ಬಹಿರಂಗ
‘ಭೀಮ ಕೋರೆಗಾಂವ್ ದಂಗೆ’ಯ ಬಗ್ಗೆ ನೀವು ಓದಲೇ ಬೇಕಾದ ಲೇಖನ..!
ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ )
ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು
1 . ಸಿದ್ದನಾಕ ಮಕಲನಾಕ ನಾಯಕ
2 . ರಾಮನಾಕ ಯಶನಾಕ ಸಿಪಾಯಿ
3 , ಗೋದನಾಕ ಮೋಡೆನಾಕ ಸಿಪಾಯಿ
4 , ರಾಮನಾಕ ಯಶನಾಕ ಸಿಪಾಯಿ
5 . ಭಾಗನಾಕ ಹರನಾಕ ಸಿಪಾಯಿ
6 . ಅಂಬನಾಕ ಕಾನನಾಕ ಸಿಪಾಯಿ
7 . ಗಣನಾಕ ಬಾಳನಾಕ ಸಿಪಾಯಿ
8 . ಬಾಳನಾಖ ದೊಂಡನಾಕ ಸಿಪಾಯಿ
9 , ರೂಪನಾಕ ಲಖನಾಕ ಸಿಪಾಯಿ
10 . ಬಾಲನಾಕ ರಾಮನಾಕ ಸಿಪಾಯಿ
11 . ವಟಿನಾಕ ಧಾನನಾಕ ಸಿಪಾಯಿ
12 . ಗಜನಾಕ ಗಣನಾಕ gಸಿಪಾಯಿ
13 . ಬಾಪನಾಕ ಹಬನಾಕ ಸಿಪಾಯಿ
14 . ಕೋನಾಕ ಜಾನನಾಕ ಸಿಪಾಯಿ
15 . ಸಮನಾಕ ಯಸನಾಕ ಸಿಪಾಯಿ
16 , ಗಣನಾಕ ಧರಮನಾಕ ಸಿಪಾಯಿ
17 . ದೇವನಾಕ ಅಂಕನಾಕ ಸಿಪಾಯಿ
18 . ಗೋಪಾಲನಾಕ ಬಾಲಿನಾಕ ಸಿಪಾಯಿ
19 , ಹರನಾಕ ಹರಿನಾಕ ಸಿಪಾಯಿ
20 . ಜೇಠನಾಕ ದೌನಾಕ ಸಿಪಾಯಿ
21 . ಗಣನಾಕ ಲಖನಾಕ ಸಿಪಾಯಿ
22 . ಸೀನನಾಕ ಮಕಲನಾಕ ಸಿಪಾಯಿ
ಅಸ್ಪಶ್ಯರನ್ನು ಗುರುತಿಸಲು ಅಂದು ಅವರ ಹೆಸರಿನ ಮುಂದೆ ನಾಕ ಎಂದು ಸೇರಿಸಲಾಗುತ್ತಿತ್ತು .
ಡಾ . ಬಾಬಾ ಸಾಹೇಬ್ ಅಂಬೇಡ್ಕರ್ರವರು ಎಷ್ಟೇ ತುರ್ತು ಕೆಲಸಕಾರ್ಯಗಳಿದ್ದರೂ ಸಹ ಅವುಗಳೆಲ್ಲವನ್ನೂ ಬದಿಗಿರಿಸಿ , ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸಹ ಅಲ್ಲಿಂದ ಹೊರಟು ಜನವರಿ ಒಂದನೇ ತಾರೀಖಿನಂದು ‘ ಕೋರೆಗಾಂವ್ ‘ ಗೆ ತಮ್ಮ ಕುಟುಂಬ ಸಮೇತರಾಗಿ ಬಂದು , ಅಲ್ಲಿರುವ ಹುತಾತ್ಮ ಅಸ್ಪಶ್ಯ ಯೋಧರ ಸ್ಮಾರಕಕ್ಕೆ ( ವಿಜಯ ಸ್ಥಂಬಕ್ಕೆ ) ಶ್ರದ್ದಾಂಜಲಿ ಸಲ್ಲಿಸುತ್ತಿದ್ದ ಅವರು ಬದುಕಿರುವ ತನಕವೂ ಒಂದೇ ಒಂದು ವರ್ಷವೂ ಸಹ ಜನವರಿ 1ನೇ ತಾರೀಖು ಇಲ್ಲಿ ಬರುವುದನ್ನು ಬಾಬಾಸಾಹೇಬರು ತಪಿಸಲಿಲ್ಲ . ಪ್ರತಿವರ್ಷ ಜನವರಿ 1ನೇ ತಾರೀಖು ಜಗತ್ತಿಗೆ ಹೊಸವರ್ಷದ ಸಂಭ್ರಮದ ದಿನವಾದರೆ ಭಾರತದ ದಲಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ ಶರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . 1800ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸಶರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು .ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನೇ ನಿಷೇಧಿಸಲಾಗಿತ್ತು . ಅಸ ಶ್ಯರು ಊರ ಮಧ್ಯೆ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮಾತ್ರ ನಡೆದುಕೊಂಡು ಹೋಗಬೇಕಾಗಿತ್ತು .
ಏಕೆಂದರೆ ಈ ಸಮಯದಲ್ಲಿ ಅವನ ನೆರಳು ಬೇರೆಕಡೆ ಬೀಳುವುದಿಲ್ಲ ಎನ್ನುವ ಕಾರಣಕ್ಕಾಗಿ . ಹೋಗುವಾಗ ಕುತ್ತಿಗೆಗೆ ಒಂದು ಮಣ್ಣಿನ ಮಡಿಕೆಯನ್ನು ನೇತು ಹಾಕಿಕೊಳ್ಳಬೇಕಾಗಿತ್ತು . ಏಕೆಂದರೆ ಅಸ್ಪಶ್ಯರು ನೆಲಕ್ಕೆ ಉಗುಳುವ ಹಾಗಿರಲಿಲ್ಲ . ಆ ಮಡಿಕೆಯಲ್ಲಿ ಉಗುಳಿಕೊಳ್ಳಬೇಕಾಗಿತ್ತು . ಅದೇ ರೀತಿ ಸೊಂಟಕ್ಕೆ ಒಂದು ಕಸಪೊರಕೆ ಕಟ್ಟಿಕೊಂಡು ತಾನು ನಡೆದ ದಾರಿಯನ್ನು ತಾನೇ ಗುಡಿಸಿಕೊಂಡು ಹೋಗಬೇಕಾಗಿತ್ತು . ಅಸ್ಪಶ್ಯರು ತಮ್ಮ ಗುರುತು ಪತ್ತೆಗಾಗಿ ತಮ್ಮ ಕುತ್ತಿಗೆ ಮತ್ತು ಮುಂಗೈಗೆ ದಪ್ಪದಾದ ಕಪ್ಪು ದಾರವನ್ನು ಕಡ್ಡಾಯವಾಗಿ ಕಟ್ಟಿಕೊಳ್ಳಬೇಕಾಗಿತ್ತು . ಊರಿನೊಳಗೆ ಸತ್ತ ದನಗಳನ್ನು ಊರಿನಿಂದ ಹೊರಗೆ ಹೊತ್ತುಕೊಂಡು ಹೋಗಿ ಅದರ ಮಾಂಸವನ್ನು ಬೇಯಿಸಿ ತಿನ್ನಬೇಕಾಗಿತ್ತು . ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು . ಅಸ್ಪಶ್ಯ ಹೆಂಗಸರು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ತೊಡುವ ಹಾಗಿರಲಿಲ್ಲ . ಹಿಂದೂ ಸವರ್ಣಿಯರು ಮತ್ತು ಪೇಳ್ವೆ ಸೈನಿಕರು ಅಸ್ಪಶ್ಯ ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು . ಈ ಎಲ್ಲಾ ಅನ್ಯಾಯ ಮತ್ತು ದೌರ್ಜನ್ಯಗಳನ್ನು ನಿಲ್ಲಿಸಬೇಕೆಂದು ಅಸ್ಪೃಶ್ಯರು 1817ರಲ್ಲಿ ರಾಜ್ಯಭಾರ ನಡೆಸುತ್ತಿದ್ದ ಪೇಶ್ವಿರಾಜ ಎರಡನೇ ಬಾಜೀರಾಯನಲ್ಲಿ ವಿನಂತಿಸಿಕೊಂಡಾಗ ಎರಡನೇ ಬಾಜೀರಾಯನು “ ನೀವುಗಳು ಹುಟ್ಟಿರುವುದೇ ನಮ್ಮಗಳ ಸೇವೆ ಮಾಡಲಿಕ್ಕಾಗಿ & ನಿಮ್ಮ ಹೆಂಗಸರು ಇರುವುದೇ ನಮ್ಮನ್ನು ಸುಖಪಡಿಸಲಿಕ್ಕಾಗಿ , ಇದೇ ನಮ್ಮ ಮನು ಸಂವಿಧಾನ ” ಎಂದು ಅಸ್ಪೃಶ್ಯರಿಗೆ ಖಡಕ್ಕಾಗಿ ತಿಳಿಸಿದನು . ಇದರಿಂದ ಗಾಯಗೊಂಡ ವ್ಯಾಘ್ರಗಳಂತಾದ ಅಸ್ಪೃಶ್ಯರು ಸೇಡುತೀರಿಸಿಕೊಳ್ಳಲಿಕ್ಕಾಗಿ ಸಮಯ ಕಾಯತೊಡಗಿದರು . ಇದೇ ಸಮಯದಲ್ಲಿ ಸರಿಯಾಗಿ ಕೊಲ್ಕತ್ತಾವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಬಹುತೇಕ ಉತ್ತರ ಭಾರತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವ ರಾಜ ಎರಡನೇ ಬಾಜೀರಾಯನನ್ನು ಬಗ್ಗುಬಡಿದು ದಕ್ಷಿಣ ಭಾರತದಲ್ಲಿ ಅಮ್ಮಗಳ ಆಳ್ವಿಕೆಗೆ ವಿಸ್ತರಿಸಿಕೊಳ್ಳಲು ಸಮಯ ಕಾಯುತ್ತಿದ್ದರು .
ಪೇಶ್ವಗಳ ದೌರ್ಜನ್ಯ , ದಬ್ಬಾಳಿಕೆಗಳಿಂದ ಇನ್ನಿಲ್ಲದಂತೆ ರೋಸಿಹೋಗಿದ್ದ ಮಹಾರಾಷ್ಟ್ರದ ಅಸ್ಪ ಶ್ಯರು ಅದರಲ್ಲೂ ಅಸ್ಪಶ್ಯ ಯುವಕರು ಪೇಶ್ವಗಳ ಬಿಸಿ ರಕ್ತ ಕುಡಿಯಲು ಹಾತೊರೆಯುತ್ತಿದ್ದರು . ಇದನ್ನು ಗಮನಿಸಿದ ಚಾಣಾಕ್ಷ ಬ್ರಿಟೀಷರು ಪೇಶ್ವಗಳ ವಿರುದ್ಧ ಯುದ್ಧ ಮಾಡಲು ಅಸ್ಪಶ್ಯರನ್ನು ಕೋರಿಕೊಂಡರು , ತಮ್ಮಗಳ ಕಷ್ಟ – ಅಪಮಾನಗಳ ಪರಿಹಾರಕಾಗಿ ಒದಗಿ ಬಂದ ಈ ಸುವರ್ಣಾವಕಾಶವನ್ನು ಮನಃಪೂರ್ವಕವಾಗಿ ಸ್ವೀಕರಿಸಿದ ಅಸ್ಪಶ್ಯರು “ ಸಿದನಾಕ , ಎಂಬ ಅಸ್ಪಶ್ಯ ಯುವಕನ ನಾಯಕತ್ವದಲ್ಲಿ 500 ಜನ ಅಸ್ಪಶ್ಯ ಯುವಕರು ಪೇಶೆಗಳ ವಿರುದ ಯುದ್ಧ ಮಾಡಲು ಬ್ರಿಟೀಷರ ಕೋರಿಕೆಗೆ ಒಪ್ಪಿಕೊಂಡರು . ಕಡೆಗೂ ಆ ಐತಿಹಾಸಿಕ ಯುದ್ದದ ದಿನ ಬಂದೇ ಬಿಟ್ಟಿತು . ಅದೇ 1818ರ ಜನವರಿ 1ನೇ ತಾರೀಖು . ಬ್ರಿಟೀಷ್ ಕ್ಯಾಪನ್ ಎಸ್ . ಎಸ್ . ಸಂಡನ್ ನೇತೃತ್ವದಲ್ಲಿ ಸಿದ್ದನಾಕ ‘ ನ ನಾಯಕತ್ವದ 500 ಅಸ ಶ ಯೋಧರ ಪಡೆ ( ಈ ಎಲ್ಲಾ ಯೋಧರಿಗೆ ಬಂದೂಕು ಉಪಯೋಗಿಸುವ ತರಬೇತಿಯನು . ಬ್ರಿಟೀಷರು ಚೆನ್ನಾಗಿ ನೀಡಿರುತ್ತಾರೆ . ) 1817ರ ಡಿಸೆಂಬರ್ 31ನೇ ತಾರೀಖು ರಾತ್ರಿ ಸಿರೂರ್ನಿಂದ ಹೊರಡುತ್ತಾರೆ . ಆ ಇಡೀ ರಾತ್ರಿ ಸತತವಾಗಿ 27 ಕಿಲೋಮೀಟರ್ ನಡೆದು ಮಾರನೇ ದಿನ ಅಂದರೆ 1818ರ ಜನವರಿ 1ರಂದು ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಬೀಮಾ ನದಿ ತೀರದಲ್ಲಿರುವ ಕೋರೆಗಾಂವ್ ಎಂಬ ಸ್ಥಳವನ್ನು ಸಿದ್ಧನಾಕನ ಪಡೆ ತಲುಪುತ್ತದೆ . ಇಡೀ ರಾತ್ರಿ ನಿದ್ದೆಯಿಲ್ಲದೆ 27 ಕಿ . ಮೀ . ದೂರವನ್ನು ನಡೆದುಕೊಂಡು ಬಂದಿದ್ದ ಈ ಅಸ್ಪಶ್ಯ ಯೋಧರ ಪಡೆ ನಿದ್ದೆ , ಅನ್ನ – ನೀರು ಯಾವುದನ್ನೂ ಬಯಸದೆ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಪೇಶ್ವ ಸೈನಿಕರ ಮೇಲೆ ಎರಗುತ್ತಾರೆ . 20 ಸಾವಿರ ಅಶ್ವದಳ , 8 ಸಾವಿರ ಕಾಲ್ದಳ ಸೇರಿ ಒಟ್ಟು 28 ಸಾವಿರ ಪೇಳ್ವೆ ಸೈನಿಕರು ಮೂರೂ ದಿಕ್ಕಿನಿಂದ ಅಸ್ಪಶ್ಯ ಯೋಧರಿಗೆ ಎದುರಾಗುತ್ತಾರೆ . ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಯುದ್ದದಲ್ಲಿ ಹಸಿದ ಹೆಬ್ಬುಲಿಗಳಂತಿದ್ದ ಅಸ್ಪಶ್ಯಯೋಧರು ಪೇಶ್ವ ಸೈನ್ಯವನ್ನು ಧೂಳಿಪಟ ಮಾಡುತ್ತಾರೆ . ಇಡೀ ಯುದ್ಧ ಭೂಮಿಯ ತುಂಬ ರಕ್ತದ ಕೋಡಿಯೇ ಹರಿಯುತ್ತದೆ . ಸಾವಿರಾರು ಸೈನಿಕರು ಯುದ್ಧಭೂಮಿಯಲ್ಲಿ ಸಾವನ್ನಪ್ಪುತ್ತಾರೆ .
ಬೃಹತ್ ಸಂಖ್ಯೆಯಲ್ಲಿದ್ದ ಅಂದರೆ ಅಸ್ಪಶ್ಯಯೋಧರಿಗಿಂತ 56 ಪಟ್ಟು ಹೆಚ್ಚು ಇದ್ದ ಪೇಶ್ವಗಳ ರಣಹೇಡಿ ಸೈನ್ಯ ಗಂಡು ಸಿಂಹಗಳಂತಿದ್ದ ಅಸ್ಪೃಶ್ಯ ಸೈನಿಕರ ಮುಂದೆ ನಿಲ್ಲಲಾಗದೆ ಕೊನೆಗೆ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡತೊಡಗಿದರು . ಅಂತಿಮವಾಗಿ ಈ ಯುದ್ದದಲ್ಲಿ ಅಸ್ಪಶ್ಯ ಸೈನಿಕರು ಪ್ರಚಂಡ ಜಯ ಗಳಿಸುತ್ತಾರೆ . ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಕಾಳಗದಲ್ಲಿ 5000ಕ್ಕೂ ಹೆಚ್ಚು ಪೇಳ್ವೆ ಸೈನಿಕರು ಯುದ್ಧ ಭೂಮಿಯಲ್ಲಿ ಸಾವನ್ನಪ್ಪಿದರೆ ಕೇವಲ 22 ಜನ ಅಸ ಶ್ಯಯೋಧರು ವೀರಮರಣವನ್ನಪ್ಪಿದರು . ( ಈ ಯುದ್ಧದಲ್ಲಿ ಒಬ್ಬೊಬ್ಬ ಅಸ್ಪಶ್ಯಯೋಧ ಸರಾಸರಿ ಕನಿಷ್ಠ 100ಜನ ಪೇಳ್ವೆ ಸೈನಿಕರನ್ನು ಕೊಂದುಹಾಕಿರುತ್ತಾನೆ . ಈ ಯುದ್ಧದಲ್ಲಿ ಅಸ್ಪಶ್ಯಯೋಧರ ಪಡೆಯ ನಾಯಕನಾಗಿದ್ದ ಸಿದ್ದನಾಕ ‘ ನು ಸಹ ವೀರಮರಣವನ್ನಪ್ಪುತ್ತಾನೆ . ಅಂದು ರಾತ್ರಿ 10 ಗಂಟೆಗೆ ಸರಿಯಾಗಿ ಬ್ರಿಟೀಷರು ಯುದ್ಧ ನಡೆದ ಆ ಸ್ಥಳದಲ್ಲಿ ( ಪೇಶ್ವಗಳ ಸಾಮ್ರಾಜ್ಯದಲ್ಲಿ ಬ್ರಿಟೀಷ್ ಬಾವುಟವನ್ನು ಹಾರಿಸುತ್ತಾರೆ . ವಿಜಯದ ಬಳಿಕ ಕ್ಯಾಪ್ಟನ್ ಸ್ಟಂಡನ್ ಗೆ ರೀತಿ ಹೇಳಿದನು . ನಿಮ್ಮ ಕೆಚ್ಚೆದೆಯ ಹೋರಾಟವು ನಾವು ಇಂಡಿಯಾದಲ್ಲಿ ಉಳಿಯಲು ಅಧಿಕಾರವನ್ನು ವಿಸ್ತರಿಸಲು ತುಂಬಾ ಸಹಾಯಕವಾಗಿದೆ ಬ್ರಿಟಿಷ್ ಸತ್ಕಾರವು ನಿಮಗೆ ಎಂದೂ ಮರೆಯಲಾಗದ ಕಾಣಿಕೆ ಬಹುಮಾನವನ್ನು ಉಡುಗೊರೆಯಾಗಿ ಮತ್ತು ಮಡದಿ ಮಹಾಯೋಧರ ವಿಜಯ ಸ್ತಂಭವನ್ನು ಸ್ಥಾಪಿಸುವುದರ ಮೂಲಕ ಗೌರವವನ್ನು ಸಲ್ಲಿಸುತ್ತದೆ . ಹಾಗೆಯೇ ನಿಮಗೆ ನಮ್ಮ ಬ್ರಿಟಿಷ್ ಸೈನ್ಯದಲ್ಲಿ ವಿಶೇಷ ಸ್ಥಾನವನ್ನು ಕಲ್ಪಿಸಿ ನಿಮ್ಮ ಕುಟುಂಬದವರಿಗೆ ಸಕಲ ಸೌಲಭ್ಯವನ್ನು ಒದಗಿಸುವ ಏರ್ಪಾಡು ಮಾಡುತ್ತದೆ . ( ಮಹಾರ್ ಸೈನಿಕರು ಸಂತೋಷದಿಂದ ‘ ಬ್ರಿಟೀಷ್ ಸತ್ಕಾರಕ್ಕೆ ಜಯವಾಗಲಿ ಮಹಾರ್ ಸೈನ್ಯ ಚಿರಾಯು ” ಎಂದು ಘೋಷಣೆ ಕೂಗಿದರು . ) ರಣರಂಗದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಪೇಶ್ವ ಸೈನಿಕರ ಜೊತೆ ವೀರಾವೇಶದಿಂದ ಹೋರಾಡಿ ಜಯ ತಂದುಕೊಟ್ಟು ಹುತಾತ್ಮರಾದ 22 ಅಸ್ಪಶ್ಯಯೋಧರ ನೆನಪಿಗಾಗಿ ಬ್ರಿಟೀಷರು 1921ರ ಮಾರ್ಚ್ 21ರಂದು ಯುದ್ಧ ನಡೆದ ಸ್ಥಳದಲ್ಲಿ ( ಕೋರೆಗಾಂವ್ನಲ್ಲಿ ) 65ಅಡಿ ಎತ್ತರದ ಭವ್ಯ ‘ ವಿಜಯ ಸ್ತಂಭ ‘ ವನ್ನು ನಿರ್ಮಿಸಿ , ಆ ಸ್ಥಂಬದ ಮೇಲೆ 22 ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಿಸಿದರು . ಆ ಭವ್ಯ ವಿಜಯ ಸಂಬಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಬ್ರಿಟೀಷರು 22 ಸುತ್ತು ಕುಶಾಲ ತೋಪುಗಳನ್ನು ಹಾರಿಸುವ ಮೂಲಕ ಹುತಾತ್ಮರಿಗೆ ರಾಜ ಮರ್ಯಾದೆಯ ಶ್ರದ್ದಾಂಜಲಿ ಸಲ್ಲಿಸಿದ್ದರು . ಈ ವಿಜಯ ಸಂಬದ ಮೇಲೆ ಬ್ರಿಟಿಷರು “ One of the Proudest truimphs of the British Army in the East ” ( ಬ್ರಿಟೀಷ್ ಯೋಧರಿಗೆ ಭಾರತದ ಪೂರ್ವಭಾಗದಲ್ಲಿ ಸಿಕ್ಕಿದ ಹೆಮ್ಮೆಯ ವಿಜಯವಾಗಿದೆ ) ಎಂದೂ ಸಹ ಕೆತ್ತಿಸಿದರು . ಈ ವಿಜಯದ ನಂತರ ಬ್ರಿಟೀಷ್ ಬೋರ್ಡ್ ಆಫ್ ಕಂಟ್ರೋಲ್ನ ಅಧ್ಯಕ್ಷ ಜಾರ್ಜ್ ಕ್ಯಾನಿಂಗ್
ಈ ವಿಜಯದ ಬಗ್ಗೆ ಅಚ್ಚರಿ ವ್ಯಕ್ತ ಪಡಿಸುತ್ತಾ “ ಸಣ್ಣ ಸಂಖ್ಯೆಯ ಸೈನ್ಯವು ಒಂದು ಬಲಾಢ ಸಂಖ್ಯೆಯ ಸೈನ್ಯವನ್ನು ಮಣ್ಣು ಮುಕ್ಕಿಸಿದ ಉದಾಹರಣೆ ಚಿಕ್ಕ ಸಂಖ್ಯೆ ಹೊಂದಿರುವ ಎಲ್ಲಾ ಸೈನಿಕ ಬೆಟಾಲಿಯನ್ಗಳಿಗೂ ಅನುಕರಣೀಯವಾಗಿದೆ ” , ಎಂದು ಹೇಳಿದರು .
ಅದೇ ರೀತಿ ಜನರಲ್ ಸ್ಮಿತ್ ಕೂಡ ಈ ಗೆಲುವನ್ನು ಉತ್ಸಾಹಪೂರ್ವಕವಾಗಿ ಅಭಿನಂದಿಸಿ “ ಇಂಡಿಯಾದ ಬ್ರಿಟಿಷ್ ಸೇನಾ ಇತಿಹಾಸದಲ್ಲಿ ಕೋರೆಗಾಂವ್ ಯುದ್ಧದ ವಿಜಯವೆಂದರೆ ಶೌರ್ಯ ಮತ್ತು ಪರಾಕ್ರಮದ ಯಶೋಗಾಥೆಯೇ ಆಗಿದೆ ” ಎಂದು ಉದ್ದಾರವೆತ್ತಿದ್ದಾನೆ . ಈ ಯುದ್ದದ ಇತಿಹಾಸವನ್ನು ಬಗೆದು ಹೊರತೆಗೆದ ಡಾ . ಅಂಬೇಡ್ಕರ್ 1957ರಲ್ಲಿ ನಡೆದ ‘ ಸಿಪಾಯಿ ದಂಗೆ ‘ ಗಿಂತ ಸುಮಾರು 40 ವರ್ಷಗಳ ಹಿಂದೆಯೇ ನಡೆದ ಕೋರೆಗಾಂವ್ ದಂಗೆ ‘ ಯ ಬಗ್ಗೆ ಭಾರತದ ಮನುವಾದಿ ಲೇಖಕರು ಬೇಕೆಂತಲೇ ಬೆಳಕು ಚೆಲ್ಲಿರಲಿಲ್ಲ . ಈ ಯುದ್ಧದ ಇತಿಹಾಸವನ್ನು ಹೂತುಹಾಕಿದ್ದರು . ಹುತಾತ್ಮ ಯೋಧರ ನೆನಪಿಗಾಗಿ ಕೋರೆಗಾಂವ್ನಲ್ಲಿ ಆಲೀಷರು ನಿರ್ಮಿಸಿದ್ದ ‘ ವಿಜಯ ಸ್ಥಂಬ ‘ ವು ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಆ ಸ್ಟಂಬದ ಸುತ್ತ ‘ ಗಳು ಬೆಳೆದುಕೊಂಡು ಅನಾಥವಾಗಿತ್ತು . ಡಾ . ಅಂಬೇಡ್ಕರ್ರವರು 1922ರಲ್ಲಿ ಬ್ರಿಟನ್ನಲ್ಲಿ
‘ ಬಾರ್ – ಅತ್ – ಲಾ ‘ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಭಾರತದಲ್ಲಿ ಬ್ರಿಟೀಷರ ಆಳ್ವಿಕೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಬಗ್ಗೆ ಬ್ರಿಟಿಷ್ ಮ್ಯೂಸಿಯಂ ಲೈಬ್ರರಿಯಲ್ಲಿ ಇಟ್ಟಿದ್ದ ದಾಖಲೆಗಳನ್ನು ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ 1818ರಂದು ನಡೆದ ಕೋರೆಗಾಂವ್ ಯುದ್ದದ ಬಗ್ಗೆ ಪ್ರಥಮವಾಗಿ ಮಾಹಿತಿ ಸಿಕ್ಕಿತು . ಈ ಮಾಹಿತಿಯ ಆಧಾರದ ಮೇಲೆ ಕೋರೆಗಾಂವ್ ಯುದ್ದದ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ನಡೆಸಲು ಪ್ರಾರಂಭಿಸಿದರು . ಕೊನೆಗೆ ಈ ಯುದ್ಧದ ಬಗ್ಗೆ ಸಂಪೂರ್ಣ ಮಾಹಿತಿಯನು ಕಲೆ ಹಾಕಿದರು , ನಂತರ ಮಹಾರಾಷ್ಟ್ರದ ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಕೋರೆಗಾಂವ್ಗೆ ( ಭೀಮಾನದಿ ತೀರದಲ್ಲಿದೆ ) ತೆರಳಿ ‘ ವಿಜಯಸ್ಥಂಬ ‘ ವನ್ನು ಪತ್ತೆ ಹಚ್ಚಿ ಆ ಸ್ಥಳವನ್ನು ಸ್ವಚ್ಛಗೊಳಿಸಿದರು . ಕೊನೆಗೆ ಯುದ್ಧ ನಡೆದು 109 ವರ್ಷಗಳ ನಂತರ ಅಂದರೆ 1927ರ ಜನವರಿ 1ನೇ ತಾರೀಖಿನಂದು ಡಾ . ಅಂಬೇಡ್ಕರ್ರವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಪ್ರಥಮ ಬಾರಿಗೆ ‘ ವಿಜಯ ಸ್ಟಂಬ ‘ ಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಶ್ರದ್ದಾಂಜಲಿ ಸಲ್ಲಿಸಿದರು . ಡಾ . ಅಂಬೇಡ್ಕರ್ರವರು ಪ್ರಥಮ ಬಾರಿಗೆ ( 1927ರ ಜನವರಿ 1 ) ಕೋರೆಗಾಂವ್ನಲ್ಲಿ ‘ ವಿಜಯ ಸ್ಥಂಬ ‘ ಕ್ಕೆ ಗೌರವ ವಂದನೆ ಸಲ್ಲಿಸಿದ ನಂತರ ನಡೆದ ಸಭೆಯಲ್ಲಿ ಮಾತನ್ನಾಡುತ್ತಾ ಈ ರೀತಿ ಹೇಳಿದರು . ಅಂದು ಬ್ರಿಟಿಷರ ಪರವಾಗಿ ಅಸ್ಪಶ್ಯಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ , ಅಸ್ಪಶ್ಯಯೋಧರು ಬ್ರಿಟಿಷರ ಪರ ಯಾಕೆ ಹೋಗಬೇಕಾಯಿತು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ . ಅಸ್ಪಶ್ಯರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದೂಗಳ ದಬ್ಬಾಳಿಕೆಯನ್ನು ಸುಮ್ಮನೆ ಸಹಿಸಿಕೊಂಡು ಜೀವನ ನಡೆಸಬೇಕಾಗಿತ್ತೆ ? ಹಿಂದೂಗಳು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ – ನರಿಗಳಿಗಿಂತಲೂ ಕೀಳಾಗಿ ಕಂಡಾಗ , ಇನ್ನಿಲ್ಲದಂತೆ ದಬ್ಬಾಳಿಕೆ ನಡೆಸಿದಾಗ , ಅಪಮಾನಿಸಿದಾಗ ಎಲ್ಲವನ್ನೂ ಸಹಿಸಿಕೊಂಡು ಎಷ್ಟು ದಿನ ಬದುಕಬೇಕಾಗಿತ್ತು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟೀಷರ ಪರವಾಗಿ ಯುದ್ದ ಮಾಡಿದರೆಂಬುದನ್ನು ಪ್ರತಿಯೊಬ್ಬರೂ ಲಕ್ಷ್ಮದಲ್ಲಿಡಬೇಕು . – ಗತಿಸಿದ ಕಾಲವೊಂದರಲ್ಲಿ ನಡೆದ ಈ ಘಟನೆಯಲ್ಲಿ ಅಸ್ಪಶ್ಯರು ಅನುಭವಿಸಿದ ಸೋಲು ಗೆಲುವಿನ ನಡುವೆ ಇಂಡಿಯಾದ ಸಾಮಾಜಿಕ ಬದುಕಿನ ಸತ್ಯಗಳನ್ನು ನೀವೇ ನೋಡಿದಿರ . ಇಂತಹ ಅದೆಷ್ಟೋ ಘಟನೆಗಳು ನಡೆದು ಈ ದೇಶದಲ್ಲಿ ಅಸ್ಪಶ್ಯರ ಕೌಶಲ್ಯ ಸಾಹಸ , ಮಾನವೀಯ ಮೌಲ್ಯಗಳು ಮಣ್ಣಲ್ಲಿ ಮುಚ್ಚಿ ಹೋಗಿವೆ.
ಅವುಗಳೆಲ್ಲವನೂ ನಾನು ಬಗೆದು ಹೊರತೆಗೆದೇ ತೀರುತ್ತೇನೆ . ( ಈ ಯುದ್ದವನ್ನಾಧರಿಸಿ ಶ್ರೀ ಅರುಣ್ ಶೌರಿಯವರು ತಮ್ಮ ‘ ವರ್ಷಿಪಿಂಗ್ ಫಾಲ್ಸ್ ಗಾಡ್ ಎಂಬ ಪುಸ್ತಕದಲ್ಲಿ “ ಅಸ್ಪ ಶ್ಯರು ಬ್ರಿಟೀಷರ ಪರವಾಗಿ ಹೋರಾಡಿ ಬ್ರಿಟಿಷರಿಗೆ ಗೆಲುವನ್ನು ಕೊಟ್ಟಿದ್ದಾರೆ , ಆ ಮೂಲಕ ಅವರು ಭಾರತದ ವಿರುದ್ದವೇ ಹೋರಾಡಿದಂತಾಗಿದೆ ” ಎಂದು ಬರೆದಿದ್ದಾರೆ.ಒಂದೆಡೆ ಅಸ್ಪ್ರಶ್ಯರು ಬ್ರಿಟೀಷರ ಪರ ಹೋರಾಡಲು ಕಾರಣಗಳೇನು ಎಂದು ಗೊತ್ತಿದ್ದರೂ ಸಹ ಆ ಪುಸ್ತಕದಲ್ಲಿ ಬರೆದಿಲ್ಲ . ) ಆ ಸಭೆಯಲ್ಲಿ ಡಾ . ಅಂಬೇಡ್ಕರ್ರವರು ಮುಂದುವರಿದು ಮಾತನಾಡುತ್ತಾ ಈ ರೀತಿ ಹೇಳಿದರು . “ ಯಾವ ಅಸ್ಪಶ್ಯ ಯೋಧರು ಹಲವಾರು ಯುದ್ಧಗಳಲ್ಲಿ ತಮ್ಮಗಳ ಪರಾಕ್ರಮದಿಂದ ಬ್ರಿಟೀಷರಿಗೆ ವಿಜಯ ತಂದುಕೊಟ್ಟರೋ , ಇಂದು ಅಂತಹ ವೀರತನವನ್ನೇ ಹೊಂದಿರುವ ಅಸ್ಪಶ್ಯ ಯುವಕರನ್ನು ಸೇವೆಗೆ ಸೇರಿಸಿಕೊಳ್ಳಲು ಬ್ರಿಟೀಷ್ ಸರ್ಕಾರ ನಿರ್ಬಂಧ ಹೇರಿದ್ದು ನಂಬಿಕೆ ದ್ರೋಹವೇ ಆಗಿದೆ . ಅಸ್ಪಶ್ಯ ಯುವಕರು ಸೇನೆ ಸೇರುವುದನ್ನು ನಿಷೇಧಿಸಿರುವ ಬ್ರಿಟೀಷ್ ಸರ್ಕಾರ ಅದನ್ನು ತಕ್ಷಣವೇ ಹಿಂಪಡೆದು ಅಸ್ಪಶ್ಯ ಯುವಕರು ಸೇವೆ ಸೇರಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು . ಒಂದು ವೇಳೆ ಬ್ರಿಟೀಷ್ ಸರ್ಕಾರದ ವಿರುದ್ದ ಉಗ್ರ ಚಳುವಳಿಯನ್ನು ಮಾಡಬೇಕಾಗುತ್ತದೆ . ” ( 1892ರಿಂದ ಬ್ರಿಟೀಷ್ ಸರ್ಕಾರವು ಭಾರತದಲ್ಲಿ ಅಸ್ಪಶ್ಯರು ಸೇನೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು .
ಡಾ . ಅಂಬೇಡ್ಕರ್ರವರ ಸತತ ಹೋರಾಟದ ಫಲವಾಗಿ 1941ರಲ್ಲಿ ಈ ನಿಷೇಧವನ್ನು ತೆಗೆದುಹಾಕಲಾಯಿತು . ) 1927ರಿಂದ ಪ್ರಾರಂಭಿಸಿ ತಾವು ಬದುಕಿರುವವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್ರವರು ಪ್ರತಿವರ್ಷ ಜನವರಿ 1ನೇ ತಾರೀಖಿನಂದು ತಮ್ಮ ಕುಟುಂಬ ಹಾಗೂ ತನ್ನ ಸಾವಿರಾರು ಅನುಯಾಯಿಗಳೊಂದಿಗೆ ಆ ಸ್ಥಳಕ್ಕೆ ಭೇಟಿ ನೀಡಿ ‘ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಿದ್ದರು . ಈಗ ಪ್ರತಿವರ್ಷ ಜನವರಿ 1ನೇ ತಾರೀಖಿನಂದು ಭಾರತದ ಮೂಲೆ ಮೂಲೆಗಳಿಂದ ನಿವೃತ್ತಯೋಧರುಗಳು ಸೇರಿದಂತೆ ಲಕ್ಷಾಂತರ ಜನರು ಕೋರೆಗಾಂವ್ಗೆ ಭೇಟಿ ನೀಡಿ ‘ ವಿಜಯ ಸ್ಟಂಬ ‘ ಕ್ಕೆ ನಮಿಸಿ ಹುತಾತ್ಮ ಅಸ್ಪಶ್ಯ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾರೆ . ವರ್ಷದಿಂದ ವರ್ಷಕ್ಕೆ ಅಲ್ಲಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನವರಿ 1ನೇ ತಾರೀಖಿನಂದು ನಡೆಯುವ ಸ್ಥತಿ ದಿನ ಕಾರ್ಯಕ್ರಮವು ಸುವ್ಯವಸ್ಥಿತವಾಗಿ ನಡೆಯಲೆಂದು ಅದರ ಉಸ್ತುವಾರಿಗಾಗಿ ಒಂದು ಕಾರ್ಯಕಾರಿಣಿ ಮಂಡಳಿಯನ್ನು ಸ್ಥಾಪಿಸಲಾಗಿದೆ . “ ನನ್ನ ಜನರಿಗೆ ಆಯುಧ ಹಿಡಿಯುವ ಅಧಿಕಾರ ನೀಡಿದ್ದರೆ ಈ ದೇಶ ಎಂದೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರಲಿಲ್ಲ ಹಾಗೂ ನನ್ನ ಸಾಮಾಜಿಕ ತತ್ವವು ಮೂರು ಪದಗಳಲ್ಲಿ ಅಡಕವಾಗಿದೆ . ಅವುಗಳೆಂದರೆ ; ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವ ಎಂದಿದ್ದಾರೆ ಡಾ . ಬಿ . ಆರ್ . ಅಂಬೇಡ್ಕರ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401