ದಿನದ ಸುದ್ದಿ
ದಾವಣಗೆರೆ ಹಕ್ಕಿಜ್ವರ : ಕೋಳಿಗಳನ್ನು ವೈಜ್ಞಾನಿಕವಾಗಿ ಕಿಲ್ ಮಾಡಬೇಕು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಹಕ್ಕಿಜ್ವರ ಕಂಡು ಬಂದ ಹರಿಹರ ತಾಲ್ಲೂಕಿನ ಬನ್ನಿಕೋಡು ಸೇರಿದಂತೆ ಸುತ್ತಮುತ್ತ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ 332 ಕೋಳಿಗಳನ್ನು ನಾಶಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಹಕ್ಕಿಜ್ವರ ನಿಯಂತ್ರಣ ಮತ್ತು ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನಾರೋಗ್ಯಕ್ಕೆ ಒಳಪಟ್ಟ ಕೋಳಿಗಳನ್ನು ವೈಜ್ಞಾನಿಕವಾಗಿ ಕಿಲ್ಲಿಂಗ್ ಮಾಡಬೇಕು. ಆದ್ದರಿಂದ ಅನಾರೋಗ್ಯಕ್ಕೆ ಒಳಪಟ್ಟ ಕೋಳಿಗಳನ್ನು ಸಾರ್ವಜನಿಕರು ಸ್ವಪ್ರೇರಣೆಯಿಂದ ನಾಶಮಾಡದೇ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಕರೆಮಾಡಿ ಮಾಹಿತಿ ನೀಡಬೇಕು ಎಂದರು.
ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ಸೂಚನೆ
ಆವರಗೆರೆಯ ಆರ್ಹೆಚ್ ಫಾರ್ಮ್ನ ಕೋಳಿಗಳಲ್ಲಿ ಹಕ್ಕಿಜ್ವರ ಬಂದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಫಾರ್ಮ್ಗಳ ಕೋಳಿಗಳ ಸ್ಯಾಂಪಲ್ನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕೆಂದು ಸೂಚಿಸಿದರು.
ಹಕ್ಕಿಜ್ವರ ಪೀಡಿತ ಪ್ರದೇಶ ಮತ್ತು ಸರ್ವೇಕ್ಷಣಾ ವಲಯದಲ್ಲಿರುವ ಯಾವದೇ ಪಕ್ಷಿಗಳು ಮತ್ತು ಕೋಳಿಯ ಮಾಂಸ ಹಾಗೂ ಮೊಟ್ಟೆಯಿಂದ ತಯಾರಿಸಿದ ಆಹಾರವನ್ನು ಸಾರ್ವಜನಿಕರು ಸೇವಿಸಬಾರದು ಮತ್ತು ಮಾರಾಟ ಮಾಡಬಾರದು ಎಂದರು.
ಸತ್ತ ಕೋಳಿಗಳನ್ನು ಅವೈಜ್ಞಾನಿಕವಾಗಿ ಸಾರ್ವಜನಿಕ ಅಥವಾ ಖಾಸಗಿ ಪ್ರದೇಶಗಳಲ್ಲಿ ಎಸೆಯಬಾರದು. ಒಂದು ವೇಳೆ ಹೀಗೆ ಎಸೆದರೆ ಸಂಬಂಧಿಸಿದ ವಾಹನಗಳ ಚಾಲಕರು, ಮಾಲೀಕರು ಇವರ ಮೇಲೆ ಸೂಕ್ತ ಜರುಗಿಸಲಾಗುವುದು. ಹಾಗೂ ಸಾರ್ವಜನಿಕರು ಹೀಗೆ ಮಾಡುವುದು ಕಂಡು ಬಂದಲ್ಲಿ ತಕ್ಷಣ ಸಹಾಯವಾಣಿ ಅಥವಾ ಇಲಾಖೆಗೆ ತಿಳಿಸಬೇಕೆಂದರು.
ದಾವಣಗೆರೆ ತಾಲ್ಲೂಕಿನ ಗ್ರಾಮಗಳು ಮತ್ತು ಹರಿಹರ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಗ್ರಾಮಗಳಿಂದ ಯಾವುದೇ ಕೋಳಿ ಮಾಂಸ ಮತ್ತು ಇನ್ನಿತರೆ ಪಕ್ಷಿಗಳ ಮಾಂಸ ಹಾಗೂ ಮೊಟ್ಟೆಗಳನ್ನು ಸಾರ್ವಜನಿಕರು ಸೇವಿಸಬಾರದು ಮತ್ತು ಸಾಗಾಣಿಕೆ ಮಾಡಬಾರದು ಎಂದು ಆದೇಶಿಸಲಾಗಿದೆ ಎಂದು ಹೇಳಿದರು.
ಹರಿಹರ ತಾಲ್ಲೂಕಿನ ಗ್ರಾಮಗಳು
ಬನ್ನಿಕೋಡು, ಬೇವಿನಹಳ್ಳಿ, ಸಾಲಕಟ್ಟೆ, ಮಿಟ್ಮಕಟ್ಟೆ, ದೇವರಬೆಳಕೆರೆ. ಕಡ್ಲೆಗೊಂದಿ, ಸಲಗನಹಳ್ಳಿ, ಕುಣೆಬೆಳೆಕೆರೆ, ಬೂದುಹಾಳ್, ಗುಳದಹಳ್ಳಿ, ಆದಾಪುರ, ನಿಟ್ಟೂರು, ಕುಂಬಳೂರು, ಜಿಗಳಿ, ಯಲವಟ್ಟಿ, ಲಕ್ಕಿಶೆಟ್ಟೆಹಳ್ಳಿ, ಕಮಾಲಪುರ, ಹೊಸಹಳ್ಳಿ, ಬಿಳಸನೂರು, ತಿಮ್ಲಾಪುರ, ರಾಜನಹಳ್ಳಿ, ಹಲಸಬಾಳು, ಹರಗನಹಳ್ಳಿ, ನಾಗೇನಹಳ್ಳಿ, ರಾಮತೀರ್ಥ, ರಾಯಪುರ, ಭಾನುವಳ್ಳಿ, ಬ್ಯಾಲದಹಳ್ಳಿ, ಯಕ್ಕೆಗೊಂದಿ, ನಂದಿತಾವರೆ, ಬೆಳ್ಳೂಡಿ, ಹನಗವಾಡಿ, ಷಂಶೀಪುರ, ಮಹಜೇನಹಳ್ಳಿ, ಶೇರಾಪುರ, ಹರಿಹರ, ದೊಗ್ಗಳ್ಳಿ, ಅಮರವತಿ, ಮಲ್ಲನಾಯ್ಕನಹಳ್ಳಿ, ಗುಳದಹಳ್ಳಿ, ಸಂಕ್ಲೀಪುರ ಮತ್ತು ಹರಿಹರ ಗ್ರಾಮಗಳು
ದಾವಣಗೆರೆ ತಾಲ್ಲೂಕಿನ ಗ್ರಾಮಗಳು
ದಾವಣಗೆರೆ, ದೊಡ್ಡಬಾತಿ, ಹಳೇಬಾತಿ, ನೀಲಾನಹಳ್ಳಿ, ಅಗಸನಕಟ್ಟೆ, ಆವರಗೊಳ್ಳ, ಕೋಡಿಹಳ್ಳಿ, ನಾಗನೂರು, ಜರೀಕಟ್ಟೆ, ಬಿಸಲೇರಿ, ಮುದಹದಡಿ, ಬಟ್ಲಕಟ್ಟೆ, ಬಲ್ಲೂರು, ಕನಗೊಂನಹಳ್ಳಿ, ಕುಂದುವಾಡ, ಶ್ಯಾಮನೂರು, ನಿಟ್ಟುವಳ್ಳಿ,ಮತ್ತು ಪಾಮೇನಹಳ್ಳಿ ಗ್ರಾಮಗಳಲ್ಲಿ ಕೋಳಿ ಮೊಟ್ಟೆ, ಮಾಂಸದ ಆಹಾರ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.
ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಎಎಸ್ಪಿ ರಾಜೀವ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಭಾಸ್ಕರ್ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಓ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಿಡಿಎಲ್ಆರ್ ರಾಮಾಂಜನೇಯ, ಆರ್ಟಿಓ ಎನ್.ಜೆ.ಬಣಕಾರ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಹರಿಹರ ನಗರಸಭೆ ಆಯುಕ್ತರಾದ ಲಕ್ಷ್ಮೀ, ದಾವಣಗೆರೆ ತಹಶೀಲ್ದಾರ್ ಸಂತೋಷ್ಕುಮಾರ್, ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

