ರಾಜಕೀಯ
ಬಿಜೆಪಿ ಸರ್ಕಾರ ವಿಫಲ ; ಜನರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ : ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ಪಕ್ಷದ ತತ್ವ, ಸಿದ್ಧಾಂತಗಳ ಅಡಿಯಲ್ಲಿ ಪಕ್ಷ ಸಂಘಟನೆ ಮಾಡಿದಾಗ ನಮಗೆ ಗೆಲುವು ನಿಶ್ಚಿತ. ಅಲ್ಲದೇ ಸಂಕಷ್ಟದಲ್ಲಿರುವ ಜನರ ಪರವಾಗಿ ನಾವು ಅವರ ಧ್ವನಿಯಾಗಿ ಹೋರಾಟ ನಡೆಸಬೇಕು. ಬಿಜೆಪಿ ಸರ್ಕಾರದ ವೈಫಲ್ಯಗಳು, ದುರಾಡಳಿತವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದಾವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಜನರು ಸಾಕಷ್ಟು ನೊಂದಿದ್ದಾರೆ. ರೈತರು, ಕಾರ್ಮಿಕರು, ವ್ಯಾಪಾರಿಗಳು, ಉದ್ಯೋಗಿಗಳು ಸೇರಿ ಎಲ್ಲ ವರ್ಗದ ಜನರು ಕಷ್ಟದಲ್ಲಿದ್ದಾರೆ. ಅಂತವರಿಗೆ ಚೈತನ್ಯ ತುಂಬಬೇಕು, ಅವರ ಸಮಸ್ಯೆಗಳಿಗೆ ಪರಿಹಾರ ಹುಡಕಬೇಕು ಎಂದರು.
ಈ ಸಂಬಂಧ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ. ಪ್ರತಿಪಕ್ಷ ನಾಯಕರೂ ಹಲವು ಕ್ಷೇತ್ರಗಳಲ್ಲಿ ನಮ್ಮೊಂದಿಗಿರಲಿದ್ದಾರೆ. ಉಳಿದಂತೆ ಅವರೂ ಕೂಡ ಹಲವು ಕ್ಷೇತ್ರಗಳ ಪ್ರವಾಸ ನಡೆಸಲಿದ್ದಾರೆ. ಶೀಘ್ರದಲ್ಲೇ ನಾನು ಕೋಲಾರ ಭಾಗದಲ್ಲಿ ಹಾಗೂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಉಡುಪಿ, ಮಂಗಳೂರು ಪ್ರವಾಸ ಮಾಡಲಿದ್ದೇವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಸಂದೀಪ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ @srpatilbagalkot, ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @eshwar_khandre, ಮಾಜಿ ಸಚಿವರಾದ @HKPatil1953, @MBPatil, @dineshgrao, ಸಂಸದ @DKSureshINC, ವಿಧಾನ ಪರಿಷತ್ ಸದಸ್ಯ @HariprasadBK2 ಸೇರಿದಂತೆ ಹಲವು ನಾಯಕರ ಉಪಸ್ಥಿತಿ. pic.twitter.com/dUkRW4NODF
— D K Shivakumar, President, KPCC (@KPCCPresident) February 21, 2021
ಕೆಪಿಸಿಸಿ ಅಧ್ಯಕ್ಷ @DKShivakumar
ಅವರ ನೇತೃತ್ವದಲ್ಲಿ ನೂತನ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ @RLR_BTM ಹಾಗೂ ಮಾಜಿ ಸಂಸದ ಧೃವನಾರಾಯಣ್ ಅವರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮ.ರಾಜ್ಯಸಭೆ ವಿರೋಧ ಪಕ್ಷದ ನಾಯಕ @kharge, ವಿಧಾನಸಭೆ ವಿಪಕ್ಷ ನಾಯಕ @siddaramaiah ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. pic.twitter.com/iAvpsFuLnD
— D K Shivakumar, President, KPCC (@KPCCPresident) February 21, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243