Connect with us

ರಾಜಕೀಯ

ಬಿಜೆಪಿ, ಕಾಂಗ್ರೆಸ್, ಆರೆಸ್ಸೆಸ್ ನ ಎರಡು ಮುಖಗಳು ಮತ್ತು ಮುಸ್ಲಿಮರು

Published

on

ಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಜನರಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಭೀತಿಯ ಗಂಟೆ ಬಡಿದು ರಾಜಕೀಯ ನಡೆಸುತ್ತಿದೆ.

ಧರ್ಮ ರಾಜಕೀಯ, ಜಾತಿ ರಾಜಕೀಯ, ಹೆಣ ರಾಜಕೀಯ, ಹತ್ಯಾ ರಾಜಕಾರಣಗಳಿಗೆ ರಾಜ್ಯದಲ್ಲಿ ಕೊಂಚ ತೆರೆ ಬಿದ್ದರೆ, ಇತ್ತ ಭೀತಿಯ ರಾಜಕೀಯ ಟ್ರೆಂಡ್ ಪ್ರಾರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಹರಿದ ರಕ್ತಗಳಿಗೆ- ಕಾಂಗ್ರೆಸ್ ಬಿಜೆಪಿಯೆಡೆಗೆ, ಬಿಜೆಪಿ ಕಾಂಗ್ರೆಸ್ ನೆಡೆಗೆ ಬೊಟ್ಟು ಮಾಡಿದರೆ, ಇವೆರಡರ ಮಧ್ಯೆ ಇರುವ ಆರೆಸ್ಸೆಸ್ ಮಾತ್ರ ಚುನಾವಣೆಗೆ ಬೇಕಾದ ಎಲ್ಲಾ ಪೂರ್ವ ಬೆಂಬಲವನ್ನು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಡಿ ಮುಗಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆರೆಸ್ಸೆಸ್ ನ ಎರಡು ಮುಖಗಳು. ಬಿಜೆಪಿಯವರು ಮುಸ್ಲಿಮರನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಸ್ಲಿಮರ ಅಧಃಪತನಕ್ಕೆ ದೇಶದಲ್ಲಿ ಕಾರಣವಾಗಿದೆ. ಈ ಬಗ್ಗೆ ಅವಲೋಕಿಸಿದರೆ ಬಿಜೆಪಿಗಿಂತಲೂ ಕಾಂಗ್ರೆಸ್ ಮುಸಲ್ಮಾನರಿಗೆ ಅತ್ಯಂತ ಅಪಾಯಕಾರಿ.

ಬಿಜೆಪಿ ಮತ್ತು ಕಾಂಗ್ರೆಸ್ ಮುಸ್ಲಿಮರನ್ನು ಇಂದು ಪುಟ್ಬಾಲ್ ರೀತಿಯಲ್ಲಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ಗೆ ಮುಸ್ಲಿಮರು ಕೇವಲ ಮತಬ್ಯಾಂಕ್ ಅಷ್ಟೆ. ಇಂದು ದೇಶದ ಮುಸ್ಲಿಮರಲ್ಲಿ ಬಿಜೆಪಿ, ಆರೆಸ್ಸೆಸನ್ನು ತೋರಿಸಿ ಭಯವನ್ನು ತೋರಿಸಿ, ಭೀತಿಯನ್ನು ಉಂಟುಮಾಡಿ ಹೊಡೆದು ಆಳುವ ರಾಜಕೀಯ ಕಾಂಗ್ರೆಸ್ ಮಾಡುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದಲ್ಲಿ ಮುಸ್ಲಿಮರನ್ನು ಇಬ್ಭಾಗಗೊಳಿಸಿ, ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣವಾಯಿತು. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ದೇಶದಲ್ಲಿ ಹಿಂದೂ- ಮುಸ್ಲಿಮರ ಮಧ್ಯೆ ಭೀತಿ ಸೃಷ್ಟಿಸಿ ಆಂತರಿಕ ಅಭದ್ರತೆಯನ್ನು ಸದ್ದಿಲ್ಲದೆ ಮಾಡುತ್ತಿದೆ ಎಂದರೆ ತಪ್ಪಾಗಲಾರದು.

ಮುಸ್ಲಿಮರ ಅಸುರಕ್ಷೆತೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್. ನಿಜವಾಗಿಯೂ ಜನರಲ್ಲಿ ಭಯವನ್ನು, ಭೀತಿಯನ್ನು ಉಂಟುಮಾಡಿದೆ. ಬಿಜೆಪಿಯನ್ನು ತೋರಿಸಿ, ರಾಜಕೀಯ ಲಾಭ ಪಡೆಯುವುದೇ ಕಾಂಗ್ರೆಸ್ ನ ಪ್ರಮುಖ ತಂತ್ರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಗೋಹತ್ಯೆ ನಿಷೇಧ ಮಾಡುತ್ತಾರೆ, ಮುಸ್ಲಿಮರಿಗೆ ರಕ್ಷಣೆ ಇಲ್ಲ. ಮುಸ್ಲಿಮರ ಹತ್ಯೆ ನಡೆಯುತ್ತದೆ. ಹಾಗಾಗಿ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದ ರೀತಿಯಲ್ಲಿ ತಡೆದು ಮುಸಲ್ಮಾನರನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕು ಎಂದು ಜನರನ್ನು ಬೆದರಿಸಿ ರಾಜಕೀಯ ಮಾಡುತ್ತಿದ್ದು, ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎನ್ನುವ ಭ್ರಮೆಯನ್ನು ಮುಸ್ಲಿಮರಲ್ಲಿ ಉಂಟು ಮಾಡುವ ಮೂಲಕ ಮುಸ್ಲಿಮರು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯದಂತೆ ತಡೆಹಿಡಿದಿದ್ದಾರೆ. ದೇಶದಲ್ಲಿ 172 ಮಿಲಿಯನ್ ಮುಸ್ಲಿಮರಿದ್ದು ಅವರ ರಾಜಕೀಯ ಪ್ರಾಶಸ್ತ್ಯವನ್ನು ಸೀಮಿತಗೊಳಿಸಿ ಅವರ ರಾಜಕೀಯ ಬೆಳವಣಿಗೆಯನ್ನು ತಡೆ ಹಿಡಿದಿದೆ.

60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ದೇಶದ ದಲಿತರ, ಹಿಂದುಳಿದವರ, ಮುಸಲ್ಮಾನರ, ಕ್ರೈಸ್ತರ ಅಭಿವೃದ್ಧಿ ಮಾಡಿ ಅಧಿಕಾರ ಪಡೆದದ್ದಲ್ಲ. ಆರೆಸ್ಸೆಸ್ ನ ಕೋಲು, ಚಡ್ಡಿಗಳನ್ನು ತೋರಿಸಿ ಬೆದರಿಸಿ ಅದು ನಿರಂತರ ಅಧಿಕಾರವನ್ನು ಪಡೆಯಿತು. ಮನುವಾದದ ಮೃದು ಸಿದ್ದಾಂತಗಳು ಕಾಂಗ್ರೆಸ್ ನ ಜೀವಾಳವಾಗಿದೆ. ಹಾಗಾಗಿ ಬಿಜೆಪಿ ದೇಶದ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ನೇರ ವಿರೋಧಿಯಾಗಿದೆ. ಕಾಂಗ್ರೆಸ್ ನಾನು ಬಿಜೆಪಿಯಿಂದ ರಕ್ಷಿಸುತ್ತೇನೆಂದು ಹೇಳಿ ಬಳಿಕ ಬೆನ್ನಿಗೆ ಚೂರಿ ಹಾಕಿದ ಪಕ್ಷವಾಗಿದೆ. ಇವೆರಡರ ಮೂಲ ಉದ್ದೇಶ ಒಂದೇ ಆಗಿದೆ. ಆದಿವಾಸಿಗಳ ಬಳಿಕ ಎರಡನೇ ದರ್ಜೆಯ ಜೀವನವನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಅಂದರೆ ದಲಿತರಿಗಿಂತಲೂ ಮುಸ್ಲಿಮರು ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಲಕ್ಷಾಂತರ ರೂ. ಖರ್ಚುಮಾಡಿ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚಲು ಸಾಚಾರ್ ಕಮಿಟಿ ವರದಿಯನ್ನು ಮಾತ್ರ ಸರಕಾರ ಸಿದ್ಧಪಡಿಸಿದೆಯೇ ಹೊರತು ಅದರಲ್ಲಿ ಸೂಚಿಸಿರುವ ತಕ್ಷಣ ವರದಿ ಜಾರಿ ಮಾಡಬೇಕೆಂಬುವುದನ್ನು ಯುಪಿಎ ಸರಕಾರ ಮಾಡಿಲ್ಲ. ಕಾಂಗ್ರೆಸ್ ಸರಕಾರವಿರುವ ಯಾವ ರಾಜ್ಯದಲ್ಲೂ ಮಾಡಿಲ್ಲ. ನನೆಗುದಿಗೆ ಬಿದ್ದ ಸಾಚಾರ್ ಕಮಿಟಿ ವರದಿಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿಲ್ಲ, ಅದನ್ನು ಕೇಂದ್ರ ಸರಕಾರವೇ ಮಾಡಬೇಕೆಂದಲ್ಲ, ರಾಜ್ಯ ಸರಕಾರವು ಜಾರಿಗೆ ತರಬಹುದು.

ದೇಶದಲ್ಲಿ 25% ರಷ್ಟು 6-14 ವರ್ಷದವರೆಗಿನ ಮುಸ್ಲಿಂ ಮಕ್ಕಳು ಶಾಲೆಯ ಬಾಗಿಲನ್ನೇ ಕಂಡಿಲ್ಲ. ಮುಸ್ಲಿಮರಿಗೆ ಸಾಮಾಜಿಕ ಭದ್ರತೆಯನ್ನು ನೀಡಿಲ್ಲ. ಮುಸ್ಲಿಮರಿಗೆ ಸಿಗಬೇಕಾದ ರಾಜಕೀಯ, ಸಾಮಾಜಿಕ ಭದ್ರತೆ 60 ವರ್ಷಗಳಲ್ಲಿ ಕಾಂಗ್ರೆಸ್ ಕಲ್ಪಿಸಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ದೇಶದಲ್ಲಿ ವಿವಿಧ ಉನ್ನತ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮುಸ್ಲಿಮರ ಶೇಕಡಾವಾರು ಪಾಲುದಾರಿಕೆ 2%-3% ಗಳಿಗೆ ಸೀಮಿತವಾಗಿದೆ. ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಮುಸ್ಲಿಮರು ಶಿಕ್ಷಣ, ಮೂಲಸೌಕರ್ಯ, ರಾಜಕೀಯ ಪ್ರಾತಿನಿಧ್ಯ ಎಲ್ಲದರಿಂದಲೂ ವಂಚಿತರಾಗಿದ್ದಾರೆ.

ಅಹಿಂದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತದೆ ಹೊರತು ಅದು ಯಾವ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪುವುದಿಲ್ಲ. ಅಹಿಂದ ಎನ್ನುವುದು ಒಂದು ಅಲೆ, ಬಲವಂತದ ರಾಜಕಾರಣ ಅಷ್ಟೇ. ಈಗಿರುವುದು ಸಹಕಾರ ರಾಜಕಾರಣವೇ ಹೊರತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ರಾಜಕಾರಣ ಅಲ್ಲ . ದೇಶದಲ್ಲಿ ದಲಿತ, ಹಿಂದುಳಿದ ವರ್ಗದವರು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗದಂತೆ ನೋಡಿಕೊಳ್ಳುವ ಹುನ್ನಾರಗಳು ಕೂಡ ಕಾಂಗ್ರೆಸ್ ನಿಂದ ನಡೆಯುತ್ತಿದೆ.

ಕಾಂಗ್ರೆಸ್ ಆಡಳಿತದ ಕರ್ನಾಟಕ ಇಂದು ಕೋಮುಗಲಭೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿ ಇವೆ. ಇನ್ನು ಜೆಡಿಎಸ್ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಹೊರತು ಪಡಿಸಿ ಬೇರೆ ಎಲ್ಲಾ ಪಕ್ಷಗಳು ಮುಸ್ಲಿಮರ ವಿರೋಧಿಯಾಗಿದೆ ಎಂಬ ಭಾವನಾತ್ಮಕ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಎಸ್ ಡಿಪಿಐ, ಎಮ್ ಐ ಎಮ್, ಬಿಎಸ್ಪಿ ಇಂತಹ ಯಾವುದೇ ಪಕ್ಷಗಳ ಕಡೆ ಜನರು ವಾಲದಂತೆ ಬೆದರಿಕೆ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರ ಸರಣಿ ಹತ್ಯೆ, ಗುಜರಾತ್ ಹತ್ಯಾಕಾಂಡ, ನುಸ್ರತ್ ಜಹಾನ್ ನಕಲಿ ಎನ್ ಕೌಂಟರ್, ಬಾಬರಿ ಮಸೀದಿ ಅನ್ಯಾಯ, ಮುಸ್ಲಿಂ ವಿರೋಧಿ ಕಾನೂನು ಜಾರಿಗೊಳಿಸಿ ವಿಚಾರಣೆಯ ನೆಪದಲ್ಲಿ ಖಾಕಿಗಳು ದೇಶದಲ್ಲಿ ಅಮಾಯಕ ಮುಸ್ಲಿಮರನ್ನು ಜೈಲಿಗೆ ತಲ್ಲಿದ್ದು ಸತ್ಯ.

ದೇಶದಲ್ಲಿ ರೈಲ್ವೇ ಇಲಾಖೆ ಬಳಿಕ ಅತ್ಯಧಿಕ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದ್ದು, ಮುಸ್ಲಿಮರ ಹೆಸರಿನಲ್ಲಿ ನೂರಾರು ಪೂರ್ವಿಕರು ದೇವರ ಹೆಸರಿನಲ್ಲಿ ವಕ್ಫ್ ಮಾಡಿದ ಭೂಮಿಗಳಿವು. ಇಡೀ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಎಕರೆ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದೆ. ಈ ಭೂಮಿ ಮುಸ್ಲಿಮರಿಗೆ ಸದ್ಬಳಕೆಯಾಗಿದ್ದರೆ, ಹಂಚಿಕೆಯಾಗಿದ್ದರೆ ಇಂದು ದೇಶದಲ್ಲಿ ಮುಸ್ಲಿಮರು ಈ ರೀತಿ ದಯಾನೀಯ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಆದರೆ ಈ ಆಸ್ತಿ ಯಾರದೋ ಪಾಲಾಗಿದೆ. ಸಾವಿನೂಟದಂತೆ ಇದನ್ನು ಕಂಡ ಕಂಡವರು ತಿಂದು ತೇಗುತ್ತಿದ್ದಾರೆ. ಬಾಬರಿ ಮಸೀದಿಯ 2 ಎಕ್ರೆ ಭೂಮಿಗೆ ಹೋರಾಟ ಮಾಡುವ ಜನರಿಗೆ ಈ ಅನ್ಯಾಯದ ಪರಿವೆಯೇ ಇಲ್ಲ. ಯಾಕೆಂದರೆ ಇದನ್ನು ತಿಂದು ತೇಗಿರುವುದು ರಾಜಕೀಯ ನಾಯಕರು, ಉದ್ಯಮಿಗಳು, ಇದರಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ.

ಕಾಂಗ್ರೆಸ್ ನ ಆಡಳಿತದಲ್ಲೇ ದೇಶದ ಭವ್ಯ ಬಾಬರಿ ಮಸೀದಿ ಧ್ವಂಸಗೊಂಡಿದ್ದು, ಇಂದಿಗೂ ಇದು ಕಾಂಗ್ರೆಸ್ ನ ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಅಲ್ಲದೇ, ಚರಿತ್ರೆಯ ಪುಟಗಳಲ್ಲಿ ದೇಶದಲ್ಲಿನ ಕೋಮು ದ್ವೇಷಕ್ಕೆ ದಲಿತ, ಹಿಂದುಳಿದ ವರ್ಗಗಳ, ಕ್ರೈಸ್ತರ, ಮುಸ್ಲಿಮರ ಭಾವ್ಯಕ್ಯತೆಗೆ ಬೆಂಕಿ ಇಟ್ಟ ಚರಿತ್ರೆಯಾಗಿದೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ವಕ್ಫ್ ಅವ್ಯವಹಾರ ಹೊರಬಂದಿತ್ತು. ಈ 15 ಲಕ್ಷ ಕೋಟಿಯನ್ನು ರಾಜ್ಯದ ಮುಸ್ಲಿಮರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದರೆ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಂ ಸಮುದಾಯದಲ್ಲಿ ಕೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ಅವರ ಮೇಲೆ ಕಾಳಜಿ ಇಲ್ಲ. ಕಾಳಜಿ ಇದ್ದಿದ್ದರೆ ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳುವ ಅನಿವಾರ್ಯತೆ ಬರುತ್ತಿರಲಿಲ್ಲ. ಇನ್ನು ಲೆಕ್ಕಕ್ಕಿಲ್ಲದ ಅಲ್ಪಸಂಖ್ಯಾತರ ಇಲಾಖೆ, ಜನಸಾಮಾನ್ಯನಿಗೆ ಇದರ ಉಪಯೋಗವೇನು ಎಂದು ಯಾರಿಗೂ ತಿಳಿದಿಲ್ಲ, ಶಾದಿಭಾಗ್ಯ, ಭ್ರಷ್ಟರ ಭಾಗ್ಯವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಬಡವರಿಗೆ, ವಿದ್ಯಾರ್ಥಿಗಳಿಗೆ ಕೈಗೆಟಕದಾಗಿದೆ. ಇಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ.

ಸಿದ್ದಿಕ್ ನೆಲ್ಲಿಗುಡ್ಡೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending