ದಿನದ ಸುದ್ದಿ
ಮಂಡ್ಯ : ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರ ಧಾರುಣ ಸಾವು
ಸುದ್ದಿದಿನ ಡೆಸ್ಕ್ : ರಸ್ತೆ ಪಕ್ಕದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಸಂಭವಿಸಿದೆ.
ಕುರುಬನಪುರದ ಚನ್ನೇಗೌಡ(51) ಹಾಗೂ ಆತನ ಸ್ನೇಹಿತ ಸಾವನ್ನಪ್ಪಿರುವ ದುರ್ದೈವಿಗಳು. ಮಳವಳ್ಳಿ ತಾಲೂಕಿನ ಮೈಸೂರು ರಸ್ತೆಯ ಕನ್ನಹಳ್ಳಿ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಆಯತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ಮೇಲೆ ಒಬ್ಬ ಸತ್ತಿದ್ದು, ಮತ್ತೊಬ್ಬ ಸೇತುವೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಿರುಗಾವಲು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401