ದಿನದ ಸುದ್ದಿ
ಬಿಗ್ ಬ್ರೇಕಿಂಗ್ | ಅರ್ಜುನ್ ಸರ್ಜಾಗೆ ಜೈಲು ಗ್ಯಾರಂಟಿ : ಈ ನಾಲ್ಕು ಸಾಕ್ಷಿಗಳು ಸಾಕಾ..!?

ಸುದ್ದಿದಿನ ಡೆಸ್ಕ್ : ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ..ಸತ್ಯ..ಸತ್ಯ, ಸರ್ಜಾ ಜೈಲಿಗೆ ಕಳಿಸಲು ಆ ನಾಲ್ಕು ಸಾಕ್ಷಿಗಳು ಸಾಕಾ..? ಆ ಪ್ರಮುಖ ಸಾಕ್ಷಿಗಳು ಯಾವುವು..? ಶ್ರುತಿ ಹರಿಹರನ್ ಮಾಡಿದ ಆರೋಪಕ್ಕೆ ಪೂರಕವಾಗಿವೆಯಾ ಆ ನಾಲ್ಕು ಸಾಕ್ಷಿಗಳು..? ಆ ಸಾಕ್ಷಿಗಳ ಸ್ಫೋಟಕ ಡೀಟೆಲ್ಸ್ ಸರ್ಜಾಗೆ ಮುಳುವಾಗಲಿದೆಯಾ..?
ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ ಸತ್ಯ ಸತ್ಯ ಎಕಂದ್ರೆ, ಶ್ರುತಿ ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಮಹತ್ವದ ಸಾಕ್ಷಿ ಲಭ್ಯವಾಗಿದೆ. ಮಹಜರು ವೇಳೆ ಪೊಲೀಸರೆದುರು ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ ಪ್ರತ್ಯಕ್ಷದರ್ಶಿಗಳು.
ಸಂಕಷ್ಟ ತಂದ ಸಾಕ್ಷ್ಯಗಳು
- ನಂಬರ್ 1: ಕೆಂಪಾಪುರ ಬಳಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಸ್ಥಳಕ್ಕೆ ಪೊಲೀಸರ ಭೇಟಿ
ಅಪ್ಪಿಕೊಳ್ಳುವ ಸೀನ್ ರಿಹರ್ಸಲ್ನಲ್ಲಿ ಶ್ರುತಿ ಅಳುತ್ತಾ ಬಂದಿದ್ದು ನಿಜ ಎಂದ ಸಾಕ್ಷಿಗಳು - ನಂಬರ್ 2: ಆಕಾಶ್ ಹಾಸ್ಪಿಟಲ್ನಲ್ಲಿ ನಡೆದ ದೃಶ್ಯದಲ್ಲೂ ಶ್ರುತಿ ಅಪ್ಸೆಟ್ ಆಗಿದ್ರು ಎಂದ ಸಾಕ್ಷಿಗಳು
- ನಂಬರ್ 3: ದೇವನಹಳ್ಳಿಯ ಸಾದಹಳ್ಳಿ ಗೇಟ್ ಟ್ರಾಫಿಕ್ ಸಿಗ್ನಲ್ನ ಸಿಸಿಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರು ಶ್ರುತಿ ಹರಿಹರನ್ರನ್ನು ಅರ್ಜುನ್ ಸರ್ಜಾ ಕರೆಯುತ್ತಿರೋ ದೃಶ್ಯ ಲಭ್ಯ
ಸಿಗ್ನಲ್ನಲ್ಲಿ ರೆಸಾರ್ಟ್ಗೆ ಬಾ ಎಂದು ಸರ್ಜಾ ಕರೆದಿದ್ರು ಎಂದು ಆರೋಪಿಸಿದ್ದ ಶ್ರುತಿ - ನಂಬರ್ 4: ಯುಬಿ ಸಿಟಿಯಲ್ಲಿ ಹಿಂಬದಿಯಿಂದ ನನ್ನನ್ನು ತಬ್ಬಿಕೊಂಡಿದ್ರು ಎಂದಿದ್ದ ಶ್ರುತಿ
ಶ್ರುತಿ ಹೇಳಿದ ದಿನವೇ ಅರ್ಜುನ್ ಸರ್ಜಾ ಹೆಸರಿನಲ್ಲಿ ರೂಂ ಬುಕ್ ಸಾಬೀತು ಈ ಸಾಕ್ಷಿಗಳ ಹಿನ್ನೆಲೆಯಲ್ಲಿ ನಾಳೆ ಅರ್ಜುನ್ ಸರ್ಜಾ ಬಂಧನ ಸಾಧ್ಯತೆವಿದೆ.
ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಶ್ರುತಿ ಪ್ರಕರಣದ ಸಾಕ್ಷ್ಯದಾರರು ಇಂದು ಕಬ್ಬನ್ ಪಾರ್ಕ್ ಠಾಣೆಗೆ ಹಾಜರ್ ಆಗಿದ್ದಾರೆ. ಸಾಕ್ಷಿಗಳಾದ ಕಿರಣ್, ಬೋರೇಗೌಡ, ಭರತ್ ನೀಲಕಂಠರನ್ನು ಇಂದು ಪೊಲೀಸರು ವಿಚಾರಣೆ
ಸಾಕ್ಷಿಗಳ ವಿಚಾರಣೆ ಬಳಿಕ ಇಂದು ಅರ್ಜುನ್ ಸರ್ಜಾಗೆ ಪೊಲೀಸರಿಂದ ನೋಟಿಸ್ ಜಾರಿಯಾಗಲಿದೆ. ನಾಳೆಯೇ ಅರ್ಜುನ್ ಸರ್ಜಾರನ್ನು ವಿಚಾರಣೆ ಮಾಡಲಿರೋ ಪೊಲೀಸರು ವಿಚಾರಣೆ ಮಗಿದ ಬಳಿಕ ಅರ್ಜುನ್ ಸರ್ಜಾ ಬಂಧನ ಮಾಡುವ ಸಾಧ್ಯತೆ ಇದ್ದು, ‘ಅರ್ಜುನ’ಗೆ ಕೃಷ್ಣ ಜನ್ಮಸ್ಥಾನ ಸೇರೊ ಭೀತಿ ಹೆಚ್ಚಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ17 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ17 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ17 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ18 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ17 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ