Connect with us

ದಿನದ ಸುದ್ದಿ

ಬಿಜೆಪಿಗೆ ಕುಮಾರಸ್ವಾಮಿ ಟಾರ್ಗೆಟ್ ಅಂತೆ; ದೇವೇಗೌಡರ ಆರೋಪ

Published

on

ಸುದ್ದಿದಿನ ಡೆಸ್ಕ್:  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಲೋಕಸಭಾ ಚುನಾವಣೆಗೂ ಮೊದಲು ರಾಜ್ಯದ ಸಮ್ಮಿಶ್ರ ಸರ್ಕಾರ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಇರುವವರೆಗೂ ಕುಮಾರಸ್ವಾಮಿ ಸೇಫಾಗಿರುತ್ತಾರೆ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಜೆಡಿಎಸ್- ಕಾಂಗ್ರೆಸ್ ಪರಸ್ಪರ ಪ್ರೋತ್ಸಾಹ, ಸಹಕಾರ ನೀಡಲಿವೆ. ಯಾರೂ ಈ ಸರ್ಕಾರವನ್ನು ಅಳ್ಳಾಡಿಸಲು ಆಗುವುದಿಲ್ಲ. ಐದು ವರ್ಷಗಳ ಅಧಿಕಾರ ಪೂರ್ಣಗೊಳಿಸಲಿದೆ.

ದೇವೇಗೌಡರು ತಮ್ಮ ಪುತ್ರ ಕುಮಾರಸ್ವಾಮಿ ರಾಷ್ಟ್ರ ರಾಜಕಾರಣ ಪ್ರವೇಶ ಮಾಡುವ ಬಗ್ಗೆ ಸುಳಿವು ನೀಡಿದ್ದು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರದ ಐದು ವರ್ಷಗಳ ಪೂರ್ಣಾವಧಿ ಮುಗಿದ ನಂತರ  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ ಎಂದು ಭವಿಷ್ಯ ನುಡಿದ್ದಾರೆ.

ತಾವು ಮುಂಬರುವ ಲೋಕಸಭಾ ಎಲೆಕ್ಷನ್ ಸ್ಪರ್ಧಿಸುವುದಿಲ್ಲ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿರುವ ದೇವೇಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಾಂಗಿ ಎದುರಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.

ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending