ದಿನದ ಸುದ್ದಿ
ಬಾಂಬ್ ಸೈಕ್ಲೋನ್
![](https://suddidina.com/wp-content/uploads/2018/04/104936091-NASA_bomb_cyclone.530x298.jpg)
ಭಾರತದಲ್ಲಿ ಮಾನ್ಸೂನ್ ಪ್ರವೇಶ ಹಾಗೂ ಹಿಂದಿರುಗುವಿಕೆ ನಡುವಿನ ಅವಧಿಯಲ್ಲಷ್ಟೇ ಚಂಡಮಾರುತ (ಸೈಕ್ಲೋನ್) ಉಂಟಾಗುತ್ತವೆ. ಇಲ್ಲಿ ಸೈಕ್ಲೋನ್ ಎಂದರೆ ವೇಗದ ಗಾಳಿ, ಬಿಡದೆ ಸುರಿಯುವ ಮಳೆಯಷ್ಟೇ ಇರುತ್ತದೆ. ಆದರೆ, ವಿಶ್ವದ ವಿವಿಧ ಪ್ರದೇಶಗಳಲ್ಲಿ ಉಂಟಾಗುವ ಚಂಡಮಾರುತಗಳು ರೌದ್ರವಾಗಿರುತ್ತದೆ.
ಕೆಲ ಪ್ರದೇಶಗಳಲ್ಲಿ ಮಳೆಗಾಲದಲ್ಲಷ್ಟೇ ಅಲ್ಲದೆ ಚಳಿಗಾಲದಲ್ಲೂ ಸೈಕ್ಲೋನ್ ಉಂಟಾಗುತ್ತದೆ.ಹೀಗೆ ಚಳಿಗಾಲದಲ್ಲಿ ಉಂಟಾಗುವ ಬಿರುಗಾಳಿಗೆ ‘ಬಾಂಬ್ ಸೈಕ್ಲೋನ್’ ಎನ್ನುತ್ತಾರೆ. ಮುಖ್ಯವಾಗಿ ಉತ್ತರ ಅಮೆರಿಕ ಪ್ರದೇಶದಲ್ಲಿ ಬಾಂಬ್ ಸೈಕ್ಲೋನ್ ಉಂಟಾಗುತ್ತದೆ. ಈ ಭಾಗದಲ್ಲಿ 8 ಕೋಟಿಗೂ ಹೆಚ್ಚು ಜನ ನೆಲೆಸಿದ್ದು, ಸುಮಾರು 2.2 ಕೋಟಿ ಜನ ಕರಾವಳಿ ಪ್ರವಾಹದ ಅಪಾಯಕ್ಕೆ ಸಿಲುಕುತ್ತಾರೆ.
ಏನಿದು ಬಾಂಬ್ ಸೈಕ್ಲೋನ್?: ಚಳಿಗಾಲದ ಬಿರುಗಾಳಿ ಕ್ಷಿಪ್ರವಾಗಿ ರೂಪುಗೊಂಡು, ಹೆಚ್ಚು ವೇಗವಾಗಿ ಬೀಸುವುದರಿಂದ ಹವಾಮಾನ ಶಾಸ್ತ್ರಜ್ಞರು ಇದಕ್ಕೆ ‘ಬಾಂಬ್ ಸೈಕ್ಲೋನ್’ ಎಂದು ಹೆಸರಿಟ್ಟಿದ್ದಾರೆ. ಸುಮಾರು 24 ಗಂಟೆಗಳ ಕಾಲ ವಾತಾವರಣದ ಒತ್ತಡ 24 ಮಿಲಿಬಾರ್ನಷ್ಟು ಕನಿಷ್ಠ ಮಟ್ಟದಲ್ಲಿದ್ದಾಗ ಈ ಬಾಂಬ್ ಸೈಕ್ಲೋನ್ಗಳು ರೂಪುಗೊಳ್ಳುತ್ತವೆ. ಕೆಲವೇ ನಿಮಿಷಗಳಲ್ಲಿ ರೂಪುಗೊಂಡು ಪ್ರಚಂಡ ವೇಗದಲ್ಲಿ ಬೀಸಲಾರಂಭಿಸುತ್ತವೆ.ವಾತಾವರಣದ ಒತ್ತಡ ಕಡಿಮೆಯಾದಷ್ಟೂ, ಬಿರುಗಾಳಿಯ ತೀವ್ರತೆ ಹೆಚ್ಚಿರುತ್ತದೆ.
ಕಾರ್ಯಚಟುವಟಿಕೆ ಹೇಗೆ?: ವಾತಾವರಣದಲ್ಲಿ ಉಷ್ಣಗಾಳಿ ಮತ್ತು ಶೀತಗಾಳಿಗಳೆರಡೂ ಸಂಧಿಸಿದಾಗ ವಾತಾವರಣದಲ್ಲಿ ಭಾರಿ ವಾಯುಭಾರ ಕುಸಿತವಾಗುತ್ತದೆ. ಭೂಮಿ ಚಲನೆಯ ಪರಿಣಾಮ ಗಾಳಿಯೂ ಚಲಿಸಲಾರಂಭಿಸುತ್ತದೆ. ಇದರಿಂದ ಚಂಡಮಾರುತ ಉಂಟಾಗುತ್ತದೆ. ಈ ರೀತಿ ಉಂಟಾಗುವ ಚಂಡಮಾರುತಗಳು ಉತ್ತರಗೋಳಾರ್ಧದಲ್ಲಿ ಅಪ್ರದಕ್ಷಿಣವಾಗಿ (Counterclockwise) ಸುತ್ತುತ್ತವೆ.
ಹರಿಕೇನ್, ಸೈಕ್ಲೋನ್, ಟೈಫೋನ್ಗಳ ವ್ಯತ್ಯಾಸ:
ಹರಿಕೇನ್, ಸೈಕ್ಲೋನ್ ಹಾಗೂ ಟೈಫೋನ್ಗಳೆಲ್ಲವೂ ಉಷ್ಣವಲಯದ ಬಿರುಗಾಳಿಗಳಾಗಿವೆ. ಇವೆಲ್ಲವುಗಳ ಗುಣಗಳು ಒಂದೇ ಆಗಿದ್ದು, ವಿವಿಧ ಪ್ರದೇಶಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗಿದೆ.
ಈ ಚಂಡಮಾರುತಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸಿದವೆಂದರೆ ಆಸ್ತಿ ಹಾಗೂ ಜೀವ ಹಾನಿ ಉಂಟುಮಾಡುತ್ತವೆ. ಉತ್ತರ ಅಟ್ಲಾಂಟಿಕ್ ಹಾಗೂ ಈಶಾನ್ಯ ಪೆಸಿಫಿಕ್ ಸಾಗರಗಳಲ್ಲಿ ಉಂಟಾಗುವ ಚಂಡಮಾರುತಗಳಿಗೆ ಹರಿಕೇನ್ ಎನ್ನುತ್ತಾರೆ.
ದಕ್ಷಿಣ ಪೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಸೈಕ್ಲೋನ್ ಎಂದೂ, ವಾಯವ್ಯ ಪೆಸಿಫಿಕ್ ಭಾಗದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಟೈಪೋನ್ಗಳೆಂದು ಕರೆಯುತ್ತಾರೆ. ಇದಲ್ಲದೆ ಸ್ಥಳೀಯವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.
ಪ್ರಪಂಚದ ಮುಖ್ಯ ಸ್ಥಳೀಯ ಮಾರುತಗಳು:
* ಪೋಹನ್ – ಮಧ್ಯ ಯೂರೋಪ್
* ಚಿನೂಕ್ – ರಾಕಿ ಪರ್ವತ
* ಸಾಂತಾ ಆನಾ – ಕ್ಯಾಲಿಫೋರ್ನಿಯಾ
* ಯಾಮೋ- ಜಪಾನ್
* ಜೋಂಡಾ – ಅರ್ಜೆಂಟೈನಾದ ಆ್ಯಂಡೀಸ್’
* ಪರ್ವತ
* ಬ್ರಿಕ್ ಫೀಲ್ಡರ್ – ಆಸ್ಟ್ರೇಲಿಯಾ
* ಖಾಮ್ಸಿನ್ – ಈಜಿಪ್
* ಸಿಮೂನ್ – ಸಹರಾ ಮರುಭೂಮಿ
* ಬ್ಯಾಕ್ ರೋಲರ್ – ಯುಎಸ್ಎ
* ನಾರ್ವೆಸ್ಟರ್- ಆಸ್ಟ್ರೇಲಿಯಾ ಹಾಗೂ ಪಶ್ಚಿಮ ಭಾರತ
(ಸಂಗ್ರಹ)
ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!