ರಾಜಕೀಯ

ಬಿಜೆಪಿ ಸರ್ಕಾರ ವಿಫಲ ; ಜನರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ : ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ‌ ತರಬೇಕಾಗಿದೆ. ಪಕ್ಷದ ತತ್ವ, ಸಿದ್ಧಾಂತಗಳ ಅಡಿಯಲ್ಲಿ ಪಕ್ಷ ಸಂಘಟನೆ ಮಾಡಿದಾಗ ನಮಗೆ ಗೆಲುವು ನಿಶ್ಚಿತ. ಅಲ್ಲದೇ ಸಂಕಷ್ಟದಲ್ಲಿರುವ ಜನರ ಪರವಾಗಿ ನಾವು ಅವರ ಧ್ವನಿಯಾಗಿ ಹೋರಾಟ ನಡೆಸಬೇಕು. ಬಿಜೆಪಿ ಸರ್ಕಾರದ ವೈಫಲ್ಯಗಳು, ದುರಾಡಳಿತವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದಾವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಜನರು ಸಾಕಷ್ಟು ನೊಂದಿದ್ದಾರೆ. ರೈತರು, ಕಾರ್ಮಿಕರು, ವ್ಯಾಪಾರಿಗಳು, ಉದ್ಯೋಗಿಗಳು ಸೇರಿ ಎಲ್ಲ ವರ್ಗದ ಜನರು ಕಷ್ಟದಲ್ಲಿದ್ದಾರೆ. ಅಂತವರಿಗೆ ಚೈತನ್ಯ ತುಂಬಬೇಕು, ಅವರ ಸಮಸ್ಯೆಗಳಿಗೆ ಪರಿಹಾರ ಹುಡಕಬೇಕು ಎಂದರು.

ಈ ಸಂಬಂಧ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ. ಪ್ರತಿಪಕ್ಷ ನಾಯಕರೂ ಹಲವು ಕ್ಷೇತ್ರಗಳಲ್ಲಿ ನಮ್ಮೊಂದಿಗಿರಲಿದ್ದಾರೆ. ಉಳಿದಂತೆ ಅವರೂ ಕೂಡ ಹಲವು ಕ್ಷೇತ್ರಗಳ ಪ್ರವಾಸ ನಡೆಸಲಿದ್ದಾರೆ. ಶೀಘ್ರದಲ್ಲೇ ನಾನು ಕೋಲಾರ ಭಾಗದಲ್ಲಿ ಹಾಗೂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಉಡುಪಿ, ಮಂಗಳೂರು ಪ್ರವಾಸ ಮಾಡಲಿದ್ದೇವೆ ಎಂದು ನುಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version