ದಿನದ ಸುದ್ದಿ
ಬಿಗ್ ಬಾಸ್ ಸೀಸನ್ 6 :ಎಲಿಮಿನೇಟ್ ಆದ್ರು ಕ್ರಿಕೆಟರ್ ರಕ್ಷಿತಾ ರೈ

ಸುದ್ದಿದಿನ ಡೆಸ್ಕ್ : ಕ್ರಿಕೆಟರ್ ರಕ್ಷಿತಾ ರೈ ಬಿಗ್ ಬಾಸ್ ಸೀಸನ್ 6ರ ಮೊದಲನೇ ಎಲಿಮಿನೇಟ್ ಸ್ಪರ್ದಿಯಾಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಿಚ್ಚನ ನಿರೂಪಣೆ ಯಲ್ಲಿ ಬರುತ್ತಿರುವ ಈ ಬಾರಿಯ ಬಿಗ್ ಬಾಸ್ ಹಲವು ಕುತೂಹಲಗಳೊಂದಿಗೆ ಸಾಗಿತ್ತು.
ಎಂ.ಎಸ್.ಧೋನಿಯ ಅಪ್ಪಟ ಅಭಿಮಾನಿಯಾಗಿರುವ ರಕ್ಷಿತಾ ರೈ ” ನಾನು ನನ್ನ ದಿನ ನಿತ್ಯ ಜೀವನದಲ್ಲಿ ಹೇಗಿರುತ್ತೇನೋ ಹಾಗೆಯೇ ಬಿಗ್ ಬಾಸ್ ಮನೆಯೊಳಗೆ ಇರುತ್ತೇನೆ ಎಂದು ಪ್ರವೇಶ ಪಡೆದಿದ್ದರು.
ಅಂದಹಾಗೆ ಇವರು ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಆಡುತ್ತಿದ್ದು, ಧೋನಿಯವರ ಜೀವನಾಧಾರಿತ ಸಿನೆಮಾವನ್ನು ಸುಮಾರು 264 ಬಾರಿ ನೋಡಿದ್ದಾಗಿ ಹೇಳಿ, ದೋನಿಯ ಬಹುದೊಡ್ಡ ಅಭಿಮಾನಿ ಎಂದು ದೃಢೀಕರಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986716401
ಕ್ರೀಡೆ
ಫೆ. 5 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ : ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ : ಮಹಾಂತೇಶ್ ಬೀಳಗಿ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು.
ನೌಕರರ ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ, ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್ ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ. ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.
ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ, ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್ಬಾಲ್ ಮತ್ತಿತರೆ ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್- ಎಸ್ಎಸ್ ಬಡಾವಣೆಯ ನೇತಾಜಿ ಸುಭಾಷ್ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ

- ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ: ಬಟ್ಟಲು ಕಣ್ಣಿನ ಚೆಲುವೆ
- ಮ್ಯಾಂಚೆಸ್ಟರ್ ಬೆಡಗಿ ಸಿಕ್ತು ಬಿಗ್ ಆಫರ್
ವಿಶೇಷ ವರದಿ :ಈಶ್ವರ್ ಸಿರಿಗೇರಿ
ಸುದ್ದಿದಿನ ಡೆಸ್ಕ್ : ಮಾತೃ ಆಸೆ ಕೊನೆಗೂ ನನಸು ಮಾಡಿದ ಮ್ಯಾಂಚೆಸ್ಟರ್ ಹುಡುಗಿ ಈ ಸಿನಿ ಪಯಣವೇ ಒಂದು ರೀತಿಯ ನಿಂತ ನೀರಲ್ಲ ಎಂಬ ಸಾಕ್ಷಿಗೆ ಮೆಚ್ಚುಗೆ ಪಾತ್ರರಾದ ಬಿಂದುಶ್ರೀ ಅವರು ನೋಡಿದ ಕೂಡಲೇ ಪ್ರಸಿದ್ಧಿ ಎಂಬ ಮಾತು ಸುಳ್ಳಲ್ಲ. ಕಲರ್ ಫುಲ್ ಪಯಣದಲ್ಲಿ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಯಶಸ್ಸಿಯಾಗಿ ತಮ್ಮ ಪಾತ್ರವನ್ನು ನಿಭಾಯಿಸಿದ ಈ ಬಟ್ಟಲು ಕಣ್ಣಿನ ಚೆಲುವೆ ಮ್ಯಾಂಚೆಸ್ಟರ್ ಸ್ಟಾರ್ ಬೆಡಗಿಯಾಗಿ ತಮ್ಮದೇ ಆದ ನೆಲೆಗೆ ಸಾಕ್ಷಿಯಾಗಿದ್ದಾರೆ. ಅದು ಏನೇ ಆಗಲಿ ಬಾಲ್ಯದಲ್ಲಿ ಸಿಕ್ಕ ಹಲವಾರು ಅವಕಾಶಗಳನ್ನು ಬಹಳ ಅದ್ಭತವಾಗಿ ಕಲರ್ ಫುಲ್ ಪ್ರತಿಭೆಗೆ ಅದರಲ್ಲೂ ಕನ್ನಡದಲ್ಲಿ ಮಿಚ್ಚಿದ್ದು ಕನ್ನಡಿಗರ ಹೆಮ್ಮೆ.
ಪ್ಯಾಶನ್ ನಿಂದ ನಟನಾ ವೃತ್ತಿಗೆ ಪಯಣ
ಪಕ್ಕ ಹಳಿ ಸೊಗಡಿನ ಚಿತ್ರಕ್ಕೆ ಸಿಕ್ತು ಇಷ್ಟು ದಿನಗಳ ನಂತರ ಅದ್ಭತ ಆಫರ್ಗಳು, ಈ ಸಾಲುಗಳ ಯಶಸ್ಸು ಬೆನ್ನಿಗೆ ಇದ್ದರು ಸಹ ಒಳ್ಳೆಯ ಚಿತ್ರಕಥೆಗೆ ಏಳಿ ಮಾಡಿಸಿದ ಈ ಸ್ಪೂರಧ್ರೂಪಿ ಚೆಲುವೆ. ಇನ್ನೂ ಅನೇಕ ಪ್ರತಿಭೆಗಳು ಕನ್ನಡದಲ್ಲಿ ಬಂದು ಹೋಗಿದ್ದು ಇತಿಹಾಸವೇ ಆದರೂ ಈ ಸಾಲಿಗೆ ಬಿಂದುಶ್ರೀ ಎಂಬ ನವ ಕಲರ್ ಫುಲ್ಗೆ ಹಾಗೂ ಹೊಸ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಒಳ್ಳೆಯ ಪಾತ್ರ, ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡಲು ತುದಿಗಾಲ ಮೇಲೆ ವೇಟಿಂಗ್ ಅಂತ ಹೇಳಬಹುದು.
ಮ್ಯಾಂಚೆಸ್ಟರ್ ಬೆಡಗಿಗೆ ಸಿನಿ ಲೋಕದಲ್ಲಿ ಸಂಸ್ಕೃತಿಯೇ ಬಿಂಬ
ಬಿಂದುಶ್ರೀ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಹುಡುಗಿ. ಸಿನಿಮಾರಂಗ ಹೊಸದೇನಲ್ಲ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದವರು. “ಶ್ರೀರಸ್ತು ಶುಭಮಸ್ತು”, ”ಶಿವಪ್ಪ ನಾಯಕ”,”ಪ್ರೀತ್ಸೋದ್ ತಪ್ಪಾ” ಸೇರಿದಂತೆ ಅನೇಕ ರೀತಿಯ ಸುಮಾರು ಮೂವತ್ತು ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು ಸುಳ್ಳಲ್ಲ. ಬೆಳ್ಳಿತೆರೆಯ ಜತೆಗೆ ಕಿರುತೆರೆಯಲ್ಲೂ ಇವರ ಪಯಣ ಅದ್ಭತ ಅಂತ ಹೇಳಬಹುದು. ಇನ್ನೋಂದು ವಿಚಾರ “ಕಾವ್ಯಾಂಜಲಿ”, “ಗೌತಮಿ” ಮೆಗಾ ಧಾರಾವಾಹಿಗಳಲ್ಲೂ ಬಣ ಹಚ್ಚಿದ್ದಾರೆ. ಬಣದ ಜತೆಗೆ ಅಧ್ಯಯನ ಕೂಡ ಮುಖ್ಯ ಎಂಬ ಕಾರಣಕ್ಕೆ ನಟನೆಯನ್ನು ಮೊಟಕುಗೊಳಿಸಿ, ಓದಿನತ್ತ ಗಮನಹರಿಸಿದ್ದರು ಬಿಂದುಶ್ರೀ. ಇನ್ನು, ಇವರ ತಂದೆ ಸಿವಿಲ್ ಎಂಜಿನಿಯರ್. ಅವರ ತಂದೆ ಮಾತಿನ ಪ್ರಕಾರ, ಪದವಿ ಪಡೆದರು. ಅದರಲ್ಲೂ ಅವರದು ಪದವಿಯಲ್ಲಿ ಹದಿನಾರನೇ ರ್ಯಾಂಕ್ ಎಂಬುದು ವಿಶೇಷ.
ಬಣ್ಣಕ್ಕೂಸೈ, ಟೆಕ್ಕಿಗೂ ಸೈ
ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಬಿಂದುಶ್ರೀ ಟೆಕ್ಕಿಯಾಗಿ ಮೂರು ವರ್ಷಗಳ ಸೇವೆ ಮಾಡಿದ್ದಾರೆ ಹಾಗೂ ಇವರ ತಾಯಿ ಶಾಸ್ತ್ರೀಯ ಸಂಗೀತ ಹಿನ್ನಲೆಯ ಅವರು. ಅವರ ಆಸೆಯಂತೆ ತಂದೆಯ ಮನವೊಲಿಸಿ, ಪುನಃ ನಟನೆಗೆ ರೆಡಿಯಾಗಿದ್ದಾರೆ. ಈ ಕುರಿತು ಸ್ವತಃ ಬಿಂದುಶ್ರೀ ಹೇಳುವುದಿಷ್ಟು, “ನನಗೆ ನಟನೆ ಮೇಲೆ ಆಸಕ್ತಿ ಇದೆ. ಹಾಗಂತ ಸಿಕ್ಕ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಪರೂಪ ಎಂಬಂತಹ, ಚಾಲೆಂಜಿಂಗ್ ಇರುವ, ನಮ್ಮ ಸಂಸ್ಕ್ರತಿ ಬಿಂಬಿಸುವಂತಹ ಪಾತ್ರಗಳು ಬಂದರೆ ನಾನು ನಟನೆ ಮಾಡಲು ಇಷ್ಟಪಡ್ತೀನಿ. ಯಾವುದೇ ದೊಡ್ಡ ಬ್ಯಾನರ್ ಇದ್ದರೂ, ಸರಿ, ನನಗೆ ಒಪ್ಪುವ ಮಾತ್ರ ಸೈ ಎನ್ನುವುದು. ಬೇರೆ ರೀತಿಯ ಕಥೆಗೆ ಪಾತ್ರ ಮಾಡಲಾರೆ” ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ.
ಮಹಿಷಾಸುರ ಸಿನೆಮಾವೇ ಮತ್ತೆ ಕಲರ್ ಫುಲ್ ಆಗಲು ಕಾರಣ
ಇತ್ತೀಚೆಗೆ ತೆರೆಕಂಡ ಬಹಳ ಪೌರಾಣಿಕ ಸಿನಿಮಾವಾದ ಬಿಂದುಶ್ರೀ ಅವರ ಬಾಲ್ಯದಲ್ಲಿ 30 ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಜತೆಯಲ್ಲಿ ಅದರಲ್ಲೂ ಪ್ರಮುಖ ಹಳ್ಳಿ ಹುಡುಗಿಯಾಗಿ ಮಹಿಷಾಸುರ ಚಿತ್ರದಲ್ಲಿ ನಟಿಸಿದ್ದಾರೆ.
ಎಕ್ಸ್ ಲೆಂಟ್ ಆಗಿ ನಟನೆ ಮಾಡಿದ್ದಾರೆ ಇವರ ವಿಶೇಷ. ಇವರ ಎರಡನೇ ಚಿತ್ರ “ಲಡ್ಡು” ಸಿನಿಮಾ ಕೂಡ ಇಂದು ರಾಜ್ಯಾದ್ಯಾತ ಬಿಡುಗಡೆಯಾಗಲಿದೆ ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ. ಇನ್ನೂ ಸದ್ಯದಲ್ಲೇ “ಮಿ. ಅಂಡ್ ಮಿಸಸ್ ಜಾನು” ಚಿತ್ರದಲ್ಲೂ ಬಿಂದುಶ್ರೀ ನಟಿಸುತ್ತಿದ್ದಾರೆ. ಸದ್ಯಕ್ಕೆ ಪ್ರಸ್ತುತವಾಗಿ ಬಿಂದುಶ್ರೀ ಮೂರು ಕಥೆ ಗಳನ್ನು ರೆಡಿ ಅಂಥ ಹೇಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!

ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ತಲೆ ನೋವು ಶುರುವಾಗ್ತಿದೆ. ಒಂದು ಕಡೆ ಪಂಚಮಸಾಲಿ ಹೋರಾಟ, ಮತ್ತೊಂದೆಡೆ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹ. ಕಾಗಿನೆಲೆ ಶ್ರೀ ಗಳ ನೇತೃತ್ವದಲ್ಲಿ ಹೊರಟಿರುವ ಪಾದಯಾತ್ರೆ ಬೆಣ್ಣೆನಗರಿಗೆ ಬಂದು ತಲುಪಿದ್ದು, ಮೊದಲ ಭಾರೀಗೆ ಸರ್ಕಾರಕ್ಕೆ ಕಾಗಿನೆಲೆ ಶ್ರೀಗಳು ಖಡಕ್ ವಾರ್ನಿಂಗ್ ನೀಡುವ ಡೆಡ್ ಲೈನ್ ನೀಡಿದ್ದಾರೆ.
ಆ ಒಂದು ಪಾದಯಾತ್ರೆಯಲ್ಲಿ ಕೇಳಿದ್ದು ಒಂದೇ ಘೋಷಣೆ ವಾಕ್ಯ ಬೇಕೆ ಬೇಕು ಎಸ್ ಟಿ ಬೇಕು, ಬೇಕೆ ಬೇಕು ಎಸ್ ಟಿ ಬೇಕು. ಹೌದು., ಸಾಗರೋಪಾದಿಯಲ್ಲಿ ಜನ ಆ ಒಬ್ಬ ಸ್ವಾಮಿಜಿ ಜೊತೆ ಕೈಗೊಡಿಸಿದ್ದರು, ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಕರ ಸಂಕ್ರಾಂತಿಗೆ ಸೂರ್ಯ ತನ್ನ ದಿಕ್ಕು ಬದಲಿಸುವಂತೆ ನಿರಂಜನಾನಂದಪುರಿ ಸ್ವಾಮೀಜಿ ಕುರುಬ ದಿಕ್ಕು ಬದಲಿಸುವ ಪಣ ತೊಟ್ಟಿದ್ದಾರೆ. ಅದಕ್ಕೆ ಜನವರಿ ೧೫ ರಂದೆ ಹಾವೇರಿಯ ಕಾಗಿನೆಲೆ ಪೀಠದಿಂದ ಪಾದಯಾತ್ರೆ ಆರಂಭಿಸಿದ್ದು ಸದ್ಯ ಪಾದಯಾತ್ರೆ ದಾವಣಗೆರೆಗೆ ಬಂದು ತಲುಪಿದೆ, ಡೊಳ್ಳು ಕುಣಿತ, ಕುಂಬಮೇಳದ ಸ್ವಾಗತದೊಂದಿಗೆ ಜನರು ಸಾಗರೋಪಾದಿಯಲ್ಲಿ ಬಂದು ಜೈ ಎಂದಿದ್ದು, ಇದು ಎಸ್ ಟಿ ಹೋರಾಟಕ್ಕೆ ಮತ್ತುಷ್ಟು ಬಲ ನೀಡಿದೆ.
ಈ ವೇಳೆ ಹೋರಾಟವನ್ನುದ್ದೇಶಿಸಿ ಮಾತನಾಡಿದ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮ್ಮ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಶಾಂತಿಯುತವಾಗಿ ನಡೆಯುತ್ತಿದೆ. ಒಂದು ವೇಳೆ ನಮ್ಮ ಹೋರಾಟಕ್ಕೆ ಸರಿಯಾದ ಬೆಲೆ ಸಿಗದೆ ಹೋದಲ್ಲಿ ನಮ್ಮ ಹೋರಾಟ ತೀವ್ರಗೊಳ್ಳಲಿದೆ, ಟಗರು ಗುದ್ದಿದರೆ ಸಂಸತ್ ಭವನ ನಡುಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಸೇರಿದ್ದು ಪಾದಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಿತು.. ಇನ್ನೂ ಸಮಾವೇಶಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಗಮಿಸಿ, ಸಿದ್ದರಾಮಯ್ಯ ವಿರುದ್ದ ಗುಡುಗಿದ್ರು, ಸಿದ್ದರಾಮಯ್ಯ ಕೇವಲ ನಾಲ್ಕು ಜಿಲ್ಲೆಗೆ ಶಿಫಾರಸ್ಸು ಮಾಡಿದ್ರು, ಈಗ ನಾವು ಇಡೀ ಕರ್ನಾಟಕಕ್ಕೆ ST ಕೇಳುತ್ತಿದ್ದೇವೆ, ಕೈಮುಗಿದು ಕೇಳುತ್ತೇನೆ ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನವರಿಗೆ ಟಾಂಗ್ ಕೊಟ್ರು.
|ನಿರಂಜನಾನಂದಪುರಿ ಸ್ವಾಮೀಜಿ, ಕನಕಗುರು ಪೀಠ
ಒಟ್ಟಾರೆ ಈಗಾಗಲೇ ಸಂಪುಟ ವಿಸ್ತರಣೆಯಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರಕ್ಕೆ ಇದೀಗ ST ಹೋರಾಟ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಅದರಲ್ಲೂ ಆಡಳಿತ ಪಕ್ಷದವರೆ ಆದ ಕೆಎಸ್ ಈಶ್ವರಪ್ಪ, ಎಂ ಟಿಬಿ ನಾಗರಾಜ್, ಆರ್ ಶಂಕರ್, ಎಚ್ ವಿಶ್ವನಾಥ್ ಹೋರಾಟಕ್ಕೆ ದುಮುಕಿದ್ದು, ಸರ್ಕಾಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
| ಕೆ.ಎಸ್. ಈಶ್ವರಪ್ಪ, ಸಚಿವರು
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
-
ಭಾವ ಭೈರಾಗಿ7 days ago
ಕವಿತೆ | ಎದೆಯಾಚೆಗಿನ ತಲ್ಲಣ
-
ದಿನದ ಸುದ್ದಿ6 days ago
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ
-
ದಿನದ ಸುದ್ದಿ6 days ago
ಜಗಳೂರು | ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಸಮಿತಿಯಿಂದ ದೇವರ ಎತ್ತುಗಳಿಗೆ ಮೇವು ಸಂಗ್ರಹಣೆ
-
ನೆಲದನಿ6 days ago
ನುಡಿಯ ಒಡಲು – 26 | ನುಡಿ ಒಲವು ಮತ್ತು ಧೋರಣೆ
-
ದಿನದ ಸುದ್ದಿ6 days ago
ಸಂತೇಬೆನ್ನೂರು | ರಾಷ್ಟ್ರಪತಿ ಪದಕ ಪ್ರಶಸ್ತಿ ವಿಜೇತ ನಿವೃತ್ತ ಎ.ಸಿ.ಪಿ ರುದ್ರಪ್ಪ ಎಮ್ ಎನ್. ಅವರಿಗೆ ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನಾ ಕಾರ್ಯಕ್ರಮ
-
ದಿನದ ಸುದ್ದಿ5 days ago
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ