ಸಿನಿ ಸುದ್ದಿ
ಕಾಲಿವುಡ್ ನಟರಿಗೆ ಕೋಟಿ ಕೋಟಿ ಸಂಭಾವನೆ? ಯಾರಿಗೆ ಎಷ್ಟು ಅಂತಾ ಗೊತ್ತ?
ಸುದ್ದಿದಿನ ಡೆಸ್ಕ್: ಬಾಲುವುಡ್ ನಂತೆ ಕಾಲಿವುಡ್ ನಟರೂ ಅತ್ಯಧಿಕ ಮೊತ್ತದ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಬಜೆಟ್ ನ ಅರ್ಧದಷ್ಟು ಆಗುತ್ತದೆ. ಇದು ನಿರ್ಮಾಪಕರಿಗೆ ದೊಡ್ಡ ತಲೆಬೀಸಿಯಾಗಿ ಪರಿಣಮಿಸಿದೆ. ಸಂಭಾವನೆ ಪರಿಷ್ಕರಣೆ ಮಾಡಿಕೊಳ್ಳುವಂತೆ ಆಗ್ರಹಿಸಿ ಕಾಲಿವುಡ್ ನಿರ್ಮಾಪಕರು 48 ದಿನ ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿ ಪ್ರತಿಭಟನೆ ನಡೆಸಿದೆ.
ನೂರು ಕೋಟಿ ಮೊತ್ತದ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುವ ತೆಲುಗು ನಟ 15ಕೋಟಿ ಸಂಭಾವನೆ ಕೇಳುತ್ತಾನೆ. ತೆಲುಗು ಚಿತ್ರರಂಗದ ಹಿರೋಗಳು ರಿಜನಬಲ್ ಸಂಭಾವನೆ ಪಡೆಯುತ್ತಾರೆ. ಆದರೆ, ಕಾಲಿವುಡ್ ನಲ್ಲಿ ನೂರು ಕೋಟಿ ಬಂಡವಾಳದ ಸಿನಿಮಾದಲ್ಲಿ ನಟಿಸಲು 50ಕೋಟಿ ವರೆಗೂ ಸಂಭಾವನೆ ಬೇಡಿಕೆ ಇಡುತ್ತಾರೆ. ಕಳೆದ ಎರಡು ವರ್ಷಗಳಿಂದ ಕಾಲಿವುಡ್ ನಿರ್ಮಾಪಕರಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಟಾಪ್ ನಟರ ಏರಿಸಬಾರದು ಎಂದು ಅನೇಕ ನಿರ್ಮಾಪಕರು ಒತ್ತಾಯಿಸಿದ್ದರು.
ಚಲನಚಿತ್ರ ಮಂಡಳಿಯು ಟಿಕೆಟ್ ಕಂಪ್ಯೂಟರೈಜ್ ಮಾಡಿರುವುದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ ಪಾರದರ್ಶಕವಾಗಿದೆ. ಚಿತ್ರ ಗಳಿಕೆ ಆಧರಿಸಿ ನಟ ತನ್ನ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾನೆ. ಆದರೆ ಇದು ನಿರ್ಮಾಪಕನಿಗೆ ಸಮಸ್ಯೆ ಆಗಿ ಪರಿಣಮಿಸಲಿದೆ.
ಇಲ್ಲಿದೆ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ
ರಜನಿಕಾಂತ್
ಏಷ್ಯಾದಲ್ಲಿ ಜಾಕಿ ಚಾನ್ ಹೊರತುಪಡಿಸಿದರೆ ರಜನಿಕಾಂತ್ ಅತ್ಯಧಿಕ ಸಂಭಾವನೆ ಪಡೆಯುವ ನಟ.
70 ದಶಕದಿಂದ ಇಂದಿನವರೆಗೂ ರಜನಿಕಾಂತ್ ಕಾಲಿವುಡ್ ಆಳುತ್ತಿದ್ದಾರೆ. 2007ರಲ್ಲಿ ತೆರೆಕಂಡ ಶಿವಾಜಿ ಚಿತ್ರದಲ್ಲಿ ನಟಿಸಿದ್ದಕ್ಕೆ 55ಕೋಟಿ ರೂ. ಪಡೆದರೆ ಕಬಾಲಿ ಚಿತ್ರಕ್ಕೆ 80ಕೋಟಿ ರೂ.ಗೆ ತಮ್ಮ ಸಂಭಾವನೆ ಏರಿಸಿಕೊಂಡಿದ್ದಾರೆ. ಬಹುತೇಕ ಎಲ್ಲಾ ಚಿತ್ರಗಳಿಗೆ 60ಕೋಟಿ ಪಡೆದಿದ್ದಾರೆ.
ಕಮಲ್ ಹಾಸನ್
ಕಮಲ್ ಹಾಸನ್ ಚಿತ್ರ ನಿರ್ಮಾಪಕರಿಗೆ ಆರ್ಥಿಕ ಹೊರೆ ಉಂಟು ಮಾಡದ, ರಿಜನಬಲ್ ಸಂಭಾವನೆ ಪಡೆಯುವ ಜನಪ್ರಿಯ ನಟ. ಕಮಲ್ ಹಾಸನ್ ಒಂದು ಚಿತ್ರಕ್ಕೆ 15ರಿಂದ 30 ಸಂಭಾವನೆ ಪಡೆಯುತ್ತಾರೆ. ಆದರೆ, ಬೇರೆ ಕೆಲಸ ವಹಿಸಿಕೊಂಡರೆ ಅದಕ್ಕೆ ಹೆಚ್ಚುವರಿ ವೇತನ ಪಡೆಯುತ್ತಾರೆ.
ದಳಪತಿ ವಿಜಯ್
ದಳಪತಿ ವಿಜಯ್ ಸದ್ಯ ಯುವ ನಟರಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟ. ಹತ್ತಿರ ಹತ್ತಿರ ರಜನಿಕಾಂತ್ ಅಷ್ಟೆ ವೇತನ ಗಳಿಸುತ್ತಾರೆ. ಚಿಂಬುದೇವನ್ ಅವರ ಫ್ಯಾಂಟಸಿ ಅಡ್ವೆಂಚರ್ ಸಿನಿಮಾ *ಪುಲಿ* ಸಿನಿಮಾಗೆ 30ಕೋಟಿ ಪಡೆದಿದ್ದಾರೆ.
130 ಕೋಟಿ ಬಜೆಟ್ ಸಿನಿಮಾ *ಮಾರ್ಷಲ್* ನಲ್ಲಿ ತಮ್ಮ ಸಂಬಳ ಹೆಚ್ಚಿಸಿಕೊಂಡಿದ್ದಾರೆ.
ಅಜಿತ್
ಅಜಿತ್ ನಟನೆಯ ವಿವೇಕಂ ಚಿತ್ರವು ಭಾರಿ ಮೊತ್ತ ಹಣ ಬಾಜಿಕೊಂಡಿತು. ಇದು ಸಿನಿಮಾ ಕರೀಯರ್ ನಲ್ಲಿ ಹೆಚ್ಚು ಮೊತ್ತ ಗಳಿಸಿದ ಚಿತ್ರ. ಇವರು ಸಾಮಾನ್ಯವಾಗಿ 25ರಿಂದ 40 ಕೋಟಿ ಸಂಭಾವನೆ ಪಡೆಯುತ್ತಾರೆ. ಮುಂದೆ ತಮ್ಮ ವೇತನ ಹೆಚ್ಚಿಸಿಕೊಳ್ಳಬಹುದು.
ಸೂರ್ಯ
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹೆಚ್ವು ಅಭಿಮಾನಿಗಳನ್ನು ಹೊಂದಿರುವ ನಟ ಸೂರ್ಯ. ಸೂರ್ಯ ನಟಿಸಿದ ಸಿನಿಮಾಗಳು ಬೇರೆ ಡಬ್ ಆದರೂ ದೊಡ್ಡ ಲಾಭ ತಂದುಕೊಡುತ್ತವೆ. ಹಾಗಾಗಿ, ಸೂರ್ಯ ತಮಿಳು ಸಿನಿಮಾಗೆ 18ರಿಂದ 25 ಕೋಟಿ ಪಡೆದರೆ, ಡಬ್ ಸಿನೆಮಾಗಳಿಗೆ 10ಕೋಟಿ ಗಳಿಸುತ್ತಾರೆ.
ವಿಕ್ರಂ
ಪಾತ್ರಕ್ಕೆ ಜೀವ ತುಂಬುವಂತೆ ಪಕ್ವ ನಟನೆಯ ಹೀರೋ ವಿಕ್ರಂ. ಚಿತ್ರ ಪಾತ್ರ ನ್ಯಾಯ ಒದಗಿಸಲು ವಿಕ್ರಂ ತಮ್ಮ ದೇಹ ತೂಕವನ್ನು 20ಕೆಜಿ ಇಳಿಸಿಕೊಂಡಿದ್ದರು. ಸಾಮಾನ್ಯವಾಗಿ ವಿಕ್ರಂ 15ರಿಂದ 20 ಕೋಟಿ ರೂ. ಗಳಿಸುತ್ತಾರೆ.
ಧನುಷ್
ಧನುಷ್ ಅವರ ಸಿನಿಮಾ ಪಯಣ ಯುವ ಪ್ರತಿಭೆಗಳಿಗೆ ಪ್ರೇರಣೆ. ಹೀರೋ ಆಗಿ ಕಾಣಿಸಿಕೊಳ್ಳುವ ಲೂಕ್ ಆಗಲಿ, ಪರ್ಸನಾಲಿಟಿ ಇಲ್ಲ. ಅವರ ಕಾಯಕ ಶ್ರದ್ಧೆ ತಮ್ಮ ಮೈನಸ್ ಪಾಯಿಂಟ್ ನ್ನು ಮೀರಿ ನಿಂತು ಹಾಲಿವುಡ್ ಹೀರೋ ಆಗಿದ್ದಾರೆ.
ಧನುಷ್ ಕೂಡ ಒಬ್ಬ ಪ್ರಡ್ಯುಜರ್ ಆಗಿದ್ದು, ಒಂದು ಸಿನಿಮಾಕ್ಕೆ 20ಕೋಟಿ ಸಂಭಾವನೆ ಗಳಿಸುತ್ತಾರೆ. ಪ್ರಡಕ್ಷನ್ ಕಂಪನಿಗೆ ತಕ್ಕಂತೆ ವೇತನ ಹೆಚ್ಚಿಸಿಕೊಳ್ಳುತ್ತಾರೆ, ಕಡಿಮೆಯೂ ಮಾಡಿಕೊಳ್ಳುತ್ತಾರೆ.
ಸಿಂಬು ಅಕ ಎಸ್.ಟಿ.ಆರ್.
ಧನುಷ್ ಅವರಂತೆ ಬಹುಮುಖ ಪ್ರತಿಭಾ ನಟ *ಸಿಂಬು ಅಕ ಎಸ್.ಟಿ.ಆರ್*. *ಮನ್ಮಥನ್*, *ವಲ್ಲವನ್* ಚಿತ್ರಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಆದರೆ, ಸೆಟ್ಗಳಲ್ಲಿ ಅವರ ಅನ್ ಪ್ರೊಫೆಷನಲ್ ಬಿಹೆವಿಯರ್ ಬಗ್ಗೆ ಫಿಲ್ಮ್ ಮೇಕರ್ ಗಳಲ್ಲಿ ಅಸಮಾಧಾನವಿದೆ. ಆದರೂ, ಅವರ ಫ್ಯಾನ್ಸ್ ಮಾತ್ರ ಪ್ರೋತ್ಸಾಹಿಸುತ್ತಾರೆ. ಇವರು ಒಂದು ಸಿನಿಮಾಗೆ 10ಕೋಟಿ ವೇತನ ತೆಗೆಕೊಳ್ಳುತ್ತಾರೆ.

ದಿನದ ಸುದ್ದಿ
ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.
ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.
ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.
ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್ ಈಗ ಹಲವರ ಗಮನ ಸೆಳೆದಿದೆ.
ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.
ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.
ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://instagram.com/shalu2626?igshid=YmMyMTA2M2Y=
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.
ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.
ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಟ್ರೇಲರ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ