ದಿನದ ಸುದ್ದಿ
ಬಾಂಬ್ ಸೈಕ್ಲೋನ್

ಭಾರತದಲ್ಲಿ ಮಾನ್ಸೂನ್ ಪ್ರವೇಶ ಹಾಗೂ ಹಿಂದಿರುಗುವಿಕೆ ನಡುವಿನ ಅವಧಿಯಲ್ಲಷ್ಟೇ ಚಂಡಮಾರುತ (ಸೈಕ್ಲೋನ್) ಉಂಟಾಗುತ್ತವೆ. ಇಲ್ಲಿ ಸೈಕ್ಲೋನ್ ಎಂದರೆ ವೇಗದ ಗಾಳಿ, ಬಿಡದೆ ಸುರಿಯುವ ಮಳೆಯಷ್ಟೇ ಇರುತ್ತದೆ. ಆದರೆ, ವಿಶ್ವದ ವಿವಿಧ ಪ್ರದೇಶಗಳಲ್ಲಿ ಉಂಟಾಗುವ ಚಂಡಮಾರುತಗಳು ರೌದ್ರವಾಗಿರುತ್ತದೆ.
ಕೆಲ ಪ್ರದೇಶಗಳಲ್ಲಿ ಮಳೆಗಾಲದಲ್ಲಷ್ಟೇ ಅಲ್ಲದೆ ಚಳಿಗಾಲದಲ್ಲೂ ಸೈಕ್ಲೋನ್ ಉಂಟಾಗುತ್ತದೆ.ಹೀಗೆ ಚಳಿಗಾಲದಲ್ಲಿ ಉಂಟಾಗುವ ಬಿರುಗಾಳಿಗೆ ‘ಬಾಂಬ್ ಸೈಕ್ಲೋನ್’ ಎನ್ನುತ್ತಾರೆ. ಮುಖ್ಯವಾಗಿ ಉತ್ತರ ಅಮೆರಿಕ ಪ್ರದೇಶದಲ್ಲಿ ಬಾಂಬ್ ಸೈಕ್ಲೋನ್ ಉಂಟಾಗುತ್ತದೆ. ಈ ಭಾಗದಲ್ಲಿ 8 ಕೋಟಿಗೂ ಹೆಚ್ಚು ಜನ ನೆಲೆಸಿದ್ದು, ಸುಮಾರು 2.2 ಕೋಟಿ ಜನ ಕರಾವಳಿ ಪ್ರವಾಹದ ಅಪಾಯಕ್ಕೆ ಸಿಲುಕುತ್ತಾರೆ.
ಏನಿದು ಬಾಂಬ್ ಸೈಕ್ಲೋನ್?: ಚಳಿಗಾಲದ ಬಿರುಗಾಳಿ ಕ್ಷಿಪ್ರವಾಗಿ ರೂಪುಗೊಂಡು, ಹೆಚ್ಚು ವೇಗವಾಗಿ ಬೀಸುವುದರಿಂದ ಹವಾಮಾನ ಶಾಸ್ತ್ರಜ್ಞರು ಇದಕ್ಕೆ ‘ಬಾಂಬ್ ಸೈಕ್ಲೋನ್’ ಎಂದು ಹೆಸರಿಟ್ಟಿದ್ದಾರೆ. ಸುಮಾರು 24 ಗಂಟೆಗಳ ಕಾಲ ವಾತಾವರಣದ ಒತ್ತಡ 24 ಮಿಲಿಬಾರ್ನಷ್ಟು ಕನಿಷ್ಠ ಮಟ್ಟದಲ್ಲಿದ್ದಾಗ ಈ ಬಾಂಬ್ ಸೈಕ್ಲೋನ್ಗಳು ರೂಪುಗೊಳ್ಳುತ್ತವೆ. ಕೆಲವೇ ನಿಮಿಷಗಳಲ್ಲಿ ರೂಪುಗೊಂಡು ಪ್ರಚಂಡ ವೇಗದಲ್ಲಿ ಬೀಸಲಾರಂಭಿಸುತ್ತವೆ.ವಾತಾವರಣದ ಒತ್ತಡ ಕಡಿಮೆಯಾದಷ್ಟೂ, ಬಿರುಗಾಳಿಯ ತೀವ್ರತೆ ಹೆಚ್ಚಿರುತ್ತದೆ.
ಕಾರ್ಯಚಟುವಟಿಕೆ ಹೇಗೆ?: ವಾತಾವರಣದಲ್ಲಿ ಉಷ್ಣಗಾಳಿ ಮತ್ತು ಶೀತಗಾಳಿಗಳೆರಡೂ ಸಂಧಿಸಿದಾಗ ವಾತಾವರಣದಲ್ಲಿ ಭಾರಿ ವಾಯುಭಾರ ಕುಸಿತವಾಗುತ್ತದೆ. ಭೂಮಿ ಚಲನೆಯ ಪರಿಣಾಮ ಗಾಳಿಯೂ ಚಲಿಸಲಾರಂಭಿಸುತ್ತದೆ. ಇದರಿಂದ ಚಂಡಮಾರುತ ಉಂಟಾಗುತ್ತದೆ. ಈ ರೀತಿ ಉಂಟಾಗುವ ಚಂಡಮಾರುತಗಳು ಉತ್ತರಗೋಳಾರ್ಧದಲ್ಲಿ ಅಪ್ರದಕ್ಷಿಣವಾಗಿ (Counterclockwise) ಸುತ್ತುತ್ತವೆ.
ಹರಿಕೇನ್, ಸೈಕ್ಲೋನ್, ಟೈಫೋನ್ಗಳ ವ್ಯತ್ಯಾಸ:
ಹರಿಕೇನ್, ಸೈಕ್ಲೋನ್ ಹಾಗೂ ಟೈಫೋನ್ಗಳೆಲ್ಲವೂ ಉಷ್ಣವಲಯದ ಬಿರುಗಾಳಿಗಳಾಗಿವೆ. ಇವೆಲ್ಲವುಗಳ ಗುಣಗಳು ಒಂದೇ ಆಗಿದ್ದು, ವಿವಿಧ ಪ್ರದೇಶಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗಿದೆ.
ಈ ಚಂಡಮಾರುತಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸಿದವೆಂದರೆ ಆಸ್ತಿ ಹಾಗೂ ಜೀವ ಹಾನಿ ಉಂಟುಮಾಡುತ್ತವೆ. ಉತ್ತರ ಅಟ್ಲಾಂಟಿಕ್ ಹಾಗೂ ಈಶಾನ್ಯ ಪೆಸಿಫಿಕ್ ಸಾಗರಗಳಲ್ಲಿ ಉಂಟಾಗುವ ಚಂಡಮಾರುತಗಳಿಗೆ ಹರಿಕೇನ್ ಎನ್ನುತ್ತಾರೆ.
ದಕ್ಷಿಣ ಪೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಸೈಕ್ಲೋನ್ ಎಂದೂ, ವಾಯವ್ಯ ಪೆಸಿಫಿಕ್ ಭಾಗದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಟೈಪೋನ್ಗಳೆಂದು ಕರೆಯುತ್ತಾರೆ. ಇದಲ್ಲದೆ ಸ್ಥಳೀಯವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.
ಪ್ರಪಂಚದ ಮುಖ್ಯ ಸ್ಥಳೀಯ ಮಾರುತಗಳು:
* ಪೋಹನ್ – ಮಧ್ಯ ಯೂರೋಪ್
* ಚಿನೂಕ್ – ರಾಕಿ ಪರ್ವತ
* ಸಾಂತಾ ಆನಾ – ಕ್ಯಾಲಿಫೋರ್ನಿಯಾ
* ಯಾಮೋ- ಜಪಾನ್
* ಜೋಂಡಾ – ಅರ್ಜೆಂಟೈನಾದ ಆ್ಯಂಡೀಸ್’
* ಪರ್ವತ
* ಬ್ರಿಕ್ ಫೀಲ್ಡರ್ – ಆಸ್ಟ್ರೇಲಿಯಾ
* ಖಾಮ್ಸಿನ್ – ಈಜಿಪ್
* ಸಿಮೂನ್ – ಸಹರಾ ಮರುಭೂಮಿ
* ಬ್ಯಾಕ್ ರೋಲರ್ – ಯುಎಸ್ಎ
* ನಾರ್ವೆಸ್ಟರ್- ಆಸ್ಟ್ರೇಲಿಯಾ ಹಾಗೂ ಪಶ್ಚಿಮ ಭಾರತ
(ಸಂಗ್ರಹ)
ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
