ರಾಜಕೀಯ
ಶಿವಮೊಗ್ಗ ಬಿಜೆಪಿಗೆ ಬೆಳಕಿನ ಹಬ್ಬದ ಸಂಭ್ರಮ ತಂದ ರುದ್ರೇಗೌಡ್ರ ನಾಯಕತ್ವ

ಸುದ್ದಿದಿನ ಡೆಸ್ಕ್ : ಸಚ್ಚಾರಿತ್ರ್ಯ,ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣದಲ್ಲಿ ಅಪರೂಪದ ಹೆಸರಾಗಿ ಗುರುತಿಸಿ ಗೌರವಿಸಲ್ಪಡುವ ಹೆಸರು. ಶಿವಮೊಗ್ಗ ಜಿಲ್ಲೆಯ ಬಿಜೆಪಿ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ್ರುದು. ಸಂಘಟಿತ ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ವ್ಯವಸ್ಥಿತವಾಗಿ ನಿರ್ವಹಿಸುವ ಅವರ ದಕ್ಷ ಕಾರ್ಯವೈಖರಿ ವೈರಿಯೂ ಮೆಚ್ಚಿ ಅಹುದಹುನ್ನೆಂತುವುದು.
ಭಾರತೀಯ ಜನತಾ ಪಕ್ಷದ ಶಿವಮೊಗ್ಗ ಜಿಲ್ಲೆಯ ಅಧ್ಯಕ್ಷರಾದ ತರುವಾಯ ಆಂತರಿಕ ಸಮಸ್ಯೆಗಳಿಗೆ ಅಧಿಕಾರ ವಿಕೇಂದ್ರಿಕರಣದ ಜೊತೆ ಎಲ್ಲರೊಟ್ಟಿಗೆ ಚರ್ಚಿಸಿ ಎಲ್ಲರನ್ನೂ ಸಮಾನವಾಗಿ ಕರೆದೊಯ್ಯುವು ಮೂಲಕ ಉತ್ತರ ನೀಡಿ ಎಲ್ಲರಿಂದಲೂ ಗೌರವಾಧರಕ್ಕೆ ಪಾತ್ರವಾಗುವುದು ಅಷ್ಟು ಸುಲಭವಲ್ಲ.ಪ್ರಚಾರ ಬಯಸದೇ ನಾಯಕರು ಹೇಳಿದ ಅಷ್ಟು ಕಾರ್ಯತಂತ್ರಗಳನ್ನು ತಳಮಟ್ಟದಲ್ಲಿ ಸಾದರಪಡಿಸುವ ಅವರ ಪಕ್ಷ ಕರ್ತವ್ಯ ನಿಷ್ಠೆ ಎಲ್ಲರಿಗೂ ಮಾದರಿ. ನಿತ್ಯವೂ ಆರ್ ಎಸ್ ಎಸ್ ನಾಯಕರೊಡನೆ ಚರ್ಚಿಸುವ ,ಅಗತ್ಯ ಸಲಹೆ ,ಸಹಕಾರ ಕೇಳಲು ಕಾರ್ಯಕರ್ತರ ಮನೆಯ ಬಾಗಿಲಿಗೆ ಹೋಗುವ ಅವರ ಸರಳತೆಗೆ ವಿಜಯಲಕ್ಷ್ಮಿ ಒಲಿಯುವುದರಲ್ಲಿ ಎಡವಿಯೇ ಇಲ್ಲ.
ಅವರ ನೇತೃತ್ವದಿ ಜರುಗಿದ ವಿಧಾನ ಸಭಾ ಚುನಾವಣೆಯಲ್ಲಿ 7 ಜನ ಶಾಸಕರನ್ನು ಗೆಲ್ಲಿಸಿಕೊಂಡು ಬಂದಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಬಿಜೆಪಿಯ ಭದ್ರಾಕೋಟೆಯನ್ನಾಗಿಸಿದ್ದು,
ಪದವೀಧರರು ವಿಧಾನ ಪರಿಷತ್ ಚುನಾವಣೆಯಲ್ಲಿ ಆಯನೂರು ಮಂಜುನಾಥ್ ರವರನ್ನು ಗೆಲ್ಲಿಸಲು ರಣತಂತ್ರರೂಪಿಸಿ ಗೆಲುವಿನ ಗೆರೆ ದಾಟಿಸಿದ್ದು ಮೊನ್ನೆಯ ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಸರ್ಕಾರವೇ ಶಿವಮೊಗ್ಗದಲ್ಲಿ ಬೀಡುಬಿಟ್ಟು ಹಣದ ಹೊಳೆ ಹರಿಸಿದರೂ ಎಸ್.ರುದ್ರೇಗೌಡ್ರ ಸರ್ವ ಸಮಾಜಗಳನ್ನು ಸಂಪರ್ಕಿಸುವ ಸಂಪರ್ಕ ಅಭಿಯಾನ ಕಾರ್ಯಕ್ಕೆ ಮಂಡಿಯೂರ ಬೇಕಾಯಿತು.
ಕೈಗಾರಿಕಾ ಉದ್ಯಮಿಗಳಾಗಿ ಸಾವಿರಾರು ಜನರ ಬಧುಕಿಗೆ ಆಸರೆಯಾಗಿ,ಮನೆಗೆ ಬಂದವರನ್ನು ಸೌಜನ್ಯತೆ ಮತ್ತು ಗೌರವದಿಂದ ಕಾಣುವ ಸಂಸ್ಕೃತಿಗೆ ಎಲ್ಲರೂ ಫೀದಾ ಆಗಲೇಬೇಕು.ರಾಜಕಾರಣ ಮತ್ತು ಅಧಿಕಾರ ಸೇವೆಗೆ ಮೀಸಲು ಎಂದೇ ತಿರ್ಮಾನಿಸಿರುವ ಅವರು ಮಾನ್ಯ ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರಿಗೆ ತಮ್ಮ ಯೋಚನೆಗಳನ್ನು ಸ್ಪಷ್ಟಪಡಿಸಿ ರಣತಂತ್ರರೂಪಿಸುವ ಅವರ ವೈಖರಿಗೆ ಬೆರಗಾಗಿ ಯಡಿಯೂರಪ್ಪನವರೇ ಪ್ರಶ್ನೆ ಮಾಡದೇ ಒಪ್ಪಿರುವ ಹಲವಾರು ಉದಾಹರಣೆಗಳು ಇವೆ. ಹಮ್ಮು,ಬಿಮ್ಮು ತೋರದೆ, ಸರ್ವರನ್ನೂ ಜೊತೆಯಲ್ಲಿ ಕರೆದೊಯ್ದು ಪ್ರೀತಿಯಿಂದ ಕೆಲಸ ತೆಗೆದುಕೊಳ್ಳುವ ಅವರ ಹೃದಯ ಮತ್ತು ಕಾರ್ಯತತ್ಪರತೆಯ ಭದ್ರತೆಯಲ್ಲಿ ಶಿವಮೊಗ್ಗ ಬಿಜೆಪಿ ಭದ್ರತೆಗೆ ಯಾವ ಹಣ,ಅಧಿಕಾರ, ಹೆಂಡ,ಆಮಿಷದಿಂದ ಅಲುಗಾಡಿಸಲು ಸಾಧ್ಯವೇ ಇಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
