Connect with us

ಬಹಿರಂಗ

‘ಭೀಮ ಕೋರೆಗಾಂವ್ ದಂಗೆ’ಯ ಬಗ್ಗೆ ನೀವು ಓದಲೇ ಬೇಕಾದ ಲೇಖನ..!

Published

on

ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ )

ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು

1 . ಸಿದ್ದನಾಕ ಮಕಲನಾಕ ನಾಯಕ
2 . ರಾಮನಾಕ ಯಶನಾಕ ಸಿಪಾಯಿ
3 , ಗೋದನಾಕ ಮೋಡೆನಾಕ ಸಿಪಾಯಿ
4 , ರಾಮನಾಕ ಯಶನಾಕ ಸಿಪಾಯಿ
5 . ಭಾಗನಾಕ ಹರನಾಕ ಸಿಪಾಯಿ
6 . ಅಂಬನಾಕ ಕಾನನಾಕ ಸಿಪಾಯಿ
7 . ಗಣನಾಕ ಬಾಳನಾಕ ಸಿಪಾಯಿ
8 . ಬಾಳನಾಖ ದೊಂಡನಾಕ ಸಿಪಾಯಿ
9 , ರೂಪನಾಕ ಲಖನಾಕ ಸಿಪಾಯಿ
10 . ಬಾಲನಾಕ ರಾಮನಾಕ ಸಿಪಾಯಿ
11 . ವಟಿನಾಕ ಧಾನನಾಕ ಸಿಪಾಯಿ
12 . ಗಜನಾಕ ಗಣನಾಕ gಸಿಪಾಯಿ
13 . ಬಾಪನಾಕ ಹಬನಾಕ ಸಿಪಾಯಿ
14 . ಕೋನಾಕ ಜಾನನಾಕ ಸಿಪಾಯಿ
15 . ಸಮನಾಕ ಯಸನಾಕ ಸಿಪಾಯಿ
16 , ಗಣನಾಕ ಧರಮನಾಕ ಸಿಪಾಯಿ
17 . ದೇವನಾಕ ಅಂಕನಾಕ ಸಿಪಾಯಿ
18 . ಗೋಪಾಲನಾಕ ಬಾಲಿನಾಕ ಸಿಪಾಯಿ
19 , ಹರನಾಕ ಹರಿನಾಕ ಸಿಪಾಯಿ
20 . ಜೇಠನಾಕ ದೌನಾಕ ಸಿಪಾಯಿ
21 . ಗಣನಾಕ ಲಖನಾಕ ಸಿಪಾಯಿ
22 . ಸೀನನಾಕ ಮಕಲನಾಕ ಸಿಪಾಯಿ
ಅಸ್ಪಶ್ಯರನ್ನು ಗುರುತಿಸಲು ಅಂದು ಅವರ ಹೆಸರಿನ ಮುಂದೆ ನಾಕ ಎಂದು ಸೇರಿಸಲಾಗುತ್ತಿತ್ತು .

ಡಾ . ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಎಷ್ಟೇ ತುರ್ತು ಕೆಲಸಕಾರ್ಯಗಳಿದ್ದರೂ ಸಹ ಅವುಗಳೆಲ್ಲವನ್ನೂ ಬದಿಗಿರಿಸಿ , ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸಹ ಅಲ್ಲಿಂದ ಹೊರಟು ಜನವರಿ ಒಂದನೇ ತಾರೀಖಿನಂದು ‘ ಕೋರೆಗಾಂವ್ ‘ ಗೆ ತಮ್ಮ ಕುಟುಂಬ ಸಮೇತರಾಗಿ ಬಂದು , ಅಲ್ಲಿರುವ ಹುತಾತ್ಮ ಅಸ್ಪಶ್ಯ ಯೋಧರ ಸ್ಮಾರಕಕ್ಕೆ ( ವಿಜಯ ಸ್ಥಂಬಕ್ಕೆ ) ಶ್ರದ್ದಾಂಜಲಿ ಸಲ್ಲಿಸುತ್ತಿದ್ದ ಅವರು ಬದುಕಿರುವ ತನಕವೂ ಒಂದೇ ಒಂದು ವರ್ಷವೂ ಸಹ ಜನವರಿ 1ನೇ ತಾರೀಖು ಇಲ್ಲಿ ಬರುವುದನ್ನು ಬಾಬಾಸಾಹೇಬರು ತಪಿಸಲಿಲ್ಲ . ಪ್ರತಿವರ್ಷ ಜನವರಿ 1ನೇ ತಾರೀಖು ಜಗತ್ತಿಗೆ ಹೊಸವರ್ಷದ ಸಂಭ್ರಮದ ದಿನವಾದರೆ ಭಾರತದ ದಲಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ ಶರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್‌ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . 1800ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸಶರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು .ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನೇ ನಿಷೇಧಿಸಲಾಗಿತ್ತು . ಅಸ ಶ್ಯರು ಊರ ಮಧ್ಯೆ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮಾತ್ರ ನಡೆದುಕೊಂಡು ಹೋಗಬೇಕಾಗಿತ್ತು .

ಏಕೆಂದರೆ ಈ ಸಮಯದಲ್ಲಿ ಅವನ ನೆರಳು ಬೇರೆಕಡೆ ಬೀಳುವುದಿಲ್ಲ ಎನ್ನುವ ಕಾರಣಕ್ಕಾಗಿ . ಹೋಗುವಾಗ ಕುತ್ತಿಗೆಗೆ ಒಂದು ಮಣ್ಣಿನ ಮಡಿಕೆಯನ್ನು ನೇತು ಹಾಕಿಕೊಳ್ಳಬೇಕಾಗಿತ್ತು . ಏಕೆಂದರೆ ಅಸ್ಪಶ್ಯರು ನೆಲಕ್ಕೆ ಉಗುಳುವ ಹಾಗಿರಲಿಲ್ಲ . ಆ ಮಡಿಕೆಯಲ್ಲಿ ಉಗುಳಿಕೊಳ್ಳಬೇಕಾಗಿತ್ತು . ಅದೇ ರೀತಿ ಸೊಂಟಕ್ಕೆ ಒಂದು ಕಸಪೊರಕೆ ಕಟ್ಟಿಕೊಂಡು ತಾನು ನಡೆದ ದಾರಿಯನ್ನು ತಾನೇ ಗುಡಿಸಿಕೊಂಡು ಹೋಗಬೇಕಾಗಿತ್ತು . ಅಸ್ಪಶ್ಯರು ತಮ್ಮ ಗುರುತು ಪತ್ತೆಗಾಗಿ ತಮ್ಮ ಕುತ್ತಿಗೆ ಮತ್ತು ಮುಂಗೈಗೆ ದಪ್ಪದಾದ ಕಪ್ಪು ದಾರವನ್ನು ಕಡ್ಡಾಯವಾಗಿ ಕಟ್ಟಿಕೊಳ್ಳಬೇಕಾಗಿತ್ತು . ಊರಿನೊಳಗೆ ಸತ್ತ ದನಗಳನ್ನು ಊರಿನಿಂದ ಹೊರಗೆ ಹೊತ್ತುಕೊಂಡು ಹೋಗಿ ಅದರ ಮಾಂಸವನ್ನು ಬೇಯಿಸಿ ತಿನ್ನಬೇಕಾಗಿತ್ತು . ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು . ಅಸ್ಪಶ್ಯ ಹೆಂಗಸರು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ತೊಡುವ ಹಾಗಿರಲಿಲ್ಲ . ಹಿಂದೂ ಸವರ್ಣಿಯರು ಮತ್ತು ಪೇಳ್ವೆ ಸೈನಿಕರು ಅಸ್ಪಶ್ಯ ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು . ಈ ಎಲ್ಲಾ ಅನ್ಯಾಯ ಮತ್ತು ದೌರ್ಜನ್ಯಗಳನ್ನು ನಿಲ್ಲಿಸಬೇಕೆಂದು ಅಸ್ಪೃಶ್ಯರು 1817ರಲ್ಲಿ ರಾಜ್ಯಭಾರ ನಡೆಸುತ್ತಿದ್ದ ಪೇಶ್ವಿರಾಜ ಎರಡನೇ ಬಾಜೀರಾಯನಲ್ಲಿ ವಿನಂತಿಸಿಕೊಂಡಾಗ ಎರಡನೇ ಬಾಜೀರಾಯನು “ ನೀವುಗಳು ಹುಟ್ಟಿರುವುದೇ ನಮ್ಮಗಳ ಸೇವೆ ಮಾಡಲಿಕ್ಕಾಗಿ & ನಿಮ್ಮ ಹೆಂಗಸರು ಇರುವುದೇ ನಮ್ಮನ್ನು ಸುಖಪಡಿಸಲಿಕ್ಕಾಗಿ , ಇದೇ ನಮ್ಮ ಮನು ಸಂವಿಧಾನ ” ಎಂದು ಅಸ್ಪೃಶ್ಯರಿಗೆ ಖಡಕ್ಕಾಗಿ ತಿಳಿಸಿದನು . ಇದರಿಂದ ಗಾಯಗೊಂಡ ವ್ಯಾಘ್ರಗಳಂತಾದ ಅಸ್ಪೃಶ್ಯರು ಸೇಡುತೀರಿಸಿಕೊಳ್ಳಲಿಕ್ಕಾಗಿ ಸಮಯ ಕಾಯತೊಡಗಿದರು . ಇದೇ ಸಮಯದಲ್ಲಿ ಸರಿಯಾಗಿ ಕೊಲ್ಕತ್ತಾವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಬಹುತೇಕ ಉತ್ತರ ಭಾರತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವ ರಾಜ ಎರಡನೇ ಬಾಜೀರಾಯನನ್ನು ಬಗ್ಗುಬಡಿದು ದಕ್ಷಿಣ ಭಾರತದಲ್ಲಿ ಅಮ್ಮಗಳ ಆಳ್ವಿಕೆಗೆ ವಿಸ್ತರಿಸಿಕೊಳ್ಳಲು ಸಮಯ ಕಾಯುತ್ತಿದ್ದರು .

ಪೇಶ್ವಗಳ ದೌರ್ಜನ್ಯ , ದಬ್ಬಾಳಿಕೆಗಳಿಂದ ಇನ್ನಿಲ್ಲದಂತೆ ರೋಸಿಹೋಗಿದ್ದ ಮಹಾರಾಷ್ಟ್ರದ ಅಸ್ಪ ಶ್ಯರು ಅದರಲ್ಲೂ ಅಸ್ಪಶ್ಯ ಯುವಕರು ಪೇಶ್ವಗಳ ಬಿಸಿ ರಕ್ತ ಕುಡಿಯಲು ಹಾತೊರೆಯುತ್ತಿದ್ದರು . ಇದನ್ನು ಗಮನಿಸಿದ ಚಾಣಾಕ್ಷ ಬ್ರಿಟೀಷರು ಪೇಶ್ವಗಳ ವಿರುದ್ಧ ಯುದ್ಧ ಮಾಡಲು ಅಸ್ಪಶ್ಯರನ್ನು ಕೋರಿಕೊಂಡರು , ತಮ್ಮಗಳ ಕಷ್ಟ – ಅಪಮಾನಗಳ ಪರಿಹಾರಕಾಗಿ ಒದಗಿ ಬಂದ ಈ ಸುವರ್ಣಾವಕಾಶವನ್ನು ಮನಃಪೂರ್ವಕವಾಗಿ ಸ್ವೀಕರಿಸಿದ ಅಸ್ಪಶ್ಯರು “ ಸಿದನಾಕ , ಎಂಬ ಅಸ್ಪಶ್ಯ ಯುವಕನ ನಾಯಕತ್ವದಲ್ಲಿ 500 ಜನ ಅಸ್ಪಶ್ಯ ಯುವಕರು ಪೇಶೆಗಳ ವಿರುದ ಯುದ್ಧ ಮಾಡಲು ಬ್ರಿಟೀಷರ ಕೋರಿಕೆಗೆ ಒಪ್ಪಿಕೊಂಡರು . ಕಡೆಗೂ ಆ ಐತಿಹಾಸಿಕ ಯುದ್ದದ ದಿನ ಬಂದೇ ಬಿಟ್ಟಿತು . ಅದೇ 1818ರ ಜನವರಿ 1ನೇ ತಾರೀಖು . ಬ್ರಿಟೀಷ್ ಕ್ಯಾಪನ್ ಎಸ್ . ಎಸ್ . ಸಂಡನ್ ನೇತೃತ್ವದಲ್ಲಿ ಸಿದ್ದನಾಕ ‘ ನ ನಾಯಕತ್ವದ 500 ಅಸ ಶ ಯೋಧರ ಪಡೆ ( ಈ ಎಲ್ಲಾ ಯೋಧರಿಗೆ ಬಂದೂಕು ಉಪಯೋಗಿಸುವ ತರಬೇತಿಯನು . ಬ್ರಿಟೀಷರು ಚೆನ್ನಾಗಿ ನೀಡಿರುತ್ತಾರೆ . ) 1817ರ ಡಿಸೆಂಬರ್ 31ನೇ ತಾರೀಖು ರಾತ್ರಿ ಸಿರೂರ್‌ನಿಂದ ಹೊರಡುತ್ತಾರೆ . ಆ ಇಡೀ ರಾತ್ರಿ ಸತತವಾಗಿ 27 ಕಿಲೋಮೀಟರ್ ನಡೆದು ಮಾರನೇ ದಿನ ಅಂದರೆ 1818ರ ಜನವರಿ 1ರಂದು ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಬೀಮಾ ನದಿ ತೀರದಲ್ಲಿರುವ ಕೋರೆಗಾಂವ್ ಎಂಬ ಸ್ಥಳವನ್ನು ಸಿದ್ಧನಾಕನ ಪಡೆ ತಲುಪುತ್ತದೆ . ಇಡೀ ರಾತ್ರಿ ನಿದ್ದೆಯಿಲ್ಲದೆ 27 ಕಿ . ಮೀ . ದೂರವನ್ನು ನಡೆದುಕೊಂಡು ಬಂದಿದ್ದ ಈ ಅಸ್ಪಶ್ಯ ಯೋಧರ ಪಡೆ ನಿದ್ದೆ , ಅನ್ನ – ನೀರು ಯಾವುದನ್ನೂ ಬಯಸದೆ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಪೇಶ್ವ ಸೈನಿಕರ ಮೇಲೆ ಎರಗುತ್ತಾರೆ . 20 ಸಾವಿರ ಅಶ್ವದಳ , 8 ಸಾವಿರ ಕಾಲ್ದಳ ಸೇರಿ ಒಟ್ಟು 28 ಸಾವಿರ ಪೇಳ್ವೆ ಸೈನಿಕರು ಮೂರೂ ದಿಕ್ಕಿನಿಂದ ಅಸ್ಪಶ್ಯ ಯೋಧರಿಗೆ ಎದುರಾಗುತ್ತಾರೆ . ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಯುದ್ದದಲ್ಲಿ ಹಸಿದ ಹೆಬ್ಬುಲಿಗಳಂತಿದ್ದ ಅಸ್ಪಶ್ಯಯೋಧರು ಪೇಶ್ವ ಸೈನ್ಯವನ್ನು ಧೂಳಿಪಟ ಮಾಡುತ್ತಾರೆ . ಇಡೀ ಯುದ್ಧ ಭೂಮಿಯ ತುಂಬ ರಕ್ತದ ಕೋಡಿಯೇ ಹರಿಯುತ್ತದೆ . ಸಾವಿರಾರು ಸೈನಿಕರು ಯುದ್ಧಭೂಮಿಯಲ್ಲಿ ಸಾವನ್ನಪ್ಪುತ್ತಾರೆ .

ಬೃಹತ್ ಸಂಖ್ಯೆಯಲ್ಲಿದ್ದ ಅಂದರೆ ಅಸ್ಪಶ್ಯಯೋಧರಿಗಿಂತ 56 ಪಟ್ಟು ಹೆಚ್ಚು ಇದ್ದ ಪೇಶ್ವಗಳ ರಣಹೇಡಿ ಸೈನ್ಯ ಗಂಡು ಸಿಂಹಗಳಂತಿದ್ದ ಅಸ್ಪೃಶ್ಯ ಸೈನಿಕರ ಮುಂದೆ ನಿಲ್ಲಲಾಗದೆ ಕೊನೆಗೆ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡತೊಡಗಿದರು . ಅಂತಿಮವಾಗಿ ಈ ಯುದ್ದದಲ್ಲಿ ಅಸ್ಪಶ್ಯ ಸೈನಿಕರು ಪ್ರಚಂಡ ಜಯ ಗಳಿಸುತ್ತಾರೆ . ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಕಾಳಗದಲ್ಲಿ 5000ಕ್ಕೂ ಹೆಚ್ಚು ಪೇಳ್ವೆ ಸೈನಿಕರು ಯುದ್ಧ ಭೂಮಿಯಲ್ಲಿ ಸಾವನ್ನಪ್ಪಿದರೆ ಕೇವಲ 22 ಜನ ಅಸ ಶ್ಯಯೋಧರು ವೀರಮರಣವನ್ನಪ್ಪಿದರು . ( ಈ ಯುದ್ಧದಲ್ಲಿ ಒಬ್ಬೊಬ್ಬ ಅಸ್ಪಶ್ಯಯೋಧ ಸರಾಸರಿ ಕನಿಷ್ಠ 100ಜನ ಪೇಳ್ವೆ ಸೈನಿಕರನ್ನು ಕೊಂದುಹಾಕಿರುತ್ತಾನೆ . ಈ ಯುದ್ಧದಲ್ಲಿ ಅಸ್ಪಶ್ಯಯೋಧರ ಪಡೆಯ ನಾಯಕನಾಗಿದ್ದ ಸಿದ್ದನಾಕ ‘ ನು ಸಹ ವೀರಮರಣವನ್ನಪ್ಪುತ್ತಾನೆ . ಅಂದು ರಾತ್ರಿ 10 ಗಂಟೆಗೆ ಸರಿಯಾಗಿ ಬ್ರಿಟೀಷರು ಯುದ್ಧ ನಡೆದ ಆ ಸ್ಥಳದಲ್ಲಿ ( ಪೇಶ್ವಗಳ ಸಾಮ್ರಾಜ್ಯದಲ್ಲಿ ಬ್ರಿಟೀಷ್ ಬಾವುಟವನ್ನು ಹಾರಿಸುತ್ತಾರೆ . ವಿಜಯದ ಬಳಿಕ ಕ್ಯಾಪ್ಟನ್ ಸ್ಟಂಡನ್ ಗೆ ರೀತಿ ಹೇಳಿದನು . ನಿಮ್ಮ ಕೆಚ್ಚೆದೆಯ ಹೋರಾಟವು ನಾವು ಇಂಡಿಯಾದಲ್ಲಿ ಉಳಿಯಲು ಅಧಿಕಾರವನ್ನು ವಿಸ್ತರಿಸಲು ತುಂಬಾ ಸಹಾಯಕವಾಗಿದೆ ಬ್ರಿಟಿಷ್ ಸತ್ಕಾರವು ನಿಮಗೆ ಎಂದೂ ಮರೆಯಲಾಗದ ಕಾಣಿಕೆ ಬಹುಮಾನವನ್ನು ಉಡುಗೊರೆಯಾಗಿ ಮತ್ತು ಮಡದಿ ಮಹಾಯೋಧರ ವಿಜಯ ಸ್ತಂಭವನ್ನು ಸ್ಥಾಪಿಸುವುದರ ಮೂಲಕ ಗೌರವವನ್ನು ಸಲ್ಲಿಸುತ್ತದೆ . ಹಾಗೆಯೇ ನಿಮಗೆ ನಮ್ಮ ಬ್ರಿಟಿಷ್ ಸೈನ್ಯದಲ್ಲಿ ವಿಶೇಷ ಸ್ಥಾನವನ್ನು ಕಲ್ಪಿಸಿ ನಿಮ್ಮ ಕುಟುಂಬದವರಿಗೆ ಸಕಲ ಸೌಲಭ್ಯವನ್ನು ಒದಗಿಸುವ ಏರ್ಪಾಡು ಮಾಡುತ್ತದೆ . ( ಮಹಾರ್ ಸೈನಿಕರು ಸಂತೋಷದಿಂದ ‘ ಬ್ರಿಟೀಷ್ ಸತ್ಕಾರಕ್ಕೆ ಜಯವಾಗಲಿ ಮಹಾರ್ ಸೈನ್ಯ ಚಿರಾಯು ” ಎಂದು ಘೋಷಣೆ ಕೂಗಿದರು . ) ರಣರಂಗದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಪೇಶ್ವ ಸೈನಿಕರ ಜೊತೆ ವೀರಾವೇಶದಿಂದ ಹೋರಾಡಿ ಜಯ ತಂದುಕೊಟ್ಟು ಹುತಾತ್ಮರಾದ 22 ಅಸ್ಪಶ್ಯಯೋಧರ ನೆನಪಿಗಾಗಿ ಬ್ರಿಟೀಷರು 1921ರ ಮಾರ್ಚ್ 21ರಂದು ಯುದ್ಧ ನಡೆದ ಸ್ಥಳದಲ್ಲಿ ( ಕೋರೆಗಾಂವ್‌ನಲ್ಲಿ ) 65ಅಡಿ ಎತ್ತರದ ಭವ್ಯ ‘ ವಿಜಯ ಸ್ತಂಭ ‘ ವನ್ನು ನಿರ್ಮಿಸಿ , ಆ ಸ್ಥಂಬದ ಮೇಲೆ 22 ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಿಸಿದರು . ಆ ಭವ್ಯ ವಿಜಯ ಸಂಬಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಬ್ರಿಟೀಷರು 22 ಸುತ್ತು ಕುಶಾಲ ತೋಪುಗಳನ್ನು ಹಾರಿಸುವ ಮೂಲಕ ಹುತಾತ್ಮರಿಗೆ ರಾಜ ಮರ್ಯಾದೆಯ ಶ್ರದ್ದಾಂಜಲಿ ಸಲ್ಲಿಸಿದ್ದರು . ಈ ವಿಜಯ ಸಂಬದ ಮೇಲೆ ಬ್ರಿಟಿಷರು “ One of the Proudest truimphs of the British Army in the East ” ( ಬ್ರಿಟೀಷ್ ಯೋಧರಿಗೆ ಭಾರತದ ಪೂರ್ವಭಾಗದಲ್ಲಿ ಸಿಕ್ಕಿದ ಹೆಮ್ಮೆಯ ವಿಜಯವಾಗಿದೆ ) ಎಂದೂ ಸಹ ಕೆತ್ತಿಸಿದರು . ಈ ವಿಜಯದ ನಂತರ ಬ್ರಿಟೀಷ್ ಬೋರ್ಡ್ ಆಫ್ ಕಂಟ್ರೋಲ್‌ನ ಅಧ್ಯಕ್ಷ ಜಾರ್ಜ್ ಕ್ಯಾನಿಂಗ್
ಈ ವಿಜಯದ ಬಗ್ಗೆ ಅಚ್ಚರಿ ವ್ಯಕ್ತ ಪಡಿಸುತ್ತಾ “ ಸಣ್ಣ ಸಂಖ್ಯೆಯ ಸೈನ್ಯವು ಒಂದು ಬಲಾಢ ಸಂಖ್ಯೆಯ ಸೈನ್ಯವನ್ನು ಮಣ್ಣು ಮುಕ್ಕಿಸಿದ ಉದಾಹರಣೆ ಚಿಕ್ಕ ಸಂಖ್ಯೆ ಹೊಂದಿರುವ ಎಲ್ಲಾ ಸೈನಿಕ ಬೆಟಾಲಿಯನ್‌ಗಳಿಗೂ ಅನುಕರಣೀಯವಾಗಿದೆ ” , ಎಂದು ಹೇಳಿದರು .

ಅದೇ ರೀತಿ ಜನರಲ್ ಸ್ಮಿತ್ ಕೂಡ ಈ ಗೆಲುವನ್ನು ಉತ್ಸಾಹಪೂರ್ವಕವಾಗಿ ಅಭಿನಂದಿಸಿ “ ಇಂಡಿಯಾದ ಬ್ರಿಟಿಷ್ ಸೇನಾ ಇತಿಹಾಸದಲ್ಲಿ ಕೋರೆಗಾಂವ್ ಯುದ್ಧದ ವಿಜಯವೆಂದರೆ ಶೌರ್ಯ ಮತ್ತು ಪರಾಕ್ರಮದ ಯಶೋಗಾಥೆಯೇ ಆಗಿದೆ ” ಎಂದು ಉದ್ದಾರವೆತ್ತಿದ್ದಾನೆ . ಈ ಯುದ್ದದ ಇತಿಹಾಸವನ್ನು ಬಗೆದು ಹೊರತೆಗೆದ ಡಾ . ಅಂಬೇಡ್ಕರ್ 1957ರಲ್ಲಿ ನಡೆದ ‘ ಸಿಪಾಯಿ ದಂಗೆ ‘ ಗಿಂತ ಸುಮಾರು 40 ವರ್ಷಗಳ ಹಿಂದೆಯೇ ನಡೆದ ಕೋರೆಗಾಂವ್ ದಂಗೆ ‘ ಯ ಬಗ್ಗೆ ಭಾರತದ ಮನುವಾದಿ ಲೇಖಕರು ಬೇಕೆಂತಲೇ ಬೆಳಕು ಚೆಲ್ಲಿರಲಿಲ್ಲ . ಈ ಯುದ್ಧದ ಇತಿಹಾಸವನ್ನು ಹೂತುಹಾಕಿದ್ದರು . ಹುತಾತ್ಮ ಯೋಧರ ನೆನಪಿಗಾಗಿ ಕೋರೆಗಾಂವ್‌ನಲ್ಲಿ ಆಲೀಷರು ನಿರ್ಮಿಸಿದ್ದ ‘ ವಿಜಯ ಸ್ಥಂಬ ‘ ವು ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಆ ಸ್ಟಂಬದ ಸುತ್ತ ‘ ಗಳು ಬೆಳೆದುಕೊಂಡು ಅನಾಥವಾಗಿತ್ತು . ಡಾ . ಅಂಬೇಡ್ಕರ್‌ರವರು 1922ರಲ್ಲಿ ಬ್ರಿಟನ್‌ನಲ್ಲಿ
‘ ಬಾರ್ – ಅತ್ – ಲಾ ‘ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಭಾರತದಲ್ಲಿ ಬ್ರಿಟೀಷರ ಆಳ್ವಿಕೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಬಗ್ಗೆ ಬ್ರಿಟಿಷ್ ಮ್ಯೂಸಿಯಂ ಲೈಬ್ರರಿಯಲ್ಲಿ ಇಟ್ಟಿದ್ದ ದಾಖಲೆಗಳನ್ನು ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ 1818ರಂದು ನಡೆದ ಕೋರೆಗಾಂವ್ ಯುದ್ದದ ಬಗ್ಗೆ ಪ್ರಥಮವಾಗಿ ಮಾಹಿತಿ ಸಿಕ್ಕಿತು . ಈ ಮಾಹಿತಿಯ ಆಧಾರದ ಮೇಲೆ ಕೋರೆಗಾಂವ್ ಯುದ್ದದ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ನಡೆಸಲು ಪ್ರಾರಂಭಿಸಿದರು . ಕೊನೆಗೆ ಈ ಯುದ್ಧದ ಬಗ್ಗೆ ಸಂಪೂರ್ಣ ಮಾಹಿತಿಯನು ಕಲೆ ಹಾಕಿದರು , ನಂತರ ಮಹಾರಾಷ್ಟ್ರದ ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಕೋರೆಗಾಂವ್‌ಗೆ ( ಭೀಮಾನದಿ ತೀರದಲ್ಲಿದೆ ) ತೆರಳಿ ‘ ವಿಜಯಸ್ಥಂಬ ‘ ವನ್ನು ಪತ್ತೆ ಹಚ್ಚಿ ಆ ಸ್ಥಳವನ್ನು ಸ್ವಚ್ಛಗೊಳಿಸಿದರು . ಕೊನೆಗೆ ಯುದ್ಧ ನಡೆದು 109 ವರ್ಷಗಳ ನಂತರ ಅಂದರೆ 1927ರ ಜನವರಿ 1ನೇ ತಾರೀಖಿನಂದು ಡಾ . ಅಂಬೇಡ್ಕರ್‌ರವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಪ್ರಥಮ ಬಾರಿಗೆ ‘ ವಿಜಯ ಸ್ಟಂಬ ‘ ಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಶ್ರದ್ದಾಂಜಲಿ ಸಲ್ಲಿಸಿದರು . ಡಾ . ಅಂಬೇಡ್ಕರ್‌ರವರು ಪ್ರಥಮ ಬಾರಿಗೆ ( 1927ರ ಜನವರಿ 1 ) ಕೋರೆಗಾಂವ್‌ನಲ್ಲಿ ‘ ವಿಜಯ ಸ್ಥಂಬ ‘ ಕ್ಕೆ ಗೌರವ ವಂದನೆ ಸಲ್ಲಿಸಿದ ನಂತರ ನಡೆದ ಸಭೆಯಲ್ಲಿ ಮಾತನ್ನಾಡುತ್ತಾ ಈ ರೀತಿ ಹೇಳಿದರು . ಅಂದು ಬ್ರಿಟಿಷರ ಪರವಾಗಿ ಅಸ್ಪಶ್ಯಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ , ಅಸ್ಪಶ್ಯಯೋಧರು ಬ್ರಿಟಿಷರ ಪರ ಯಾಕೆ ಹೋಗಬೇಕಾಯಿತು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ . ಅಸ್ಪಶ್ಯರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದೂಗಳ ದಬ್ಬಾಳಿಕೆಯನ್ನು ಸುಮ್ಮನೆ ಸಹಿಸಿಕೊಂಡು ಜೀವನ ನಡೆಸಬೇಕಾಗಿತ್ತೆ ? ಹಿಂದೂಗಳು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ – ನರಿಗಳಿಗಿಂತಲೂ ಕೀಳಾಗಿ ಕಂಡಾಗ , ಇನ್ನಿಲ್ಲದಂತೆ ದಬ್ಬಾಳಿಕೆ ನಡೆಸಿದಾಗ , ಅಪಮಾನಿಸಿದಾಗ ಎಲ್ಲವನ್ನೂ ಸಹಿಸಿಕೊಂಡು ಎಷ್ಟು ದಿನ ಬದುಕಬೇಕಾಗಿತ್ತು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟೀಷರ ಪರವಾಗಿ ಯುದ್ದ ಮಾಡಿದರೆಂಬುದನ್ನು ಪ್ರತಿಯೊಬ್ಬರೂ ಲಕ್ಷ್ಮದಲ್ಲಿಡಬೇಕು . – ಗತಿಸಿದ ಕಾಲವೊಂದರಲ್ಲಿ ನಡೆದ ಈ ಘಟನೆಯಲ್ಲಿ ಅಸ್ಪಶ್ಯರು ಅನುಭವಿಸಿದ ಸೋಲು ಗೆಲುವಿನ ನಡುವೆ ಇಂಡಿಯಾದ ಸಾಮಾಜಿಕ ಬದುಕಿನ ಸತ್ಯಗಳನ್ನು ನೀವೇ ನೋಡಿದಿರ . ಇಂತಹ ಅದೆಷ್ಟೋ ಘಟನೆಗಳು ನಡೆದು ಈ ದೇಶದಲ್ಲಿ ಅಸ್ಪಶ್ಯರ ಕೌಶಲ್ಯ ಸಾಹಸ , ಮಾನವೀಯ ಮೌಲ್ಯಗಳು ಮಣ್ಣಲ್ಲಿ ಮುಚ್ಚಿ ಹೋಗಿವೆ.

ಅವುಗಳೆಲ್ಲವನೂ ನಾನು ಬಗೆದು ಹೊರತೆಗೆದೇ ತೀರುತ್ತೇನೆ . ( ಈ ಯುದ್ದವನ್ನಾಧರಿಸಿ ಶ್ರೀ ಅರುಣ್ ಶೌರಿಯವರು ತಮ್ಮ ‘ ವರ್ಷಿಪಿಂಗ್ ಫಾಲ್ಸ್ ಗಾಡ್ ಎಂಬ ಪುಸ್ತಕದಲ್ಲಿ “ ಅಸ್ಪ ಶ್ಯರು ಬ್ರಿಟೀಷರ ಪರವಾಗಿ ಹೋರಾಡಿ ಬ್ರಿಟಿಷರಿಗೆ ಗೆಲುವನ್ನು ಕೊಟ್ಟಿದ್ದಾರೆ , ಆ ಮೂಲಕ ಅವರು ಭಾರತದ ವಿರುದ್ದವೇ ಹೋರಾಡಿದಂತಾಗಿದೆ ” ಎಂದು ಬರೆದಿದ್ದಾರೆ.ಒಂದೆಡೆ ಅಸ್ಪ್ರಶ್ಯರು ಬ್ರಿಟೀಷರ ಪರ ಹೋರಾಡಲು ಕಾರಣಗಳೇನು ಎಂದು ಗೊತ್ತಿದ್ದರೂ ಸಹ ಆ ಪುಸ್ತಕದಲ್ಲಿ ಬರೆದಿಲ್ಲ . ) ಆ ಸಭೆಯಲ್ಲಿ ಡಾ . ಅಂಬೇಡ್ಕರ್‌ರವರು ಮುಂದುವರಿದು ಮಾತನಾಡುತ್ತಾ ಈ ರೀತಿ ಹೇಳಿದರು . “ ಯಾವ ಅಸ್ಪಶ್ಯ ಯೋಧರು ಹಲವಾರು ಯುದ್ಧಗಳಲ್ಲಿ ತಮ್ಮಗಳ ಪರಾಕ್ರಮದಿಂದ ಬ್ರಿಟೀಷರಿಗೆ ವಿಜಯ ತಂದುಕೊಟ್ಟರೋ , ಇಂದು ಅಂತಹ ವೀರತನವನ್ನೇ ಹೊಂದಿರುವ ಅಸ್ಪಶ್ಯ ಯುವಕರನ್ನು ಸೇವೆಗೆ ಸೇರಿಸಿಕೊಳ್ಳಲು ಬ್ರಿಟೀಷ್ ಸರ್ಕಾರ ನಿರ್ಬಂಧ ಹೇರಿದ್ದು ನಂಬಿಕೆ ದ್ರೋಹವೇ ಆಗಿದೆ . ಅಸ್ಪಶ್ಯ ಯುವಕರು ಸೇನೆ ಸೇರುವುದನ್ನು ನಿಷೇಧಿಸಿರುವ ಬ್ರಿಟೀಷ್ ಸರ್ಕಾರ ಅದನ್ನು ತಕ್ಷಣವೇ ಹಿಂಪಡೆದು ಅಸ್ಪಶ್ಯ ಯುವಕರು ಸೇವೆ ಸೇರಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು . ಒಂದು ವೇಳೆ ಬ್ರಿಟೀಷ್ ಸರ್ಕಾರದ ವಿರುದ್ದ ಉಗ್ರ ಚಳುವಳಿಯನ್ನು ಮಾಡಬೇಕಾಗುತ್ತದೆ . ” ( 1892ರಿಂದ ಬ್ರಿಟೀಷ್ ಸರ್ಕಾರವು ಭಾರತದಲ್ಲಿ ಅಸ್ಪಶ್ಯರು ಸೇನೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು .

ಡಾ . ಅಂಬೇಡ್ಕರ್‌ರವರ ಸತತ ಹೋರಾಟದ ಫಲವಾಗಿ 1941ರಲ್ಲಿ ಈ ನಿಷೇಧವನ್ನು ತೆಗೆದುಹಾಕಲಾಯಿತು . ) 1927ರಿಂದ ಪ್ರಾರಂಭಿಸಿ ತಾವು ಬದುಕಿರುವವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಪ್ರತಿವರ್ಷ ಜನವರಿ 1ನೇ ತಾರೀಖಿನಂದು ತಮ್ಮ ಕುಟುಂಬ ಹಾಗೂ ತನ್ನ ಸಾವಿರಾರು ಅನುಯಾಯಿಗಳೊಂದಿಗೆ ಆ ಸ್ಥಳಕ್ಕೆ ಭೇಟಿ ನೀಡಿ ‘ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಿದ್ದರು . ಈಗ ಪ್ರತಿವರ್ಷ ಜನವರಿ 1ನೇ ತಾರೀಖಿನಂದು ಭಾರತದ ಮೂಲೆ ಮೂಲೆಗಳಿಂದ ನಿವೃತ್ತಯೋಧರುಗಳು ಸೇರಿದಂತೆ ಲಕ್ಷಾಂತರ ಜನರು ಕೋರೆಗಾಂವ್‌ಗೆ ಭೇಟಿ ನೀಡಿ ‘ ವಿಜಯ ಸ್ಟಂಬ ‘ ಕ್ಕೆ ನಮಿಸಿ ಹುತಾತ್ಮ ಅಸ್ಪಶ್ಯ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾರೆ . ವರ್ಷದಿಂದ ವರ್ಷಕ್ಕೆ ಅಲ್ಲಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನವರಿ 1ನೇ ತಾರೀಖಿನಂದು ನಡೆಯುವ ಸ್ಥತಿ ದಿನ ಕಾರ್ಯಕ್ರಮವು ಸುವ್ಯವಸ್ಥಿತವಾಗಿ ನಡೆಯಲೆಂದು ಅದರ ಉಸ್ತುವಾರಿಗಾಗಿ ಒಂದು ಕಾರ್ಯಕಾರಿಣಿ ಮಂಡಳಿಯನ್ನು ಸ್ಥಾಪಿಸಲಾಗಿದೆ . “ ನನ್ನ ಜನರಿಗೆ ಆಯುಧ ಹಿಡಿಯುವ ಅಧಿಕಾರ ನೀಡಿದ್ದರೆ ಈ ದೇಶ ಎಂದೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರಲಿಲ್ಲ ಹಾಗೂ ನನ್ನ ಸಾಮಾಜಿಕ ತತ್ವವು ಮೂರು ಪದಗಳಲ್ಲಿ ಅಡಕವಾಗಿದೆ . ಅವುಗಳೆಂದರೆ ; ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವ ಎಂದಿದ್ದಾರೆ ಡಾ . ಬಿ . ಆರ್ . ಅಂಬೇಡ್ಕರ್.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ..!

Published

on

  • ಚೇತನ್ ನಾಡಿಗೇರ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’

ಮಾರ್ಮಿಕವಾಗಿ ಕೇಳಿದರು ಪ್ರಕಾಶ್‍ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಫಾದರ್‍’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …

ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್‍, ಕಮಲ್ ಹಾಸನ್‍ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.

ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.

ಕೆಲವು ನಟರು ಸಹ ತಾವು ಜಿಮ್‍ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.

ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್‍’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್‍ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್‍ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.

30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.

‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ‍ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.

ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.

ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.

ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್‍, ಮೈನಸ್‍ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್‍ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್‍ ನಾಗ್‍ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.

ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್‍ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

Published

on

  • ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .

ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .

ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.

ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .

ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .

ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .

ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending