Connect with us

ರಾಜಕೀಯ

ಕಲ್ಲಡ್ಕದ ಭಯೋತ್ಪಾದಕ ಹೇಳಿದ ಹಾಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆಗುತ್ತಿದೆ‌ : ಬಿ ಕೆ ಹರಿಪ್ರಸಾದ್ ವಾಗ್ದಾಳಿ

Published

on

ಸುದ್ದಿದಿನ,ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.

ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ಪರಿಷತ್ ನಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವ ಕುರಿತ ವಿಷಯದಲ್ಲಿ ನಿಯಮ 68ರ ಮೇಲಿನ ಚರ್ಚೆಯಲ್ಲಿ ಮಾತ್ನಾಡಿದ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಗಳ ಲಂಚ, ಭ್ರಷ್ಟಾಚಾರದ ಬಗ್ಗೆ ಧಾರವಾಹಿಗಳನ್ನ ಪ್ರಕಟಿಸುತ್ತಿದ್ದಾರೆ. ನೇಮಕಾತಿ, ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ.

ಸುಪ್ರೀಂ ಕೋರ್ಟ್ ನ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರ ವರ್ಗಾವಣೆ ನಡೆಸುತ್ತಿದೆ. ಹಣ ಕೊಟ್ಟು ವರ್ಗಾವಣೆ ಆದ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿ ಲಂಚ ತೆಗೆದುಕೊಳ್ಳದೆ ಕೆಲಸಗಳನ್ನೇ ಮಾಡುತ್ತಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಇನ್ಸೆಪೆಕ್ಟರ್ ಒಬ್ರು ಗೂಗಲ್ ಪೇ ಮೂಲಕ, ಫೋನ್ ಪೇ ಮೂಲಕ ಹಣ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್ ಕೂಡ ಅಪ್ಡೇಟ್ ಆಗಿ ಲಂಚ ಸ್ವೀಕರಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುದೆ ಸರ್ಕಾರ ಕುಮ್ಮಕ್ಕು ನೀಡಿದೆ ಎಂದು ಗಂಭೀರವಾಗಿ ಆರೋಪಿಸಿದ್ರು.

ಪೊಲೀಸ್ ಅಧಿಕಾರಿಗಳನ್ನ ವರ್ಷಕ್ಕೊಮ್ಮೆ ವರ್ಗಾವಣೆಯನ್ನ ನಡೆಸುತ್ತಿರುವುದರ ಹಿಂದೆ ಲಕ್ಷ-ಕೋಟಿ ಲಂಚದ ಹಣ ಅಕ್ರಮ ನಡೆಯುತ್ತಿದೆ. ಸರ್ಕಾರ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದೆ ಹಾಗಾದ್ರೆ ಸರ್ಕಾರ ನಿಮ್ಮದೇ ಇರುವಾಗ ತನಿಖಾ ಏಜೆನ್ಸಿಗಳಿಂದ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ರು. ಇತ್ತೀಚೆಗೆ ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ” ಕಾಣದ ಕೈಗಳು ಇಂತಹ ಘಟನೆಗಳನ್ನು ನಡೆಸುತ್ತಿದೆ” ಎಂಬ ಹೇಳಿಕೆ ನೀಡಿದೆ.

ಅಂತಹ ಶಕ್ತಿಗಳು ಯಾವುದು ಎಂದು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ನಿಮಿಷಕ್ಕೊಮ್ಮೆ, ಗಂಟೆಗೊಮ್ಮೆ, ದಿನಾಲು ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಲೇ ಇದೆ. ಬಹುತೇಕ ಪ್ರಕರಣಗಳು ಪೊಲೀಸ್ ಠಾಣೆಗೂ ಬರವುದಿಲ್ಲ, ಬರುವ ಪ್ರಕರಣಗಳು ಠಾಣೆಗಳಲ್ಲಿಯೇ ರಾಜೀ ಪಂಚಾಯಿತಿ ಮಾಡುವ ಕೆಲಸಗಳು ಹೆಚ್ಚಾಗುತ್ತಿದೆ. ಇದಕ್ಕೆ ಮೂಲ ಕಾರಣ ಪೊಲೀಸ್ ಇಲಾಖೆಗಳಲ್ಲಿ ಜಾತಿಯ ಆಧಾರದ ಮೇಲೆ, ಲಂಚದ ಮೇಲೆ, ಧರ್ಮದ ಆಧಾರದ ಮೇಲೆ ನಡೆಯುತ್ತಿರುವ ವರ್ಗಾವಣೆಯೇ ಕಾರಣ ಎಂದು ಆರೋಪಿಸಿದ್ರು.

ನೇಮಕಾತಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಪಿಎಸ್ ಐ ಅಭ್ಯರ್ಥಿಗಳು ನೊಂದು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪತ್ರಿಕೆಯಲ್ಲಿ ಅದರ ಬಗ್ಗೆ ಸುದೀರ್ಘವಾಗಿ ದಾಖಲೆ ಸಮೇತ ಪ್ರಕಟ ಮಾಡಿದೆ. ಅಭ್ಯರ್ಥಿಗಳು ಉತ್ತರ ಪತ್ರಿಕೆ ಕೊಡಿ ಎಂದು ಅರ್ಜಿ ಸಲ್ಲಿಸಿ ಎಂದು ಗೃಹ ಸಚಿವರು ಹೇಳಿಕೆ ಕೊಡ್ತಾರೆ, ಆದ್ರೆ ಪೊಲೀಸ್ ಮಹಾ ನಿರ್ದೇಶಕರು ಉತ್ತರ ಪತ್ರಿಕೆ ಕೊಡಕ್ ಆಗಲ್ಲ ಅಂತಾರೆ. ಅಭ್ಯರ್ಥಿಗಳನ್ನ ಯಾಕೆ ಪೊಲೀಸ್ ಇಲಾಖೆ ದಿಕ್ಕು ತಪ್ಪಿಸುತ್ತಿದೆ.

ಒಂದು ತಾಲೂಕಿನಲ್ಲೇ ಐವತ್ತಕ್ಕೂ ಹೆಚ್ಚು ‌ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂಬ ಆರೋಪವಿದೆ, ಇದರ ಸತ್ಯಾಸತ್ಯೆಗಳನ್ನ ರಾಜ್ಯದ ಜನರಿಗೆ ಅರ್ಥ ಮಾಡಲು ಇಲಾಖೆ ಸೋತಿದೆ. ನೇಮಕಾತಿಯಿಂದಲೇ ಅಕ್ರಮ, ಅನ್ಯಾಯ, ಭ್ರಷ್ಟಾಚಾರಗಳು ನಡೆಯುವಾಗ ರಾಜ್ಯದಲ್ಲಿ ಹೇಗೆ ಕಾನೂನು, ಸುವ್ಯವಸ್ಥೆ ಕಾಪಾಡುವುದಕ್ಕೆ ಸಾಧ್ಯ.

ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುವುದಕ್ಕೆ ಪೊಲೀಸರ ಸಂಬಳ ಕಡಿಮೆಯಾಗುವುದು ಕೂಡ ಕಾರಣ ಇರಬಹುದು. ಸರ್ಕಾರದ ಪ್ರಮುಖ ಇಲಾಖೆಯಲ್ಲಿಯೇ ಸುವ್ಯವಸ್ಥೆ ತರುವಲ್ಲಿ ಸರ್ಕಾರ ಸೋತಿದೆ ಎಂದು ಮಾತ್ನಾಡಿದ್ರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.


  • ಲ್ಯಾಟರಲ್ ಪ್ರವೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಿಸಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending