ದಿನದ ಸುದ್ದಿ
ಕೋರೆಗಾಂವ್ ಗಾಯಗಳನ್ನೂ, ಹರಿದ ಸಂಬಂಧಗಳನ್ನೂ ಹೊಲಿದುಕೊಳ್ಳೋಣ
- ಡಾ. ವಡ್ಡಗೆರೆ ನಾಗರಾಜಯ್ಯ
ಭಾರತ ಹುಣ್ಣಿಮೆಯ ದಿನ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಂಡ ಗೋಸಂಗಿ ಯುದ್ಧ ವೀರರ ನೆನಪು ನಮ್ಮ ತಾಯಂದಿರ ನಾಲಗೆ ಮೇಲೆ ಇನ್ನೂ ಮಾಸಿಲ್ಲ.
ಗೊಲ್ಲರ ರಾಜ ಕಾಟಮರಾಜನ ತಮ್ಮನಾದ ಚೆನ್ನಯ್ಯಬಾಲುಡು ಸಾರಿದ್ದ ಯುದ್ಧದಲ್ಲಿ ನೆರವಾಗಿ, ವೈರಿಗಳ ವಿರುದ್ಧ ಕಾದಾಡಿ ಚೆನ್ನಯ್ಯಬಾಲುಡುವಿಗೆ ಜಯ ತಂದುಕೊಡಲೆಂದು ಕಾರಂಪೂಡಿಯ ಯುದ್ಧಕ್ಕೆ ಹೋಗಿದ್ದ ಮಾದಿಗರ ಗೋಸಂಗಿ ಯುದ್ಧವೀರರು, ರಣರಂಗದಲ್ಲಿ ವೈರಿಗಳ ವಿರುದ್ಧ ಕಾದಾಡಿ ಕತ್ತಿಗಳಿಂದ ಗಾಯಗೊಂಡು ಇದೇ ಭಾರತ ಹುಣ್ಣಿಮೆಯ ಸಂಜೆ ಊರಿಗೆ ಮರಳಿ ಬರುತ್ತಾರೆ.
ಅಂದು ಸಂಜೆ ಊರಿನ ಹೊರಗೆ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಳ್ಳುತ್ತಾರೆ. ಚೆನ್ನಯ್ಯಬಾಲುಡುವಿಗೆ ಜಯವನ್ನು ತಂದುಕೊಟ್ಟ ಅವರು, ಆ ಗೊಲ್ಲರ ದೊರೆಯಿಂದ ಅನೇಕ ಬಿರುದುಗಳನ್ನೂ ಇನಾಮುಗಳನ್ನೂ ಪಡೆಯುತ್ತಾರೆ.
ಈ ಯುದ್ಧದ ನೆನಪನ್ನು ಮರೆಯಲಾರದ ಮಾದಿಗ ಜನಪದ ತಾಯಂದಿರು ಕಾವ್ಯವನ್ನು ಕಟ್ಟಿ ಹಾಡತೊಡಗಿ, ತಮ್ಮ ಸಮುದಾಯದ ಯುದ್ಧವೀರರ ಕಥನವನ್ನು ಮೌಖಿಕ ಧಾರೆಯಲ್ಲಿ ತಲೆಮಾರುಗಳಿಂದ ಸಾಗಿಸಿಕೊಂಡು ಬಂದಿದ್ದಾರೆ. ಗೋಸಂಗಿ ಯುದ್ಧ ವೀರರ ಈ ಕಥನವು ಗಾರುಡಿ ಗಂಗಭಾರತ ಕಾವ್ಯವಾಗಿ ನರದ ರಕ್ತದಂತೆ ಹರಿಯುತ್ತಿದೆ.
ಅಂತೆಯೇ ಭೀಮಾ ಕೋರೆಗಾಂವ್ ಮಹಾರ್ ವೀರ ಯೋಧರ ನೆನಪೂ ನಮ್ಮಿಂದ ಎಂದಿಗೂ ಮಾಸುವುದಿಲ್ಲ. ಬ್ರಿಟೀಷರಿಗೆ ಜಯ ತಂದುಕೊಡಲು ಪೇಶ್ವೆಗಳ ವಿರುದ್ಧ ಕಾದಾಡಿದ ಕೋರೆಗಾಂವ್ ವೀರಗಾಥೆ (1818 ಜನವರಿ 1) ದಲಿತರ ಪಾಲಿನ ಸ್ವಾಭಿಮಾನದ ಕಥನ. ಮಹಾರ್ ರೆಜಿಮೆಂಟಿನ ಸ್ಥಾಪನೆಯ ಘನತೆಗೂ ಹೊಸ ಪ್ರಸ್ತಾನ ಬರೆದ ಈ ದಲಿತ ದಿಗ್ವಿಜಯವನ್ನು ನಾವು ಪ್ರತಿ ವರ್ಷ ಆಚರಿಸುತ್ತಾ ಬಂದಿದ್ದೇವೆ.
ಸಂವಿಧಾನ ಕತೃ ಡಾ.ಬಿ.ಆರ್.ಅಂಬೇಡ್ಕರ್ ಅವರು, ಪ್ರತಿವರ್ಷ ಜನವರಿ 01 ರಂದು ಕೊರೆಗಾಂವ್ ಹತಾತ್ಮ ಯುದ್ಧವೀರರ ರಣಭೂಮಿಗೆ ಸಕುಟುಂಬ ಸಮೇತರಾಗಿ ಹೋಗಿ ಮಹಾರ್ ಸೈನಿಕರ ವಿಜಯ ಸ್ಥೂಪಕ್ಕೆ ವಂದನೆ ಸಲ್ಲಿಸಿ ಬರುತ್ತಿದ್ದರು. ಪ್ರತಿವರ್ಷ ಜನವರಿ 01 ನೇ ದಿನವನ್ನು ಕೊರೆಗಾಂವ್ ಯುದ್ಧವೀರರ ವಿಜಯ ದಿವಸವನ್ನಾಗಿ ಆಚರಿಸುವುದನ್ನು ಅಂಬೇಡ್ಕರ್ ರೂಢಿಗೆ ತಂದರು.
ಕೋಮುವಾದಿ ಮರಾಠ ಪೇಶ್ವೆಗಳ ವಿರುಧ್ಧ ಹೋರಾಡಿ ಮಡಿದು ಹುತಾತ್ಮರಾದ ಕೊರೆಗಾಂವ್ ವೀರರ ವಿಜಯ ದಿವಸವನ್ನಾಗಿ ನಾವು ಜನವರಿ-02 ರ ದಿನವನ್ನು ಆಚರಿಸುತ್ತಿದ್ದೇವೆ.
2018 ನೇ ಜನವರಿ 02 ರ ಭಾರತ ಹುಣ್ಣಿಮೆಯ ದಿನ ದಲಿತರ ಪಾಲಿಗೊಂದು ಕರಾಳ ನೆನಪನ್ನು ಬೆಸೆದುಬಿಟ್ಟಿದೆ. ಕರುಣಾಮೈತ್ರಿಗಳ ಸಂಕೇತವಾದ ನೀಲಿ ಮತ್ತು ಪಂಚಶೀಲ ಧ್ವಜಗಳನ್ನು ಹಿಡಿದು ಮಹಾರಾಷ್ಟ್ರದ ಕೊರೆಗಾಂವ್ ವೀರಭೂಮಿಗೆ ಕೋರೆಗಾಂವ್ ವಿಜಯ ದಿವಸದ 200 ನೇ ವರ್ಷಾಚರಣೆಯನ್ನು ಆಚರಿಸಲು ಹೋಗಿದ್ದ ನಮ್ಮ ಬಂಧುಗಳ ವಿರುದ್ಧ, ಮತೀಯ ಧ್ವೇಷ ಮತ್ತು ರಕ್ತಪಾತದ ಸಂಕೇತವಾದ ಭಗವಾಧ್ವಜವನ್ನು ಹಿಡಿದುಕೊಂಡು ಬಂದ ಸಂಘಪರಿವಾರದ ಗೂಂಡಾಗಳು ಗುಂಪು ಘರ್ಷಣೆ ನಡೆಸಿ ನಮ್ಮ ಅನೇಕ ಬಂಧುಗಳು ಗಾಯಗೊಂಡರು.
ಸಾರ್ವಜನಿಕ ಆಸ್ತಿ-ಪಾಸ್ತಿಗಳೂ ನಾಶವಾಗಿ ಸಾಮಾನ್ಯ ಜನಜೀವನ ಕದಡಿ ಹೋಯಿತು. ದಲಿತರ ಜೀವಹಾನಿಯೂ ಆಗಿಹೋದ ಅಂತಹ ಹೊತ್ತಿನಲ್ಲಿ ಸಹಜವಾಗಿ ವ್ಯಗ್ರಗೊಳ್ಳಬೇಕಿದ್ದ ದಲಿತರು ತಮ್ಮ ಕೋಪವನ್ನು ಸಾರ್ವಜನಿಕರ ಮೇಲಾಗಲೀ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಮೇಲಾಗಲೀ ಹರಿಯಬಿಡದೆ ಶಾಂತಿಯನ್ನು ಕಾಪಾಡಿಕೊಂಡರು.
ಗೋಸಂಗಿ ಯುದ್ಧವೀರರ ಮತ್ತು ಕೋರೆಗಾಂವ್ ಯುದ್ಧ ವೀರರ ಅಮರ ಕಾವ್ಯಗಳನ್ನು ಕಟ್ಟಿ ಹಾಡುವ ಮೂಲಕ ದಲಿತರು ತಮಗಾದ ನೋವನ್ನು ಹೊರ ಹಾಕಿದರು. ಹರಿದ ಗಾಯಗಳನ್ನು ಹೊಲೆಯುವಂತೆ ಸಂಬಂಧಗಳನ್ನೂ ಹೊಲೆದುಕೊಳ್ಳುವುದನ್ನು ನಮ್ಮ ಜನಪದರು ಧ್ಯಾನಿಸಿದ್ದರು. ಇಂದು ಕೊರೆಗಾಂವ್ ವಿಜಯ ದಿವಸದ 203 ನೇ ವರ್ಷಾಚರಣೆಯ ಹೊತ್ತಿನಲ್ಲಿ ಇಲ್ಲಿಯತನಕ ಮತೀಯವಾದಿಗಳಿಂದ ನಮಗಾಗಿರುವ ಗಾಯಗಳನ್ನೂ, ಹರಿದ ಸಂಬಂಧಗಳನ್ನೂ ಹೊಲಿದುಕೊಳ್ಳೋಣ.
ಕರುಣಾಮೈತ್ರಿಗಳ ಸಂಕೇತವಾದ ನೀಲಿ ಮತ್ತು ಪಂಚಶೀಲ ಧ್ವಜಗಳನ್ನು ಎಲ್ಲೆಡೆ ಎತ್ತಿ ಹಿಡಿಯೋಣ.
(ಡಾ. ವಡ್ಡಗೆರೆ ನಾಗರಾಜಯ್ಯ
8722724174)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ4 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

