Connect with us

ರಾಜಕೀಯ

ದಾರಿ ತಪ್ಪಿದ ಸರ್ಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ : ಬಿ ಕೆ ಹರಿಪ್ರಸಾದ್ ವಾಗ್ದಾಳಿ

Published

on

ಸುದ್ದಿದಿನ, ಬೆಂಗಳೂರು : ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಅವರು ಕಿಡಿಕಾರಿದ್ದಾರೆ.

ಈ ಮೂಲಕ ಮುಖ್ಯಮಂತ್ರಿಯವರೇ ರಾಜ್ಯದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಇಂತಹ “ಕಲೆ” ನಾಗಪುರದವರಿಂದಲೇ ಕಲಿಯುತ್ತಿರಬೇಕು. ಒಬ್ಬ ನಿಕೃಷ್ಟ ಟ್ರೋಲರ್ ಗೆ ಪಠ್ಯ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಮಾಡಿ ಇಡೀ ಸರ್ಕಾರವೇ ಮಂಡಿಯೂರಿರುವುದಷ್ಟೇ ಅಲ್ಲ ಹೊರಳಾಡುತ್ತಿರುವುದು ನಾಚಿಕೆಗೇಡಿತನದ ಪರಮಾವಧಿ.

ಈ ನೆಲದ ಅಸ್ಮಿತೆಯಾಗಿರುವ ಬಸವಣ್ಣ, ನಾರಾಯಣ ಗುರುಗಳು, ಕುವೆಂಪುರಾದಿಯಾಗಿ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಸುಧಾರಕರ ಬಗ್ಗೆ ತುಚ್ಛಭಾವನೆಯಿಂದ ನೋಡಿದ್ದಲ್ಲದೇ, ಪಠ್ಯ ಪುಸ್ತಕದಲ್ಲಿ ನಾಗಪುರದ ಹಿಡನ್ ಅಜೆಂಡಾಗಳನ್ನು ತುರುಕಿರುವುದು ಜಗಜ್ಜಾಹೀರಾಗುತ್ತಿದೆ. ಒಬ್ಬ ಟ್ರೋಲರ್ ಕಡೆಯಿಂದ ಇಂತಹ ಕೆಲಸ ಮಾಡಿಸಿರುವ ಸರ್ಕಾರದ ದಾರಿದ್ರ್ಯತನಕ್ಕೆ ರಾಜ್ಯದ ಸಾಕ್ಷಿ ಪ್ರಜ್ಞೆಯಂತಿರುವ ಸಾಹಿತಿಗಳು, ಸ್ವಾಮೀಜಿಗಳು, ಬರಹಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಈ ಮಟ್ಟದ ಆಕ್ರೋಶ ಎಂದೂ ಬಂದಿರಲಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಒಬ್ಬ ಟ್ರೋಲರ್ ನ ಪರವಾಗಿ ವಾದ ಮಂಡಿಸುವ ಮೂಲಕ ಸರ್ಕಾರದ ಜಂಘಾಬಲವನ್ನೇ ಕುಸಿಯುವಂತೆ ಮಾಡಿದ್ದಾರೆ. ಕುವೆಂಪುರವರು ಬರೆದ ನಾಡಗೀತೆಗೆ ಅವಮಾನ ಮಾಡಿದ್ದಲ್ಲದೇ, ಬುರ್ಜ ಖಲೀಫಾ ಬಹುಮಾನ ಕೊಡುತ್ತೇನೆ ಎಂದು ಘೋಷಿಸಿದ್ದಾನೆ. ಮುಖ್ಯಮಂತ್ರಿಗಳೇ, ಕ್ರೈಂ ಮಾಡಿದವನಿಗೆ ಬಹುಮಾನ ನೀಡುತ್ತೇನೆ ಎನ್ನುವುದು ಕೂಡ ಕ್ರೈಂ. ಕುವೆಂಪು ಅವಹೇಳನ ಮಾಡಿದ್ದೇ ನಿಮ್ಮ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ. ಚರ್ಚೆಗಾಗಿ ಆತನಲ್ಲ ಎಂದುಕೊಂಡರೂ ಕುವೆಂಪು ಅವಹೇಳನಕ್ಕೆ ಬಹುಮಾನ ಘೋಷಿಸಿ ಅಪರಾಧಕ್ಕೆ ಪ್ರೋತ್ಸಾಹಿಸಿದವನನ್ನು ಬಂಧಿಸಬೇಕಲ್ಲವೇ ?

ಸ್ವಾಮೀಜಿಗಳು, ಸಾಹಿತಿಗಳು, ಬರಹಗಾರರು ಲೇಖಕರು ಸೇರಿದಂತೆ ಇಡೀ ವಿದ್ಯಾರ್ಥಿ ಸಮೂಹ ಇಂದು ಸರ್ಕಾರದ ಅಭಿಪ್ರಾಯಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನ ಗೌರವಿಸಿ ಆಗಿರುವ ಪ್ರಮಾದಕ್ಕೆ ನಾಡಿನ ಕ್ಷಮೆ ಕೋರಿ ಈ ಟ್ರೋಲರ್ ಚಕ್ರತೀರ್ಥನನ್ನ ಅರೆಸ್ಟ್ ಮಾಡಿ. ಬಸವಣ್ಣ, ಅಂಬೇಡ್ಕರ್, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅಪಮಾನೀಕರಿಸಿರುವ ಹೊಸ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಹಿಂದೆಯಿದ್ದ ಪುಸ್ತಕಗಳನ್ನೇ ವಿದ್ಯಾರ್ಥಿಗಳಿಗೆ ಭೋದನೆ ಮಾಡಲು ಅನುವು ಮಾಡಿಕೊಡಬೇಕು.

ನಿಮ್ಮ ಸರ್ಕಾರದ ಮಂತ್ರಿ ಮಹಾಶಯರು ಸ್ವಾಮೀಜಿಗಳು, ಸಾಹಿತಿಗಳ ವಿರುದ್ಧ ನೀಡುತ್ತಿರುವ ಹೇಳಿಕೆಗಳಿಗೆ ಕಡಿವಾಣ ಹಾಕಿ. ಶಾಲೆಗಳು ಆರಂಭವಾಗಿ ಇಪ್ಪತ್ತು ದಿನಗಳಿಗೂ ಹೆಚ್ಚಾಗಿದೆ.ಶಿಕ್ಷಣ ಸಚಿವರ ಸುಳ್ಳಿನ ಕಂತೆಗಳನ್ನ ದಿನಕ್ಕೊಂದು ಧಾರಾವಾಹಿಯಂತೆ ಬಿಚ್ಚಿಡುತ್ತಿದ್ದಾರೆ. ಈಗಲಾದರೂ ಹಾವಿನಪುರದವರ ಆದೇಶಕ್ಕಾಗಿ ಕಾಯದೇ ಆರೋಗ್ಯಕರ ಭವಿಷ್ಯತ್ತು ರೂಪಿಸಲಿರುವ ಮಕ್ಕಳ ಶಿಕ್ಷಣಕ್ಕಾಗಿ ಕಿಂಚಿತ್ತಾದರೂ ಪ್ರಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ವರ್ತಮಾನದಲ್ಲಿ ನೀವು ಮಾಡಿರುವ ಪ್ರಮಾದಕ್ಕೆ ಇತಿಹಾಸ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿದ್ದಾರೆ.

ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಬಂದಿದ್ದಾರೆ.

https://x.com/siddaramaiah/status/1806541235936710672?t=ZkvvqaUNKnoC-p3Ig3X2aA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಳನೇ ವೇತನ ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಜಾರಿಗೆ ಬರಲಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಯಾವು ಗೊತ್ತಾ..?

Published

on

ಸುದ್ದಿದಿನಡೆಸ್ಕ್:ಮೂರು ಹೊಸ ಕ್ರಿಮಿನಲ್ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯಾ ಅಧಿನಿಯಮ್-2023 ಜುಲೈ 1 ರಿಂದ ಜಾರಿಗೆ ಬರಲಿವೆ.

ಕಳೆದ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಧೇಯಕಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನಾಗರಿಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಕಾನೂನುಗಳು ಪ್ರತಿಯೊಬ್ಬರಿಗೂ ಸುಲಭವಾಗಿ ಲಭಿಸಬಹುದಾದ, ಬೆಂಬಲ ನೀಡುವ ಹಾಗೂ ಸಮರ್ಥ ನ್ಯಾಯ ವ್ಯವಸ್ಥೆ ಸೃಷ್ಟಿಸುವ ಗುರಿಯನ್ನು ಹೊಂದಿದೆ. ಹೊಸ ಕ್ರಿಮಿನಲ್ ಕಾನೂನುಗಳ ಹೊಸ ನಿಬಂಧನೆಗಳಲ್ಲಿ ಘಟನೆಗಳನ್ನು ಆನ್‌ಲೈನ್‌ನಲ್ಲಿ ವರದಿ ಮಾಡುವುದು.

ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವುದು. ಸಂತ್ರಸ್ಥರು ಎಫ್‌ಐಆರ್‌ನ ಉಚಿತ ನಕಲನ್ನು ಪಡೆಯಲು ಸಾಧ್ಯವಾಗಿಸಲಿದೆ. ಇದರ ಹೊರತಾಗಿ ಬಂಧನದ ಸಂದರ್ಭದಲ್ಲಿ ವ್ಯಕ್ತಿಯು ತನ್ನ ಪರಿಸ್ಥಿತಿಯ ಬಗ್ಗೆ ಆಯ್ಕೆಯ ವ್ಯಕ್ತಿಗೆ ಮಾಹಿತಿ ನೀಡುವ ಹಕ್ಕನ್ನು ಹೊಂದಿರುತ್ತಾನೆ. ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿದ್ದು, ಮಾಹಿತಿಯನ್ನು ದಾಖಲಿಸಿದ 2 ತಿಂಗಳೊಳಗೆ ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ.

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ವಿಧಿವಿಜ್ಞಾನ ತಜ್ಞರು ಗಂಭೀರ ಅಪರಾಧಗಳು ಘಟಿಸಿದ ಸ್ಥಳಗಳಿಗೆ ಭೇಟಿ ನೀಡುವುದು ಮತ್ತು ಸಾಕ್ಷ್ಯ ಸಂಗ್ರಹಿಸುವುದು ಕಡ್ಡಾಯವಾಗಿದೆ. ಸಮೆನ್ಸ್ಗಳನ್ನು ಈಗ ವಿದ್ಯುನ್ಮಾನವಾಗಿ ರವಾನಿಸಬಹುದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದಪತ್ರಗಳ ದಾಖಲೆಗಳನ್ನು ಕಡಿಮೆ ಮಾಡಬಹುದು, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ನಡುವೆ ಸಮರ್ಥ ಸಂವಹನ ಖಚಿತಪಡಿಸಿಕೊಳ್ಳಬಹುದು.

ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಭೆಗಳನ್ನು ನಡೆಸಿದ್ದು, ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲು ತಂತ್ರಜ್ಞಾನ, ಸಾಮರ್ಥ್ಯವರ್ಧನೆ ಹಾಗೂ ಜಾಗೃತಿ ಮೂಡಿಸುವ ವಿಷಯದಲ್ಲಿ ಸಂಪೂರ್ಣ ಸಜ್ಜುಗೊಂಡಿವೆ ಎಂದು ಮೂಲಗಳು ಹೇಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending