ರಾಜಕೀಯ
ಬಿಜೆಪಿ, ಕಾಂಗ್ರೆಸ್ ಮತ್ತು ಹಿಂದುತ್ವ..!
ಕಾಂಗ್ರೆಸ್ ಮೃದು ಹಿಂದುತ್ವವಾದಿಯೇ?- ಹೌದು, ಕಾಂಗ್ರೆಸ್ ಜಾತಿವಾದಿಯೇ?- ಹೌದು. ಕಾಂಗ್ರೆಸ್ ಭ್ರಷ್ಟ ಪಕ್ಷವೇ?- ಹೌದು. ಆದರೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವುದನ್ನು ನಾನು ನಾನು ಒಪ್ಪುವುದಿಲ್ಲ. ಬಿಜೆಪಿ, ಮತ್ತು ಅದರ ಜುಟ್ಟು ಹಿಡಿದಿರುವ ಆರೆಸ್ಸೆಸ್ ಧರಿಸಿರುವುದು ಸಾಂಸ್ಕೃತಿಕ ಮುಖವಾಡ, ಅದರ ಒಳಗಿರುವ ನೈಜಮುಖ ಜನಾಂಗವಾದಿ ಫ್ಯಾಸಿಸಂ.
ಅಂದರೆ, ಈ ದೇಶದ ಸಂಪೂರ್ಣ ಹಿಡಿತ ಕೆಲವೇ ಕೆಲವು ಜನಾಂಗಗಳಿಗೆ/ವರ್ಗಗಳಿಗೆ/ಜಾತಿಗಳಿಗಳ ಕೈಯಲ್ಲಿ ಇರಬೇಕೆಂದು ಬಯಸಿ ಅದನ್ನು ಜಾರಿಗೊಳಿಸಲು ನೂರು ವರ್ಷಗಳ ಹಿಂದೆಯೇ (1921ರಲ್ಲಿ) ಮೂಂಜೆಯನ್ನು ಜರ್ಮನಿಗೆ ಕಳಿಸಿ, ಅದೇ ಪ್ರಕಾರವಾಗಿ ಸಂಘಟನೆ ಕಟ್ಟಿದ ಇತಿಹಾಸ ಅದಕ್ಕಿದೆ. ಈ ಮೇಲಿನ ಉದ್ದೇಶಕ್ಕೆ ಆರೆಸ್ಸೆಸ್ – ಬಿಜೆಪಿಗೆ ತಡೆಯುಂಟು ಮಾಡುತ್ತಿರುವುದೇ 1950ರಲ್ಲಿ ಈ ದೇಶ ಒಪ್ಪಿಕೊಂಡ ಸಂವಿಧಾನ.
ಇದಕ್ಕೆ ಹೋಲಿಸಿದರೆ ಕಾಂಗ್ರೆಸ್ ಗೆ ಮೇಲಿನ ಯಾವ ಹಿಡನ್ ಅಜೆಂಡಾವಾಗಲೀ, ಮುಖವಾಡವಾಗಲೀ ಇಲ್ಲ. ದೇಶದ ಸಂವಿಧಾನವನ್ನು ತಿದ್ದುಪಡಿ ಮೂಲಕ ಬಂಡವಾಳಿಗರ ಲಾಭಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಬಯಸುತ್ತದೆಯೇ ಹೊರತು ಬಿಜೆಪಿಯಂತೆ ಒಂದು ಹೊಸ ಜನಾಂಗೀಯ ನಾಗರಿಕತೆ ಕಟ್ಟಲು ಸಂವಿಧಾನವನ್ನೇ ಬುಡಮೇಲು ಮಾಡುವ ಯಾವ ಉದ್ದೇಶಗಳೂ ಕಾಂಗ್ರೆಸ್ ಗೆ ಇಲ್ಲ.
ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಂಡು ಇತರೆ ಎಷ್ಟೋ ಪಕ್ಷಗಳನ್ನು ಉಳಿಸಬಹುದಿತ್ತು, ಬೆಳೆಸಬಹುದಿತ್ತು. ಆದರೆ ಭಾರತದ ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಜೊತೆ ಸೇರಿದ ಮಿತ್ರಪಕ್ಷಗಳು ಬಹಳ ಸಲ ವಂಚನೆಗೊಳಗಾಗಿವೆ. ಇದೆಲ್ಲಾ ನಿಜವೇ ಆದರೂ ಇದಾವುದೂ ಸಹ ಬಿಜೆಪಿ, ಆರೆಸ್ಸೆಸ್ನ ಹಿಡನ್ ಅಜೆಂಡಾಕ್ಕೆ ಸರಿಸಾಟಿಯಲ್ಲ. ಗುದ್ದಾಡಿಕೊಂಡೇ ಕಾಂಗ್ರೆಸನ್ನು ಮಣಿಸಬಹುದು. ಆದರೆ ಒಮ್ಮೆ ಇಡೀ ದೇಶದ ಸಂಪೂರ್ಣ ಜುಟ್ಟು ಆರೆಸ್ಸೆಸ್ ಕೈಗೆ ಸಿಕ್ಕಿದರೆ ದೇಶದ ಅಳಿದುಳಿತ ಸಂಸ್ಥೆಗಳೂ ಸರ್ವನಾಶವಾಗುತ್ತವೆ. ಅದು ತರಲಿರುವ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ನೀತಿಗಳು ದೇಶದ ಬಹುಜನರ ಪಾಲಿಗೆ ಮರಣಶಾಸನವಾಗಿರುತ್ತವೆ. ಒಂದು ಅತ್ಯಂತ ಅನಾಗರಿಕವಾದ ಗುಲಾಮಗಿರಿ ವ್ಯವಸ್ಥೆ ಬಂದೊದಗಲಿದೆ.
ರಾಜಕೀಯ ಭಾಷೆಯಲ್ಲಿ ಇದನ್ನು ಫ್ಯಾಸಿಸಂ ಎಂದು ಹೇಳುತ್ತೇವಾದರೂ ಆರೆಸ್ಸೆಸ್ ಭಾರತದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಫ್ಯಾಸಿಸಂ ಸ್ವರೂಪ ಟೋಟಲಿ ಬೇರೆಯದೇ ರೀತಿಯದ್ದು. ಹಿಟ್ಲರ್, ಮುಸಲೋನಿ ಯಾರೂ ಅದರ ಎದುರು ನಿಲ್ಲುವುದಿಲ್ಲ. ಇಸ್ರೇಲ್ ಕೂಡಾ ನಾಚಿಕೊಳ್ಳುತ್ತದೆ.
ನಿಮಗೆ ತಿಳಿದಿರಲಿ ಆರೆಸ್ಸೆಸ್ ಹಿಂದುತ್ವದ ಮೂಲಕ ಹೊಸ ನಾಗರಿಕತೆಯೊಂದನ್ನು ನಿಜಗೊಳಿಸುವ ಮಾತಾಡುತ್ತಿದೆ. ಏನದು ಆರೆಸ್ಸೆಸ್ ತರಲು ಬಯಸಿರುವು ನಾಗರಿಕತೆ? ಕಾಂಗ್ರೆಸ್, ಕಮ್ಯುನಿಷ್ಟ್, ಬಿಎಸ್ ಪಿ ಯಾರೆಂದರೆ ಯಾರೂ ಈ ‘ನಾಗರಿಕತೆ’ ಹೆಸರಿನ ಅನಾಗರಿಕೆತೆ ಏನು ಎಂಬ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಂಡಿಲ್ಲ. ಆರೆಸ್ಸೆಸ್ ತರಬಯಸಿರುವು ಆ ನಾಗರಿಕತೆಯಲ್ಲಿ ಇಂದು ಪ್ರತಿಪಕ್ಷಗಳೆಂದು ಭಾವಿಸಿಕೊಂಡಿರುವ ಯಾವ ಪಕ್ಷಗಳೂ ಕನಿಷ್ಠ ಅಸ್ತಿತ್ವವನ್ನೂ ಹೊಂದಿರುವುದಿಲ್ಲ, ಸಂವಿಧಾನದ ಪೀಠಿಕೆಯನ್ನು ಬಲಿಪೀಠಕ್ಕೆ ಅರ್ಪಿಸಲಾಗಿರುತ್ತದೆ, ಡೆಮಕ್ರಸಿಯ ಯಾವ ಉದಾರತೆಯೂ ಉಸಿರಿಟ್ಟುಕೊಂಡಿರುವುದಿಲ್ಲ, ಸಂಸ್ಕೃತಿ ಸಂಪೂರ್ಣ ಏಕರೂಪಿಯಾಗಿರುತ್ತದೆ, ಸಮಾಜ ಪಿರಮಿಡ್ಡಾಗಿರುತ್ತದೆ, ಪ್ರಭುತ್ವ ಬಿಗಿಯಾಗಿರುತ್ತದೆ. ಭಿನ್ನ-ಎನಿಸುವ ಎಲ್ಲವನ್ನೂ ನಿರ್ದಯವಾಗಿ ಹತ್ತಿಕ್ಕಲಾಗುತ್ತದೆ.
ಇಂತಹ ಒಂದು ‘ಹೊಸ ನಾಗರಿಕತೆಯ’ ಕಲ್ಪನೆ ಕಾಂಗ್ರೆಸ್ಸಿಗೆ ಇಲ್ಲವೆಂದೇ ನನ್ನ ಅನಿಸಿಕೆ. ಈ ಮೇಲೆ ಹೇಳಿದ ಆರೆಸ್ಸೆಸ್ಸಿನ ಅಜೆಂಡಾಗಳಿಗೆ ಎಷ್ಟೋ ಸಲ ಕಾಂಗ್ರೆಸ್ ಪೂರಕವಾಗಿಯೇ ವರ್ತಿಸಿದೆ ಎಂಬುದೂ ನಿಜ. ಆದರೆ ಅದರ ಪರಿಣಾಮವಾಗಿಯೇ ಇಂದು ಅದು ಹೀನಾಯ ಸ್ಥಿತಿ ಅನುಭವಿಸುತ್ತಿರುವುದು.
ದುರಂತವೆಂದರೆ ಕಾಂಗ್ರೆಸನ್ನೂ ಒಳಗೊಂಡಂತೆ ಎಲ್ಲಾ ರಾಜಕೀಯ ಪಕ್ಷಗಳು ತಂತಮ್ಮ ಅಸ್ತಿತ್ವವೊಂದನ್ನೇ ಧ್ಯೇಯವಾಗಿಟ್ಟುಕೊಂಡು ಯೋಚಿಸುತ್ತಿವೆಯೇ ವಿನಃ ಈ ದೇಶದ ಭವಿಷ್ಯದ ಬಗ್ಗೆ ಅವುಗಳ ಬದ್ಧತೆಯ ಬಗ್ಗೆ ಅನುಮಾನ ಕಾಡುತ್ತಿದೆ.
ಹೆಚ್ಚಿಲ್ಲ ಒಂದೇ ತಿಂಗಳು ಬಾಕಿ ಇದೆ. ಒಂದೋ ಈ ಪಕ್ಷಗಳ ವಿವೇಕ ಈ ದೇಶವನ್ನು ಉಳಿಸಬೇಕು ಇಲ್ಲವೇ ಈ ದೇಶದ ಹಳ್ಳಿ,ಸ್ಲಂಗಳಲ್ಲಿ ವಾಸಿಸುವ ಜನಕೋಟಿ, ಬದುಕಿನ ವಾಸ್ತವಗಳ ಅರಿವಿರುವ ಯುವಜನತೆ ಯಾವ ಪ್ರಲೋಭನೆಗೂ ಒಳಗಾಗದೇ ತೋರುವ ಎಚ್ಚರ ಈ ದೇಶವನ್ನು ಉಳಿಸಬೇಕು. ಎರಡೂ ಕೈ ಕೊಟ್ಟರೆ ಭಾರತದ ಪ್ರಜಾಪ್ರಭುತ್ವದ ಚರಮಗೀತೆ ಹಾಡೋಣ..ಸಿದ್ಧರಾಗಿ..!
–ಹರ್ಷಕುಮಾರ್ ಕುಗ್ವೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ