ದಿನದ ಸುದ್ದಿ
ಬಿಜೆಪಿಯ ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆ
ಸುದ್ದಿದಿನ,ನವದೆಹಲಿ: ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ನೀವೆ ಕಾರಣ. ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ, ಈ ರೀತಿಯ ಹೇಳಿಕೆ ನೀಡಲು ನಿಮಗೆ ಏನು ಅರ್ಹತೆ ಇದೆ. ಹೇಳಿಕೆ ವಾಪಸ್ ತೆಗೆದುಕೊಂಡರೆ ಸಾಲದು ನೀವು ಕ್ಷಮೆ ಕೇಳಬೇಕೆಂದು ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243