ರಾಜಕೀಯ
ಬಿಜೆಪಿ, ಕಾಂಗ್ರೆಸ್, ಆರೆಸ್ಸೆಸ್ ನ ಎರಡು ಮುಖಗಳು ಮತ್ತು ಮುಸ್ಲಿಮರು
ಭಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಜನರಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಭೀತಿಯ ಗಂಟೆ ಬಡಿದು ರಾಜಕೀಯ ನಡೆಸುತ್ತಿದೆ.
ಧರ್ಮ ರಾಜಕೀಯ, ಜಾತಿ ರಾಜಕೀಯ, ಹೆಣ ರಾಜಕೀಯ, ಹತ್ಯಾ ರಾಜಕಾರಣಗಳಿಗೆ ರಾಜ್ಯದಲ್ಲಿ ಕೊಂಚ ತೆರೆ ಬಿದ್ದರೆ, ಇತ್ತ ಭೀತಿಯ ರಾಜಕೀಯ ಟ್ರೆಂಡ್ ಪ್ರಾರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಹರಿದ ರಕ್ತಗಳಿಗೆ- ಕಾಂಗ್ರೆಸ್ ಬಿಜೆಪಿಯೆಡೆಗೆ, ಬಿಜೆಪಿ ಕಾಂಗ್ರೆಸ್ ನೆಡೆಗೆ ಬೊಟ್ಟು ಮಾಡಿದರೆ, ಇವೆರಡರ ಮಧ್ಯೆ ಇರುವ ಆರೆಸ್ಸೆಸ್ ಮಾತ್ರ ಚುನಾವಣೆಗೆ ಬೇಕಾದ ಎಲ್ಲಾ ಪೂರ್ವ ಬೆಂಬಲವನ್ನು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಡಿ ಮುಗಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆರೆಸ್ಸೆಸ್ ನ ಎರಡು ಮುಖಗಳು. ಬಿಜೆಪಿಯವರು ಮುಸ್ಲಿಮರನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಸ್ಲಿಮರ ಅಧಃಪತನಕ್ಕೆ ದೇಶದಲ್ಲಿ ಕಾರಣವಾಗಿದೆ. ಈ ಬಗ್ಗೆ ಅವಲೋಕಿಸಿದರೆ ಬಿಜೆಪಿಗಿಂತಲೂ ಕಾಂಗ್ರೆಸ್ ಮುಸಲ್ಮಾನರಿಗೆ ಅತ್ಯಂತ ಅಪಾಯಕಾರಿ.
ಬಿಜೆಪಿ ಮತ್ತು ಕಾಂಗ್ರೆಸ್ ಮುಸ್ಲಿಮರನ್ನು ಇಂದು ಪುಟ್ಬಾಲ್ ರೀತಿಯಲ್ಲಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ಗೆ ಮುಸ್ಲಿಮರು ಕೇವಲ ಮತಬ್ಯಾಂಕ್ ಅಷ್ಟೆ. ಇಂದು ದೇಶದ ಮುಸ್ಲಿಮರಲ್ಲಿ ಬಿಜೆಪಿ, ಆರೆಸ್ಸೆಸನ್ನು ತೋರಿಸಿ ಭಯವನ್ನು ತೋರಿಸಿ, ಭೀತಿಯನ್ನು ಉಂಟುಮಾಡಿ ಹೊಡೆದು ಆಳುವ ರಾಜಕೀಯ ಕಾಂಗ್ರೆಸ್ ಮಾಡುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದಲ್ಲಿ ಮುಸ್ಲಿಮರನ್ನು ಇಬ್ಭಾಗಗೊಳಿಸಿ, ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣವಾಯಿತು. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ದೇಶದಲ್ಲಿ ಹಿಂದೂ- ಮುಸ್ಲಿಮರ ಮಧ್ಯೆ ಭೀತಿ ಸೃಷ್ಟಿಸಿ ಆಂತರಿಕ ಅಭದ್ರತೆಯನ್ನು ಸದ್ದಿಲ್ಲದೆ ಮಾಡುತ್ತಿದೆ ಎಂದರೆ ತಪ್ಪಾಗಲಾರದು.
ಮುಸ್ಲಿಮರ ಅಸುರಕ್ಷೆತೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್. ನಿಜವಾಗಿಯೂ ಜನರಲ್ಲಿ ಭಯವನ್ನು, ಭೀತಿಯನ್ನು ಉಂಟುಮಾಡಿದೆ. ಬಿಜೆಪಿಯನ್ನು ತೋರಿಸಿ, ರಾಜಕೀಯ ಲಾಭ ಪಡೆಯುವುದೇ ಕಾಂಗ್ರೆಸ್ ನ ಪ್ರಮುಖ ತಂತ್ರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಗೋಹತ್ಯೆ ನಿಷೇಧ ಮಾಡುತ್ತಾರೆ, ಮುಸ್ಲಿಮರಿಗೆ ರಕ್ಷಣೆ ಇಲ್ಲ. ಮುಸ್ಲಿಮರ ಹತ್ಯೆ ನಡೆಯುತ್ತದೆ. ಹಾಗಾಗಿ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದ ರೀತಿಯಲ್ಲಿ ತಡೆದು ಮುಸಲ್ಮಾನರನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕು ಎಂದು ಜನರನ್ನು ಬೆದರಿಸಿ ರಾಜಕೀಯ ಮಾಡುತ್ತಿದ್ದು, ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎನ್ನುವ ಭ್ರಮೆಯನ್ನು ಮುಸ್ಲಿಮರಲ್ಲಿ ಉಂಟು ಮಾಡುವ ಮೂಲಕ ಮುಸ್ಲಿಮರು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯದಂತೆ ತಡೆಹಿಡಿದಿದ್ದಾರೆ. ದೇಶದಲ್ಲಿ 172 ಮಿಲಿಯನ್ ಮುಸ್ಲಿಮರಿದ್ದು ಅವರ ರಾಜಕೀಯ ಪ್ರಾಶಸ್ತ್ಯವನ್ನು ಸೀಮಿತಗೊಳಿಸಿ ಅವರ ರಾಜಕೀಯ ಬೆಳವಣಿಗೆಯನ್ನು ತಡೆ ಹಿಡಿದಿದೆ.
60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ದೇಶದ ದಲಿತರ, ಹಿಂದುಳಿದವರ, ಮುಸಲ್ಮಾನರ, ಕ್ರೈಸ್ತರ ಅಭಿವೃದ್ಧಿ ಮಾಡಿ ಅಧಿಕಾರ ಪಡೆದದ್ದಲ್ಲ. ಆರೆಸ್ಸೆಸ್ ನ ಕೋಲು, ಚಡ್ಡಿಗಳನ್ನು ತೋರಿಸಿ ಬೆದರಿಸಿ ಅದು ನಿರಂತರ ಅಧಿಕಾರವನ್ನು ಪಡೆಯಿತು. ಮನುವಾದದ ಮೃದು ಸಿದ್ದಾಂತಗಳು ಕಾಂಗ್ರೆಸ್ ನ ಜೀವಾಳವಾಗಿದೆ. ಹಾಗಾಗಿ ಬಿಜೆಪಿ ದೇಶದ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ನೇರ ವಿರೋಧಿಯಾಗಿದೆ. ಕಾಂಗ್ರೆಸ್ ನಾನು ಬಿಜೆಪಿಯಿಂದ ರಕ್ಷಿಸುತ್ತೇನೆಂದು ಹೇಳಿ ಬಳಿಕ ಬೆನ್ನಿಗೆ ಚೂರಿ ಹಾಕಿದ ಪಕ್ಷವಾಗಿದೆ. ಇವೆರಡರ ಮೂಲ ಉದ್ದೇಶ ಒಂದೇ ಆಗಿದೆ. ಆದಿವಾಸಿಗಳ ಬಳಿಕ ಎರಡನೇ ದರ್ಜೆಯ ಜೀವನವನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಅಂದರೆ ದಲಿತರಿಗಿಂತಲೂ ಮುಸ್ಲಿಮರು ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಲಕ್ಷಾಂತರ ರೂ. ಖರ್ಚುಮಾಡಿ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚಲು ಸಾಚಾರ್ ಕಮಿಟಿ ವರದಿಯನ್ನು ಮಾತ್ರ ಸರಕಾರ ಸಿದ್ಧಪಡಿಸಿದೆಯೇ ಹೊರತು ಅದರಲ್ಲಿ ಸೂಚಿಸಿರುವ ತಕ್ಷಣ ವರದಿ ಜಾರಿ ಮಾಡಬೇಕೆಂಬುವುದನ್ನು ಯುಪಿಎ ಸರಕಾರ ಮಾಡಿಲ್ಲ. ಕಾಂಗ್ರೆಸ್ ಸರಕಾರವಿರುವ ಯಾವ ರಾಜ್ಯದಲ್ಲೂ ಮಾಡಿಲ್ಲ. ನನೆಗುದಿಗೆ ಬಿದ್ದ ಸಾಚಾರ್ ಕಮಿಟಿ ವರದಿಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿಲ್ಲ, ಅದನ್ನು ಕೇಂದ್ರ ಸರಕಾರವೇ ಮಾಡಬೇಕೆಂದಲ್ಲ, ರಾಜ್ಯ ಸರಕಾರವು ಜಾರಿಗೆ ತರಬಹುದು.
ದೇಶದಲ್ಲಿ 25% ರಷ್ಟು 6-14 ವರ್ಷದವರೆಗಿನ ಮುಸ್ಲಿಂ ಮಕ್ಕಳು ಶಾಲೆಯ ಬಾಗಿಲನ್ನೇ ಕಂಡಿಲ್ಲ. ಮುಸ್ಲಿಮರಿಗೆ ಸಾಮಾಜಿಕ ಭದ್ರತೆಯನ್ನು ನೀಡಿಲ್ಲ. ಮುಸ್ಲಿಮರಿಗೆ ಸಿಗಬೇಕಾದ ರಾಜಕೀಯ, ಸಾಮಾಜಿಕ ಭದ್ರತೆ 60 ವರ್ಷಗಳಲ್ಲಿ ಕಾಂಗ್ರೆಸ್ ಕಲ್ಪಿಸಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ದೇಶದಲ್ಲಿ ವಿವಿಧ ಉನ್ನತ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮುಸ್ಲಿಮರ ಶೇಕಡಾವಾರು ಪಾಲುದಾರಿಕೆ 2%-3% ಗಳಿಗೆ ಸೀಮಿತವಾಗಿದೆ. ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಮುಸ್ಲಿಮರು ಶಿಕ್ಷಣ, ಮೂಲಸೌಕರ್ಯ, ರಾಜಕೀಯ ಪ್ರಾತಿನಿಧ್ಯ ಎಲ್ಲದರಿಂದಲೂ ವಂಚಿತರಾಗಿದ್ದಾರೆ.
ಅಹಿಂದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತದೆ ಹೊರತು ಅದು ಯಾವ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪುವುದಿಲ್ಲ. ಅಹಿಂದ ಎನ್ನುವುದು ಒಂದು ಅಲೆ, ಬಲವಂತದ ರಾಜಕಾರಣ ಅಷ್ಟೇ. ಈಗಿರುವುದು ಸಹಕಾರ ರಾಜಕಾರಣವೇ ಹೊರತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ರಾಜಕಾರಣ ಅಲ್ಲ . ದೇಶದಲ್ಲಿ ದಲಿತ, ಹಿಂದುಳಿದ ವರ್ಗದವರು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗದಂತೆ ನೋಡಿಕೊಳ್ಳುವ ಹುನ್ನಾರಗಳು ಕೂಡ ಕಾಂಗ್ರೆಸ್ ನಿಂದ ನಡೆಯುತ್ತಿದೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಇಂದು ಕೋಮುಗಲಭೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿ ಇವೆ. ಇನ್ನು ಜೆಡಿಎಸ್ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಹೊರತು ಪಡಿಸಿ ಬೇರೆ ಎಲ್ಲಾ ಪಕ್ಷಗಳು ಮುಸ್ಲಿಮರ ವಿರೋಧಿಯಾಗಿದೆ ಎಂಬ ಭಾವನಾತ್ಮಕ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಎಸ್ ಡಿಪಿಐ, ಎಮ್ ಐ ಎಮ್, ಬಿಎಸ್ಪಿ ಇಂತಹ ಯಾವುದೇ ಪಕ್ಷಗಳ ಕಡೆ ಜನರು ವಾಲದಂತೆ ಬೆದರಿಕೆ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರ ಸರಣಿ ಹತ್ಯೆ, ಗುಜರಾತ್ ಹತ್ಯಾಕಾಂಡ, ನುಸ್ರತ್ ಜಹಾನ್ ನಕಲಿ ಎನ್ ಕೌಂಟರ್, ಬಾಬರಿ ಮಸೀದಿ ಅನ್ಯಾಯ, ಮುಸ್ಲಿಂ ವಿರೋಧಿ ಕಾನೂನು ಜಾರಿಗೊಳಿಸಿ ವಿಚಾರಣೆಯ ನೆಪದಲ್ಲಿ ಖಾಕಿಗಳು ದೇಶದಲ್ಲಿ ಅಮಾಯಕ ಮುಸ್ಲಿಮರನ್ನು ಜೈಲಿಗೆ ತಲ್ಲಿದ್ದು ಸತ್ಯ.
ದೇಶದಲ್ಲಿ ರೈಲ್ವೇ ಇಲಾಖೆ ಬಳಿಕ ಅತ್ಯಧಿಕ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದ್ದು, ಮುಸ್ಲಿಮರ ಹೆಸರಿನಲ್ಲಿ ನೂರಾರು ಪೂರ್ವಿಕರು ದೇವರ ಹೆಸರಿನಲ್ಲಿ ವಕ್ಫ್ ಮಾಡಿದ ಭೂಮಿಗಳಿವು. ಇಡೀ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಎಕರೆ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದೆ. ಈ ಭೂಮಿ ಮುಸ್ಲಿಮರಿಗೆ ಸದ್ಬಳಕೆಯಾಗಿದ್ದರೆ, ಹಂಚಿಕೆಯಾಗಿದ್ದರೆ ಇಂದು ದೇಶದಲ್ಲಿ ಮುಸ್ಲಿಮರು ಈ ರೀತಿ ದಯಾನೀಯ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಆದರೆ ಈ ಆಸ್ತಿ ಯಾರದೋ ಪಾಲಾಗಿದೆ. ಸಾವಿನೂಟದಂತೆ ಇದನ್ನು ಕಂಡ ಕಂಡವರು ತಿಂದು ತೇಗುತ್ತಿದ್ದಾರೆ. ಬಾಬರಿ ಮಸೀದಿಯ 2 ಎಕ್ರೆ ಭೂಮಿಗೆ ಹೋರಾಟ ಮಾಡುವ ಜನರಿಗೆ ಈ ಅನ್ಯಾಯದ ಪರಿವೆಯೇ ಇಲ್ಲ. ಯಾಕೆಂದರೆ ಇದನ್ನು ತಿಂದು ತೇಗಿರುವುದು ರಾಜಕೀಯ ನಾಯಕರು, ಉದ್ಯಮಿಗಳು, ಇದರಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ.
ಕಾಂಗ್ರೆಸ್ ನ ಆಡಳಿತದಲ್ಲೇ ದೇಶದ ಭವ್ಯ ಬಾಬರಿ ಮಸೀದಿ ಧ್ವಂಸಗೊಂಡಿದ್ದು, ಇಂದಿಗೂ ಇದು ಕಾಂಗ್ರೆಸ್ ನ ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಅಲ್ಲದೇ, ಚರಿತ್ರೆಯ ಪುಟಗಳಲ್ಲಿ ದೇಶದಲ್ಲಿನ ಕೋಮು ದ್ವೇಷಕ್ಕೆ ದಲಿತ, ಹಿಂದುಳಿದ ವರ್ಗಗಳ, ಕ್ರೈಸ್ತರ, ಮುಸ್ಲಿಮರ ಭಾವ್ಯಕ್ಯತೆಗೆ ಬೆಂಕಿ ಇಟ್ಟ ಚರಿತ್ರೆಯಾಗಿದೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ವಕ್ಫ್ ಅವ್ಯವಹಾರ ಹೊರಬಂದಿತ್ತು. ಈ 15 ಲಕ್ಷ ಕೋಟಿಯನ್ನು ರಾಜ್ಯದ ಮುಸ್ಲಿಮರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದರೆ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಂ ಸಮುದಾಯದಲ್ಲಿ ಕೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ಅವರ ಮೇಲೆ ಕಾಳಜಿ ಇಲ್ಲ. ಕಾಳಜಿ ಇದ್ದಿದ್ದರೆ ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳುವ ಅನಿವಾರ್ಯತೆ ಬರುತ್ತಿರಲಿಲ್ಲ. ಇನ್ನು ಲೆಕ್ಕಕ್ಕಿಲ್ಲದ ಅಲ್ಪಸಂಖ್ಯಾತರ ಇಲಾಖೆ, ಜನಸಾಮಾನ್ಯನಿಗೆ ಇದರ ಉಪಯೋಗವೇನು ಎಂದು ಯಾರಿಗೂ ತಿಳಿದಿಲ್ಲ, ಶಾದಿಭಾಗ್ಯ, ಭ್ರಷ್ಟರ ಭಾಗ್ಯವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಬಡವರಿಗೆ, ವಿದ್ಯಾರ್ಥಿಗಳಿಗೆ ಕೈಗೆಟಕದಾಗಿದೆ. ಇಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ.
–ಸಿದ್ದಿಕ್ ನೆಲ್ಲಿಗುಡ್ಡೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.
ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.
ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.
ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.
“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”
|ಹಳೇ ವಿದ್ಯಾರ್ಥಿ ಮಂಜುನಾಥ್
“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”
| ಜಯರಾಜ್, ಮುಖ್ಯೋಪಾದ್ಯಾಯರು
“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”
| ರಶ್ಮಿ, ಪ್ರಭಾರ ಪಿಡಿಓ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

