ರಾಜಕೀಯ
ಕಲ್ಲಡ್ಕದ ಭಯೋತ್ಪಾದಕ ಹೇಳಿದ ಹಾಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆಗುತ್ತಿದೆ : ಬಿ ಕೆ ಹರಿಪ್ರಸಾದ್ ವಾಗ್ದಾಳಿ
ಸುದ್ದಿದಿನ,ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.
ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ಪರಿಷತ್ ನಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವ ಕುರಿತ ವಿಷಯದಲ್ಲಿ ನಿಯಮ 68ರ ಮೇಲಿನ ಚರ್ಚೆಯಲ್ಲಿ ಮಾತ್ನಾಡಿದ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಗಳ ಲಂಚ, ಭ್ರಷ್ಟಾಚಾರದ ಬಗ್ಗೆ ಧಾರವಾಹಿಗಳನ್ನ ಪ್ರಕಟಿಸುತ್ತಿದ್ದಾರೆ. ನೇಮಕಾತಿ, ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ.
ಸುಪ್ರೀಂ ಕೋರ್ಟ್ ನ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರ ವರ್ಗಾವಣೆ ನಡೆಸುತ್ತಿದೆ. ಹಣ ಕೊಟ್ಟು ವರ್ಗಾವಣೆ ಆದ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿ ಲಂಚ ತೆಗೆದುಕೊಳ್ಳದೆ ಕೆಲಸಗಳನ್ನೇ ಮಾಡುತ್ತಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಇನ್ಸೆಪೆಕ್ಟರ್ ಒಬ್ರು ಗೂಗಲ್ ಪೇ ಮೂಲಕ, ಫೋನ್ ಪೇ ಮೂಲಕ ಹಣ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್ ಕೂಡ ಅಪ್ಡೇಟ್ ಆಗಿ ಲಂಚ ಸ್ವೀಕರಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುದೆ ಸರ್ಕಾರ ಕುಮ್ಮಕ್ಕು ನೀಡಿದೆ ಎಂದು ಗಂಭೀರವಾಗಿ ಆರೋಪಿಸಿದ್ರು.
ಪೊಲೀಸ್ ಅಧಿಕಾರಿಗಳನ್ನ ವರ್ಷಕ್ಕೊಮ್ಮೆ ವರ್ಗಾವಣೆಯನ್ನ ನಡೆಸುತ್ತಿರುವುದರ ಹಿಂದೆ ಲಕ್ಷ-ಕೋಟಿ ಲಂಚದ ಹಣ ಅಕ್ರಮ ನಡೆಯುತ್ತಿದೆ. ಸರ್ಕಾರ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದೆ ಹಾಗಾದ್ರೆ ಸರ್ಕಾರ ನಿಮ್ಮದೇ ಇರುವಾಗ ತನಿಖಾ ಏಜೆನ್ಸಿಗಳಿಂದ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ರು. ಇತ್ತೀಚೆಗೆ ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ” ಕಾಣದ ಕೈಗಳು ಇಂತಹ ಘಟನೆಗಳನ್ನು ನಡೆಸುತ್ತಿದೆ” ಎಂಬ ಹೇಳಿಕೆ ನೀಡಿದೆ.
ಅಂತಹ ಶಕ್ತಿಗಳು ಯಾವುದು ಎಂದು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ನಿಮಿಷಕ್ಕೊಮ್ಮೆ, ಗಂಟೆಗೊಮ್ಮೆ, ದಿನಾಲು ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಲೇ ಇದೆ. ಬಹುತೇಕ ಪ್ರಕರಣಗಳು ಪೊಲೀಸ್ ಠಾಣೆಗೂ ಬರವುದಿಲ್ಲ, ಬರುವ ಪ್ರಕರಣಗಳು ಠಾಣೆಗಳಲ್ಲಿಯೇ ರಾಜೀ ಪಂಚಾಯಿತಿ ಮಾಡುವ ಕೆಲಸಗಳು ಹೆಚ್ಚಾಗುತ್ತಿದೆ. ಇದಕ್ಕೆ ಮೂಲ ಕಾರಣ ಪೊಲೀಸ್ ಇಲಾಖೆಗಳಲ್ಲಿ ಜಾತಿಯ ಆಧಾರದ ಮೇಲೆ, ಲಂಚದ ಮೇಲೆ, ಧರ್ಮದ ಆಧಾರದ ಮೇಲೆ ನಡೆಯುತ್ತಿರುವ ವರ್ಗಾವಣೆಯೇ ಕಾರಣ ಎಂದು ಆರೋಪಿಸಿದ್ರು.
ನೇಮಕಾತಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಪಿಎಸ್ ಐ ಅಭ್ಯರ್ಥಿಗಳು ನೊಂದು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪತ್ರಿಕೆಯಲ್ಲಿ ಅದರ ಬಗ್ಗೆ ಸುದೀರ್ಘವಾಗಿ ದಾಖಲೆ ಸಮೇತ ಪ್ರಕಟ ಮಾಡಿದೆ. ಅಭ್ಯರ್ಥಿಗಳು ಉತ್ತರ ಪತ್ರಿಕೆ ಕೊಡಿ ಎಂದು ಅರ್ಜಿ ಸಲ್ಲಿಸಿ ಎಂದು ಗೃಹ ಸಚಿವರು ಹೇಳಿಕೆ ಕೊಡ್ತಾರೆ, ಆದ್ರೆ ಪೊಲೀಸ್ ಮಹಾ ನಿರ್ದೇಶಕರು ಉತ್ತರ ಪತ್ರಿಕೆ ಕೊಡಕ್ ಆಗಲ್ಲ ಅಂತಾರೆ. ಅಭ್ಯರ್ಥಿಗಳನ್ನ ಯಾಕೆ ಪೊಲೀಸ್ ಇಲಾಖೆ ದಿಕ್ಕು ತಪ್ಪಿಸುತ್ತಿದೆ.
ಒಂದು ತಾಲೂಕಿನಲ್ಲೇ ಐವತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂಬ ಆರೋಪವಿದೆ, ಇದರ ಸತ್ಯಾಸತ್ಯೆಗಳನ್ನ ರಾಜ್ಯದ ಜನರಿಗೆ ಅರ್ಥ ಮಾಡಲು ಇಲಾಖೆ ಸೋತಿದೆ. ನೇಮಕಾತಿಯಿಂದಲೇ ಅಕ್ರಮ, ಅನ್ಯಾಯ, ಭ್ರಷ್ಟಾಚಾರಗಳು ನಡೆಯುವಾಗ ರಾಜ್ಯದಲ್ಲಿ ಹೇಗೆ ಕಾನೂನು, ಸುವ್ಯವಸ್ಥೆ ಕಾಪಾಡುವುದಕ್ಕೆ ಸಾಧ್ಯ.
ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುವುದಕ್ಕೆ ಪೊಲೀಸರ ಸಂಬಳ ಕಡಿಮೆಯಾಗುವುದು ಕೂಡ ಕಾರಣ ಇರಬಹುದು. ಸರ್ಕಾರದ ಪ್ರಮುಖ ಇಲಾಖೆಯಲ್ಲಿಯೇ ಸುವ್ಯವಸ್ಥೆ ತರುವಲ್ಲಿ ಸರ್ಕಾರ ಸೋತಿದೆ ಎಂದು ಮಾತ್ನಾಡಿದ್ರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

