ದಿನದ ಸುದ್ದಿ
ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಮೇಲ್ಸೇತುವೆ ಮಾಡಿಸಿ ‘ದೇವೇಗೌಡರ’ ಹೆಸರಿಡುವೆ : ಬಿಜೆಪಿ ಶಾಸಕ ಎಂ.ಕೃಷ್ಣಪ್ಪ
ಸುದ್ದಿದನ,ಬೆಂಗಳೂರು : ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿಸಿ ಆ ಸೇತುವೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಸರು ಇಡುತ್ತೇನೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಮನವಿ ಮಾಡಿದರು.
ಅಷ್ಟೇ ಅಲ್ಲ.ಬೆಂಗಳೂರಿನ ಎಲ್ಲ ರಸ್ತೆಗಳಿಗೆ ಟಾರ್ ಮೇಲೆ ಟಾರ್ ಹಾಕುತ್ತಿದ್ದೀರಿ ನಾನು ಜೆಲ್ಲಿ ಮೇಲೆ ಟಾರ್ ಹಾಕಿಸುತ್ತೇನೆ ಹಣ ಬಿಡುಗಡೆ ಮಾಡಿ ಎಂದು ಬಿಜೆಪಿ ಶಾಸಕ ಕೃಷ್ಣಪ್ಪ ಕೇಳಿಕೊಂಡರು.