ದಿನದ ಸುದ್ದಿ
ಬಿಗ್ ಬ್ರೇಕಿಂಗ್ | ಅರ್ಜುನ್ ಸರ್ಜಾಗೆ ಜೈಲು ಗ್ಯಾರಂಟಿ : ಈ ನಾಲ್ಕು ಸಾಕ್ಷಿಗಳು ಸಾಕಾ..!?
![](https://suddidina.com/wp-content/uploads/2018/10/Arjunsarja-suddidina.jpg)
ಸುದ್ದಿದಿನ ಡೆಸ್ಕ್ : ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ..ಸತ್ಯ..ಸತ್ಯ, ಸರ್ಜಾ ಜೈಲಿಗೆ ಕಳಿಸಲು ಆ ನಾಲ್ಕು ಸಾಕ್ಷಿಗಳು ಸಾಕಾ..? ಆ ಪ್ರಮುಖ ಸಾಕ್ಷಿಗಳು ಯಾವುವು..? ಶ್ರುತಿ ಹರಿಹರನ್ ಮಾಡಿದ ಆರೋಪಕ್ಕೆ ಪೂರಕವಾಗಿವೆಯಾ ಆ ನಾಲ್ಕು ಸಾಕ್ಷಿಗಳು..? ಆ ಸಾಕ್ಷಿಗಳ ಸ್ಫೋಟಕ ಡೀಟೆಲ್ಸ್ ಸರ್ಜಾಗೆ ಮುಳುವಾಗಲಿದೆಯಾ..?
ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ ಸತ್ಯ ಸತ್ಯ ಎಕಂದ್ರೆ, ಶ್ರುತಿ ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಮಹತ್ವದ ಸಾಕ್ಷಿ ಲಭ್ಯವಾಗಿದೆ. ಮಹಜರು ವೇಳೆ ಪೊಲೀಸರೆದುರು ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ ಪ್ರತ್ಯಕ್ಷದರ್ಶಿಗಳು.
ಸಂಕಷ್ಟ ತಂದ ಸಾಕ್ಷ್ಯಗಳು
- ನಂಬರ್ 1: ಕೆಂಪಾಪುರ ಬಳಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಸ್ಥಳಕ್ಕೆ ಪೊಲೀಸರ ಭೇಟಿ
ಅಪ್ಪಿಕೊಳ್ಳುವ ಸೀನ್ ರಿಹರ್ಸಲ್ನಲ್ಲಿ ಶ್ರುತಿ ಅಳುತ್ತಾ ಬಂದಿದ್ದು ನಿಜ ಎಂದ ಸಾಕ್ಷಿಗಳು - ನಂಬರ್ 2: ಆಕಾಶ್ ಹಾಸ್ಪಿಟಲ್ನಲ್ಲಿ ನಡೆದ ದೃಶ್ಯದಲ್ಲೂ ಶ್ರುತಿ ಅಪ್ಸೆಟ್ ಆಗಿದ್ರು ಎಂದ ಸಾಕ್ಷಿಗಳು
- ನಂಬರ್ 3: ದೇವನಹಳ್ಳಿಯ ಸಾದಹಳ್ಳಿ ಗೇಟ್ ಟ್ರಾಫಿಕ್ ಸಿಗ್ನಲ್ನ ಸಿಸಿಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರು ಶ್ರುತಿ ಹರಿಹರನ್ರನ್ನು ಅರ್ಜುನ್ ಸರ್ಜಾ ಕರೆಯುತ್ತಿರೋ ದೃಶ್ಯ ಲಭ್ಯ
ಸಿಗ್ನಲ್ನಲ್ಲಿ ರೆಸಾರ್ಟ್ಗೆ ಬಾ ಎಂದು ಸರ್ಜಾ ಕರೆದಿದ್ರು ಎಂದು ಆರೋಪಿಸಿದ್ದ ಶ್ರುತಿ - ನಂಬರ್ 4: ಯುಬಿ ಸಿಟಿಯಲ್ಲಿ ಹಿಂಬದಿಯಿಂದ ನನ್ನನ್ನು ತಬ್ಬಿಕೊಂಡಿದ್ರು ಎಂದಿದ್ದ ಶ್ರುತಿ
ಶ್ರುತಿ ಹೇಳಿದ ದಿನವೇ ಅರ್ಜುನ್ ಸರ್ಜಾ ಹೆಸರಿನಲ್ಲಿ ರೂಂ ಬುಕ್ ಸಾಬೀತು ಈ ಸಾಕ್ಷಿಗಳ ಹಿನ್ನೆಲೆಯಲ್ಲಿ ನಾಳೆ ಅರ್ಜುನ್ ಸರ್ಜಾ ಬಂಧನ ಸಾಧ್ಯತೆವಿದೆ.
ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಶ್ರುತಿ ಪ್ರಕರಣದ ಸಾಕ್ಷ್ಯದಾರರು ಇಂದು ಕಬ್ಬನ್ ಪಾರ್ಕ್ ಠಾಣೆಗೆ ಹಾಜರ್ ಆಗಿದ್ದಾರೆ. ಸಾಕ್ಷಿಗಳಾದ ಕಿರಣ್, ಬೋರೇಗೌಡ, ಭರತ್ ನೀಲಕಂಠರನ್ನು ಇಂದು ಪೊಲೀಸರು ವಿಚಾರಣೆ
ಸಾಕ್ಷಿಗಳ ವಿಚಾರಣೆ ಬಳಿಕ ಇಂದು ಅರ್ಜುನ್ ಸರ್ಜಾಗೆ ಪೊಲೀಸರಿಂದ ನೋಟಿಸ್ ಜಾರಿಯಾಗಲಿದೆ. ನಾಳೆಯೇ ಅರ್ಜುನ್ ಸರ್ಜಾರನ್ನು ವಿಚಾರಣೆ ಮಾಡಲಿರೋ ಪೊಲೀಸರು ವಿಚಾರಣೆ ಮಗಿದ ಬಳಿಕ ಅರ್ಜುನ್ ಸರ್ಜಾ ಬಂಧನ ಮಾಡುವ ಸಾಧ್ಯತೆ ಇದ್ದು, ‘ಅರ್ಜುನ’ಗೆ ಕೃಷ್ಣ ಜನ್ಮಸ್ಥಾನ ಸೇರೊ ಭೀತಿ ಹೆಚ್ಚಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!