Connect with us

ರಾಜಕೀಯ

ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ‌ ‘ಜಿ.ಎಂ. ಸಿದ್ದೇಶ್ವರ್‌’ ಸಂದರ್ಶನ : ಮಿಸ್ ಮಾಡ್ದೆ ಓದಿ..!

Published

on

  • ಸಂದರ್ಶನ: ಗಣೇಶ್ ಕಮ್ಲಾಪುರ

ಅಲೆ, ಅನುಕಂಪ, ಆಶೀರ್ವಾದದಿಂದ ಗೆದ್ದಿಲ್ಲ, ಅಭಿವೃದ್ಧಿಯಿಂದ ಗೆದ್ದಿದ್ದೇನೆ
ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲವಿಗೆ ಶ್ರೀರಕ್ಷೆ
ಮೈತ್ರಿಪಕ್ಷಕ್ಕೆ ಚೌಕಿದಾರ್ ಮಣಿಯಲ್ಲ
ಮೂರು ಬಾರಿ ಸಂಸದನಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸುತ್ತಿದ್ದು, ನನ್ನ ಅಭಿವೃದ್ಧಿ ಕಾರ್ಯಗಳು ಗೆಲವಿಗೆ ಕಾರಣವಾಗಿವೆಯೇ ಹೊರತು ನನ್ನ ರಾಜಕೀಯ ವಿರೋಧಿಗಳು ಹೇಳುವಂತೆ ಯಾವುದೇ ಅಲೆ, ಅನುಕಂಪ, ಆಶೀರ್ವಾದದಿಂದ ನಾನು ಗೆದ್ದಿಲ್ಲ. ಸಂಸತ್ತಿನ ಒಳ, ಹೊರಗೆ ಜನರ ಸಮಸ್ಯೆ, ಸಂಕಷ್ಟದ ಕುರಿತು ದನಿ ಎತ್ತುವ ಮೂಲಕ ಕಳೆದ 5 ವರ್ಷದಲ್ಲಿ ಸುಮಾರು 10 ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿಪಡಿಸಿ ಜನದನಿಯಾಗಿದ್ದೇನೆ. ಈ ಬಾರಿಯೂ ನಾನು ಮಾಡಿದ ಅಭಿವೃದ್ಧಿ, ಜನಪರ ಕಾರ್ಯಗಳೇ ಗೆಲವಿಗೆ ಕಾರಣವಾಗಲಿವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸುತ್ತಾರೆ ಮೂರು ಬಾರಿ ಸಂಸದರಾಗಿ ನಾಲ್ಕನೇ ಬಾರಿ ಬಿಜೆಪಿ ದಾವಣಗೆರೆ ಲೋಕಸಭಾ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಜಿ.ಎಂ. ಸಿದ್ದೇಶ್ವರ್. ಈ ಕುರಿತು ಅವರು “ಸುದ್ದಿದಿನ”ಕ್ಕೆ ನೀಡಿದ ಸಂದರ್ಶನ ಪೂರ್ಣಪಾಠ ಇಲ್ಲಿದೆ.

ಚುನಾವಣಾ ಪ್ರಚಾರದ ಭರಾಟೆ ಹೇಗಿದೆ?

ಚುನಾವಣಾ ಘೋಷಣೆಗೂ ಮುನ್ನವೇ ಶೇ. 60ರಷ್ಟು ಭಾಗ ಜಿಲ್ಲೆಯ ತಾಲೂಕು, ಗ್ರಾಮಗಳನ್ನು ಸುತ್ತಿದ್ದೇನೆ. ಈಗಾಗಲೇ ಹೊನ್ನಾಳಿ ತಾಲೂಕಿನ 80 ಹಳ್ಳಿಗಳು, ಮಾಯಕೊಂಡ ಕ್ಷೇತ್ರದ 60 ಹಳ್ಳಿಗಳು, ಹರಪನಹಳ್ಳಿ ಕ್ಷೇತ್ರದಲ್ಲಿ ಶೇ. 75ರಷ್ಟು ಭಾಗ ಹಾಗೂ ಹರಿಹರ, ಜಗಳೂರಿನ ನೂರಾರು ಹಳ್ಳಿಗಳಿಗೆ ತಲುಪಿದ್ದೇನೆ. ಇನ್ನೊಮ್ಮೆ ಎಲ್ಲಾ ತಾಲೂಕು, ಗ್ರಾಮಕ್ಕೆ ತೆರಳಲಿದ್ದೇನೆ. ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಭದ್ರ ಆಡಳಿತ, ದಿಟ್ಟ ನಿರ್ಧಾರ ಕೈಗೊಳ್ಳುವಂತಹ ನಾಯಕತ್ವವನ್ನು ಜನರು ಪ್ರಧಾನಿ ಮೋದಿ ಅವರಲ್ಲಿ ಕಂಡಿದ್ದು, ಈ ಬಾರಿಯೂ ಕಮಲದ ಕೈಹಿಡಿಯಲು ಜನತೆ ನಿರ್ಧರಿಸಿಯಾಗಿದೆ.

3 ಬಾರಿ ಸಂಸದರಾಗಿ ಜಿಲ್ಲೆಗೆ ನಿಮ್ಮ ಕೊಡುಗೆ ಏನು?

ಕಳೆದ 5 ವರ್ಷದ ಅವಧಿಯಲ್ಲಿಯೇ ಕೇಂದ್ರದಿಂದ ಜಿಲ್ಲೆಗೆ ನಾನು ತಂದಿರುವ ಅನುದಾನ ಬರೋಬ್ಬರಿ 10 ಸಾವಿರ ಕೋಟಿ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ರೇಲ್ವೆ ಅಭಿವೃದ್ಧಿ, ಸ್ಮಾರ್ಟ್‍ಸಿಟಿ, ತುಂಗಾನಾಲಾ ಆಧುನೀಕರಣ, ಅಮೃತ್ ಯೋಜನೆ, ಸಂಸದರ ಸ್ಥಳೀಯಾಭಿವೃದ್ಧಿ, ಇಎಸ್‍ಐ ಆಸ್ಪತ್ರೆ ಮೇಲ್ದರ್ಜೆಗೆ ಯೋಜನೆ ಸೇರಿದಂತೆ ನೂರಾರು ಯೋಜನೆ ಜಿಲ್ಲೆಗೆ ಒತ್ತುತಂದಿದ್ದೇನೆ. ಇದರಲ್ಲಿ ಕೆಲ ಯೋಜನೆಗಳು ಪೂರ್ಣಗೊಂಡಿದ್ದು, ಮತ್ತೊಂದಿಷ್ಟು ಪ್ರಗತಿಯಲ್ಲಿವೆ. ಅಲ್ಲದೆ, ಜಿಲ್ಲೆಯ ಕಟ್ಟಕಡೆ ಗ್ರಾಮ ತಲುಪಿ, ಅಲ್ಲಿನ ಕಷ್ಟಕಾರ್ಪಣ್ಯ ಅರಿತಿದ್ದೇನೆ. ತಪ್ಪದೇ ನನ್ನ ಕಚೇರಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಿ ಸಾರ್ವಜನಿಕರಿಂದ ಆಹವಾಲು ಸ್ವೀಕಾರ, ಸಮಸ್ಯೆ ಶೀಘ್ರ ಪರಿಹಾರ ಕಾರ್ಯ ನಡೆಸುತ್ತಾ ಬಂದಿದ್ದೇನೆ.

ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ನಿಮಗೆ ಗೆಲವು ಕಷ್ಟ ಸಾಧ್ಯವೇ?

ಯಾವ ಮಹಾಘಟಬಂದನ್ ಏರ್ಪಟ್ಟರೂ, ಎಷ್ಟೇ ಎದುರಾಳಿಗಳು ಹುಟ್ಟಿಕೊಂಡರೂ ದೇಶದಲ್ಲಿ ಬಿಜೆಪಿ ಈ ಬಾರಿ 300ಕ್ಕೂ ಅಧಿಕ, ರಾಜ್ಯದಲ್ಲಿ 22ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಮೋದಿ ಅಲೆ ಸುನಾಮಿಯಂತಿದೆ. ನಮ್ಮ ಜಿಲ್ಲೆಯಲ್ಲಿ ಈ ಬಾರಿ 1.20 ಲಕ್ಷ ನೂತನ ಮತದಾರರಲ್ಲಿ ಶೇ. 80ರಷ್ಟು ಯುವಮತದಾರರು ಮೋದಿ ಸುಭದ್ರ ಆಡಳಿತ, ದೇಶದ ಭದ್ರತೆ ವಿಷಯದಲ್ಲಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರ ಬೆಂಬಲಿಸಿದ್ದಾರೆ. ಆದ್ದರಿಂದ ಯಾರು ಎಷ್ಟೇ ಒಗ್ಗಟ್ಟಾದರೂ ಬಿಜೆಪಿ ಚೌಕಿದಾರ್‍ರನ್ನು ಮಣಿಸಲು ಸಾಧ್ಯವೇ ಇಲ್ಲ. ಇನ್ನು, ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಗೆಲವಿಗೆ ಯಾವುದೇ ತೊಂದರೆ ಇಲ್ಲ. ಮೂರು ಬಾರಿ ಸಂಸದನಾಗಿ ಮಾಡಿರುವ ಅಭಿವೃದ್ಧಿ ಕಾರ್ಯ ನನ್ನ ಗೆಲವಿನ ಅಂತರವನ್ನು ಈ ಬಾರಿ ಮತ್ತಷ್ಟು ಹೆಚ್ಚಿಸಲಿವೆ.

ನಿಮ್ಮ ಎದುರಾಳಿಯ ನಕಾರಾತ್ಮಕ ಅಂಶಗಳು ಗೆಲವಿಗೆ ಸಹಾಯಕವೇ?

ಖಂಡಿತಾ ಇಲ್ಲ. ಎದುರಾಳಿ ಎಷ್ಟೇ ಪ್ರಭಲ ಅಥವಾ ದುರ್ಬಲನಾಗಿದ್ದರೂ ಅದು ನನಗೆ ಲೆಕ್ಕಕ್ಕಿಲ್ಲ. ನಾನು ಯಾವುದೇ ಯಾರದ್ದೋ ಅಲೆ, ಮತ್ಯಾರದ್ದೋ ಅನುಕಂಪ, ಇನ್ಯಾರದ್ದೋ ಆಶೀರ್ವಾದದಿಂದಲೇ ಗೆದ್ದುಬಂದಿಲ್ಲ. ನಾನು ಜನತೆಯ ಆಶೀರ್ವಾದಿಂದ ಗೆದ್ದಿದ್ದೇನೆ. ನಾನು ಮತ್ತು ನಮ್ಮ ಬಿಜೆಪಿ ಪಕ್ಷ ಮಾಡಿದ ಅಭಿವೃದ್ಧಿ ಕಾರ್ಯಗಳು, ಜನಸಾಮಾನ್ಯರಿಗೆ ತಕ್ಷಣಕ್ಕೆ ಸ್ಪಂದಿಸುವ, ಅವರ ಸಮಸ್ಯೆಗೆ ಮುಕ್ತಿ ಕಾಣಿಸುವಂತ ಜನಪರ ಖಾಳಜಿ, ನಿಲುವುಗಳು, ದಿಟ್ಟ ನಿರ್ಧಾರ ಗೆಲವಿಗೆ ಸಹಾಯಕವಾಗಿವೆಯೇ ವಿನಾ ಎದುರಾಳಿ ಸ್ಪರ್ಧಿಗಳ ನಕಾರಾತ್ಮಕ ಅಂಶ, ವೈಫಲ್ಯ ಕಾರಣವಲ್ಲ. ಈ ಬಾರಿಯು ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳು ನಮ್ಮೊಂದಿಗೆ ಪೈಪೋಟಿ ನಡೆಸಲು ಸಜ್ಜಾಗಿವೆ. ಆದರೆ, ನಾನು ಮಾಡಿದ ಅಭಿವೃದ್ಧಿ ಕಾರ್ಯ ನನ್ನ ಕೈ ಹಿಡಿಯಲಿದ್ದು, ಗೆಲವು ನಿಶ್ಚಿತ.

ಗೆದ್ದರೆ, ಮುಂದಿನ ನಿಮ್ಮ ಯೋಜನೆಗಳೇನು?

ಗೆದ್ದರೇ. ಎಂಬುದು ಬೇಡ, ಗೆದ್ದೆ ಗೆಲ್ಲುವೆ. ಮುಖ್ಯವಾಗಿ, 3 ದಶಕಗಳ ಬೇಡಿಕೆಯಾದ ದಾವಣಗೆರೆಯ ಅಶೋಕ ಥೇಟರ್ ಮೇಲ್ಸೆತುವೆ ನಿರ್ಮಾಣಕ್ಕೆ ಮುಂದಾಗುವೆ. 2014ರಲ್ಲೇ ಬಜೆಟ್‍ನಲ್ಲಿ 35 ಕೋಟಿ ಮೇಲ್ಸೇತುವೆ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಆದರೆ, ರಾಜ್ಯ ಸರ್ಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ, ಅಸಹಕಾರದಿಂದ ನೆನೆಗುದಿಗೆ ಬಿದ್ದಿದೆ. ಲೋಕಾ ಚುನಾವಣೆ ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಮತ್ತೆ ಅಧಿಕಾರಕ್ಕೇರಿ, ಕೇಂದ್ರ, ರಾಜ್ಯಗಳೆರೆಡು ಬಿಜೆಪಿ ಅಧಿಕಾರದಲ್ಲಿರುವುದರಿಂದ ಮೇಲ್ಸೆತುವ ಖಂಡಿತಾ ಪೂರ್ಣಗೊಳ್ಳುತ್ತದೆ. ಅಲ್ಲದೆ, ಜಿಲ್ಲೆಯಲ್ಲಿ ಕಾರ್ಖಾನೆಗಳ ಸಂಖ್ಯೆ ಕಡಿಮೆ ಇದೆ ಎಂಬ ಕೊರಗು ಹೋಗಲಾಡಿಸುವ ನಿಟ್ಟಿನಲ್ಲಿ ರಾಸಾಯನಿಕ ಕಾರ್ಖಾನೆಗಳ ಘಟಕಗಳ ಅಭಿವೃದ್ಧಿ, ದೇಶದಲ್ಲಿಯೇ ಅತಿದೊಡ್ಡದಾದ 2ಜಿ ಎಥೆನಾಲ್ ಘಟಕ 2 ಲಕ್ಷ ಮಿಲಿಯನ್ ಟನ್ ಸಾಮಾಥ್ರ್ಯವಿದ್ದು, ಇದರಿಂದ ಪ್ರತ್ಯಕ್ಷ, ಪರೋಕ್ಷವಾಗಿ ಸಾವಿರಾರು ಜನರಿಗೆ ಉದ್ಯೋಗವಕಾಶ ಸಿಗಲಿದೆ. ಅಲ್ಲದೆ, ಶೀಘ್ರವೇ ರಾಷ್ಟ್ರೀಯ ಹೆದ್ದಾರಿ ಮುಂದಿನ ವರ್ಷದೊಳಗೆ ಪೂರ್ಣಗೊಳಿಸುವುದು ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯತ್ನಿಸುವೆ.

ದಿನದ ಸುದ್ದಿ

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

Published

on

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.

35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ2 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ2 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ3 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ2 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending