ದಿನದ ಸುದ್ದಿ

ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕ : ಎಸ್.ಕೆ.ಬಿ.ಪ್ರಸಾದ್

Published

on

ಸುದ್ದಿದಿನ,ಚಿತ್ರದುರ್ಗ: ಮಕ್ಕಳ ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಹೇಳಿದರು.

ನಗರದ ಡಯಟ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಿ.ಎಸ್.ಇ.ಆರ್.ಟಿ ಮತ್ತು ಡಯಟ್ ಸಂಯುಕ್ತಾಶ್ರಯದಲ್ಲಿ ಎನ್.ಇ.ಪಿ-2020 ಆಧಾರಿತ 8,9 ಮತ್ತು 10 ನೇ ತರಗತಿ ಸಮಾಜ ವಿಜ್ಞಾನ ‘ಸಂಜೀವಿನಿ’ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಪೈಲೆಟ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಗುವಿಗೆ ಸಾಮರ್ಥ್ಯಾಧಾರಿತ ಕಲಿಕೆ ಉಂಟು ಮಾಡಲು, ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ದಿಗೆ ತರಬೇತಿಗಳು ಪೂರಕವಾಗುತ್ತವೆ. ಭವಿಷ್ಯ ಜೀವನದಲ್ಲಿ ಮಕ್ಕಳು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಶಿಕ್ಷಕರು ಏನನ್ನು ಕಲಿಸುತ್ತಾರೆಯೋ ಮಗು ಅದನ್ನು ಕಲಿಯುತ್ತದೆ. ಶಿಕ್ಷಕರು ಬೋಧಿಸುವ ವಿಷಯವನ್ನು ಪ್ರೀತಿಸಬೇಕು. ಮಕ್ಕಳು ಆಸಕ್ತಿದಾಯಕವಾಗಿ ಕಲಿಯುವಂತೆ ಕಲಿಕಾ ಸಾಮಗ್ರಿಗಳೊಂದಿಗೆ ಚಟುವಟಿಕೆ ಆಧಾರಿತವಾಗಿ ಬೋಧಿಸಬೇಕು ಎಂದರು. ಎನ್.ಇ.ಪಿ – 2020 ರಲ್ಲಿ ಸಾಮರ್ಥ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗಿದ್ದು ತಂತ್ರಜ್ಞಾನ ಆಧಾರಿತ ಬೋಧನೆ ಮೂಲಕ ನಕಾಶೆ ಓದುವ, ಸ್ಥಳಗಳು, ನದಿಗಳ ಉಗಮ ಸ್ಥಾನ ಗುರುತಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.

ನೋಡಲ್ ಅಧಿಕಾರಿ ಡಿ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಲಿಕಾ ಫಲಗಳ ಆಧಾರಿತವಾಗಿ ತರಬೇತಿ ಸಾಹಿತ್ಯ ರಚನೆ ಮಾಡಲಾಗಿದೆ. ಶಿಬಿರಾರ್ಥಿಗಳು 5 ದಿನದ ತರಬೇತಿಯಲ್ಲಿ ಆಯೋಜಿಸುವ ಗುಂಪು ಚರ್ಚೆ, ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದರು.

ಹಿರಿಯ ಉಪನ್ಯಾಸಕರಾದ ಈ.ಹಾಲಮೂರ್ತಿ, ಮಹಮದ್ ಅಯೂಬ್, ಸಯ್ಯದ್ ಮೋಸಿನ್, ಉಪನ್ಯಾಸಕರಾದ ಆರ್.ನಾಗರಾಜು ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಕೆ.ಎಂ. ನಾಗರಾಜು, ತಾಂತ್ರಿಕ ಸಹಾಯಕ ಆರ್.ಲಿಂಗರಾಜು, ಕೆ.ಆರ್.ಲೋಕೇಶ್, ಸಂಪನ್ಮೂಲ ವ್ಯಕ್ತಿಗಳಾದ ಬಿ.ಟಿ.ನಾಗರಾಜು, ಉಮೇಶ್, ಮಾರುತಿ, ಮಲ್ಲಿಕಾರ್ಜುನ ಸ್ವಾಮಿ, ಶ್ರೀನಿವಾಸ, ಪ್ರಸನ್ನ ಕುಮಾರ, ಹುಸೇನ್ ಶರೀಫ್, ಶಿಕ್ಷಕಿ ಉಮಾ ಮತ್ತು ಶಿಬಿರಾರ್ಥಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version