Connect with us

ಬಹಿರಂಗ

‘ಭೀಮ ಕೋರೆಗಾಂವ್ ದಂಗೆ’ಯ ಬಗ್ಗೆ ನೀವು ಓದಲೇ ಬೇಕಾದ ಲೇಖನ..!

Published

on

ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ )

ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು

1 . ಸಿದ್ದನಾಕ ಮಕಲನಾಕ ನಾಯಕ
2 . ರಾಮನಾಕ ಯಶನಾಕ ಸಿಪಾಯಿ
3 , ಗೋದನಾಕ ಮೋಡೆನಾಕ ಸಿಪಾಯಿ
4 , ರಾಮನಾಕ ಯಶನಾಕ ಸಿಪಾಯಿ
5 . ಭಾಗನಾಕ ಹರನಾಕ ಸಿಪಾಯಿ
6 . ಅಂಬನಾಕ ಕಾನನಾಕ ಸಿಪಾಯಿ
7 . ಗಣನಾಕ ಬಾಳನಾಕ ಸಿಪಾಯಿ
8 . ಬಾಳನಾಖ ದೊಂಡನಾಕ ಸಿಪಾಯಿ
9 , ರೂಪನಾಕ ಲಖನಾಕ ಸಿಪಾಯಿ
10 . ಬಾಲನಾಕ ರಾಮನಾಕ ಸಿಪಾಯಿ
11 . ವಟಿನಾಕ ಧಾನನಾಕ ಸಿಪಾಯಿ
12 . ಗಜನಾಕ ಗಣನಾಕ gಸಿಪಾಯಿ
13 . ಬಾಪನಾಕ ಹಬನಾಕ ಸಿಪಾಯಿ
14 . ಕೋನಾಕ ಜಾನನಾಕ ಸಿಪಾಯಿ
15 . ಸಮನಾಕ ಯಸನಾಕ ಸಿಪಾಯಿ
16 , ಗಣನಾಕ ಧರಮನಾಕ ಸಿಪಾಯಿ
17 . ದೇವನಾಕ ಅಂಕನಾಕ ಸಿಪಾಯಿ
18 . ಗೋಪಾಲನಾಕ ಬಾಲಿನಾಕ ಸಿಪಾಯಿ
19 , ಹರನಾಕ ಹರಿನಾಕ ಸಿಪಾಯಿ
20 . ಜೇಠನಾಕ ದೌನಾಕ ಸಿಪಾಯಿ
21 . ಗಣನಾಕ ಲಖನಾಕ ಸಿಪಾಯಿ
22 . ಸೀನನಾಕ ಮಕಲನಾಕ ಸಿಪಾಯಿ
ಅಸ್ಪಶ್ಯರನ್ನು ಗುರುತಿಸಲು ಅಂದು ಅವರ ಹೆಸರಿನ ಮುಂದೆ ನಾಕ ಎಂದು ಸೇರಿಸಲಾಗುತ್ತಿತ್ತು .

ಡಾ . ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಎಷ್ಟೇ ತುರ್ತು ಕೆಲಸಕಾರ್ಯಗಳಿದ್ದರೂ ಸಹ ಅವುಗಳೆಲ್ಲವನ್ನೂ ಬದಿಗಿರಿಸಿ , ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸಹ ಅಲ್ಲಿಂದ ಹೊರಟು ಜನವರಿ ಒಂದನೇ ತಾರೀಖಿನಂದು ‘ ಕೋರೆಗಾಂವ್ ‘ ಗೆ ತಮ್ಮ ಕುಟುಂಬ ಸಮೇತರಾಗಿ ಬಂದು , ಅಲ್ಲಿರುವ ಹುತಾತ್ಮ ಅಸ್ಪಶ್ಯ ಯೋಧರ ಸ್ಮಾರಕಕ್ಕೆ ( ವಿಜಯ ಸ್ಥಂಬಕ್ಕೆ ) ಶ್ರದ್ದಾಂಜಲಿ ಸಲ್ಲಿಸುತ್ತಿದ್ದ ಅವರು ಬದುಕಿರುವ ತನಕವೂ ಒಂದೇ ಒಂದು ವರ್ಷವೂ ಸಹ ಜನವರಿ 1ನೇ ತಾರೀಖು ಇಲ್ಲಿ ಬರುವುದನ್ನು ಬಾಬಾಸಾಹೇಬರು ತಪಿಸಲಿಲ್ಲ . ಪ್ರತಿವರ್ಷ ಜನವರಿ 1ನೇ ತಾರೀಖು ಜಗತ್ತಿಗೆ ಹೊಸವರ್ಷದ ಸಂಭ್ರಮದ ದಿನವಾದರೆ ಭಾರತದ ದಲಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ ಶರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್‌ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . 1800ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸಶರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು .ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನೇ ನಿಷೇಧಿಸಲಾಗಿತ್ತು . ಅಸ ಶ್ಯರು ಊರ ಮಧ್ಯೆ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮಾತ್ರ ನಡೆದುಕೊಂಡು ಹೋಗಬೇಕಾಗಿತ್ತು .

ಏಕೆಂದರೆ ಈ ಸಮಯದಲ್ಲಿ ಅವನ ನೆರಳು ಬೇರೆಕಡೆ ಬೀಳುವುದಿಲ್ಲ ಎನ್ನುವ ಕಾರಣಕ್ಕಾಗಿ . ಹೋಗುವಾಗ ಕುತ್ತಿಗೆಗೆ ಒಂದು ಮಣ್ಣಿನ ಮಡಿಕೆಯನ್ನು ನೇತು ಹಾಕಿಕೊಳ್ಳಬೇಕಾಗಿತ್ತು . ಏಕೆಂದರೆ ಅಸ್ಪಶ್ಯರು ನೆಲಕ್ಕೆ ಉಗುಳುವ ಹಾಗಿರಲಿಲ್ಲ . ಆ ಮಡಿಕೆಯಲ್ಲಿ ಉಗುಳಿಕೊಳ್ಳಬೇಕಾಗಿತ್ತು . ಅದೇ ರೀತಿ ಸೊಂಟಕ್ಕೆ ಒಂದು ಕಸಪೊರಕೆ ಕಟ್ಟಿಕೊಂಡು ತಾನು ನಡೆದ ದಾರಿಯನ್ನು ತಾನೇ ಗುಡಿಸಿಕೊಂಡು ಹೋಗಬೇಕಾಗಿತ್ತು . ಅಸ್ಪಶ್ಯರು ತಮ್ಮ ಗುರುತು ಪತ್ತೆಗಾಗಿ ತಮ್ಮ ಕುತ್ತಿಗೆ ಮತ್ತು ಮುಂಗೈಗೆ ದಪ್ಪದಾದ ಕಪ್ಪು ದಾರವನ್ನು ಕಡ್ಡಾಯವಾಗಿ ಕಟ್ಟಿಕೊಳ್ಳಬೇಕಾಗಿತ್ತು . ಊರಿನೊಳಗೆ ಸತ್ತ ದನಗಳನ್ನು ಊರಿನಿಂದ ಹೊರಗೆ ಹೊತ್ತುಕೊಂಡು ಹೋಗಿ ಅದರ ಮಾಂಸವನ್ನು ಬೇಯಿಸಿ ತಿನ್ನಬೇಕಾಗಿತ್ತು . ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು . ಅಸ್ಪಶ್ಯ ಹೆಂಗಸರು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ತೊಡುವ ಹಾಗಿರಲಿಲ್ಲ . ಹಿಂದೂ ಸವರ್ಣಿಯರು ಮತ್ತು ಪೇಳ್ವೆ ಸೈನಿಕರು ಅಸ್ಪಶ್ಯ ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು . ಈ ಎಲ್ಲಾ ಅನ್ಯಾಯ ಮತ್ತು ದೌರ್ಜನ್ಯಗಳನ್ನು ನಿಲ್ಲಿಸಬೇಕೆಂದು ಅಸ್ಪೃಶ್ಯರು 1817ರಲ್ಲಿ ರಾಜ್ಯಭಾರ ನಡೆಸುತ್ತಿದ್ದ ಪೇಶ್ವಿರಾಜ ಎರಡನೇ ಬಾಜೀರಾಯನಲ್ಲಿ ವಿನಂತಿಸಿಕೊಂಡಾಗ ಎರಡನೇ ಬಾಜೀರಾಯನು “ ನೀವುಗಳು ಹುಟ್ಟಿರುವುದೇ ನಮ್ಮಗಳ ಸೇವೆ ಮಾಡಲಿಕ್ಕಾಗಿ & ನಿಮ್ಮ ಹೆಂಗಸರು ಇರುವುದೇ ನಮ್ಮನ್ನು ಸುಖಪಡಿಸಲಿಕ್ಕಾಗಿ , ಇದೇ ನಮ್ಮ ಮನು ಸಂವಿಧಾನ ” ಎಂದು ಅಸ್ಪೃಶ್ಯರಿಗೆ ಖಡಕ್ಕಾಗಿ ತಿಳಿಸಿದನು . ಇದರಿಂದ ಗಾಯಗೊಂಡ ವ್ಯಾಘ್ರಗಳಂತಾದ ಅಸ್ಪೃಶ್ಯರು ಸೇಡುತೀರಿಸಿಕೊಳ್ಳಲಿಕ್ಕಾಗಿ ಸಮಯ ಕಾಯತೊಡಗಿದರು . ಇದೇ ಸಮಯದಲ್ಲಿ ಸರಿಯಾಗಿ ಕೊಲ್ಕತ್ತಾವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಬಹುತೇಕ ಉತ್ತರ ಭಾರತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವ ರಾಜ ಎರಡನೇ ಬಾಜೀರಾಯನನ್ನು ಬಗ್ಗುಬಡಿದು ದಕ್ಷಿಣ ಭಾರತದಲ್ಲಿ ಅಮ್ಮಗಳ ಆಳ್ವಿಕೆಗೆ ವಿಸ್ತರಿಸಿಕೊಳ್ಳಲು ಸಮಯ ಕಾಯುತ್ತಿದ್ದರು .

ಪೇಶ್ವಗಳ ದೌರ್ಜನ್ಯ , ದಬ್ಬಾಳಿಕೆಗಳಿಂದ ಇನ್ನಿಲ್ಲದಂತೆ ರೋಸಿಹೋಗಿದ್ದ ಮಹಾರಾಷ್ಟ್ರದ ಅಸ್ಪ ಶ್ಯರು ಅದರಲ್ಲೂ ಅಸ್ಪಶ್ಯ ಯುವಕರು ಪೇಶ್ವಗಳ ಬಿಸಿ ರಕ್ತ ಕುಡಿಯಲು ಹಾತೊರೆಯುತ್ತಿದ್ದರು . ಇದನ್ನು ಗಮನಿಸಿದ ಚಾಣಾಕ್ಷ ಬ್ರಿಟೀಷರು ಪೇಶ್ವಗಳ ವಿರುದ್ಧ ಯುದ್ಧ ಮಾಡಲು ಅಸ್ಪಶ್ಯರನ್ನು ಕೋರಿಕೊಂಡರು , ತಮ್ಮಗಳ ಕಷ್ಟ – ಅಪಮಾನಗಳ ಪರಿಹಾರಕಾಗಿ ಒದಗಿ ಬಂದ ಈ ಸುವರ್ಣಾವಕಾಶವನ್ನು ಮನಃಪೂರ್ವಕವಾಗಿ ಸ್ವೀಕರಿಸಿದ ಅಸ್ಪಶ್ಯರು “ ಸಿದನಾಕ , ಎಂಬ ಅಸ್ಪಶ್ಯ ಯುವಕನ ನಾಯಕತ್ವದಲ್ಲಿ 500 ಜನ ಅಸ್ಪಶ್ಯ ಯುವಕರು ಪೇಶೆಗಳ ವಿರುದ ಯುದ್ಧ ಮಾಡಲು ಬ್ರಿಟೀಷರ ಕೋರಿಕೆಗೆ ಒಪ್ಪಿಕೊಂಡರು . ಕಡೆಗೂ ಆ ಐತಿಹಾಸಿಕ ಯುದ್ದದ ದಿನ ಬಂದೇ ಬಿಟ್ಟಿತು . ಅದೇ 1818ರ ಜನವರಿ 1ನೇ ತಾರೀಖು . ಬ್ರಿಟೀಷ್ ಕ್ಯಾಪನ್ ಎಸ್ . ಎಸ್ . ಸಂಡನ್ ನೇತೃತ್ವದಲ್ಲಿ ಸಿದ್ದನಾಕ ‘ ನ ನಾಯಕತ್ವದ 500 ಅಸ ಶ ಯೋಧರ ಪಡೆ ( ಈ ಎಲ್ಲಾ ಯೋಧರಿಗೆ ಬಂದೂಕು ಉಪಯೋಗಿಸುವ ತರಬೇತಿಯನು . ಬ್ರಿಟೀಷರು ಚೆನ್ನಾಗಿ ನೀಡಿರುತ್ತಾರೆ . ) 1817ರ ಡಿಸೆಂಬರ್ 31ನೇ ತಾರೀಖು ರಾತ್ರಿ ಸಿರೂರ್‌ನಿಂದ ಹೊರಡುತ್ತಾರೆ . ಆ ಇಡೀ ರಾತ್ರಿ ಸತತವಾಗಿ 27 ಕಿಲೋಮೀಟರ್ ನಡೆದು ಮಾರನೇ ದಿನ ಅಂದರೆ 1818ರ ಜನವರಿ 1ರಂದು ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಬೀಮಾ ನದಿ ತೀರದಲ್ಲಿರುವ ಕೋರೆಗಾಂವ್ ಎಂಬ ಸ್ಥಳವನ್ನು ಸಿದ್ಧನಾಕನ ಪಡೆ ತಲುಪುತ್ತದೆ . ಇಡೀ ರಾತ್ರಿ ನಿದ್ದೆಯಿಲ್ಲದೆ 27 ಕಿ . ಮೀ . ದೂರವನ್ನು ನಡೆದುಕೊಂಡು ಬಂದಿದ್ದ ಈ ಅಸ್ಪಶ್ಯ ಯೋಧರ ಪಡೆ ನಿದ್ದೆ , ಅನ್ನ – ನೀರು ಯಾವುದನ್ನೂ ಬಯಸದೆ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಪೇಶ್ವ ಸೈನಿಕರ ಮೇಲೆ ಎರಗುತ್ತಾರೆ . 20 ಸಾವಿರ ಅಶ್ವದಳ , 8 ಸಾವಿರ ಕಾಲ್ದಳ ಸೇರಿ ಒಟ್ಟು 28 ಸಾವಿರ ಪೇಳ್ವೆ ಸೈನಿಕರು ಮೂರೂ ದಿಕ್ಕಿನಿಂದ ಅಸ್ಪಶ್ಯ ಯೋಧರಿಗೆ ಎದುರಾಗುತ್ತಾರೆ . ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಯುದ್ದದಲ್ಲಿ ಹಸಿದ ಹೆಬ್ಬುಲಿಗಳಂತಿದ್ದ ಅಸ್ಪಶ್ಯಯೋಧರು ಪೇಶ್ವ ಸೈನ್ಯವನ್ನು ಧೂಳಿಪಟ ಮಾಡುತ್ತಾರೆ . ಇಡೀ ಯುದ್ಧ ಭೂಮಿಯ ತುಂಬ ರಕ್ತದ ಕೋಡಿಯೇ ಹರಿಯುತ್ತದೆ . ಸಾವಿರಾರು ಸೈನಿಕರು ಯುದ್ಧಭೂಮಿಯಲ್ಲಿ ಸಾವನ್ನಪ್ಪುತ್ತಾರೆ .

ಬೃಹತ್ ಸಂಖ್ಯೆಯಲ್ಲಿದ್ದ ಅಂದರೆ ಅಸ್ಪಶ್ಯಯೋಧರಿಗಿಂತ 56 ಪಟ್ಟು ಹೆಚ್ಚು ಇದ್ದ ಪೇಶ್ವಗಳ ರಣಹೇಡಿ ಸೈನ್ಯ ಗಂಡು ಸಿಂಹಗಳಂತಿದ್ದ ಅಸ್ಪೃಶ್ಯ ಸೈನಿಕರ ಮುಂದೆ ನಿಲ್ಲಲಾಗದೆ ಕೊನೆಗೆ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡತೊಡಗಿದರು . ಅಂತಿಮವಾಗಿ ಈ ಯುದ್ದದಲ್ಲಿ ಅಸ್ಪಶ್ಯ ಸೈನಿಕರು ಪ್ರಚಂಡ ಜಯ ಗಳಿಸುತ್ತಾರೆ . ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಕಾಳಗದಲ್ಲಿ 5000ಕ್ಕೂ ಹೆಚ್ಚು ಪೇಳ್ವೆ ಸೈನಿಕರು ಯುದ್ಧ ಭೂಮಿಯಲ್ಲಿ ಸಾವನ್ನಪ್ಪಿದರೆ ಕೇವಲ 22 ಜನ ಅಸ ಶ್ಯಯೋಧರು ವೀರಮರಣವನ್ನಪ್ಪಿದರು . ( ಈ ಯುದ್ಧದಲ್ಲಿ ಒಬ್ಬೊಬ್ಬ ಅಸ್ಪಶ್ಯಯೋಧ ಸರಾಸರಿ ಕನಿಷ್ಠ 100ಜನ ಪೇಳ್ವೆ ಸೈನಿಕರನ್ನು ಕೊಂದುಹಾಕಿರುತ್ತಾನೆ . ಈ ಯುದ್ಧದಲ್ಲಿ ಅಸ್ಪಶ್ಯಯೋಧರ ಪಡೆಯ ನಾಯಕನಾಗಿದ್ದ ಸಿದ್ದನಾಕ ‘ ನು ಸಹ ವೀರಮರಣವನ್ನಪ್ಪುತ್ತಾನೆ . ಅಂದು ರಾತ್ರಿ 10 ಗಂಟೆಗೆ ಸರಿಯಾಗಿ ಬ್ರಿಟೀಷರು ಯುದ್ಧ ನಡೆದ ಆ ಸ್ಥಳದಲ್ಲಿ ( ಪೇಶ್ವಗಳ ಸಾಮ್ರಾಜ್ಯದಲ್ಲಿ ಬ್ರಿಟೀಷ್ ಬಾವುಟವನ್ನು ಹಾರಿಸುತ್ತಾರೆ . ವಿಜಯದ ಬಳಿಕ ಕ್ಯಾಪ್ಟನ್ ಸ್ಟಂಡನ್ ಗೆ ರೀತಿ ಹೇಳಿದನು . ನಿಮ್ಮ ಕೆಚ್ಚೆದೆಯ ಹೋರಾಟವು ನಾವು ಇಂಡಿಯಾದಲ್ಲಿ ಉಳಿಯಲು ಅಧಿಕಾರವನ್ನು ವಿಸ್ತರಿಸಲು ತುಂಬಾ ಸಹಾಯಕವಾಗಿದೆ ಬ್ರಿಟಿಷ್ ಸತ್ಕಾರವು ನಿಮಗೆ ಎಂದೂ ಮರೆಯಲಾಗದ ಕಾಣಿಕೆ ಬಹುಮಾನವನ್ನು ಉಡುಗೊರೆಯಾಗಿ ಮತ್ತು ಮಡದಿ ಮಹಾಯೋಧರ ವಿಜಯ ಸ್ತಂಭವನ್ನು ಸ್ಥಾಪಿಸುವುದರ ಮೂಲಕ ಗೌರವವನ್ನು ಸಲ್ಲಿಸುತ್ತದೆ . ಹಾಗೆಯೇ ನಿಮಗೆ ನಮ್ಮ ಬ್ರಿಟಿಷ್ ಸೈನ್ಯದಲ್ಲಿ ವಿಶೇಷ ಸ್ಥಾನವನ್ನು ಕಲ್ಪಿಸಿ ನಿಮ್ಮ ಕುಟುಂಬದವರಿಗೆ ಸಕಲ ಸೌಲಭ್ಯವನ್ನು ಒದಗಿಸುವ ಏರ್ಪಾಡು ಮಾಡುತ್ತದೆ . ( ಮಹಾರ್ ಸೈನಿಕರು ಸಂತೋಷದಿಂದ ‘ ಬ್ರಿಟೀಷ್ ಸತ್ಕಾರಕ್ಕೆ ಜಯವಾಗಲಿ ಮಹಾರ್ ಸೈನ್ಯ ಚಿರಾಯು ” ಎಂದು ಘೋಷಣೆ ಕೂಗಿದರು . ) ರಣರಂಗದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಪೇಶ್ವ ಸೈನಿಕರ ಜೊತೆ ವೀರಾವೇಶದಿಂದ ಹೋರಾಡಿ ಜಯ ತಂದುಕೊಟ್ಟು ಹುತಾತ್ಮರಾದ 22 ಅಸ್ಪಶ್ಯಯೋಧರ ನೆನಪಿಗಾಗಿ ಬ್ರಿಟೀಷರು 1921ರ ಮಾರ್ಚ್ 21ರಂದು ಯುದ್ಧ ನಡೆದ ಸ್ಥಳದಲ್ಲಿ ( ಕೋರೆಗಾಂವ್‌ನಲ್ಲಿ ) 65ಅಡಿ ಎತ್ತರದ ಭವ್ಯ ‘ ವಿಜಯ ಸ್ತಂಭ ‘ ವನ್ನು ನಿರ್ಮಿಸಿ , ಆ ಸ್ಥಂಬದ ಮೇಲೆ 22 ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಿಸಿದರು . ಆ ಭವ್ಯ ವಿಜಯ ಸಂಬಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಬ್ರಿಟೀಷರು 22 ಸುತ್ತು ಕುಶಾಲ ತೋಪುಗಳನ್ನು ಹಾರಿಸುವ ಮೂಲಕ ಹುತಾತ್ಮರಿಗೆ ರಾಜ ಮರ್ಯಾದೆಯ ಶ್ರದ್ದಾಂಜಲಿ ಸಲ್ಲಿಸಿದ್ದರು . ಈ ವಿಜಯ ಸಂಬದ ಮೇಲೆ ಬ್ರಿಟಿಷರು “ One of the Proudest truimphs of the British Army in the East ” ( ಬ್ರಿಟೀಷ್ ಯೋಧರಿಗೆ ಭಾರತದ ಪೂರ್ವಭಾಗದಲ್ಲಿ ಸಿಕ್ಕಿದ ಹೆಮ್ಮೆಯ ವಿಜಯವಾಗಿದೆ ) ಎಂದೂ ಸಹ ಕೆತ್ತಿಸಿದರು . ಈ ವಿಜಯದ ನಂತರ ಬ್ರಿಟೀಷ್ ಬೋರ್ಡ್ ಆಫ್ ಕಂಟ್ರೋಲ್‌ನ ಅಧ್ಯಕ್ಷ ಜಾರ್ಜ್ ಕ್ಯಾನಿಂಗ್
ಈ ವಿಜಯದ ಬಗ್ಗೆ ಅಚ್ಚರಿ ವ್ಯಕ್ತ ಪಡಿಸುತ್ತಾ “ ಸಣ್ಣ ಸಂಖ್ಯೆಯ ಸೈನ್ಯವು ಒಂದು ಬಲಾಢ ಸಂಖ್ಯೆಯ ಸೈನ್ಯವನ್ನು ಮಣ್ಣು ಮುಕ್ಕಿಸಿದ ಉದಾಹರಣೆ ಚಿಕ್ಕ ಸಂಖ್ಯೆ ಹೊಂದಿರುವ ಎಲ್ಲಾ ಸೈನಿಕ ಬೆಟಾಲಿಯನ್‌ಗಳಿಗೂ ಅನುಕರಣೀಯವಾಗಿದೆ ” , ಎಂದು ಹೇಳಿದರು .

ಅದೇ ರೀತಿ ಜನರಲ್ ಸ್ಮಿತ್ ಕೂಡ ಈ ಗೆಲುವನ್ನು ಉತ್ಸಾಹಪೂರ್ವಕವಾಗಿ ಅಭಿನಂದಿಸಿ “ ಇಂಡಿಯಾದ ಬ್ರಿಟಿಷ್ ಸೇನಾ ಇತಿಹಾಸದಲ್ಲಿ ಕೋರೆಗಾಂವ್ ಯುದ್ಧದ ವಿಜಯವೆಂದರೆ ಶೌರ್ಯ ಮತ್ತು ಪರಾಕ್ರಮದ ಯಶೋಗಾಥೆಯೇ ಆಗಿದೆ ” ಎಂದು ಉದ್ದಾರವೆತ್ತಿದ್ದಾನೆ . ಈ ಯುದ್ದದ ಇತಿಹಾಸವನ್ನು ಬಗೆದು ಹೊರತೆಗೆದ ಡಾ . ಅಂಬೇಡ್ಕರ್ 1957ರಲ್ಲಿ ನಡೆದ ‘ ಸಿಪಾಯಿ ದಂಗೆ ‘ ಗಿಂತ ಸುಮಾರು 40 ವರ್ಷಗಳ ಹಿಂದೆಯೇ ನಡೆದ ಕೋರೆಗಾಂವ್ ದಂಗೆ ‘ ಯ ಬಗ್ಗೆ ಭಾರತದ ಮನುವಾದಿ ಲೇಖಕರು ಬೇಕೆಂತಲೇ ಬೆಳಕು ಚೆಲ್ಲಿರಲಿಲ್ಲ . ಈ ಯುದ್ಧದ ಇತಿಹಾಸವನ್ನು ಹೂತುಹಾಕಿದ್ದರು . ಹುತಾತ್ಮ ಯೋಧರ ನೆನಪಿಗಾಗಿ ಕೋರೆಗಾಂವ್‌ನಲ್ಲಿ ಆಲೀಷರು ನಿರ್ಮಿಸಿದ್ದ ‘ ವಿಜಯ ಸ್ಥಂಬ ‘ ವು ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಆ ಸ್ಟಂಬದ ಸುತ್ತ ‘ ಗಳು ಬೆಳೆದುಕೊಂಡು ಅನಾಥವಾಗಿತ್ತು . ಡಾ . ಅಂಬೇಡ್ಕರ್‌ರವರು 1922ರಲ್ಲಿ ಬ್ರಿಟನ್‌ನಲ್ಲಿ
‘ ಬಾರ್ – ಅತ್ – ಲಾ ‘ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಭಾರತದಲ್ಲಿ ಬ್ರಿಟೀಷರ ಆಳ್ವಿಕೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಬಗ್ಗೆ ಬ್ರಿಟಿಷ್ ಮ್ಯೂಸಿಯಂ ಲೈಬ್ರರಿಯಲ್ಲಿ ಇಟ್ಟಿದ್ದ ದಾಖಲೆಗಳನ್ನು ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ 1818ರಂದು ನಡೆದ ಕೋರೆಗಾಂವ್ ಯುದ್ದದ ಬಗ್ಗೆ ಪ್ರಥಮವಾಗಿ ಮಾಹಿತಿ ಸಿಕ್ಕಿತು . ಈ ಮಾಹಿತಿಯ ಆಧಾರದ ಮೇಲೆ ಕೋರೆಗಾಂವ್ ಯುದ್ದದ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ನಡೆಸಲು ಪ್ರಾರಂಭಿಸಿದರು . ಕೊನೆಗೆ ಈ ಯುದ್ಧದ ಬಗ್ಗೆ ಸಂಪೂರ್ಣ ಮಾಹಿತಿಯನು ಕಲೆ ಹಾಕಿದರು , ನಂತರ ಮಹಾರಾಷ್ಟ್ರದ ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಕೋರೆಗಾಂವ್‌ಗೆ ( ಭೀಮಾನದಿ ತೀರದಲ್ಲಿದೆ ) ತೆರಳಿ ‘ ವಿಜಯಸ್ಥಂಬ ‘ ವನ್ನು ಪತ್ತೆ ಹಚ್ಚಿ ಆ ಸ್ಥಳವನ್ನು ಸ್ವಚ್ಛಗೊಳಿಸಿದರು . ಕೊನೆಗೆ ಯುದ್ಧ ನಡೆದು 109 ವರ್ಷಗಳ ನಂತರ ಅಂದರೆ 1927ರ ಜನವರಿ 1ನೇ ತಾರೀಖಿನಂದು ಡಾ . ಅಂಬೇಡ್ಕರ್‌ರವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಪ್ರಥಮ ಬಾರಿಗೆ ‘ ವಿಜಯ ಸ್ಟಂಬ ‘ ಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಶ್ರದ್ದಾಂಜಲಿ ಸಲ್ಲಿಸಿದರು . ಡಾ . ಅಂಬೇಡ್ಕರ್‌ರವರು ಪ್ರಥಮ ಬಾರಿಗೆ ( 1927ರ ಜನವರಿ 1 ) ಕೋರೆಗಾಂವ್‌ನಲ್ಲಿ ‘ ವಿಜಯ ಸ್ಥಂಬ ‘ ಕ್ಕೆ ಗೌರವ ವಂದನೆ ಸಲ್ಲಿಸಿದ ನಂತರ ನಡೆದ ಸಭೆಯಲ್ಲಿ ಮಾತನ್ನಾಡುತ್ತಾ ಈ ರೀತಿ ಹೇಳಿದರು . ಅಂದು ಬ್ರಿಟಿಷರ ಪರವಾಗಿ ಅಸ್ಪಶ್ಯಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ , ಅಸ್ಪಶ್ಯಯೋಧರು ಬ್ರಿಟಿಷರ ಪರ ಯಾಕೆ ಹೋಗಬೇಕಾಯಿತು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ . ಅಸ್ಪಶ್ಯರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದೂಗಳ ದಬ್ಬಾಳಿಕೆಯನ್ನು ಸುಮ್ಮನೆ ಸಹಿಸಿಕೊಂಡು ಜೀವನ ನಡೆಸಬೇಕಾಗಿತ್ತೆ ? ಹಿಂದೂಗಳು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ – ನರಿಗಳಿಗಿಂತಲೂ ಕೀಳಾಗಿ ಕಂಡಾಗ , ಇನ್ನಿಲ್ಲದಂತೆ ದಬ್ಬಾಳಿಕೆ ನಡೆಸಿದಾಗ , ಅಪಮಾನಿಸಿದಾಗ ಎಲ್ಲವನ್ನೂ ಸಹಿಸಿಕೊಂಡು ಎಷ್ಟು ದಿನ ಬದುಕಬೇಕಾಗಿತ್ತು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟೀಷರ ಪರವಾಗಿ ಯುದ್ದ ಮಾಡಿದರೆಂಬುದನ್ನು ಪ್ರತಿಯೊಬ್ಬರೂ ಲಕ್ಷ್ಮದಲ್ಲಿಡಬೇಕು . – ಗತಿಸಿದ ಕಾಲವೊಂದರಲ್ಲಿ ನಡೆದ ಈ ಘಟನೆಯಲ್ಲಿ ಅಸ್ಪಶ್ಯರು ಅನುಭವಿಸಿದ ಸೋಲು ಗೆಲುವಿನ ನಡುವೆ ಇಂಡಿಯಾದ ಸಾಮಾಜಿಕ ಬದುಕಿನ ಸತ್ಯಗಳನ್ನು ನೀವೇ ನೋಡಿದಿರ . ಇಂತಹ ಅದೆಷ್ಟೋ ಘಟನೆಗಳು ನಡೆದು ಈ ದೇಶದಲ್ಲಿ ಅಸ್ಪಶ್ಯರ ಕೌಶಲ್ಯ ಸಾಹಸ , ಮಾನವೀಯ ಮೌಲ್ಯಗಳು ಮಣ್ಣಲ್ಲಿ ಮುಚ್ಚಿ ಹೋಗಿವೆ.

ಅವುಗಳೆಲ್ಲವನೂ ನಾನು ಬಗೆದು ಹೊರತೆಗೆದೇ ತೀರುತ್ತೇನೆ . ( ಈ ಯುದ್ದವನ್ನಾಧರಿಸಿ ಶ್ರೀ ಅರುಣ್ ಶೌರಿಯವರು ತಮ್ಮ ‘ ವರ್ಷಿಪಿಂಗ್ ಫಾಲ್ಸ್ ಗಾಡ್ ಎಂಬ ಪುಸ್ತಕದಲ್ಲಿ “ ಅಸ್ಪ ಶ್ಯರು ಬ್ರಿಟೀಷರ ಪರವಾಗಿ ಹೋರಾಡಿ ಬ್ರಿಟಿಷರಿಗೆ ಗೆಲುವನ್ನು ಕೊಟ್ಟಿದ್ದಾರೆ , ಆ ಮೂಲಕ ಅವರು ಭಾರತದ ವಿರುದ್ದವೇ ಹೋರಾಡಿದಂತಾಗಿದೆ ” ಎಂದು ಬರೆದಿದ್ದಾರೆ.ಒಂದೆಡೆ ಅಸ್ಪ್ರಶ್ಯರು ಬ್ರಿಟೀಷರ ಪರ ಹೋರಾಡಲು ಕಾರಣಗಳೇನು ಎಂದು ಗೊತ್ತಿದ್ದರೂ ಸಹ ಆ ಪುಸ್ತಕದಲ್ಲಿ ಬರೆದಿಲ್ಲ . ) ಆ ಸಭೆಯಲ್ಲಿ ಡಾ . ಅಂಬೇಡ್ಕರ್‌ರವರು ಮುಂದುವರಿದು ಮಾತನಾಡುತ್ತಾ ಈ ರೀತಿ ಹೇಳಿದರು . “ ಯಾವ ಅಸ್ಪಶ್ಯ ಯೋಧರು ಹಲವಾರು ಯುದ್ಧಗಳಲ್ಲಿ ತಮ್ಮಗಳ ಪರಾಕ್ರಮದಿಂದ ಬ್ರಿಟೀಷರಿಗೆ ವಿಜಯ ತಂದುಕೊಟ್ಟರೋ , ಇಂದು ಅಂತಹ ವೀರತನವನ್ನೇ ಹೊಂದಿರುವ ಅಸ್ಪಶ್ಯ ಯುವಕರನ್ನು ಸೇವೆಗೆ ಸೇರಿಸಿಕೊಳ್ಳಲು ಬ್ರಿಟೀಷ್ ಸರ್ಕಾರ ನಿರ್ಬಂಧ ಹೇರಿದ್ದು ನಂಬಿಕೆ ದ್ರೋಹವೇ ಆಗಿದೆ . ಅಸ್ಪಶ್ಯ ಯುವಕರು ಸೇನೆ ಸೇರುವುದನ್ನು ನಿಷೇಧಿಸಿರುವ ಬ್ರಿಟೀಷ್ ಸರ್ಕಾರ ಅದನ್ನು ತಕ್ಷಣವೇ ಹಿಂಪಡೆದು ಅಸ್ಪಶ್ಯ ಯುವಕರು ಸೇವೆ ಸೇರಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು . ಒಂದು ವೇಳೆ ಬ್ರಿಟೀಷ್ ಸರ್ಕಾರದ ವಿರುದ್ದ ಉಗ್ರ ಚಳುವಳಿಯನ್ನು ಮಾಡಬೇಕಾಗುತ್ತದೆ . ” ( 1892ರಿಂದ ಬ್ರಿಟೀಷ್ ಸರ್ಕಾರವು ಭಾರತದಲ್ಲಿ ಅಸ್ಪಶ್ಯರು ಸೇನೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು .

ಡಾ . ಅಂಬೇಡ್ಕರ್‌ರವರ ಸತತ ಹೋರಾಟದ ಫಲವಾಗಿ 1941ರಲ್ಲಿ ಈ ನಿಷೇಧವನ್ನು ತೆಗೆದುಹಾಕಲಾಯಿತು . ) 1927ರಿಂದ ಪ್ರಾರಂಭಿಸಿ ತಾವು ಬದುಕಿರುವವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಪ್ರತಿವರ್ಷ ಜನವರಿ 1ನೇ ತಾರೀಖಿನಂದು ತಮ್ಮ ಕುಟುಂಬ ಹಾಗೂ ತನ್ನ ಸಾವಿರಾರು ಅನುಯಾಯಿಗಳೊಂದಿಗೆ ಆ ಸ್ಥಳಕ್ಕೆ ಭೇಟಿ ನೀಡಿ ‘ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಿದ್ದರು . ಈಗ ಪ್ರತಿವರ್ಷ ಜನವರಿ 1ನೇ ತಾರೀಖಿನಂದು ಭಾರತದ ಮೂಲೆ ಮೂಲೆಗಳಿಂದ ನಿವೃತ್ತಯೋಧರುಗಳು ಸೇರಿದಂತೆ ಲಕ್ಷಾಂತರ ಜನರು ಕೋರೆಗಾಂವ್‌ಗೆ ಭೇಟಿ ನೀಡಿ ‘ ವಿಜಯ ಸ್ಟಂಬ ‘ ಕ್ಕೆ ನಮಿಸಿ ಹುತಾತ್ಮ ಅಸ್ಪಶ್ಯ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾರೆ . ವರ್ಷದಿಂದ ವರ್ಷಕ್ಕೆ ಅಲ್ಲಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನವರಿ 1ನೇ ತಾರೀಖಿನಂದು ನಡೆಯುವ ಸ್ಥತಿ ದಿನ ಕಾರ್ಯಕ್ರಮವು ಸುವ್ಯವಸ್ಥಿತವಾಗಿ ನಡೆಯಲೆಂದು ಅದರ ಉಸ್ತುವಾರಿಗಾಗಿ ಒಂದು ಕಾರ್ಯಕಾರಿಣಿ ಮಂಡಳಿಯನ್ನು ಸ್ಥಾಪಿಸಲಾಗಿದೆ . “ ನನ್ನ ಜನರಿಗೆ ಆಯುಧ ಹಿಡಿಯುವ ಅಧಿಕಾರ ನೀಡಿದ್ದರೆ ಈ ದೇಶ ಎಂದೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರಲಿಲ್ಲ ಹಾಗೂ ನನ್ನ ಸಾಮಾಜಿಕ ತತ್ವವು ಮೂರು ಪದಗಳಲ್ಲಿ ಅಡಕವಾಗಿದೆ . ಅವುಗಳೆಂದರೆ ; ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವ ಎಂದಿದ್ದಾರೆ ಡಾ . ಬಿ . ಆರ್ . ಅಂಬೇಡ್ಕರ್.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ

ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿನಿಧಿ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ತರಳಬಾಳು ಬಡಾವಣೆಯ ಅವರ ನಿವಾಸದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ ವಾಮದೇವಪ್ಪ ಮತ್ತು ಪದಾಧಿಕಾರಿಗಳು ಇಂದು ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು  ಅನುವಾದ ಸಾಹಿತ್ಯಕ್ಕಾಗಿ ನೀಡುವ 2023ರ ‘ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ ಪಶಸ್ತಿ’ ಗೆ  ಪ್ರೊ. ಎಸ್.ಬಿ.ರಂಗನಾಥ್  ಅನುವಾದಿಸಿದ ಖ್ಯಾತ ಲೇಖಕ ಶಶಿ ತರೂರು ಅವರ ‘ಕಗ್ಗತ್ತಲ ಕಾಲ’ ಕೃತಿಯು ಆಯ್ಕೆಯಾಗಿತ್ತು. ಶಶಿ ತರೂರ್ ಅವರ ಇಂಗ್ಲಿಷ್ An Era of Darkness ಎಂಬ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇದನ್ನು ಪ್ರೊ. ರಂಗನಾಥ್ ಅವರು ಕೊರೊನಾ ಕಾಲದ ಲಾಕ್ ಡೌನ್‌ ಸಂದರ್ಭದಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು. 2022ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ಕೃತಿಯನ್ನು ಪ್ರಕಟಿಸಿತ್ತು.

ಪ್ರೊ. ರಂಗನಾಥ್ ಇದುವರೆಗೂ ‘ಪ್ರಜಾವಾಣಿ ‘ ಯ ಅಂಕಣ ಬರಹಗಳ ಸಂಗ್ರಹ ‘ಎಲೆಲೆ ಮಧುಬಾಲೆ’, ‘ಕಚಗುಳಿ(ಗೆ) ಕಾಲ’ ಸೇರಿದಂತೆ ಹತ್ತು ಕೃತಿಗಳ ಲೇಖಕರು. ಬಂಗಾಳಿಯ ಪ್ರಸಿದ್ಧ ಕಾದಂಬರಿಗಳಾದ ‘ಭುವನ್ ಸೋಮ್’ , ‘ಪ್ರತಿದ್ವಂದಿ’ ಮುಂತಾದ ಏಳು ಕೃತಿಗಳನ್ನು ಅನುವಾದಿಸಿದ್ದಾರೆ.  ಇವರ ‘ ಟಿಪ್ಪು ಸುಲ್ತಾನನ ಖಡ್ಗ’ ಕೃತಿಯು ಮೂರು ಮುದ್ರಣಗಳನ್ನು ಕಂಡಿದೆ. ಇತ್ತೀಚೆಗೆ ಅನುವಾದಿಸಿದ ನಿವೃತ್ತ ಐ ಎ ಎಸ್ ಅಧಿಕಾರಿ ಎಂ ಮದನಗೋಪಾಲ್ ಅವರ ‘ಕಾಮನ ಬಿಲ್ಲನು ಬಂಬತ್ತಿ’ ಕೃತಿಯು ರಾಯಚೂರಿನಲ್ಲಿ ಲೋಕಾರ್ಪಣೆಗೊಂಡಿತ್ತು.

ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಪ್ರೊ.ಎಸ್.ಬಿ.ರಂಗನಾಥ್ ಅವರು ತಮ್ಮ ತೀವ್ರ ಅನಾರೋಗ್ಯದ ಕಾರಣದಿಂದ ಹಾಜರಿರಲು ಸಾಧ್ಯವಾಗಿರಲಿಲ್ಲ. ಈಗ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಎಸ್.ಬಿ.ರಂಗನಾಥ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಪ್ರಶಸ್ತಿ ಫಲಕ ಮತ್ತು ಹತ್ತು ಸಾವಿರ ನಗದನ್ನು  ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪರಿಷತ್ತಿನ ಪದಾಧಿಕಾರಿಗಳಾದ ರಾಘವೇಂದ್ರ ನಾಯರ್, ಎಸ್ ಎಂ ಮಲ್ಲಮ್ಮ, ರುದ್ರಾಕ್ಷಿ ಬಾಯಿ ಪುಟ್ಟನಾಯಕ್, ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಕಾರ್ಯದರ್ಶಿಗಳಾದ ನಾಗರಾಜ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ನಿರ್ದೇಶಕರಾದ ಷಡಾಕ್ಷರಪ್ಪ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ

Published

on

ಸುದ್ದಿದಿನ,ಭದ್ರಾವತಿ: ಆಕಾಶವಾಣಿ ಭದ್ರಾವತಿ ಕೇಂದ್ರದ 60ನೇ ವರ್ಷದ ವಜ್ರಮಹೋತ್ಸವದ ಅಂಗವಾಗಿ ಶಿವಮೊಗ್ಗದ ಕುವೆಂಪು ವಿ.ವಿ.ಯ ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಿಶ್ವ ಮಾನವ ಡಾ. ಅಂಬೇಡ್ಕರ್ ಅವರ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿಯನ್ನು ಪ್ರಸಾರ ಮಾಡಲಿದ್ದು, ಜೂನ್ 11 ರಂದು ಬೆಳಗ್ಗೆ 7.15 ಕ್ಕೆ ಕುವೆಂಪು ವಿವಿಯ ಕುಲಪತಿ ಡಾ. ಶರತ್ ಅನಂತಮೂರ್ತಿ ಅವರ ಮುನ್ನುಡಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಈ ಸರಣಿಯಲ್ಲಿ ಒಟ್ಟು 52 ಕಾರ್ಯಕ್ರಮಗಳಿದ್ದು, ಪ್ರತೀ ಮಂಗಳವಾರ ಬೆಳಗ್ಗೆ 7.15 ಕ್ಕೆ ಪ್ರಸಾರ ಮಾಡಲಿದೆ. ಪ್ರಭಾವಿತ ಮಹನೀಯರ ಅನಿಸಿಕೆಯನ್ನು ಹಂಚಿಕೊಳ್ಳುವುದರೊಟ್ಟಿಗೆ ದೇಶವಿದೇಶದ ಕೇಳುಗರು ತಮ್ಮ ಮೇಲೆ ಅಂಬೇಡ್ಕರ್ ಅವರ ಪ್ರಭಾವನ್ನೂ ಆಕಾಶವಾಣಿಯಲ್ಲಿ ಹಂಚಿಕೊಳ್ಳಲು ವಾಟ್ಸ್ ಆಪ್ ಮೂಲಕ ಅವಕಾಶ ಕಲ್ಪಿಸಿದೆ.

ಕಾರ್ಯಕ್ರಮವು FM 103.05 ಹಾಗೂ MW 675 khz ನಲ್ಲಿ ಕೇಳುವುದರೊಟ್ಟಿಗೆ ಜಗತ್ತಿನಾದ್ಯಂತ Akashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಹಾಗೂ Akashavani Bhadravati YouTube ನಲ್ಲಿ ಪ್ರಸಾರದ ನಂತವೂ ಕೇಳಬಹುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಆತ್ಮಕತೆ | ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕನಾಗಿ : 1974-1976

Published

on

  • ರುದ್ರಪ್ಪ ಹನಗವಾಡಿ

1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್. ಶಂಕರಲಿಂಗಯ್ಯನವರು, ರಾಜ್ಯಶಾಸ್ತ್ರದ ಪಾಠ ಮಾಡುತ್ತಿದ್ದರು. ಮತ್ತು ಆಡಳಿತಾಧಿಕಾರಿಯಾಗಿದ್ದ, ಜೆ. ಬಿಲ್ಲಯ್ಯನವರು ನಮ್ಮದೇ ಅರ್ಥಶಾಸ್ತ್ರ ವಿಷಯದಲ್ಲಿ ಅಧ್ಯಾಪಕರಾಗಿದ್ದವರು. ನಮ್ಮ ಅರ್ಥಶಾಸ್ತç ವಿಭಾಗದಲ್ಲಿ ಇಲಾಖಾ ಮುಖ್ಯಸ್ಥರಾಗಿದ್ದ ಪ್ರೊ. ಸಿದ್ದೇಗೌಡರು, ಮತ್ತು ಹರಿಚರಣ್ ನನಗೆ ಎರಡು ವರ್ಷಗಳ ಹಿಂದೆ ಗುರುಗಳಾಗಿದ್ದವರು, ಉಳಿದಂತೆ ಇನ್ನಿಬ್ಬರು ಮಹಿಳಾ ಅಧ್ಯಾಪಕರುಗಳು ಮತ್ತು ಎಂ.ಎ.ನಲ್ಲಿ ನನಗಿಂತ ಹಿರಿಯರಾಗಿದ್ದ ಕೆ.ಸಿ. ಬಸವರಾಜ್ ಕೂಡ ಅಧ್ಯಾಪಕರಾಗಿದ್ದರು.

ಬಿ.ಎ. ಮತ್ತು ಎಂ.ಎ. ತರಗತಿಗಳಲ್ಲಿ ಓದುವಾಗ ಪಠ್ಯಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನನಗೆ ಈಗ ಪಠ್ಯಕ್ರಮಕ್ಕನುಗುಣವಾಗಿ ಒಂದು ಗಂಟೆಗೆ ಬೇಕಾದ ತಯಾರಿಯೊಡನೆ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುವುದು ಸವಾಲಿನ ಪ್ರಶ್ನೆಯಾಗಿತ್ತು. ಪ್ರತಿ ತರಗತಿಗಳಲ್ಲಿ 50-60 ವಿದ್ಯಾರ್ಥಿಗಳಿದ್ದು ಕೆಲವರು ನನಗಿಂತ ಹೆಚ್ಚಿನ ವಯಸ್ಸು ಮತ್ತು ದೈಹಿಕವಾಗಿ ಬಲವಾಗಿದ್ದವರು ಕೂಡ ಇದ್ದರು. ವಾರಕ್ಕೆ 16 ಗಂಟೆಗಳ ಪಾಠ ಮಾಡುವುದು ಎಲ್ಲ ಅಧ್ಯಾಪಕರಿಗೆ ನಿಗದಿಯಾಗಿತ್ತು. ಹೊಸ ಅಧ್ಯಾಪಕರುಗಳಿಗೆ ವಿಶೇಷವಾಗಿ ದ್ವಿತೀಯ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಅಧ್ಯಾಪಕರಿಗೆ ತಬ್ಬಿಬ್ಬು ಮಾಡುವುದು ನನಗೆ ಕೂಡ ಗೊತ್ತಿದ್ದ ವಿಷಯವಾಗಿತ್ತು. ಆ ಕಾರಣದಿಂದಲೇ ಸರಿರಾತ್ರಿಯರೆಗೆ ಓದಿಕೊಂಡು ಸಜ್ಜಾಗಿಯೇ ತರಗತಿಗಳಿಗೆ ಹೋಗುತ್ತಿದ್ದೆ. ನಿಜವಾದ ಅರ್ಥಶಾಸ್ತçದ ವಿದ್ಯಾರ್ಥಿಯಾಗಿದ್ದುದು, ನಾನು ಅಧ್ಯಾಪಕನಾಗಿ ಸೇರಿದ ಮೇಲೆಯೆ ಎಂದು ನನಗನ್ನಿಸತೊಡಗಿತು. ಪಾಠಗಳನ್ನು ಶಿಸ್ತಿನಿಂದ ಮಾಡಿಕೊಂಡು ಬರುತ್ತಿದ್ದ ಕಾಲದಲ್ಲಿ ಅಂತಿಮ ಬಿ.ಎ. ವಿದ್ಯಾರ್ಥಿಗಳ ತರಗತಿಗಳು ಜೂನಿಯರ್ ಮತ್ತು ಸೀನಿಯರ್ ಹಾಲ್‌ಗಳಲ್ಲಿ ನಡೆಯುತ್ತಿದ್ದವು. ಆಗ ಪ್ರತಿ ಪಿರಿಯಡ್‌ಗೆ ಹಾಜರಾತಿ ತೆಗೆದುಕೊಳ್ಳುವ ಪರಿಪಾಠವಿತ್ತು. ನಾನು ಹಾಜರಾತಿ ತೆಗೆದುಕೊಂಡು ಪಾಠ ಮಾಡಲು ಪ್ರಾರಂಭಿಸಿದಾಗ ಕೆಲವು ವಿದ್ಯಾರ್ಥಿಗಳು ನಾವು ತರಗತಿಯಿಂದ ಹೊರ ಹೋಗಲು ಅನುಮತಿ ನೀಡಬೇಕೆಂದು ಕೋರಿದರು. ಅದರ ಉದ್ದೇಶ ನಿಮ್ಮ ಪಾಠದ ಅಗತ್ಯವಿಲ್ಲ ಎನ್ನೋ ಧೋರಣೆಯಿಂದ ಕೇಳಿದ ಅವರಿಗೆ ನಾನು, ನೀವು ಹೊರಗೆ ಹೋದರೆ ನಿಮ್ಮ ಹಾಜರಾತಿ ದಾಖಲೆ ಪುಸ್ತಕದಲ್ಲಿ ಗೈರು ಹಾಜರಿ ಎಂದು ನಮೂದಿಸುವುದಾಗಿ ಹೇಳಿದೆ.

ಅದಕ್ಕೇನು ಉತ್ತರಿಸದೆ ಹಾಗೆ ಹೊರಗೆ ಹೋದ ಹುಡುಗರು, ಮಾರನೆಯ ದಿನ ಪ್ರಿನ್ಸಿಪಾಲರಾಗಿದ್ದ ಶಂಕರಲಿಂಗಯ್ಯನವರಿಗೆ ಹೋಗಿ ನಾನು ಮಾಡುವ ಪಾಠ ಅರ್ಥವಾಗುತ್ತಿಲ್ಲ ಎಂದೂ ಇವರ ಬದಲು ಬೇರೆ ಅಧ್ಯಾಪಕರನ್ನು ನೇಮಿಸಲು ಮೌಖಿಕವಾಗಿ ಕೇಳಿದ್ದರು. ಪ್ರಿನ್ಸಿಪಾಲರು ಅಲ್ಲೇ ಗದರಿಸಿ ಕಳಿಸುವುದನ್ನು ಬಿಟ್ಟು ನನ್ನನ್ನು ಕರೆಸಿ ಚರ್ಚಿಸಿದರು. ನಾನು ನಡೆದ ವಿಚಾರವನ್ನು ತಿಳಿಸಿದೆ. ಆಯ್ತು ನಾನೇ ನಾಳೆ ನಿಮ್ಮ ಕ್ಲಾಸಿಗೆ ಬರುವೆ ಎಂದು ಹೇಳಿದ ಅವರು ಬಂದು ಕೂತರು. ಅದೇನು ಅವರಿಗೆ ಅನ್ನಿಸಿತೋ, ಅಂತೂ ಕೊನೆಗೆ ಇನ್ನೂ ಹೇಗೆ ಪಾಠ ಮಾಡಬೇಕು ನಿಮಗೆ? ಎಂದು ವಿದ್ಯಾರ್ಥಿಗಳಿಗೆ ಕ್ಲಾಸಿನಲ್ಲಿ ಹೇಳಿ ಹೊರಟು ಹೋದರು.

ಆ ನಂತರ ಬೇರಾವ ಕ್ಲಾಸಿನಲ್ಲಿಯೂ ಈ ರೀತಿಯ ಘಟನೆಗಳು ನಡೆಯಲಿಲ್ಲ ದಿನ ಕಳೆದಂತೆ ನನ್ನ ಆತ್ಮವಿಶ್ವಾಸವೂ ಹೆಚ್ಚಿ ವಿದ್ಯಾರ್ಥಿಗಳು ಆತ್ಮೀಯತೆಯಿಂದ ಸ್ಪಂದಿಸಿ ಆಸಕ್ತಿಯಿಂದ ಕಲಿಯುತ್ತಿದ್ದರು. ನಾನು ತಾತ್ಕಾಲಿಕವಾಗಿ ಮಹೇಶನ ರೂಂನಿಂದ ಕಾಲೇಜಿಗೆ ಓಡಾಡುತ್ತಿದ್ದು ಬೇರೆ ಮನೆ ಅಥವಾ ಪ್ರತ್ಯೇಕ ರೂಮಿಗಾಗಿ ಸರಸ್ವತಿಪುರಂನಲ್ಲಿ ಹುಡುಕುತ್ತಿದ್ದೆ. ಈ ಮಧ್ಯೆ ನನಗೆ ಸೋಷಿಯಾಲಜಿ ವಿಭಾಗದಲ್ಲಿ ಸಂಶೋಧನ ಸಹಾಯಕನಾಗಿದ್ದಾಗ ಪರಿಚಯವಾಗಿದ್ದ ಡಾ. ಪಿ.ಕೆ. ಮಿಶ್ರಾಜಿ ಅವರು ( Director for South Indian Anthropoligical Survey of India ) ಅವರೂ ಕೂಡ ಅಮೇರಿಕನ್ ಸ್ನೇಹಿತರೊಬ್ಬರಿಗೆ ಮನೆಯನ್ನು ಹುಡುಕುತ್ತಿದ್ದರು. ಹೀಗೆ ನಾನೂ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದ ಬಗ್ಗೆ ತಿಳಿಸಿ ಮನೆ ಹುಡುಕುತ್ತಿರುವ ವಿಷಯ ತಿಳಿಸಿದಾಗ ನೀವಿಬ್ಬರು ಯಾಕೆ ಒಟ್ಟಿಗೆ ಇರುವ ಬಗ್ಗೆ ಯೋಚಿಸಬಾರದು ಎಂದು ಸಲಹೆ ನೀಡಿದರು. ಅದರಂತೆ ನನಗೆ ಸರಸ್ವತಿಪುರಂನ 15ನೇ ಮುಖ್ಯರಸ್ತೆಯಲ್ಲಿ ಒಂದು ಸ್ವತಂತ್ರ ಮನೆ ಬಾಡಿಗೆಗೆ ಸಿಕ್ಕಿತು. 300 ರೂಗಳ ಬಾಡಿಗೆ ಮನೆ ನನ್ನ ಕಾಲೇಜಿಗೂ ಹತ್ತಿರವಾಗಿತ್ತು.

ನನ್ನ ಜೊತೆ ಪ್ರೊ. ಮಿಶ್ರಾಜಿ ಅವರಿಗೆ ಪರಿಚಿತರಾದ ಅಮೇರಿಕಾದ ಒರೆಗಾನ್ ವಿಶ್ವವಿದ್ಯಾಲಯದಿಂದ ಬಂದ ಪ್ರೊ. ಪಾಲ್ ಇ. ಸೈಮನ್ಸ್ ಅವರು ಖ್ಯಾತ ಮಾನವಶಾಸ್ತ್ರದ ಅಧ್ಯಾಪಕರಾಗಿದ್ದು, ಅವರು ನನ್ನೊಟ್ಟಿಗೆ ಇರಲು ಒಪ್ಪಿದರು. ಅವರು ಮೈಸೂರಿಗೆ ಮಂಗಗಳ ಸ್ವಭಾವಗಳ ಮೇಲೆ ಅಧ್ಯಯನ ಮಾಡಲು ಬಂದಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ಕುಕ್ಕರಹಳ್ಳಿ ಕೆರೆ ಮೇಲೆ ಓಡಾಡುವ ಮಂಗಗಳ ಬಗ್ಗೆ ತನ್ನ ಕ್ಯಾಮರಾ ತೆಗೆದುಕೊಂಡು ಸೈಕಲ್‌ನಲ್ಲಿ ಹೊರ ಹೋಗಿ 9 ಗಂಟೆಗೆ ಬಂದು ಅವರು ಬೆಳಗಿನ ಉಪಹಾರ ಮಾಡುತ್ತಿದ್ದರು. ಮಧ್ಯಾಹ್ನ ಹಣ್ಣು ಮತ್ತು ಜ್ಯೂಸಿನಲ್ಲಿ ಕಾಲ ಕಳೆದು ಸಂಜೆ 7 ಗಂಟೆಗೆ ಊಟ ಮಾಡುತ್ತಿದ್ದರು. ಮಧ್ಯಾಹ್ನ ಓದು ಮತ್ತು ಬೆಳಗಿನ ಸಮಯದಲ್ಲಿ, ನೋಡಿ ಬಂದ ಮಂಗಗಳ ಬಗೆಗೆ ತನ್ನ ಅಬ್ಸರ್‌ವೇಷನ್‌ಗಳನ್ನು ನೋಟ್ಸ್ ಮಾಡುತ್ತಿದ್ದರು. ಅವರೇ ನಿಗದಿಪಡಿಸಿದ ಊಟಿಯಿಂದ ಬಂದಿದ್ದ ಅಡುಗೆ ಭಟ್ಟ ಚೆನ್ನಾಗಿ ತಿಂಡಿ ಊಟಗಳ ವ್ಯವಸ್ಥೆ ಮಾಡುತ್ತಿದ್ದ. ಮೊದಲ ದಿನ ರಾತ್ರಿ ಊಟ ಮಾಡುವ ಸಮಯಕ್ಕೆ ನಾನು ಬರುವುದು ತಡವಾಯಿತು. ಆತ 7 ಗಂಟೆಗೆ ಊಟ ಮಾಡಿ ಮುಗಿಸಿದ್ದ. ನನಗೆ ದೊಡ್ಡ ತಟ್ಟೆಯಲ್ಲಿ ಮಾಂಸಾಹಾರದ ಅಡುಗೆಯನ್ನು ಬಡಿಸಿಟ್ಟು ನನ್ನ ಮುಂದೆ ಹಿಡಿದು Hope this is sufficeint for you ? ಎಂದು ಕೇಳಿದರು. ನಾನು ಉಂಡು ಇನ್ನೊಬ್ಬರಿಗೂ ಆಗಿ ಮಿಗುವಷ್ಟು ಅದರಲ್ಲಿತ್ತು. ನಾನು ಬಾಡಿಗೆ ಮತ್ತು ವಿದ್ಯುತ್ ವೆಚ್ಚಗಳನ್ನು ನೋಡಿಕೊಂಡರೆೆ ಉಳಿದಂತೆ ಇತರೆ ಎಲ್ಲಾ ಖರ್ಚುಗಳು ಸೈಮನ್ಸ್ ನೋಡಿಕೊಳ್ಳುವಂತೆ ಮಾತಾಡಿ ಹಂಚಿಕೊಂಡಿದ್ದೆವು.

ತಿಂಗಳಲ್ಲಿ ಒಂದೆರಡು ಬಾರಿ ಗುಂಡ್ಲುಪೇಟೆ ಕಡೆ ಹೋಗಿ ಮಂಗಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ನಾನು ಅಮೆರಿಕನ್ ಜೊತೆ ಪ್ರತ್ಯೇಕ ಅಡುಗೆಯವನೊಬ್ಬನನ್ನು ಇರಿಸಿಕೊಂಡು ಊಟ ಉಪಚಾರ ನಡೆಯುತ್ತಿದ್ದುದರ ಬಗ್ಗೆ ನಮ್ಮ ಮೈಸೂರಿನ ಹಿರಿಕಿರಿ ಸ್ನೇಹಿತರು ವಿಶೇಷವೆಂಬಂತೆ ವಿಚಾರಿಸುತ್ತಿದ್ದರು. ನನ್ನ ಅನೇಕ ಸಮಾಜವಾದಿ ಯುವಜನ ಸಭಾ ಮತ್ತು ದಲಿತ ವಿದ್ಯಾರ್ಥಿ ಮಿತ್ರರು ನನ್ನಲ್ಲಿಗೆ ಬಂದಾಗ ನಮ್ಮಲ್ಲಿಯೇ ಊಟ ತಿಂಡಿ ಮಾಡಿಕೊಂಡು ಹೋಗುತ್ತಿದ್ದರು.

ನಾನು 1974 ಡಿಸೆಂಬರ್ 4 ರಂದು ಅಧ್ಯಾಪಕ ವೃತ್ತಿಗೆ ಸೇರಿದ್ದು, ಮಾರ್ಚ್ ಅಥವಾ ಏಪ್ರಿಲ್ ಶೈಕ್ಷಣಿಕ ವರ್ಷದ ಕೊನೆಯಲ್ಲಿ ರಿಲೀವ್ ಮಾಡುತ್ತಿದ್ದರು. ಸ್ಥಳೀಯ ಅಭ್ಯರ್ಥಿಯಾಗಿ ತೆಗೆದುಕೊಂಡ ಎಲ್ಲ ವಿಷಯದ ಅಧ್ಯಾಪಕರುಗಳಿಗೂ ಇದೇ ವ್ಯವಸ್ಥೆ ಆಗ ಜಾರಿಯಲ್ಲಿತ್ತು. ಅದರಲ್ಲಿ ಆರು ತಿಂಗಳಿಗಿಂತ ಹೆಚ್ಚು ದಿನ ಕೆಲಸ ಮಾಡಿದವರಿಗೆ ಶೈಕ್ಷಣಿಕವಾಗಿದ್ದ ರಜೆಯಲ್ಲೂ ಬೇಸಿಗೆಯ ಸಂಬಳ ನೀಡುತ್ತಿದ್ದರು. ನಾನು ಆರು ತಿಂಗಳಿಗಿAತಲೂ ಕಡಿಮೆ ಅವಧಿಗೆ ಕೆಲಸ ಮಾಡಿದ್ದ ಕಾರಣಕ್ಕೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸೇರಿಕೊಂಡಿದ್ದೆ. ಆ ಕಾರಣದಿಂದ ನನಗೆ ಮತ್ತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಪುನರ್ ನೇಮಕವಾಗುವವರೆಗೂ ಸಂಬಳವಿರಲಿಲ್ಲ. ಸುಮಾರು 3-4 ತಿಂಗಳು ರಜೆ ಮತ್ತು ಖರ್ಚಿಗೆ ಹಣವಿಲ್ಲದೆ ಚಿಂತಿತನಾಗಿದ್ದಾಗ ಡಾ. ಮಿಶ್ರಾಜಿ ಅವರು ನನ್ನ ಸಹಾಯಕ್ಕೆ ಬಂದರು.

ಈ ಮೂರು ತಿಂಗಳ ಕಾಲ ನಾನು ಪಾಲ್ ಇ. ಸೈಮನ್ಸ್ ಅವರಿಗೆ ಅನುವಾದಕನಾಗಿ ಕೆಲಸಮಾಡಲು ಸೂಚಿಸಿದ್ದರು. ಅದಕ್ಕಾಗಿ ನನಗೆ ತಿಂಗಳಿಗೆ 500 ರೂ ಸಂಬಳವನ್ನು ನಿಗದಿಪಡಿಸಿದ್ದರು. ಅದೇನು ಕಟ್ಟುನಿಟ್ಟಿನ ಕೆಲವಲ್ಲದೆ, ಸೈಮನ್ಸ್ ಕೇಳುವ ವಿಷಯಗಳ ಕೆಲವು ಹಾಗೂ ಸ್ಥಳೀಯ ಪ್ರದೇಶದ ಬಗ್ಗೆ ಕೇಳಿದಾಗ ಕನ್ನಡದಲ್ಲಿ ವಿಷಯ ಸಂಗ್ರಹಿಸಿ ಇಂಗ್ಲಿಷ್‌ನಲ್ಲಿ ವಿವರಿಸಿ ಹೇಳುವಂತಹದ್ದಾಗಿತ್ತು. ಆಗ ಅದೊಂದು ಕಷ್ಟದ ಕೆಲಸವಾಗೇನೂ ನನಗೆ ಅನ್ನಿಸಿರಲಿಲ್ಲ. ಆದರೆ ಈ ಕೆಲಸ ನನಗೆ ಹಣದ ಬಿಕ್ಕಟ್ಟಿನಿಂದ ಪಾರು ಮಾಡಿತ್ತು. ಅದು ನನ್ನ ಬೇಸಿಗೆ ರಜೆಯಲ್ಲಿ ಸಿಗದ ಸಂಬಳದ ಕೊರತೆಯನ್ನು ಕೂಡ ನೀಗಿಸಿತ್ತು.
ಈ ಮಧ್ಯೆ ಮೂರು ತಿಂಗಳ ರಜೆಯಲ್ಲಿ ನಮ್ಮ ಊರಿಗೆ ಡಾ. ಮಿಶ್ರಾಜಿ ಅವರನ್ನು ಕರೆದುಕೊಂಡು ಹೋಗುವ ಅವಕಾಶವಾಯಿತು. 1975ರ ಬೇಸಿಗೆ ದಿನಗಳಲ್ಲಿ ನಮ್ಮೂರಿಗೆ ಹೊರಟಿದ್ದೆವು. 1975ರ ನಮ್ಮ ಊರಲ್ಲಿ ನಮಗಿದ್ದ ಒಂದು ಮಾಳಿಗೆ ಮನೆ, ದನ ಕರುಗಳನ್ನು ಕಟ್ಟಲು ಬೇರೆ ತಗಡಿನ ಮನೆ ಇದ್ದವು. ಬಂದ ಅತಿಥಿಗಳಿಗೆ ಅನುಕೂಲವಾಗಲೆಂದು ವಾಸ್ತವ್ಯಕ್ಕೆ ಪ್ರತ್ಯೇಕ ಕೊಠಡಿಗಳಾಗಲೀ, ಹಾಸಿಗೆ ದಿಂಬುಗಳಾಗಲೀ ಮನೆಯಲ್ಲಿರಲಿಲ್ಲ. ಆದರೂ ಅದಾವುದರ ಬಗ್ಗೆ ಚಿಂತಿಸದೆ ಅವರನ್ನು ನಮ್ಮ ಊರಿಗೆ ಕರೆದುಕೊಂಡು ಹೋಗಿದ್ದೆ. ರಾತ್ರಿಗೆ ಊರು ಸೇರಿದ್ದ ನಾವು ಮನೆಯಲ್ಲಿ ಊಟ ಮಾಡಿ ಪ್ರೊ. ಮಿಶ್ರಾಜಿ ಅವರಿಗೆ ನಮ್ಮ ಹೊರಗಿನ ಜಗಲಿಯ ಮೇಲೆ ಸೊಳ್ಳೆಪರದೆ ಕಟ್ಟಿ ಮಲಗುವ ವ್ಯವಸ್ಥೆ ಮಾಡಿದೆ. ಬೆಳಗಿನ ಅಗತ್ಯಗಳಿಗೆ ಅವರನ್ನು ಸೀದಾ ಕರೆದುಕೊಂಡು ನಮ್ಮೂರ ಹತ್ತಿರವೇ ಹರಿಯುತ್ತಿರುವ ಸೂಳೆಕೆರೆ ಹಳ್ಳಕ್ಕೆ ಹೋಗಿ ಬೆಳಗಿನ ಕಾರ್ಯಗಳನ್ನು ಮುಗಿಸಿಕೊಂಡು ಬಂದೆವು. ಮನೆಯಲ್ಲಿ ಮಾಡಿದ ತಿಂಡಿ ತಿಂದು ಊರಲ್ಲಿನ ಗೆಳೆಯರಾದ ದಾವಣಗೆರೆ ನಾಗರಾಜ, ಬಾರಿಕರ ಮಾಂತೇಶಿ, ಮತ್ತಿತರ ಗೆಳೆಯರ ಜೊತೆ ತೋಟಕ್ಕೆ ಹೋದೆವು.

ಪ್ರೊ. ಮಿಶ್ರಾಜಿ ಅವರು ಒಬ್ಬ ಸಮಾಜ ವಿಜ್ಞಾನಿ – ಸಂಶೋಧಕ ಹಾಗೂ ಸಾಮಾಜಿಕ ಸಮಸ್ಯೆಗಳ ಆಳವಾದ ಜ್ಞಾನ ಉಳ್ಳವರಾಗಿದ್ದರು. ಊರಲ್ಲಿನ ಸಾಮಾಜಿಕ ಶೈಕ್ಷಣಿಕ ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಗಳನ್ನು ವಿಚಾರಿಸುತ್ತಾ ಸೂಕ್ಷö್ಮವಾಗಿ ಎಲ್ಲರನ್ನು ಗಮನಿಸುತ್ತಿದ್ದರು. ಡಿ. ನಾಗರಾಜು ನಾನು ಪ್ರಾಥಮಿಕ ಶಾಲೆಯಲ್ಲಿ ಸಹಪಾಠಿಯಾಗಿದ್ದು ಈಗ ಊರಲ್ಲಿಯೇ ವೀಳ್ಯದೆಲೆ ತೋಟ ಮಾಡಿಕೊಂಡು ಆರಾಮವಾಗಿದ್ದನು. ಅವರ ತೋಟದಲ್ಲಿ ತೆರೆದ ಬಾವಿಯಲ್ಲಿ ಮಿಶ್ರಾಜಿಯೂ ನಾನು ಸೇರಿದಂತೆ ನಾವೆಲ್ಲರು ಈಜಾಡಿದೆವು. ಆಗ ಹೊರಬಂದು ತೋಟದಲ್ಲಿನ ತೆಂಗಿನ ಮರಗಳಿಂದ ಇಳಿಸಿದ ತೆಂಗಿನ ಹೆಂಡವನ್ನು ಸವಿದೆವು. ಮನೆಯಿಂದ ರೊಟ್ಟಿ ಬುತ್ತಿಯನ್ನು ಅಲ್ಲಿಗೇ ತರಿಸಿದ್ದು, ವೀಳ್ಯದೆಲೆಯ ತೋಟದಲ್ಲಿ ಎಲ್ಲರೂ ಕೂತು ಊಟ ಮಾಡಿದೆವು. ಮಿಶ್ರಾಜಿ ಅವರು ಸಂತೋಷದಿಂದಲೇ ಇಡೀ ದಿನ ಕಳೆದರು. ಮಾತಿನ ಮಧ್ಯೆ ನಮ್ಮೂರಲ್ಲಿನ ಶ್ರೀಮಂತರು ಮತ್ತು ದೊಡ್ಡ ರೀತಿಯಲ್ಲಿ ಒಕ್ಕಲುತನ ಮಾಡುವ ಬಣಕಾರ ಸಿದ್ದಪ್ಪನವರನ್ನು ನೋಡುವ ಆಸೆ ವ್ಯಕ್ತಪಡಿಸಿದರು. ಪ್ರೊ. ಅವರನ್ನು ಅವರ ಮನೆಗೂ ಕರೆದುಕೊಂಡು ಹೋದೆ. ನಮ್ಮಪ್ಪನ ಬಹುದೊಡ್ಡ ವಿಶ್ವಾಸಿಕರಾಗಿದ್ದ ಬಣಕಾರ ಸಿದ್ದಪ್ಪನವರು ಮಿಶ್ರಾಜಿ ಅವರ ಜೊತೆ ಗ್ರಾಮೀಣ ಅರ್ಥವ್ಯವಸ್ಥೆಯ, ಕೂಲಿಕಾರ್ಮಿಕರ, ಹಬ್ಬಹರಿದಿನಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಕೊನೆಗೆ ಟೀ ಕುಡಿದು ಅವರ ಮನೆಯಿಂದ ವಾಪಸ್ ಬಂದೆವು.

 

ಸಂಜೆ ಸಮಯಕ್ಕೆ ನಮ್ಮೂರಿನಲ್ಲಿಯೇ ಹೊಸದಾಗಿ ಕಲಿತಿದ್ದ ಬ್ಯಾಂಡ್‌ಅನ್ನು ಅವರ ಮುಂದೆ ಬಾರಿಸಿದರು. ಆ ಕಾಲಕ್ಕೆ ದೇಶ ವಿದೇಶಗಳನ್ನು ಪ್ರವಾಸ ಮಾಡಿ ನಮ್ಮ ದೇಶದಲ್ಲಿನ ದಕ್ಷಿಣ ಭಾರತಕ್ಕೆ ಮಾನವಶಾಸ್ತçದ ಅಧ್ಯಯನಕ್ಕೆ ಮುಖ್ಯಸ್ಥರಾಗಿದ್ದ, ಜಾತಿಯಲ್ಲಿ ಅತ್ಯುನ್ನತವಾದ ಶ್ರೇಣಿಗೆ ಸೇರಿದ ಬ್ರಾಹ್ಮಣರಾಗಿದ್ದ ಪ್ರಾಧ್ಯಾಪಕರೊಬ್ಬರು ಯಾವ ಹಮ್ಮು ಬಿಮ್ಮುಗಳಿಲ್ಲದೆ ಸಾಮಾನ್ಯ ಹಳ್ಳಿಗೆ ಬಂದು ಊರಲ್ಲಿಯ, ನಮ್ಮ ಮನೆಯಲ್ಲಿಯೇ ಉಳಿದು ಹೋಗಿದ್ದು ನಮ್ಮೂರಿನ ಮತ್ತು ನನ್ನ ಜೀವನ ಕಾಲಘಟ್ಟದಲ್ಲಿ ಮರೆಯಲಾಗದ ಸವಿನೆನಪಾಗಿ ಉಳಿದಿದೆ. ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಅಂದು ಪರಿಚಯವಾಗಿ, ನನಗೆ ಬೌದ್ಧಿಕ ಮತ್ತು ಆರ್ಥಿಕವಾಗಿ ಶಕ್ತಿ ನೀಡಿ, 50 ವರ್ಷಗಳ ನಂತರ ಇಂದಿಗೂ ನನ್ನ ಮಾರ್ಗದರ್ಶಕ ಗುರುಗಳಾಗಿ ಉಳಿದಿರುವುದು ನನ್ನ ಜೀವನದ ಭಾಗ್ಯವೆಂದೇ ಭಾವಿಸಿದ್ದೇನೆ. ಅವರು ಮಾಡಿದ ಯಾವ ಸಹಾಯವನ್ನೂ, ತಾನು ಮಾಡಿದೆನೆಂಬ ಅಹಂ ಎಲ್ಲೂ ಸುಳಿಯುವುದಿಲ್ಲ. ಅಂದು ನನಗೆ ಸಿಕ್ಕ ಈ ಪ್ರೊಫೆಸರ್ ನಂತರ ನನ್ನ ಸ್ನೇಹ ಬಳಗದ ಮಾದೇವ, ಅರ್ಕೇಶ, ಮಹೇಶ, ಭಕ್ತ, ಗೊಟ್ಟಿಗೆರೆ ಶಿವರಾಜು ಎಲ್ಲರಿಗೂ ಸ್ನೇಹದ ಗುರುಗಳಾಗಿ ಇಂದಿಗೂ ಉಳಿದಿದ್ದಾರೆ. ಈಗಲೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ವಿಶೇಷ ಉಪನ್ಯಾಸಕರಾಗಿ ಹೋಗಿ ಬರುತ್ತಿರುವುದನ್ನ ನೋಡಿದರೆ ಆಶ್ಚರ್ಯವಾಗುತ್ತದೆ. ಅವರಿಗಿಂತ ಇಪ್ಪತ್ತು ವರ್ಷಗಳಷ್ಟು ಕಿರಿಯರಾದ ನಾವುಗಳು ಅವರನ್ನು ಇಂದಿಗೂ ಅನುಸರಿಸುತ್ತಾ ಜೀವನ ಸಾಗಿಸುತ್ತಿದ್ದೇವೆ.

ನಾನು ಅಧ್ಯಾಪಕನಾಗಿದ್ದ ಸಮಯದಲ್ಲಿ ಶೈಕ್ಷಣಿಕ ವರ್ಷ ಮುಗಿದು ಮೂರು ತಿಂಗಳ ರಜೆಯಲ್ಲಿ ಊರಿಗೆ ಹೋಗಿದ್ದೆ. ಆಗ ಪಾಲ್ ಇ. ಸೈಮನ್ಸ್ಗೆ ನಾನು ಅನುವಾದಕನಾಗಿ ಕೆಲಸವೊಂದನ್ನು ಮಾಡಲು ಪ್ರೊ. ಮಿಶ್ರಾಜಿ ಅವರು ಒಪ್ಪಿಸಿದ್ದರು ಎಂಬುದನ್ನು ಆಗಲೇ ಹೇಳಿದ್ದೇನೆ. ಅದನ್ನು ನಾನು ಮಾಡುತ್ತಿದ್ದೆನಾದರೂ ನನಗೆ ಪ್ರತಿ ತಿಂಗಳು ಮುಗಿದಾಕ್ಷಣ ಸಂಬಳ ನೀಡಿರಲಿಲ್ಲ. ಆದರೆ ನಾನು ನನ್ನ ಹಳ್ಳಿಯಲ್ಲಿ ಇರುವಾಗ ಮೂರು ತಿಂಗಳ ಒಟ್ಟು ಸಂಬಳ 1500 ರೂಪಾಯಿಗಳನ್ನು ನನ್ನ ವಿಳಾಸಕ್ಕೆ ಮನಿ ಆರ್ಡರ್ ಮುಖಾಂತರ ಕಳಿಸಿದ್ದರು. ನಮ್ಮೂರಿಗೆ ಆಗತಾನೆ ಹೊಸದಾಗಿ ಬಂದಿದ್ದ ಪೋಸ್ಟ್ ಆಫೀಸ್ ಮತ್ತು ಅದರ ಉಸ್ತುವಾರಿಯನ್ನು ನಮ್ಮ ಊರಿನ ಗೌಡ್ರ ಈರಣ್ಣ ಎಂಬುವವರು ನೋಡಿಕೊಳ್ಳುತ್ತಿದ್ದರು. ಅವರು ನನಗೆ ಬಂದ 1500ರೂಗಳಷ್ಟು ಮನಿ ಆರ್ಡರ್ ಹಣ ನೋಡಿ ಆಶ್ರ‍್ಯಗೊಂಡಿದ್ದರು. ಆಗ ನಮ್ಮೂರಿಗೆ ಹೆಚ್ಚೆಂದರೆ 50-100ರೂಗಳು ಎಂ.ಓ. ಗಳು ಬರುತ್ತಿದ್ದ ಕಾಲ. ಇಷ್ಟೊಂದು ಹಣ ಬರುವಷ್ಟು ಈ ಹುಡುಗ ಹೆಂಗೆ ಬೆಳೆದ ಎಂಬೆಲ್ಲ ಯೋಚನೆ ಮಾಡುತ್ತಾ ಊರಿಗೆಲ್ಲ ಸುದ್ದಿ ಮಾಡಿದ್ದ. ಆಗ ನಮ್ಮ ಅಪ್ಪ ಇನ್ನೂ ಸಕ್ರಿಯವಾಗಿ ಕೆಲಸ ಕಾರ್ಯ ಮಾಡುತ್ತಿದ್ದರು. ‘ಅದೇನಪ್ಪ ಅಷ್ಟೊಂದು ದುಡ್ಡು, ಕಳಿಸಿದರ‍್ಯಾರು?’ ಎಂದು ಅಪ್ಪ ಕೂಡ ಆಶ್ಚರ್ಯದಿಂದ ಕೇಳಿದ್ದರು. ಆಗ ಪಡೆದ 1500 ರೂಗಳನ್ನು ಎಂ.ಓ. ಮೂಲಕ ಬಂದು ನೀಡಿದ ಸಂತೋಷವನ್ನು ಅಳೆಯಲಾಗದು. ಎಲ್ಲ ಕೊರತೆಗಳ ಆಗರದಲ್ಲಿ ಹೋರಾಡುತ್ತಿದ್ದ ನನಗೆ ಅದೊಂದು ಯಾವ ಮಾಪಕದಿಂದಲೂ ಅಳಿಯಲಾಗದ ಶಕ್ತಿವರ್ಧಕ ಔಷಧಿಯಂತೆ ಹುರುಪು ನೀಡಿ ಊರಲ್ಲಿ ನನ್ನ ಗೌರವ ಬೆಳೆಸಿತ್ತು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ3 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ18 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ18 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ18 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

ದಿನದ ಸುದ್ದಿ2 days ago

ಭಾರತೀಯ ಸೇನೆ | ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,...

Trending