಯವನ್ನು ಧೂಳಿಪಟ ಮಾಡುತ್ತಾರೆ . ಇಡೀ ಯುದ್ಧ ಭೂಮಿಯ ತುಂಬ ರಕ್ತದ ಕೋಡಿಯೇ ಹರಿಯುತ್ತದೆ . ಸಾವಿರಾರು ಸೈನಿಕರು ಯುದ್ಧಭೂಮಿಯಲ್ಲಿ ಸಾವನ್ನಪ್ಪುತ್ತಾರೆ .

ಬೃಹತ್ ಸಂಖ್ಯೆಯಲ್ಲಿದ್ದ ಅಂದರೆ ಅಸ್ಪಶ್ಯಯೋಧರಿಗಿಂತ 56 ಪಟ್ಟು ಹೆಚ್ಚು ಇದ್ದ ಪೇಶ್ವಗಳ ರಣಹೇಡಿ ಸೈನ್ಯ ಗಂಡು ಸಿಂಹಗಳಂತಿದ್ದ ಅಸ್ಪೃಶ್ಯ ಸೈನಿಕರ ಮುಂದೆ ನಿಲ್ಲಲಾಗದೆ ಕೊನೆಗೆ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡತೊಡಗಿದರು . ಅಂತಿಮವಾಗಿ ಈ ಯುದ್ದದಲ್ಲಿ ಅಸ್ಪಶ್ಯ ಸೈನಿಕರು ಪ್ರಚಂಡ ಜಯ ಗಳಿಸುತ್ತಾರೆ . ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಕಾಳಗದಲ್ಲಿ 5000ಕ್ಕೂ ಹೆಚ್ಚು ಪೇಳ್ವೆ ಸೈನಿಕರು ಯುದ್ಧ ಭೂಮಿಯಲ್ಲಿ ಸಾವನ್ನಪ್ಪಿದರೆ ಕೇವಲ 22 ಜನ ಅಸ ಶ್ಯಯೋಧರು ವೀರಮರಣವನ್ನಪ್ಪಿದರು . ( ಈ ಯುದ್ಧದಲ್ಲಿ ಒಬ್ಬೊಬ್ಬ ಅಸ್ಪಶ್ಯಯೋಧ ಸರಾಸರಿ ಕನಿಷ್ಠ 100ಜನ ಪೇಳ್ವೆ ಸೈನಿಕರನ್ನು ಕೊಂದುಹಾಕಿರುತ್ತಾನೆ . ಈ ಯುದ್ಧದಲ್ಲಿ ಅಸ್ಪಶ್ಯಯೋಧರ ಪಡೆಯ ನಾಯಕನಾಗಿದ್ದ ಸಿದ್ದನಾಕ ‘ ನು ಸಹ ವೀರಮರಣವನ್ನಪ್ಪುತ್ತಾನೆ . ಅಂದು ರಾತ್ರಿ 10 ಗಂಟೆಗೆ ಸರಿಯಾಗಿ ಬ್ರಿಟೀಷರು ಯುದ್ಧ ನಡೆದ ಆ ಸ್ಥಳದಲ್ಲಿ ( ಪೇಶ್ವಗಳ ಸಾಮ್ರಾಜ್ಯದಲ್ಲಿ ಬ್ರಿಟೀಷ್ ಬಾವುಟವನ್ನು ಹಾರಿಸುತ್ತಾರೆ . ವಿಜಯದ ಬಳಿಕ ಕ್ಯಾಪ್ಟನ್ ಸ್ಟಂಡನ್ ಗೆ ರೀತಿ ಹೇಳಿದನು . ನಿಮ್ಮ ಕೆಚ್ಚೆದೆಯ ಹೋರಾಟವು ನಾವು ಇಂಡಿಯಾದಲ್ಲಿ ಉಳಿಯಲು ಅಧಿಕಾರವನ್ನು ವಿಸ್ತರಿಸಲು ತುಂಬಾ ಸಹಾಯಕವಾಗಿದೆ ಬ್ರಿಟಿಷ್ ಸತ್ಕಾರವು ನಿಮಗೆ ಎಂದೂ ಮರೆಯಲಾಗದ ಕಾಣಿಕೆ ಬಹುಮಾನವನ್ನು ಉಡುಗೊರೆಯಾಗಿ ಮತ್ತು ಮಡದಿ ಮಹಾಯೋಧರ ವಿಜಯ ಸ್ತಂಭವನ್ನು ಸ್ಥಾಪಿಸುವುದರ ಮೂಲಕ ಗೌರವವನ್ನು ಸಲ್ಲಿಸುತ್ತದೆ . ಹಾಗೆಯೇ ನಿಮಗೆ ನಮ್ಮ ಬ್ರಿಟಿಷ್ ಸೈನ್ಯದಲ್ಲಿ ವಿಶೇಷ ಸ್ಥಾನವನ್ನು ಕಲ್ಪಿಸಿ ನಿಮ್ಮ ಕುಟುಂಬದವರಿಗೆ ಸಕಲ ಸೌಲಭ್ಯವನ್ನು ಒದಗಿಸುವ ಏರ್ಪಾಡು ಮಾಡುತ್ತದೆ . ( ಮಹಾರ್ ಸೈನಿಕರು ಸಂತೋಷದಿಂದ ‘ ಬ್ರಿಟೀಷ್ ಸತ್ಕಾರಕ್ಕೆ ಜಯವಾಗಲಿ ಮಹಾರ್ ಸೈನ್ಯ ಚಿರಾಯು ” ಎಂದು ಘೋಷಣೆ ಕೂಗಿದರು . ) ರಣರಂಗದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಪೇಶ್ವ ಸೈನಿಕರ ಜೊತೆ ವೀರಾವೇಶದಿಂದ ಹೋರಾಡಿ ಜಯ ತಂದುಕೊಟ್ಟು ಹುತಾತ್ಮರಾದ 22 ಅಸ್ಪಶ್ಯಯೋಧರ ನೆನಪಿಗಾಗಿ ಬ್ರಿಟೀಷರು 1921ರ ಮಾರ್ಚ್ 21ರಂದು ಯುದ್ಧ ನಡೆದ ಸ್ಥಳದಲ್ಲಿ ( ಕೋರೆಗಾಂವ್‌ನಲ್ಲಿ ) 65ಅಡಿ ಎತ್ತರದ ಭವ್ಯ ‘ ವಿಜಯ ಸ್ತಂಭ ‘ ವನ್ನು ನಿರ್ಮಿಸಿ , ಆ ಸ್ಥಂಬದ ಮೇಲೆ 22 ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಿಸಿದರು . ಆ ಭವ್ಯ ವಿಜಯ ಸಂಬಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಬ್ರಿಟೀಷರು 22 ಸುತ್ತು ಕುಶಾಲ ತೋಪುಗಳನ್ನು ಹಾರಿಸುವ ಮೂಲಕ ಹುತಾತ್ಮರಿಗೆ ರಾಜ ಮರ್ಯಾದೆಯ ಶ್ರದ್ದಾಂಜಲಿ ಸಲ್ಲಿಸಿದ್ದರು . ಈ ವಿಜಯ ಸಂಬದ ಮೇಲೆ ಬ್ರಿಟಿಷರು “ One of the Proudest truimphs of the British Army in the East ” ( ಬ್ರಿಟೀಷ್ ಯೋಧರಿಗೆ ಭಾರತದ ಪೂರ್ವಭಾಗದಲ್ಲಿ ಸಿಕ್ಕಿದ ಹೆಮ್ಮೆಯ ವಿಜಯವಾಗಿದೆ ) ಎಂದೂ ಸಹ ಕೆತ್ತಿಸಿದರು . ಈ ವಿಜಯದ ನಂತರ ಬ್ರಿಟೀಷ್ ಬೋರ್ಡ್ ಆಫ್ ಕಂಟ್ರೋಲ್‌ನ ಅಧ್ಯಕ್ಷ ಜಾರ್ಜ್ ಕ್ಯಾನಿಂಗ್
ಈ ವಿಜಯದ ಬಗ್ಗೆ ಅಚ್ಚರಿ ವ್ಯಕ್ತ ಪಡಿಸುತ್ತಾ “ ಸಣ್ಣ ಸಂಖ್ಯೆಯ ಸೈನ್ಯವು ಒಂದು ಬಲಾಢ ಸಂಖ್ಯೆಯ ಸೈನ್ಯವನ್ನು ಮಣ್ಣು ಮುಕ್ಕಿಸಿದ ಉದಾಹರಣೆ ಚಿಕ್ಕ ಸಂಖ್ಯೆ ಹೊಂದಿರುವ ಎಲ್ಲಾ ಸೈನಿಕ ಬೆಟಾಲಿಯನ್‌ಗಳಿಗೂ ಅನುಕರಣೀಯವಾಗಿದೆ ” , ಎಂದು ಹೇಳಿದರು .

ಅದೇ ರೀತಿ ಜನರಲ್ ಸ್ಮಿತ್ ಕೂಡ ಈ ಗೆಲುವನ್ನು ಉತ್ಸಾಹಪೂರ್ವಕವಾಗಿ ಅಭಿನಂದಿಸಿ “ ಇಂಡಿಯಾದ ಬ್ರಿಟಿಷ್ ಸೇನಾ ಇತಿಹಾಸದಲ್ಲಿ ಕೋರೆಗಾಂವ್ ಯುದ್ಧದ ವಿಜಯವೆಂದರೆ ಶೌರ್ಯ ಮತ್ತು ಪರಾಕ್ರಮದ ಯಶೋಗಾಥೆಯೇ ಆಗಿದೆ ” ಎಂದು ಉದ್ದಾರವೆತ್ತಿದ್ದಾನೆ . ಈ ಯುದ್ದದ ಇತಿಹಾಸವನ್ನು ಬಗೆದು ಹೊರತೆಗೆದ ಡಾ . ಅಂಬೇಡ್ಕರ್ 1957ರಲ್ಲಿ ನಡೆದ ‘ ಸಿಪಾಯಿ ದಂಗೆ ‘ ಗಿಂತ ಸುಮಾರು 40 ವರ್ಷಗಳ ಹಿಂದೆಯೇ ನಡೆದ ಕೋರೆಗಾಂವ್ ದಂಗೆ ‘ ಯ ಬಗ್ಗೆ ಭಾರತದ ಮನುವಾದಿ ಲೇಖಕರು ಬೇಕೆಂತಲೇ ಬೆಳಕು ಚೆಲ್ಲಿರಲಿಲ್ಲ . ಈ ಯುದ್ಧದ ಇತಿಹಾಸವನ್ನು ಹೂತುಹಾಕಿದ್ದರು . ಹುತಾತ್ಮ ಯೋಧರ ನೆನಪಿಗಾಗಿ ಕೋರೆಗಾಂವ್‌ನಲ್ಲಿ ಆಲೀಷರು ನಿರ್ಮಿಸಿದ್ದ ‘ ವಿಜಯ ಸ್ಥಂಬ ‘ ವು ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಆ ಸ್ಟಂಬದ ಸುತ್ತ ‘ ಗಳು ಬೆಳೆದುಕೊಂಡು ಅನಾಥವಾಗಿತ್ತು . ಡಾ . ಅಂಬೇಡ್ಕರ್‌ರವರು 1922ರಲ್ಲಿ ಬ್ರಿಟನ್‌ನಲ್ಲಿ
‘ ಬಾರ್ – ಅತ್ – ಲಾ ‘ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಭಾರತದಲ್ಲಿ ಬ್ರಿಟೀಷರ ಆಳ್ವಿಕೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಬಗ್ಗೆ ಬ್ರಿಟಿಷ್ ಮ್ಯೂಸಿಯಂ ಲೈಬ್ರರಿಯಲ್ಲಿ ಇಟ್ಟಿದ್ದ ದಾಖಲೆಗಳನ್ನು ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ 1818ರಂದು ನಡೆದ ಕೋರೆಗಾಂವ್ ಯುದ್ದದ ಬಗ್ಗೆ ಪ್ರಥಮವಾಗಿ ಮಾಹಿತಿ ಸಿಕ್ಕಿತು . ಈ ಮಾಹಿತಿಯ ಆಧಾರದ ಮೇಲೆ ಕೋರೆಗಾಂವ್ ಯುದ್ದದ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ನಡೆಸಲು ಪ್ರಾರಂಭಿಸಿದರು . ಕೊನೆಗೆ ಈ ಯುದ್ಧದ ಬಗ್ಗೆ ಸಂಪೂರ್ಣ ಮಾಹಿತಿಯನು ಕಲೆ ಹಾಕಿದರು , ನಂತರ ಮಹಾರಾಷ್ಟ್ರದ ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಕೋರೆಗಾಂವ್‌ಗೆ ( ಭೀಮಾನದಿ ತೀರದಲ್ಲಿದೆ ) ತೆರಳಿ ‘ ವಿಜಯಸ್ಥಂಬ ‘ ವನ್ನು ಪತ್ತೆ ಹಚ್ಚಿ ಆ ಸ್ಥಳವನ್ನು ಸ್ವಚ್ಛಗೊಳಿಸಿದರು . ಕೊನೆಗೆ ಯುದ್ಧ ನಡೆದು 109 ವರ್ಷಗಳ ನಂತರ ಅಂದರೆ 1927ರ ಜನವರಿ 1ನೇ ತಾರೀಖಿನಂದು ಡಾ . ಅಂಬೇಡ್ಕರ್‌ರವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಪ್ರಥಮ ಬಾರಿಗೆ ‘ ವಿಜಯ ಸ್ಟಂಬ ‘ ಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಶ್ರದ್ದಾಂಜಲಿ ಸಲ್ಲಿಸಿದರು . ಡಾ . ಅಂಬೇಡ್ಕರ್‌ರವರು ಪ್ರಥಮ ಬಾರಿಗೆ ( 1927ರ ಜನವರಿ 1 ) ಕೋರೆಗಾಂವ್‌ನಲ್ಲಿ ‘ ವಿಜಯ ಸ್ಥಂಬ ‘ ಕ್ಕೆ ಗೌರವ ವಂದನೆ ಸಲ್ಲಿಸಿದ ನಂತರ ನಡೆದ ಸಭೆಯಲ್ಲಿ ಮಾತನ್ನಾಡುತ್ತಾ ಈ ರೀತಿ ಹೇಳಿದರು . ಅಂದು ಬ್ರಿಟಿಷರ ಪರವಾಗಿ ಅಸ್ಪಶ್ಯಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ , ಅಸ್ಪಶ್ಯಯೋಧರು ಬ್ರಿಟಿಷರ ಪರ ಯಾಕೆ ಹೋಗಬೇಕಾಯಿತು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ . ಅಸ್ಪಶ್ಯರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದೂಗಳ ದಬ್ಬಾಳಿಕೆಯನ್ನು ಸುಮ್ಮನೆ ಸಹಿಸಿಕೊಂಡು ಜೀವನ ನಡೆಸಬೇಕಾಗಿತ್ತೆ ? ಹಿಂದೂಗಳು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ – ನರಿಗಳಿಗಿಂತಲೂ ಕೀಳಾಗಿ ಕಂಡಾಗ , ಇನ್ನಿಲ್ಲದಂತೆ ದಬ್ಬಾಳಿಕೆ ನಡೆಸಿದಾಗ , ಅಪಮಾನಿಸಿದಾಗ ಎಲ್ಲವನ್ನೂ ಸಹಿಸಿಕೊಂಡು ಎಷ್ಟು ದಿನ ಬದುಕಬೇಕಾಗಿತ್ತು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟೀಷರ ಪರವಾಗಿ ಯುದ್ದ ಮಾಡಿದರೆಂಬುದನ್ನು ಪ್ರತಿಯೊಬ್ಬರೂ ಲಕ್ಷ್ಮದಲ್ಲಿಡಬೇಕು . – ಗತಿಸಿದ ಕಾಲವೊಂದರಲ್ಲಿ ನಡೆದ ಈ ಘಟನೆಯಲ್ಲಿ ಅಸ್ಪಶ್ಯರು ಅನುಭವಿಸಿದ ಸೋಲು ಗೆಲುವಿನ ನಡುವೆ ಇಂಡಿಯಾದ ಸಾಮಾಜಿಕ ಬದುಕಿನ ಸತ್ಯಗಳನ್ನು ನೀವೇ ನೋಡಿದಿರ . ಇಂತಹ ಅದೆಷ್ಟೋ ಘಟನೆಗಳು ನಡೆದು ಈ ದೇಶದಲ್ಲಿ ಅಸ್ಪಶ್ಯರ ಕೌಶಲ್ಯ ಸಾಹಸ , ಮಾನವೀಯ ಮೌಲ್ಯಗಳು ಮಣ್ಣಲ್ಲಿ ಮುಚ್ಚಿ ಹೋಗಿವೆ.

ಅವುಗಳೆಲ್ಲವನೂ ನಾನು ಬಗೆದು ಹೊರತೆಗೆದೇ ತೀರುತ್ತೇನೆ . ( ಈ ಯುದ್ದವನ್ನಾಧರಿಸಿ ಶ್ರೀ ಅರುಣ್ ಶೌರಿಯವರು ತಮ್ಮ ‘ ವರ್ಷಿಪಿಂಗ್ ಫಾಲ್ಸ್ ಗಾಡ್ ಎಂಬ ಪುಸ್ತಕದಲ್ಲಿ “ ಅಸ್ಪ ಶ್ಯರು ಬ್ರಿಟೀಷರ ಪರವಾಗಿ ಹೋರಾಡಿ ಬ್ರಿಟಿಷರಿಗೆ ಗೆಲುವನ್ನು ಕೊಟ್ಟಿದ್ದಾರೆ , ಆ ಮೂಲಕ ಅವರು ಭಾರತದ ವಿರುದ್ದವೇ ಹೋರಾಡಿದಂತಾಗಿದೆ ” ಎಂದು ಬರೆದಿದ್ದಾರೆ.ಒಂದೆಡೆ ಅಸ್ಪ್ರಶ್ಯರು ಬ್ರಿಟೀಷರ ಪರ ಹೋರಾಡಲು ಕಾರಣಗಳೇನು ಎಂದು ಗೊತ್ತಿದ್ದರೂ ಸಹ ಆ ಪುಸ್ತಕದಲ್ಲಿ ಬರೆದಿಲ್ಲ . ) ಆ ಸಭೆಯಲ್ಲಿ ಡಾ . ಅಂಬೇಡ್ಕರ್‌ರವರು ಮುಂದುವರಿದು ಮಾತನಾಡುತ್ತಾ ಈ ರೀತಿ ಹೇಳಿದರು . “ ಯಾವ ಅಸ್ಪಶ್ಯ ಯೋಧರು ಹಲವಾರು ಯುದ್ಧಗಳಲ್ಲಿ ತಮ್ಮಗಳ ಪರಾಕ್ರಮದಿಂದ ಬ್ರಿಟೀಷರಿಗೆ ವಿಜಯ ತಂದುಕೊಟ್ಟರೋ , ಇಂದು ಅಂತಹ ವೀರತನವನ್ನೇ ಹೊಂದಿರುವ ಅಸ್ಪಶ್ಯ ಯುವಕರನ್ನು ಸೇವೆಗೆ ಸೇರಿಸಿಕೊಳ್ಳಲು ಬ್ರಿಟೀಷ್ ಸರ್ಕಾರ ನಿರ್ಬಂಧ ಹೇರಿದ್ದು ನಂಬಿಕೆ ದ್ರೋಹವೇ ಆಗಿದೆ . ಅಸ್ಪಶ್ಯ ಯುವಕರು ಸೇನೆ ಸೇರುವುದನ್ನು ನಿಷೇಧಿಸಿರುವ ಬ್ರಿಟೀಷ್ ಸರ್ಕಾರ ಅದನ್ನು ತಕ್ಷಣವೇ ಹಿಂಪಡೆದು ಅಸ್ಪಶ್ಯ ಯುವಕರು ಸೇವೆ ಸೇರಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು . ಒಂದು ವೇಳೆ ಬ್ರಿಟೀಷ್ ಸರ್ಕಾರದ ವಿರುದ್ದ ಉಗ್ರ ಚಳುವಳಿಯನ್ನು ಮಾಡಬೇಕಾಗುತ್ತದೆ . ” ( 1892ರಿಂದ ಬ್ರಿಟೀಷ್ ಸರ್ಕಾರವು ಭಾರತದಲ್ಲಿ ಅಸ್ಪಶ್ಯರು ಸೇನೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು .

ಡಾ . ಅಂಬೇಡ್ಕರ್‌ರವರ ಸತತ ಹೋರಾಟದ ಫಲವಾಗಿ 1941ರಲ್ಲಿ ಈ ನಿಷೇಧವನ್ನು ತೆಗೆದುಹಾಕಲಾಯಿತು . ) 1927ರಿಂದ ಪ್ರಾರಂಭಿಸಿ ತಾವು ಬದುಕಿರುವವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಪ್ರತಿವರ್ಷ ಜನವರಿ 1ನೇ ತಾರೀಖಿನಂದು ತಮ್ಮ ಕುಟುಂಬ ಹಾಗೂ ತನ್ನ ಸಾವಿರಾರು ಅನುಯಾಯಿಗಳೊಂದಿಗೆ ಆ ಸ್ಥಳಕ್ಕೆ ಭೇಟಿ ನೀಡಿ ‘ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಿದ್ದರು . ಈಗ ಪ್ರತಿವರ್ಷ ಜನವರಿ 1ನೇ ತಾರೀಖಿನಂದು ಭಾರತದ ಮೂಲೆ ಮೂಲೆಗಳಿಂದ ನಿವೃತ್ತಯೋಧರುಗಳು ಸೇರಿದಂತೆ ಲಕ್ಷಾಂತರ ಜನರು ಕೋರೆಗಾಂವ್‌ಗೆ ಭೇಟಿ ನೀಡಿ ‘ ವಿಜಯ ಸ್ಟಂಬ ‘ ಕ್ಕೆ ನಮಿಸಿ ಹುತಾತ್ಮ ಅಸ್ಪಶ್ಯ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾರೆ . ವರ್ಷದಿಂದ ವರ್ಷಕ್ಕೆ ಅಲ್ಲಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನವರಿ 1ನೇ ತಾರೀಖಿನಂದು ನಡೆಯುವ ಸ್ಥತಿ ದಿನ ಕಾರ್ಯಕ್ರಮವು ಸುವ್ಯವಸ್ಥಿತವಾಗಿ ನಡೆಯಲೆಂದು ಅದರ ಉಸ್ತುವಾರಿಗಾಗಿ ಒಂದು ಕಾರ್ಯಕಾರಿಣಿ ಮಂಡಳಿಯನ್ನು ಸ್ಥಾಪಿಸಲಾಗಿದೆ . “ ನನ್ನ ಜನರಿಗೆ ಆಯುಧ ಹಿಡಿಯುವ ಅಧಿಕಾರ ನೀಡಿದ್ದರೆ ಈ ದೇಶ ಎಂದೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರಲಿಲ್ಲ ಹಾಗೂ ನನ್ನ ಸಾಮಾಜಿಕ ತತ್ವವು ಮೂರು ಪದಗಳಲ್ಲಿ ಅಡಕವಾಗಿದೆ . ಅವುಗಳೆಂದರೆ ; ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವ ಎಂದಿದ್ದಾರೆ ಡಾ . ಬಿ . ಆರ್ . ಅಂಬೇಡ್ಕರ್.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ5 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ1 week ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ1 week ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ1 week ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ2 weeks ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending