ರಾಜಕೀಯ
ಬಿಜೆಪಿ, ಕಾಂಗ್ರೆಸ್, ಆರೆಸ್ಸೆಸ್ ನ ಎರಡು ಮುಖಗಳು ಮತ್ತು ಮುಸ್ಲಿಮರು
ಭಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಜನರಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಭೀತಿಯ ಗಂಟೆ ಬಡಿದು ರಾಜಕೀಯ ನಡೆಸುತ್ತಿದೆ.
ಧರ್ಮ ರಾಜಕೀಯ, ಜಾತಿ ರಾಜಕೀಯ, ಹೆಣ ರಾಜಕೀಯ, ಹತ್ಯಾ ರಾಜಕಾರಣಗಳಿಗೆ ರಾಜ್ಯದಲ್ಲಿ ಕೊಂಚ ತೆರೆ ಬಿದ್ದರೆ, ಇತ್ತ ಭೀತಿಯ ರಾಜಕೀಯ ಟ್ರೆಂಡ್ ಪ್ರಾರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಹರಿದ ರಕ್ತಗಳಿಗೆ- ಕಾಂಗ್ರೆಸ್ ಬಿಜೆಪಿಯೆಡೆಗೆ, ಬಿಜೆಪಿ ಕಾಂಗ್ರೆಸ್ ನೆಡೆಗೆ ಬೊಟ್ಟು ಮಾಡಿದರೆ, ಇವೆರಡರ ಮಧ್ಯೆ ಇರುವ ಆರೆಸ್ಸೆಸ್ ಮಾತ್ರ ಚುನಾವಣೆಗೆ ಬೇಕಾದ ಎಲ್ಲಾ ಪೂರ್ವ ಬೆಂಬಲವನ್ನು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಡಿ ಮುಗಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆರೆಸ್ಸೆಸ್ ನ ಎರಡು ಮುಖಗಳು. ಬಿಜೆಪಿಯವರು ಮುಸ್ಲಿಮರನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಸ್ಲಿಮರ ಅಧಃಪತನಕ್ಕೆ ದೇಶದಲ್ಲಿ ಕಾರಣವಾಗಿದೆ. ಈ ಬಗ್ಗೆ ಅವಲೋಕಿಸಿದರೆ ಬಿಜೆಪಿಗಿಂತಲೂ ಕಾಂಗ್ರೆಸ್ ಮುಸಲ್ಮಾನರಿಗೆ ಅತ್ಯಂತ ಅಪಾಯಕಾರಿ.
ಬಿಜೆಪಿ ಮತ್ತು ಕಾಂಗ್ರೆಸ್ ಮುಸ್ಲಿಮರನ್ನು ಇಂದು ಪುಟ್ಬಾಲ್ ರೀತಿಯಲ್ಲಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ಗೆ ಮುಸ್ಲಿಮರು ಕೇವಲ ಮತಬ್ಯಾಂಕ್ ಅಷ್ಟೆ. ಇಂದು ದೇಶದ ಮುಸ್ಲಿಮರಲ್ಲಿ ಬಿಜೆಪಿ, ಆರೆಸ್ಸೆಸನ್ನು ತೋರಿಸಿ ಭಯವನ್ನು ತೋರಿಸಿ, ಭೀತಿಯನ್ನು ಉಂಟುಮಾಡಿ ಹೊಡೆದು ಆಳುವ ರಾಜಕೀಯ ಕಾಂಗ್ರೆಸ್ ಮಾಡುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದಲ್ಲಿ ಮುಸ್ಲಿಮರನ್ನು ಇಬ್ಭಾಗಗೊಳಿಸಿ, ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣವಾಯಿತು. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ದೇಶದಲ್ಲಿ ಹಿಂದೂ- ಮುಸ್ಲಿಮರ ಮಧ್ಯೆ ಭೀತಿ ಸೃಷ್ಟಿಸಿ ಆಂತರಿಕ ಅಭದ್ರತೆಯನ್ನು ಸದ್ದಿಲ್ಲದೆ ಮಾಡುತ್ತಿದೆ ಎಂದರೆ ತಪ್ಪಾಗಲಾರದು.
ಮುಸ್ಲಿಮರ ಅಸುರಕ್ಷೆತೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್. ನಿಜವಾಗಿಯೂ ಜನರಲ್ಲಿ ಭಯವನ್ನು, ಭೀತಿಯನ್ನು ಉಂಟುಮಾಡಿದೆ. ಬಿಜೆಪಿಯನ್ನು ತೋರಿಸಿ, ರಾಜಕೀಯ ಲಾಭ ಪಡೆಯುವುದೇ ಕಾಂಗ್ರೆಸ್ ನ ಪ್ರಮುಖ ತಂತ್ರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಗೋಹತ್ಯೆ ನಿಷೇಧ ಮಾಡುತ್ತಾರೆ, ಮುಸ್ಲಿಮರಿಗೆ ರಕ್ಷಣೆ ಇಲ್ಲ. ಮುಸ್ಲಿಮರ ಹತ್ಯೆ ನಡೆಯುತ್ತದೆ. ಹಾಗಾಗಿ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದ ರೀತಿಯಲ್ಲಿ ತಡೆದು ಮುಸಲ್ಮಾನರನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕು ಎಂದು ಜನರನ್ನು ಬೆದರಿಸಿ ರಾಜಕೀಯ ಮಾಡುತ್ತಿದ್ದು, ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎನ್ನುವ ಭ್ರಮೆಯನ್ನು ಮುಸ್ಲಿಮರಲ್ಲಿ ಉಂಟು ಮಾಡುವ ಮೂಲಕ ಮುಸ್ಲಿಮರು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯದಂತೆ ತಡೆಹಿಡಿದಿದ್ದಾರೆ. ದೇಶದಲ್ಲಿ 172 ಮಿಲಿಯನ್ ಮುಸ್ಲಿಮರಿದ್ದು ಅವರ ರಾಜಕೀಯ ಪ್ರಾಶಸ್ತ್ಯವನ್ನು ಸೀಮಿತಗೊಳಿಸಿ ಅವರ ರಾಜಕೀಯ ಬೆಳವಣಿಗೆಯನ್ನು ತಡೆ ಹಿಡಿದಿದೆ.
60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ದೇಶದ ದಲಿತರ, ಹಿಂದುಳಿದವರ, ಮುಸಲ್ಮಾನರ, ಕ್ರೈಸ್ತರ ಅಭಿವೃದ್ಧಿ ಮಾಡಿ ಅಧಿಕಾರ ಪಡೆದದ್ದಲ್ಲ. ಆರೆಸ್ಸೆಸ್ ನ ಕೋಲು, ಚಡ್ಡಿಗಳನ್ನು ತೋರಿಸಿ ಬೆದರಿಸಿ ಅದು ನಿರಂತರ ಅಧಿಕಾರವನ್ನು ಪಡೆಯಿತು. ಮನುವಾದದ ಮೃದು ಸಿದ್ದಾಂತಗಳು ಕಾಂಗ್ರೆಸ್ ನ ಜೀವಾಳವಾಗಿದೆ. ಹಾಗಾಗಿ ಬಿಜೆಪಿ ದೇಶದ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ನೇರ ವಿರೋಧಿಯಾಗಿದೆ. ಕಾಂಗ್ರೆಸ್ ನಾನು ಬಿಜೆಪಿಯಿಂದ ರಕ್ಷಿಸುತ್ತೇನೆಂದು ಹೇಳಿ ಬಳಿಕ ಬೆನ್ನಿಗೆ ಚೂರಿ ಹಾಕಿದ ಪಕ್ಷವಾಗಿದೆ. ಇವೆರಡರ ಮೂಲ ಉದ್ದೇಶ ಒಂದೇ ಆಗಿದೆ. ಆದಿವಾಸಿಗಳ ಬಳಿಕ ಎರಡನೇ ದರ್ಜೆಯ ಜೀವನವನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಅಂದರೆ ದಲಿತರಿಗಿಂತಲೂ ಮುಸ್ಲಿಮರು ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಲಕ್ಷಾಂತರ ರೂ. ಖರ್ಚುಮಾಡಿ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚಲು ಸಾಚಾರ್ ಕಮಿಟಿ ವರದಿಯನ್ನು ಮಾತ್ರ ಸರಕಾರ ಸಿದ್ಧಪಡಿಸಿದೆಯೇ ಹೊರತು ಅದರಲ್ಲಿ ಸೂಚಿಸಿರುವ ತಕ್ಷಣ ವರದಿ ಜಾರಿ ಮಾಡಬೇಕೆಂಬುವುದನ್ನು ಯುಪಿಎ ಸರಕಾರ ಮಾಡಿಲ್ಲ. ಕಾಂಗ್ರೆಸ್ ಸರಕಾರವಿರುವ ಯಾವ ರಾಜ್ಯದಲ್ಲೂ ಮಾಡಿಲ್ಲ. ನನೆಗುದಿಗೆ ಬಿದ್ದ ಸಾಚಾರ್ ಕಮಿಟಿ ವರದಿಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿಲ್ಲ, ಅದನ್ನು ಕೇಂದ್ರ ಸರಕಾರವೇ ಮಾಡಬೇಕೆಂದಲ್ಲ, ರಾಜ್ಯ ಸರಕಾರವು ಜಾರಿಗೆ ತರಬಹುದು.
ದೇಶದಲ್ಲಿ 25% ರಷ್ಟು 6-14 ವರ್ಷದವರೆಗಿನ ಮುಸ್ಲಿಂ ಮಕ್ಕಳು ಶಾಲೆಯ ಬಾಗಿಲನ್ನೇ ಕಂಡಿಲ್ಲ. ಮುಸ್ಲಿಮರಿಗೆ ಸಾಮಾಜಿಕ ಭದ್ರತೆಯನ್ನು ನೀಡಿಲ್ಲ. ಮುಸ್ಲಿಮರಿಗೆ ಸಿಗಬೇಕಾದ ರಾಜಕೀಯ, ಸಾಮಾಜಿಕ ಭದ್ರತೆ 60 ವರ್ಷಗಳಲ್ಲಿ ಕಾಂಗ್ರೆಸ್ ಕಲ್ಪಿಸಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ದೇಶದಲ್ಲಿ ವಿವಿಧ ಉನ್ನತ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮುಸ್ಲಿಮರ ಶೇಕಡಾವಾರು ಪಾಲುದಾರಿಕೆ 2%-3% ಗಳಿಗೆ ಸೀಮಿತವಾಗಿದೆ. ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಮುಸ್ಲಿಮರು ಶಿಕ್ಷಣ, ಮೂಲಸೌಕರ್ಯ, ರಾಜಕೀಯ ಪ್ರಾತಿನಿಧ್ಯ ಎಲ್ಲದರಿಂದಲೂ ವಂಚಿತರಾಗಿದ್ದಾರೆ.
ಅಹಿಂದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತದೆ ಹೊರತು ಅದು ಯಾವ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪುವುದಿಲ್ಲ. ಅಹಿಂದ ಎನ್ನುವುದು ಒಂದು ಅಲೆ, ಬಲವಂತದ ರಾಜಕಾರಣ ಅಷ್ಟೇ. ಈಗಿರುವುದು ಸಹಕಾರ ರಾಜಕಾರಣವೇ ಹೊರತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ರಾಜಕಾರಣ ಅಲ್ಲ . ದೇಶದಲ್ಲಿ ದಲಿತ, ಹಿಂದುಳಿದ ವರ್ಗದವರು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗದಂತೆ ನೋಡಿಕೊಳ್ಳುವ ಹುನ್ನಾರಗಳು ಕೂಡ ಕಾಂಗ್ರೆಸ್ ನಿಂದ ನಡೆಯುತ್ತಿದೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಇಂದು ಕೋಮುಗಲಭೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿ ಇವೆ. ಇನ್ನು ಜೆಡಿಎಸ್ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಹೊರತು ಪಡಿಸಿ ಬೇರೆ ಎಲ್ಲಾ ಪಕ್ಷಗಳು ಮುಸ್ಲಿಮರ ವಿರೋಧಿಯಾಗಿದೆ ಎಂಬ ಭಾವನಾತ್ಮಕ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಎಸ್ ಡಿಪಿಐ, ಎಮ್ ಐ ಎಮ್, ಬಿಎಸ್ಪಿ ಇಂತಹ ಯಾವುದೇ ಪಕ್ಷಗಳ ಕಡೆ ಜನರು ವಾಲದಂತೆ ಬೆದರಿಕೆ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರ ಸರಣಿ ಹತ್ಯೆ, ಗುಜರಾತ್ ಹತ್ಯಾಕಾಂಡ, ನುಸ್ರತ್ ಜಹಾನ್ ನಕಲಿ ಎನ್ ಕೌಂಟರ್, ಬಾಬರಿ ಮಸೀದಿ ಅನ್ಯಾಯ, ಮುಸ್ಲಿಂ ವಿರೋಧಿ ಕಾನೂನು ಜಾರಿಗೊಳಿಸಿ ವಿಚಾರಣೆಯ ನೆಪದಲ್ಲಿ ಖಾಕಿಗಳು ದೇಶದಲ್ಲಿ ಅಮಾಯಕ ಮುಸ್ಲಿಮರನ್ನು ಜೈಲಿಗೆ ತಲ್ಲಿದ್ದು ಸತ್ಯ.
ದೇಶದಲ್ಲಿ ರೈಲ್ವೇ ಇಲಾಖೆ ಬಳಿಕ ಅತ್ಯಧಿಕ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದ್ದು, ಮುಸ್ಲಿಮರ ಹೆಸರಿನಲ್ಲಿ ನೂರಾರು ಪೂರ್ವಿಕರು ದೇವರ ಹೆಸರಿನಲ್ಲಿ ವಕ್ಫ್ ಮಾಡಿದ ಭೂಮಿಗಳಿವು. ಇಡೀ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಎಕರೆ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದೆ. ಈ ಭೂಮಿ ಮುಸ್ಲಿಮರಿಗೆ ಸದ್ಬಳಕೆಯಾಗಿದ್ದರೆ, ಹಂಚಿಕೆಯಾಗಿದ್ದರೆ ಇಂದು ದೇಶದಲ್ಲಿ ಮುಸ್ಲಿಮರು ಈ ರೀತಿ ದಯಾನೀಯ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಆದರೆ ಈ ಆಸ್ತಿ ಯಾರದೋ ಪಾಲಾಗಿದೆ. ಸಾವಿನೂಟದಂತೆ ಇದನ್ನು ಕಂಡ ಕಂಡವರು ತಿಂದು ತೇಗುತ್ತಿದ್ದಾರೆ. ಬಾಬರಿ ಮಸೀದಿಯ 2 ಎಕ್ರೆ ಭೂಮಿಗೆ ಹೋರಾಟ ಮಾಡುವ ಜನರಿಗೆ ಈ ಅನ್ಯಾಯದ ಪರಿವೆಯೇ ಇಲ್ಲ. ಯಾಕೆಂದರೆ ಇದನ್ನು ತಿಂದು ತೇಗಿರುವುದು ರಾಜಕೀಯ ನಾಯಕರು, ಉದ್ಯಮಿಗಳು, ಇದರಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ.
ಕಾಂಗ್ರೆಸ್ ನ ಆಡಳಿತದಲ್ಲೇ ದೇಶದ ಭವ್ಯ ಬಾಬರಿ ಮಸೀದಿ ಧ್ವಂಸಗೊಂಡಿದ್ದು, ಇಂದಿಗೂ ಇದು ಕಾಂಗ್ರೆಸ್ ನ ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಅಲ್ಲದೇ, ಚರಿತ್ರೆಯ ಪುಟಗಳಲ್ಲಿ ದೇಶದಲ್ಲಿನ ಕೋಮು ದ್ವೇಷಕ್ಕೆ ದಲಿತ, ಹಿಂದುಳಿದ ವರ್ಗಗಳ, ಕ್ರೈಸ್ತರ, ಮುಸ್ಲಿಮರ ಭಾವ್ಯಕ್ಯತೆಗೆ ಬೆಂಕಿ ಇಟ್ಟ ಚರಿತ್ರೆಯಾಗಿದೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ವಕ್ಫ್ ಅವ್ಯವಹಾರ ಹೊರಬಂದಿತ್ತು. ಈ 15 ಲಕ್ಷ ಕೋಟಿಯನ್ನು ರಾಜ್ಯದ ಮುಸ್ಲಿಮರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದರೆ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಂ ಸಮುದಾಯದಲ್ಲಿ ಕೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ಅವರ ಮೇಲೆ ಕಾಳಜಿ ಇಲ್ಲ. ಕಾಳಜಿ ಇದ್ದಿದ್ದರೆ ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳುವ ಅನಿವಾರ್ಯತೆ ಬರುತ್ತಿರಲಿಲ್ಲ. ಇನ್ನು ಲೆಕ್ಕಕ್ಕಿಲ್ಲದ ಅಲ್ಪಸಂಖ್ಯಾತರ ಇಲಾಖೆ, ಜನಸಾಮಾನ್ಯನಿಗೆ ಇದರ ಉಪಯೋಗವೇನು ಎಂದು ಯಾರಿಗೂ ತಿಳಿದಿಲ್ಲ, ಶಾದಿಭಾಗ್ಯ, ಭ್ರಷ್ಟರ ಭಾಗ್ಯವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಬಡವರಿಗೆ, ವಿದ್ಯಾರ್ಥಿಗಳಿಗೆ ಕೈಗೆಟಕದಾಗಿದೆ. ಇಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ.
–ಸಿದ್ದಿಕ್ ನೆಲ್ಲಿಗುಡ್ಡೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.




