ಸಿನಿ ಸುದ್ದಿ
ಕಾಲಿವುಡ್ ನಟರಿಗೆ ಕೋಟಿ ಕೋಟಿ ಸಂಭಾವನೆ? ಯಾರಿಗೆ ಎಷ್ಟು ಅಂತಾ ಗೊತ್ತ?
ಸುದ್ದಿದಿನ ಡೆಸ್ಕ್: ಬಾಲುವುಡ್ ನಂತೆ ಕಾಲಿವುಡ್ ನಟರೂ ಅತ್ಯಧಿಕ ಮೊತ್ತದ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಬಜೆಟ್ ನ ಅರ್ಧದಷ್ಟು ಆಗುತ್ತದೆ. ಇದು ನಿರ್ಮಾಪಕರಿಗೆ ದೊಡ್ಡ ತಲೆಬೀಸಿಯಾಗಿ ಪರಿಣಮಿಸಿದೆ. ಸಂಭಾವನೆ ಪರಿಷ್ಕರಣೆ ಮಾಡಿಕೊಳ್ಳುವಂತೆ ಆಗ್ರಹಿಸಿ ಕಾಲಿವುಡ್ ನಿರ್ಮಾಪಕರು 48 ದಿನ ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿ ಪ್ರತಿಭಟನೆ ನಡೆಸಿದೆ.
ನೂರು ಕೋಟಿ ಮೊತ್ತದ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುವ ತೆಲುಗು ನಟ 15ಕೋಟಿ ಸಂಭಾವನೆ ಕೇಳುತ್ತಾನೆ. ತೆಲುಗು ಚಿತ್ರರಂಗದ ಹಿರೋಗಳು ರಿಜನಬಲ್ ಸಂಭಾವನೆ ಪಡೆಯುತ್ತಾರೆ. ಆದರೆ, ಕಾಲಿವುಡ್ ನಲ್ಲಿ ನೂರು ಕೋಟಿ ಬಂಡವಾಳದ ಸಿನಿಮಾದಲ್ಲಿ ನಟಿಸಲು 50ಕೋಟಿ ವರೆಗೂ ಸಂಭಾವನೆ ಬೇಡಿಕೆ ಇಡುತ್ತಾರೆ. ಕಳೆದ ಎರಡು ವರ್ಷಗಳಿಂದ ಕಾಲಿವುಡ್ ನಿರ್ಮಾಪಕರಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಟಾಪ್ ನಟರ ಏರಿಸಬಾರದು ಎಂದು ಅನೇಕ ನಿರ್ಮಾಪಕರು ಒತ್ತಾಯಿಸಿದ್ದರು.
ಚಲನಚಿತ್ರ ಮಂಡಳಿಯು ಟಿಕೆಟ್ ಕಂಪ್ಯೂಟರೈಜ್ ಮಾಡಿರುವುದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ ಪಾರದರ್ಶಕವಾಗಿದೆ. ಚಿತ್ರ ಗಳಿಕೆ ಆಧರಿಸಿ ನಟ ತನ್ನ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾನೆ. ಆದರೆ ಇದು ನಿರ್ಮಾಪಕನಿಗೆ ಸಮಸ್ಯೆ ಆಗಿ ಪರಿಣಮಿಸಲಿದೆ.
ಇಲ್ಲಿದೆ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ
ರಜನಿಕಾಂತ್
ಏಷ್ಯಾದಲ್ಲಿ ಜಾಕಿ ಚಾನ್ ಹೊರತುಪಡಿಸಿದರೆ ರಜನಿಕಾಂತ್ ಅತ್ಯಧಿಕ ಸಂಭಾವನೆ ಪಡೆಯುವ ನಟ.
70 ದಶಕದಿಂದ ಇಂದಿನವರೆಗೂ ರಜನಿಕಾಂತ್ ಕಾಲಿವುಡ್ ಆಳುತ್ತಿದ್ದಾರೆ. 2007ರಲ್ಲಿ ತೆರೆಕಂಡ ಶಿವಾಜಿ ಚಿತ್ರದಲ್ಲಿ ನಟಿಸಿದ್ದಕ್ಕೆ 55ಕೋಟಿ ರೂ. ಪಡೆದರೆ ಕಬಾಲಿ ಚಿತ್ರಕ್ಕೆ 80ಕೋಟಿ ರೂ.ಗೆ ತಮ್ಮ ಸಂಭಾವನೆ ಏರಿಸಿಕೊಂಡಿದ್ದಾರೆ. ಬಹುತೇಕ ಎಲ್ಲಾ ಚಿತ್ರಗಳಿಗೆ 60ಕೋಟಿ ಪಡೆದಿದ್ದಾರೆ.
ಕಮಲ್ ಹಾಸನ್
ಕಮಲ್ ಹಾಸನ್ ಚಿತ್ರ ನಿರ್ಮಾಪಕರಿಗೆ ಆರ್ಥಿಕ ಹೊರೆ ಉಂಟು ಮಾಡದ, ರಿಜನಬಲ್ ಸಂಭಾವನೆ ಪಡೆಯುವ ಜನಪ್ರಿಯ ನಟ. ಕಮಲ್ ಹಾಸನ್ ಒಂದು ಚಿತ್ರಕ್ಕೆ 15ರಿಂದ 30 ಸಂಭಾವನೆ ಪಡೆಯುತ್ತಾರೆ. ಆದರೆ, ಬೇರೆ ಕೆಲಸ ವಹಿಸಿಕೊಂಡರೆ ಅದಕ್ಕೆ ಹೆಚ್ಚುವರಿ ವೇತನ ಪಡೆಯುತ್ತಾರೆ.
ದಳಪತಿ ವಿಜಯ್
ದಳಪತಿ ವಿಜಯ್ ಸದ್ಯ ಯುವ ನಟರಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟ. ಹತ್ತಿರ ಹತ್ತಿರ ರಜನಿಕಾಂತ್ ಅಷ್ಟೆ ವೇತನ ಗಳಿಸುತ್ತಾರೆ. ಚಿಂಬುದೇವನ್ ಅವರ ಫ್ಯಾಂಟಸಿ ಅಡ್ವೆಂಚರ್ ಸಿನಿಮಾ *ಪುಲಿ* ಸಿನಿಮಾಗೆ 30ಕೋಟಿ ಪಡೆದಿದ್ದಾರೆ.
130 ಕೋಟಿ ಬಜೆಟ್ ಸಿನಿಮಾ *ಮಾರ್ಷಲ್* ನಲ್ಲಿ ತಮ್ಮ ಸಂಬಳ ಹೆಚ್ಚಿಸಿಕೊಂಡಿದ್ದಾರೆ.
ಅಜಿತ್
ಅಜಿತ್ ನಟನೆಯ ವಿವೇಕಂ ಚಿತ್ರವು ಭಾರಿ ಮೊತ್ತ ಹಣ ಬಾಜಿಕೊಂಡಿತು. ಇದು ಸಿನಿಮಾ ಕರೀಯರ್ ನಲ್ಲಿ ಹೆಚ್ಚು ಮೊತ್ತ ಗಳಿಸಿದ ಚಿತ್ರ. ಇವರು ಸಾಮಾನ್ಯವಾಗಿ 25ರಿಂದ 40 ಕೋಟಿ ಸಂಭಾವನೆ ಪಡೆಯುತ್ತಾರೆ. ಮುಂದೆ ತಮ್ಮ ವೇತನ ಹೆಚ್ಚಿಸಿಕೊಳ್ಳಬಹುದು.
ಸೂರ್ಯ
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹೆಚ್ವು ಅಭಿಮಾನಿಗಳನ್ನು ಹೊಂದಿರುವ ನಟ ಸೂರ್ಯ. ಸೂರ್ಯ ನಟಿಸಿದ ಸಿನಿಮಾಗಳು ಬೇರೆ ಡಬ್ ಆದರೂ ದೊಡ್ಡ ಲಾಭ ತಂದುಕೊಡುತ್ತವೆ. ಹಾಗಾಗಿ, ಸೂರ್ಯ ತಮಿಳು ಸಿನಿಮಾಗೆ 18ರಿಂದ 25 ಕೋಟಿ ಪಡೆದರೆ, ಡಬ್ ಸಿನೆಮಾಗಳಿಗೆ 10ಕೋಟಿ ಗಳಿಸುತ್ತಾರೆ.
ವಿಕ್ರಂ
ಪಾತ್ರಕ್ಕೆ ಜೀವ ತುಂಬುವಂತೆ ಪಕ್ವ ನಟನೆಯ ಹೀರೋ ವಿಕ್ರಂ. ಚಿತ್ರ ಪಾತ್ರ ನ್ಯಾಯ ಒದಗಿಸಲು ವಿಕ್ರಂ ತಮ್ಮ ದೇಹ ತೂಕವನ್ನು 20ಕೆಜಿ ಇಳಿಸಿಕೊಂಡಿದ್ದರು. ಸಾಮಾನ್ಯವಾಗಿ ವಿಕ್ರಂ 15ರಿಂದ 20 ಕೋಟಿ ರೂ. ಗಳಿಸುತ್ತಾರೆ.
ಧನುಷ್
ಧನುಷ್ ಅವರ ಸಿನಿಮಾ ಪಯಣ ಯುವ ಪ್ರತಿಭೆಗಳಿಗೆ ಪ್ರೇರಣೆ. ಹೀರೋ ಆಗಿ ಕಾಣಿಸಿಕೊಳ್ಳುವ ಲೂಕ್ ಆಗಲಿ, ಪರ್ಸನಾಲಿಟಿ ಇಲ್ಲ. ಅವರ ಕಾಯಕ ಶ್ರದ್ಧೆ ತಮ್ಮ ಮೈನಸ್ ಪಾಯಿಂಟ್ ನ್ನು ಮೀರಿ ನಿಂತು ಹಾಲಿವುಡ್ ಹೀರೋ ಆಗಿದ್ದಾರೆ.
ಧನುಷ್ ಕೂಡ ಒಬ್ಬ ಪ್ರಡ್ಯುಜರ್ ಆಗಿದ್ದು, ಒಂದು ಸಿನಿಮಾಕ್ಕೆ 20ಕೋಟಿ ಸಂಭಾವನೆ ಗಳಿಸುತ್ತಾರೆ. ಪ್ರಡಕ್ಷನ್ ಕಂಪನಿಗೆ ತಕ್ಕಂತೆ ವೇತನ ಹೆಚ್ಚಿಸಿಕೊಳ್ಳುತ್ತಾರೆ, ಕಡಿಮೆಯೂ ಮಾಡಿಕೊಳ್ಳುತ್ತಾರೆ.
ಸಿಂಬು ಅಕ ಎಸ್.ಟಿ.ಆರ್.
ಧನುಷ್ ಅವರಂತೆ ಬಹುಮುಖ ಪ್ರತಿಭಾ ನಟ *ಸಿಂಬು ಅಕ ಎಸ್.ಟಿ.ಆರ್*. *ಮನ್ಮಥನ್*, *ವಲ್ಲವನ್* ಚಿತ್ರಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಆದರೆ, ಸೆಟ್ಗಳಲ್ಲಿ ಅವರ ಅನ್ ಪ್ರೊಫೆಷನಲ್ ಬಿಹೆವಿಯರ್ ಬಗ್ಗೆ ಫಿಲ್ಮ್ ಮೇಕರ್ ಗಳಲ್ಲಿ ಅಸಮಾಧಾನವಿದೆ. ಆದರೂ, ಅವರ ಫ್ಯಾನ್ಸ್ ಮಾತ್ರ ಪ್ರೋತ್ಸಾಹಿಸುತ್ತಾರೆ. ಇವರು ಒಂದು ಸಿನಿಮಾಗೆ 10ಕೋಟಿ ವೇತನ ತೆಗೆಕೊಳ್ಳುತ್ತಾರೆ.
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243