Connect with us

ನೆಲದನಿ

ರಂಗಲೋಕದ ಮೂಲಕ ಸಿನಿಮಾ ಲೋಕ ಪ್ರವೇಶಿಸಿದ ಯುವಪ್ರತಿಭೆ ‘ಬಿಂದು ರಕ್ಷಿದಿ’

Published

on

  • ಡಾ.ಕೆ.ಎ.ಓಬಳೇಶ್

ಗತ್ತಿನ ಸಾಂಸ್ಕøತಿಕ ಪರಂಪರೆಯಲ್ಲಿ ರಂಗಲೋಕವು ವಿಶಿಷ್ಟವಾಗಿ ಗಮನ ಸೆಳೆಯುತ್ತ ಸಾಗಿದೆ. ಇಂತಹ ರಂಗಲೋಕದ ಮೂಲಕ ಹಲವಾರು ದಾರ್ಶನಿಕರು, ಚಿಂತಕರು, ಕಲಾವಿದರು ಮೂಡಿಬಂದಿದ್ದಾರೆ. ಇವರು ರಂಗ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಇದರೊಂದಿಗೆ ತಮ್ಮಲ್ಲಿ ಅಂತರ್ಗತವಾಗಿರುವ ಕ್ರಿಯಾಶೀಲತೆಯೊಂದಿಗೆ ರಂಗಭೂಮಿ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆಯನ್ನು ನೀಡಿರುವ ನಿದರ್ಶನಗಳು ನಮ್ಮ ಮುಂದಿವೆ. ಇಂತಹ ಸಾಧಕರ ಸಾಲಿನಲ್ಲಿ ಯುವಪ್ರತಿಭೆಯಾದ ಬಿಂದು ರಕ್ಷಿದಿಯವರು ಒಬ್ಬರಾಗಿದ್ದಾರೆ. ಬಿಂದು ರಕ್ಷಿದಿಯವರು ತಮ್ಮಲ್ಲಿ ಅಂತರ್ಗತವಾಗಿದ್ದ ಕ್ರಿಯಾಶೀಲ ಪ್ರತಿಭೆಯನ್ನು ಹೊರಹಾಕುವುದಕ್ಕೆ ರಂಗಭೂಮಿಗೆ ಪ್ರವೇಶ ಪಡೆದು ನಂತರದಲ್ಲಿ ಸಿನಿಮಾ ಲೋಕದಲ್ಲಿಯೂ ತಮ್ಮ ಪ್ರತಿಭಾ ಸಾಮಥ್ರ್ಯವನ್ನು ಪ್ರದರ್ಶಿಸಿದ್ದಾರೆ. ಇಂತಹ ವಿಶಿಷ್ಟ ಯುವಪ್ರತಿಭೆಯನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಬಹುಮುಖ್ಯ ಆಶಯವಾಗಿದೆ.

ಬಿಂದು ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ರಕ್ಷಿದಿ ಗ್ರಾಮದಲ್ಲಿ 11 ಮೇ 1990ರಲ್ಲಿ ಜನಿಸಿದರು. ತಂದೆ ಉಗ್ಗಪ್ಪ, ತಾಯಿ ಶೋಭ. ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ಇವರು ತಂದೆ ತಾಯಿಗಳು ಹವ್ಯಾಸಿ ರಂಗ ಕಲಾವಿದರಾಗಿದ್ದ ಕಾರಣ ರಂಗಭೂಮಿಯ ಬಗ್ಗೆ ವಿಶಿಷ್ಟವಾದ ನಂಟನ್ನು ಬೆಳೆಸಿಕೊಂಡಿದ್ದರು. ಹೀಗಾಗಿ ಬಿಂದು ಅವರಿಗೆ ಬಾಲ್ಯದ ದಿನಮಾನಗಳಿಂದಲೂ ರಂಗಭೂಮಿಯ ಬಗ್ಗೆ ಭಾವನಾತ್ಮಕವಾದ ಒಡನಾಟವಿತ್ತು.

ಬಿಂದು ಅವರು ಶಾಲಾ-ಕಾಲೇಜುಗಳ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಪ್ರಾಥಮಿಕ ಶಿಕ್ಷಣ ಪಡೆಯುವ ವೇಳೆಗೆ ಸಕಲೇಶಪುರದಲ್ಲಿ ನಡೆಸಿದ ಸಾಂಸ್ಕøತಿಕ ಕಾರ್ಯಕ್ರಮವೊಂದರಲ್ಲಿ ಗಾಯನ ಮಾಡಿ ‘ಕಲಾ ತಪಸ್ವಿ’ ಪ್ರಶಸ್ತಿಗೆ ಭಾಜನರಾಗಿದ್ದ ಕೀರ್ತಿ ಬಿಂದು ಅವರಿಗೆ ಸಲ್ಲುತ್ತದೆ.

ಹೀಗೆ ಶಾಲಾ ಕಾಲೇಜು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಪ್ರತಿಯೊಂದು ಸಾಂಸ್ಕøತಿಕ ಕಾರ್ಯಕ್ರಮದಲ್ಲೂ ತಮ್ಮಲ್ಲಿ ಅಂತರ್ಗತವಾಗಿದ್ದ ನೃತ್ಯ, ಹಾಡುಗಾರಿಕೆಯಂತಹ ವಿಶಿಷ್ಟ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ರಾಶಿ ರಾಶಿ ಪ್ರಶಸ್ತಿ ಹಾಗೂ ಉಡುಗೊರೆಗಳನ್ನು ತಮ್ಮ ಮುಡಿಗೇರಿಸಿಕೊಂಡವರು. ಬಿಂದು ಅವರ ಪ್ರತಿಭೆ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ಚಿಗುರೊಡೆಯಲು ಪ್ರೇರಕ ಶಕ್ತಿಯಾದವರು ಅವರ ಶಿಕ್ಷಕ ವರ್ಗ.

ಅವರು ನೀಡಿದ ಪ್ರೋತ್ಸಾಹದ ಬಲದಿಂದ ತನ್ನಲ್ಲಿ ಅಂತರ್ಗತವಾಗಿದ್ದ ಕಲೆಯನ್ನು ಪ್ರದರ್ಶಿಸಿಕೊಂಡು ಬಂದಿದ್ದಾರೆ. ಹೀಗೆ ಬಾಲ್ಯದ ದಿನಗಳಿಂದಲೂ ಸಾಂಸ್ಕøತಿಕ ಲೋಕದಲ್ಲಿ ತನ್ನನ್ನು ತೊಡಗಿಸಿಕೊಂಡ ಬಿಂದು ತಮ್ಮ ಪದವಿ ಶಿಕ್ಷಣದ ತರುವಾಯ ಉದ್ಯೋಗಕ್ಕೆ ಸೇರಿಕೊಳ್ಳುತ್ತಾರೆ. ಆದರೆ ಇವರಿಗೆ ಆ ಉದ್ಯೋಗದಲ್ಲಿ ಆಸಕ್ತಿ ಮೂಡದ ಕಾರಣ ಅದನ್ನು ತೊರೆದು ಮನೆಗೆ ಹಿಂತಿರುಗುತ್ತಾರೆ. ಆನಂತರ ಅವರು ಮುಖ ಮಾಡಿದ್ದು ರಂಗಭೂಮಿಯತ್ತ.

ಬಿಂದು ರಕ್ಷಿದಿಯವರು ತಾವು ಉದ್ಯೋಗ ತೊರೆದು ಹೊರಬಂದು ತಮ್ಮಲ್ಲಿರುವ ಕಲಾ ತುಡಿತವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಾಗ ಅವರು ಸೂಚಿಸಿದ್ದರು ‘ನೀನಾಸಂ’ ಎಂಬ ರಂಗಸಂಸ್ಥೆಯ ಬಗ್ಗೆ. ಆದರೆ ಇವರು ನಿನಾಸಂ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುವುದಕ್ಕೆ ಬೇಕಾದ ಪ್ರಾಥಮಿಕ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ. ಆದರೆ ಸ್ನೇಹಿತರ ಒತ್ತಾಯದ ಮೇರೆಗೆ ನೀನಾಸಂ ರಂಗಸಂಸ್ಥೆಯು ನಡೆಸುವ ಡಿಪ್ಲೋಮಾ ಪದವಿಗೆ ಅರ್ಜಿ ಸಲ್ಲಿಸಿ ಅಳುಕಿನಿಂದಲೇ ಸಂದರ್ಶನಕ್ಕೆ ಹಾಜರಾಗುತ್ತಾರೆ.

ಸಂದರ್ಶನದಲ್ಲಿ ಇವರಲ್ಲಿ ಅಂತರ್ಗತವಾಗಿದ್ದ ಕಲೆಯನ್ನು ಅರಿತು ಉತ್ತಮ ಸಲಹೆ ಮತ್ತು ಸಹಕಾರ ನೀಡುತ್ತಾರೆ. ಇದೇ ಧೈರ್ಯದಿಂದ ರಂಗಶಿಕ್ಷಣ ಪಡೆಯಲು ಮುಂದಾಗುತ್ತಾರೆ. ನೀನಾಸಂನಲ್ಲಿ ರಂಗಶಿಕ್ಷಣ ಪಡೆಯುವ ಹಂತದಲ್ಲಿಯೇ ಹಲವಾರು ನಾಟಕಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ. ನೀನಾಸಂ ಸುತ್ತಾಟದಲ್ಲಿಯೇ ಇವರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುತ್ತಾ ಮುನ್ನೆಡೆಯನ್ನು ಕಾಣುತ್ತಾರೆ.

ನೀನಾಸಂ ರಂಗ ತಡದಿಂದ ಆರಂಭವಾದ ಇವರ ಕಲಾ ಬದುಕು ನಂತರ ಥಿಯೇಟರ್ ಸಮುರಾಯ್, ಥಿಯೇಟರ್ ಚಾವಡಿಂ ಥಿಯೇಟರ್ ಹಾಗೂ ತತ್ಕಾಲ್ ಥಿಯೇಟರ್‍ಗಳಲ್ಲಿ ಹಲವಾರು ವರ್ಷಗಳ ಕಾಲ ರಂಗಸೇವೆ ಸಲ್ಲಿಸುವ ಸಾಕಷ್ಟು ಅನುಭವ ಪಡೆಯುತ್ತಾರೆ. ಇವರು ಸುಮಾರು ಇಪ್ಪತ್ತೈದ್ದಕ್ಕೂ ಹೆಚ್ಚು ನಾಟಕಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಸಾವಿರಕ್ಕೂ ಅಧಿಕ ಪ್ರದರ್ಶನ ನೀಡುವ ಮೂಲಕ ಬಿಂದು ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಇವರು ಪ್ರದರ್ಶಿಸಿದ ಪ್ರಮುಖ ನಾಟಕಗಳೆಂದರೆ; ಉತ್ತರ ರಾಮ ಚರಿತೆ, ನಮ್ಮ ಸಂಸಾರ, ಗುಣಮುಖ, ತಾರ್ತುಫ್, ಕಾಲಂದುಗೆಯ ಕತೆ, ಹಸಿದ ಕಲ್ಲುಗಳು ಚಮ್ಮಾರನ ಚಾಲೂಕಿ ಹೆಂಡತಿ ಸಾಫಲ್ಯ, ದೂತ ಘಟತ್ಕಚ, ಹೇಗೆ ಬೇಕೋ ಹಾಗೆ, ಧರ್ಮಪರೀಕ್ಷೆ, ಗುತಿಲ್ಲದೆ ನಡೆದ ಘಳಿಗೆ, ಕೊಳ ಇತ್ಯಾದಿ ನಾಟಕಗಳಲ್ಲಿ ವಿಭಿನ್ನ ಪಾತ್ರಗಳನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಂದು ರಕ್ಷಿದಿಯವರು ರಂಗಭೂಮಿಯಲ್ಲಿ ತೋರಿದ ಪ್ರದರ್ಶನ ಕಲೆಯಿಂದಾಗಿ ಹಲವಾರು ಸಿನಿಮಾ ನಿರ್ದೇಶಕರ ಮೆಚ್ಚುಗೆಗೂ ಪಾತ್ರರಾಗಿದ್ದರು. ಹೀಗಾಗಿ ಇವರ ನಾಟಕಗಳನ್ನು ವೀಕ್ಷಿಸಿದ ಹಲವಾರು ನಿರ್ದೇಶಕರು ಹಾಗೂ ನಿರ್ಮಾಪಕರಿಂದ ಸಿನಿಮಾ ಲೋಕಕ್ಕೂ ಅವಕಾಶ ಲಭಿಸಿತು. ಸಿನಿಮಾ ಲೋಕದ ಪ್ರವೇಶಕ್ಕಾಗಿ ಇವರು ಬೆಂಗಳೂರಿಗೆ ತೆರಳಿದ ತರುವಾಯದಲ್ಲಿ ತಮ್ಮ ಸಮಾನ ಮನಸ್ಕರೊಂದಿಗೆ ಸೇರಿಕೊಂಡು ‘ಆಕ್ಟ್ ರಿಆಕ್ಟ್’ ಎಂಬ ರಂಗತಂಡವನ್ನು ಕಟ್ಟಿ ಬೆಳೆಸಿದ ಕೀರ್ತಿ ಇವರಿಗೂ ಸಲ್ಲುತ್ತದೆ.

ಬಿಂದು ಅವರಿಗೆ ಸಿಕ್ಕ ಮೊದಲ ಸಿನಿಮಾ ಅವಕಾಶವೆಂದರೆ ‘ಪಡ್ಡಾಯಿ’. ರಾಷ್ಟ್ರ ಪ್ರಶಸ್ತಿ ವಿಜೇತರಾದ ಅಭಯಸಿಂಹ ಅವರು ಬಿಂದು ಅವರ ನಟನೆಯನ್ನು ನೋಡಿ ತಾವು ಸಿನಿಮಾ ತಯಾರಿಯಲ್ಲಿದ್ದ ಪಡ್ಡಾಯಿ ಸಿನಿಮಾದ ಮುಖ್ಯ ಪಾತ್ರಕ್ಕೆ ಇವರೇ ಸೂಕ್ತವೆಂದು ಆಮಂತ್ರಣವನ್ನಿತ್ತರು. ತಮಗೆ ಸಿಕ್ಕ ಮೊದಲ ಅವಕಾಶವನ್ನು ತುಂಬು ಹೃದಯದಿಂದ ಸ್ವೀಕರಿಸಿದ ಇವರು ಆ ಸಿನಿಮಾಗೆ ಹಾಗೂ ತಮ್ಮನ್ನು ನಂಬಿ ಅವಕಾಶ ನೀಡಿದ ಸಿನಿಮಾ ನಿರ್ಮಾಣ ತಂಡಕ್ಕೆ ಅಭಾರಿಯಾಗಿ ನ್ಯಾಯ ಒದಗಿಸಲು ಅವಿರತ ಶ್ರಮಿಸಿದ್ದಾರೆ.

ಮೊದಲ ಸಿನಿಮಾದಲ್ಲಿ ಉತ್ತಮ ನಟನೆಯ ಮೂಲಕ ಪ್ರೇಕ್ಷಕರು ಹಾಗೂ ಸಿನಿಮಾ ಲೋಕದ ದಿಗ್ಗಜರಿಂದಲೂ ಪ್ರಶಂಸೆಗೆ ಒಳಗಾದರು. ನಂತರದಲ್ಲಿ ‘ಪ್ರವೇಶ’, ‘ಉತ್ತಮರು’, ‘ಶುಭಮಂಗಳ’, ‘ಗವಿಸಿದ್ಧ’ ಎಂಬ ಸಿನಿಮಾಗಳಲ್ಲಿ ನಟಿಸುವ ಅವಕಾಶ ಲಭಿಸಿದ್ದು, ಮತ್ತಷ್ಟು ಸಿನಿಮಾಗಳು ಇವರ ನಟನೆಗಾಗಿ ಮೀಸಲಾಗಿವೆ. ಇವರ ನಟನೆಯ ನಾಟಕ ಮತ್ತು ಸಿನಿಮಾಗಳು ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೆ ಹೊರ ರಾಜ್ಯಗಳಲ್ಲಿಯೂ ಪ್ರದರ್ಶನಗೊಂಡಿವೆ.

ಪಡ್ಡಾಯಿ ಸಿನಿಮಾವು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರದರ್ಶನಗೊಂಡಿರುವುದು ವಿಶೇಷವಾಗಿದೆ. ಹೈದರಬಾದಿನ ಅನ್ನಪೂರ್ಣೆಶ್ವರಿ ಇನ್ಸ್ಟಿಟ್ಯೂಟ್ ಹಾಗೂ ಹೆಸರಾಂತ ನಿರ್ದೇಶಕರಾದ ‘ಸತ್ಯಜಿತ್ ರೇ’ ಇನ್ಸ್ಟಿಟ್ಯೂಟ್‍ನ ವಿಶೇಷ ಕಿರುಚಿತ್ರ ಪ್ರಾಜೆಕ್ಟ್ ಮೂವಿಗಳಲ್ಲೂ ಬಿಂದು ಅವರು ತಮ್ಮ ನಟನೆಯನ್ನು ಪ್ರದರ್ಶಿಸಿರುವುದು ವಿಶೇಷವಾಗಿದೆ.

ಸಿನಿಮಾ ಲೋಕವೆಂದರೆ ಅದು ಅತೀ ಸೌಂದರ್ಯವಂತರಿಗೆ ಮಾತ್ರವೆಂಬ ನಂಬಿಕೆಯೊಂದಿದೆ. ಆದರೆ ನಟನೆಯ ಮೂಲಕ ಕಪ್ಪು ವರ್ಣದ ಸುಂದರಿಯೂ ಕೂಡ ಸಿನಿಮಾ ನಾಯಕಿಯಾಗಿ ಯಶಸ್ವಿಯಾಗಬಹುದು. ಹಾಗೆಯೇ ಒಂದು ಸಿನಿಮಾವನ್ನು ಕಪ್ಪು ಸುಂದರಿಯಿಂದ ಯಶಸ್ವಿಗೊಳಿಸಬಹುದು ಎಂಬುದಕ್ಕೆ ಇವರು ಮಾದರಿಯಾಗಿ ನಿಂತಿದ್ದಾರೆ.

ಯಾವುದೇ ಪಾತ್ರವನ್ನಾದರೂ ಯಶಸ್ವಿಯಾಗಿ ನಿಭಾಯಿಸುವೆ ಎನ್ನುವಷ್ಟು ರಂಗಭೂಮಿಯಲ್ಲಿ ಪರಿಣಿತಿ ಪಡೆದ ಬಿಂದು ಅವರು ನಾಟಕ ಹಾಗೂ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ತನ್ನ ಪ್ರತಿಭೆಯನ್ನು ಅಭಿವ್ಯಕ್ತಿಸಿದ್ದಾರೆ. ಹೀಗೆ ರಂಗಭೂಮಿಯ ಮೂಲಕ ಬಣ್ಣದ ಲೋಕಕ್ಕೆ ಪ್ರವೇಶ ಪಡೆದ ಬಿಂದು ರಕ್ಷಿದಿಯವರು ಸಿನಿಮಾ ಲೋಕದಲ್ಲಿಯೂ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಧಾರವಾಹಿ ಕ್ಷೇತ್ರದಲ್ಲಿಯೂ ತಮ್ಮ ಕಲೆಯನ್ನು ಪ್ರದರ್ಶಿಸಿದ್ದು, ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿ ದೇವಿ ಪಾತ್ರದ ಮೂಲಕ ಪ್ರೇಕ್ಷಕರ ಹೃದಯವೊಕ್ಕಿದ್ದಾರೆ. ಇವರು ಕೇವಲ ನಟನೆಗೆ ಮಾತ್ರ ಸೀಮಿತವಾಗದೆ ಹಲವಾರು ನಾಟಕಗಳು ಹಾಗೂ ಶಿಬಿರಗಳಿಗೆ ನಿರ್ದೇಶನ ಮಾಡಿದ್ದಾರೆ. ಆ ಮೂಲಕ ಅವಕಾಶ ಸಿಕ್ಕರೆ ಯಾವುದೇ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಬಲ್ಲೆ ಎಂಬ ಆತ್ಮಸ್ಥೈರ್ಯದೊಂದಿಗೆ ರಂಗಭೂಮಿ ಮತ್ತು ಸಿನಿಮಾ ಲೋಕದತ್ತ ದಾಪುಗಾಲು ಹಾಕುತ್ತಿದ್ದಾರೆ.

ಮನೆಯಲ್ಲಿನ ತಂದೆ ತಾಯಿಗಳ ಸಹಕಾರ, ತನ್ನ ಅಕ್ಕಂದಿರಾದ ಭವ್ಯ, ಭಾಮಿನಿ, ಬನಶ್ರೀ ಅವರ ಪ್ರೇರಣೆ, ಶಿಕ್ಷಕ ವರ್ಗದ ಪ್ರೋತ್ಸಾಹದ ನಡುವೆ ಅರಳಿದ ಬಿಂದು ಎಂಬ ಪ್ರತಿಭೆ ರಕ್ಷಿದಿ ಎಂಬ ಹಳ್ಳಿಯಿಂದ ಹೊರಟು ರಾಜ್ಯ ಮತ್ತು ಹೊರ ರಾಜ್ಯಗಳ ವಿವಿಧ ಭಾಗಗಳಲ್ಲಿ ತನ್ನ ಕಲಾ ಕಂಪನ್ನು ಸೂಸುತ್ತಿದೆ. ಸಮಾಜದ ವ್ಯಂಗ್ಯ ಮತ್ತು ಕುಹಕ ಮಾತುಗಳಿಗೆ ಅಂಜದೆ ಕಲಾ ಜಗತ್ತಿನಲ್ಲಿ ವಿಹರಿಸುತ್ತಿರುವ ಬಿಂದು ಅವರು ತಮ್ಮ ಸ್ವಗ್ರಾಮದಲ್ಲಿಯೇ ರಂಗ ತಂಡವೊಂದನ್ನು ರೂಪಿಸುವ ಹಂಬಲ ಹೊಂದಿದ್ದಾರೆ. ಇವರ ಈ ಬಣ್ಣದ ಲೋಕದ ಪಯಣವು ಸುಖಕರವಾಗಿರಲೆಂದು ಹಾಗೂ ಅವರ ಎಲ್ಲಾ ಕನಸುಗಳು ಯಶಸ್ವಿಯಾಗಲೆಂದು ಸುದ್ಧಿದಿನ ಆನ್‍ಲೈನ್ ಬಳಗದ ವತಿಯಿಂದ ಹಾರೈಸುತ್ತೇವೆ.

(ಡಾ.ಕೆ.ಎ.ಓಬಳೇಶ್
9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending