ದಿನದ ಸುದ್ದಿ
ಬಾಂಬ್ ಸೈಕ್ಲೋನ್
ಭಾರತದಲ್ಲಿ ಮಾನ್ಸೂನ್ ಪ್ರವೇಶ ಹಾಗೂ ಹಿಂದಿರುಗುವಿಕೆ ನಡುವಿನ ಅವಧಿಯಲ್ಲಷ್ಟೇ ಚಂಡಮಾರುತ (ಸೈಕ್ಲೋನ್) ಉಂಟಾಗುತ್ತವೆ. ಇಲ್ಲಿ ಸೈಕ್ಲೋನ್ ಎಂದರೆ ವೇಗದ ಗಾಳಿ, ಬಿಡದೆ ಸುರಿಯುವ ಮಳೆಯಷ್ಟೇ ಇರುತ್ತದೆ. ಆದರೆ, ವಿಶ್ವದ ವಿವಿಧ ಪ್ರದೇಶಗಳಲ್ಲಿ ಉಂಟಾಗುವ ಚಂಡಮಾರುತಗಳು ರೌದ್ರವಾಗಿರುತ್ತದೆ.
ಕೆಲ ಪ್ರದೇಶಗಳಲ್ಲಿ ಮಳೆಗಾಲದಲ್ಲಷ್ಟೇ ಅಲ್ಲದೆ ಚಳಿಗಾಲದಲ್ಲೂ ಸೈಕ್ಲೋನ್ ಉಂಟಾಗುತ್ತದೆ.ಹೀಗೆ ಚಳಿಗಾಲದಲ್ಲಿ ಉಂಟಾಗುವ ಬಿರುಗಾಳಿಗೆ ‘ಬಾಂಬ್ ಸೈಕ್ಲೋನ್’ ಎನ್ನುತ್ತಾರೆ. ಮುಖ್ಯವಾಗಿ ಉತ್ತರ ಅಮೆರಿಕ ಪ್ರದೇಶದಲ್ಲಿ ಬಾಂಬ್ ಸೈಕ್ಲೋನ್ ಉಂಟಾಗುತ್ತದೆ. ಈ ಭಾಗದಲ್ಲಿ 8 ಕೋಟಿಗೂ ಹೆಚ್ಚು ಜನ ನೆಲೆಸಿದ್ದು, ಸುಮಾರು 2.2 ಕೋಟಿ ಜನ ಕರಾವಳಿ ಪ್ರವಾಹದ ಅಪಾಯಕ್ಕೆ ಸಿಲುಕುತ್ತಾರೆ.
ಏನಿದು ಬಾಂಬ್ ಸೈಕ್ಲೋನ್?: ಚಳಿಗಾಲದ ಬಿರುಗಾಳಿ ಕ್ಷಿಪ್ರವಾಗಿ ರೂಪುಗೊಂಡು, ಹೆಚ್ಚು ವೇಗವಾಗಿ ಬೀಸುವುದರಿಂದ ಹವಾಮಾನ ಶಾಸ್ತ್ರಜ್ಞರು ಇದಕ್ಕೆ ‘ಬಾಂಬ್ ಸೈಕ್ಲೋನ್’ ಎಂದು ಹೆಸರಿಟ್ಟಿದ್ದಾರೆ. ಸುಮಾರು 24 ಗಂಟೆಗಳ ಕಾಲ ವಾತಾವರಣದ ಒತ್ತಡ 24 ಮಿಲಿಬಾರ್ನಷ್ಟು ಕನಿಷ್ಠ ಮಟ್ಟದಲ್ಲಿದ್ದಾಗ ಈ ಬಾಂಬ್ ಸೈಕ್ಲೋನ್ಗಳು ರೂಪುಗೊಳ್ಳುತ್ತವೆ. ಕೆಲವೇ ನಿಮಿಷಗಳಲ್ಲಿ ರೂಪುಗೊಂಡು ಪ್ರಚಂಡ ವೇಗದಲ್ಲಿ ಬೀಸಲಾರಂಭಿಸುತ್ತವೆ.ವಾತಾವರಣದ ಒತ್ತಡ ಕಡಿಮೆಯಾದಷ್ಟೂ, ಬಿರುಗಾಳಿಯ ತೀವ್ರತೆ ಹೆಚ್ಚಿರುತ್ತದೆ.
ಕಾರ್ಯಚಟುವಟಿಕೆ ಹೇಗೆ?: ವಾತಾವರಣದಲ್ಲಿ ಉಷ್ಣಗಾಳಿ ಮತ್ತು ಶೀತಗಾಳಿಗಳೆರಡೂ ಸಂಧಿಸಿದಾಗ ವಾತಾವರಣದಲ್ಲಿ ಭಾರಿ ವಾಯುಭಾರ ಕುಸಿತವಾಗುತ್ತದೆ. ಭೂಮಿ ಚಲನೆಯ ಪರಿಣಾಮ ಗಾಳಿಯೂ ಚಲಿಸಲಾರಂಭಿಸುತ್ತದೆ. ಇದರಿಂದ ಚಂಡಮಾರುತ ಉಂಟಾಗುತ್ತದೆ. ಈ ರೀತಿ ಉಂಟಾಗುವ ಚಂಡಮಾರುತಗಳು ಉತ್ತರಗೋಳಾರ್ಧದಲ್ಲಿ ಅಪ್ರದಕ್ಷಿಣವಾಗಿ (Counterclockwise) ಸುತ್ತುತ್ತವೆ.
ಹರಿಕೇನ್, ಸೈಕ್ಲೋನ್, ಟೈಫೋನ್ಗಳ ವ್ಯತ್ಯಾಸ:
ಹರಿಕೇನ್, ಸೈಕ್ಲೋನ್ ಹಾಗೂ ಟೈಫೋನ್ಗಳೆಲ್ಲವೂ ಉಷ್ಣವಲಯದ ಬಿರುಗಾಳಿಗಳಾಗಿವೆ. ಇವೆಲ್ಲವುಗಳ ಗುಣಗಳು ಒಂದೇ ಆಗಿದ್ದು, ವಿವಿಧ ಪ್ರದೇಶಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗಿದೆ.
ಈ ಚಂಡಮಾರುತಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸಿದವೆಂದರೆ ಆಸ್ತಿ ಹಾಗೂ ಜೀವ ಹಾನಿ ಉಂಟುಮಾಡುತ್ತವೆ. ಉತ್ತರ ಅಟ್ಲಾಂಟಿಕ್ ಹಾಗೂ ಈಶಾನ್ಯ ಪೆಸಿಫಿಕ್ ಸಾಗರಗಳಲ್ಲಿ ಉಂಟಾಗುವ ಚಂಡಮಾರುತಗಳಿಗೆ ಹರಿಕೇನ್ ಎನ್ನುತ್ತಾರೆ.
ದಕ್ಷಿಣ ಪೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಸೈಕ್ಲೋನ್ ಎಂದೂ, ವಾಯವ್ಯ ಪೆಸಿಫಿಕ್ ಭಾಗದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಟೈಪೋನ್ಗಳೆಂದು ಕರೆಯುತ್ತಾರೆ. ಇದಲ್ಲದೆ ಸ್ಥಳೀಯವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.
ಪ್ರಪಂಚದ ಮುಖ್ಯ ಸ್ಥಳೀಯ ಮಾರುತಗಳು:
* ಪೋಹನ್ – ಮಧ್ಯ ಯೂರೋಪ್
* ಚಿನೂಕ್ – ರಾಕಿ ಪರ್ವತ
* ಸಾಂತಾ ಆನಾ – ಕ್ಯಾಲಿಫೋರ್ನಿಯಾ
* ಯಾಮೋ- ಜಪಾನ್
* ಜೋಂಡಾ – ಅರ್ಜೆಂಟೈನಾದ ಆ್ಯಂಡೀಸ್’
* ಪರ್ವತ
* ಬ್ರಿಕ್ ಫೀಲ್ಡರ್ – ಆಸ್ಟ್ರೇಲಿಯಾ
* ಖಾಮ್ಸಿನ್ – ಈಜಿಪ್
* ಸಿಮೂನ್ – ಸಹರಾ ಮರುಭೂಮಿ
* ಬ್ಯಾಕ್ ರೋಲರ್ – ಯುಎಸ್ಎ
* ನಾರ್ವೆಸ್ಟರ್- ಆಸ್ಟ್ರೇಲಿಯಾ ಹಾಗೂ ಪಶ್ಚಿಮ ಭಾರತ
(ಸಂಗ್ರಹ)
ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


