ದಿನದ ಸುದ್ದಿ
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
ಸುದ್ದಿದಿನ, ಮಂಗಳೂರು : ಜಾತ್ಯತೀತತೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದು. ಕೋಮುವಾದ ಸಂವಿಧಾನ ವಿರೋಧಿಯಾದುದು. ಸಮಾಜದಲ್ಲಿ ಕೋಮುವಾದ ಜೀವಂತವಾಗಿರುವ ವರೆಗೆ ಶಾಂತಿ ನೆಲೆಸಲು ಸಾಧ್ಯವಿಲ್ಲ. ಮನುಷ್ಯ – ಮನುಷ್ಯನನ್ನು ದ್ವೇಷಿಸುವ ಕಡೆ ಪ್ರೀತಿ ಹುಟ್ಟಲು ಸಾಧ್ಯವೇ? ಸೌಹಾರ್ದ ಸಮಾಜ ನಿರ್ಮಾಣಕ್ಕೆ ವಿಶ್ವಮಾನವತ್ವವೇ ದಾರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ಮಂಗಳೂರಿನಲ್ಲಿ ಸೋಮವಾರ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್.ಎಸ್.ಎಸ್ ದೇಶಪ್ರೇಮಿ ಸಂಘಟನೆಯಲ್ಲ, ಅದೊಂದು ಕೋಮು ಸಂಘಟನೆ. ತನ್ನನ್ನು ತಾನು ದೇಶಪ್ರೇಮಿ ಸಂಘಟನೆ ಎಂದು ಜನರಿಗೆ ಸುಳ್ಳು ಹೇಳುತ್ತಿದೆ. ಅದು ದೇಶಪ್ರೇಮಿ ಸಂಘಟನೆ ಎಂಬುದು ನಿಜವೇ ಆಗಿದ್ದರೆ ಸ್ವಾತಂತ್ರ್ಯ ಚಳವಳಿಗೆ ತನ್ನ ಕೊಡುಗೆ ಏನು ಎಂದು ಹೇಳಲಿ ಎಂದು ಸವಾಲು ಹಾಕಿದರು.
ಇದನ್ನೂ ಓದಿ | ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳು ಪರೋಕ್ಷವಾಗಿ ಬಿಜೆಪಿಗೆ ಬೆಂಬಲವಾಗಿ ನಿಂತಿವೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ಪಕ್ಷ ಕಾಂಗ್ರೆಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಮುಸ್ಲಿಮರ ಮತ ಒಡೆದು, ಬಿಜೆಪಿಯ ಗೆಲುವಿಗೆ ನೆರವಾಯಿತು.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಮತ್ತು ಪಿ.ಎಫ್.ಐ ಕೈವಾಡವಿದೆ ಅಂತ ಮುಖ್ಯಮಂತ್ರಿಗಳಾದಿಯಾಗಿ ಹಲವು ಸಚಿವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ವಿಚಾರ ಸತ್ಯವಾಗಿದ್ದು, ಸರ್ಕಾರದ ಬಳಿ ಪುರಾವೆಗಳಿದ್ದರೆ ಆ ಸಂಘಟನೆಗಳನ್ನು ನಿಷೇಧಿಸಬೇಕಿತ್ತು. ಇದುವರೆಗೆ ಯಾಕೆ ನಿಷೇಧಿಸಿಲ್ಲ? ಎಂದು ಪ್ರಶ್ನಿಸಿದರು
ಗೋಮಾಂಸ ಸೇವೆನೆಗೆ ಸಂಬಂಧಿಸಿದ ಬಿಜೆಪಿಯ ನಿಲುವುಗಳೇ ದ್ವಂದ್ವದಿಂದ ಕೂಡಿವೆ. ಅವರ ಪ್ರಕಾರ ಇಲ್ಲಿಂದ ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ನಿಂದ ಬರುವ ಗೋಮಾಂಸವನ್ನು ಇಲ್ಲಿ ತಿನ್ನಬಹುದಂತೆ. ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು? ಎಂದು ಮತ್ತೊಮ್ಮೆ ಬಿಜೆಪಿಗರಿಗೆ ಪ್ರಶ್ನೆಯಿಟ್ಟರು.
ಗೋಮಾಂಸ ಸೇವೆನೆಗೆ ಸಂಬಂಧಿಸಿದ ಬಿಜೆಪಿಯ ನಿಲುವುಗಳೇ ದ್ವಂದ್ವದಿಂದ ಕೂಡಿವೆ. ಅವರ ಪ್ರಕಾರ ಇಲ್ಲಿಂದ ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ನಿಂದ ಬರುವ ಗೋಮಾಂಸವನ್ನು ಇಲ್ಲಿ ತಿನ್ನಬಹುದಂತೆ. ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು? 6/6#ಭಾವೈಕ್ಯತಾ_ಸಮಾವೇಶ #Mangalore
— Siddaramaiah (@siddaramaiah) February 22, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


