ದಿನದ ಸುದ್ದಿ
ಬಾಂಬ್ ಸೈಕ್ಲೋನ್

ಭಾರತದಲ್ಲಿ ಮಾನ್ಸೂನ್ ಪ್ರವೇಶ ಹಾಗೂ ಹಿಂದಿರುಗುವಿಕೆ ನಡುವಿನ ಅವಧಿಯಲ್ಲಷ್ಟೇ ಚಂಡಮಾರುತ (ಸೈಕ್ಲೋನ್) ಉಂಟಾಗುತ್ತವೆ. ಇಲ್ಲಿ ಸೈಕ್ಲೋನ್ ಎಂದರೆ ವೇಗದ ಗಾಳಿ, ಬಿಡದೆ ಸುರಿಯುವ ಮಳೆಯಷ್ಟೇ ಇರುತ್ತದೆ. ಆದರೆ, ವಿಶ್ವದ ವಿವಿಧ ಪ್ರದೇಶಗಳಲ್ಲಿ ಉಂಟಾಗುವ ಚಂಡಮಾರುತಗಳು ರೌದ್ರವಾಗಿರುತ್ತದೆ.
ಕೆಲ ಪ್ರದೇಶಗಳಲ್ಲಿ ಮಳೆಗಾಲದಲ್ಲಷ್ಟೇ ಅಲ್ಲದೆ ಚಳಿಗಾಲದಲ್ಲೂ ಸೈಕ್ಲೋನ್ ಉಂಟಾಗುತ್ತದೆ.ಹೀಗೆ ಚಳಿಗಾಲದಲ್ಲಿ ಉಂಟಾಗುವ ಬಿರುಗಾಳಿಗೆ ‘ಬಾಂಬ್ ಸೈಕ್ಲೋನ್’ ಎನ್ನುತ್ತಾರೆ. ಮುಖ್ಯವಾಗಿ ಉತ್ತರ ಅಮೆರಿಕ ಪ್ರದೇಶದಲ್ಲಿ ಬಾಂಬ್ ಸೈಕ್ಲೋನ್ ಉಂಟಾಗುತ್ತದೆ. ಈ ಭಾಗದಲ್ಲಿ 8 ಕೋಟಿಗೂ ಹೆಚ್ಚು ಜನ ನೆಲೆಸಿದ್ದು, ಸುಮಾರು 2.2 ಕೋಟಿ ಜನ ಕರಾವಳಿ ಪ್ರವಾಹದ ಅಪಾಯಕ್ಕೆ ಸಿಲುಕುತ್ತಾರೆ.
ಏನಿದು ಬಾಂಬ್ ಸೈಕ್ಲೋನ್?: ಚಳಿಗಾಲದ ಬಿರುಗಾಳಿ ಕ್ಷಿಪ್ರವಾಗಿ ರೂಪುಗೊಂಡು, ಹೆಚ್ಚು ವೇಗವಾಗಿ ಬೀಸುವುದರಿಂದ ಹವಾಮಾನ ಶಾಸ್ತ್ರಜ್ಞರು ಇದಕ್ಕೆ ‘ಬಾಂಬ್ ಸೈಕ್ಲೋನ್’ ಎಂದು ಹೆಸರಿಟ್ಟಿದ್ದಾರೆ. ಸುಮಾರು 24 ಗಂಟೆಗಳ ಕಾಲ ವಾತಾವರಣದ ಒತ್ತಡ 24 ಮಿಲಿಬಾರ್ನಷ್ಟು ಕನಿಷ್ಠ ಮಟ್ಟದಲ್ಲಿದ್ದಾಗ ಈ ಬಾಂಬ್ ಸೈಕ್ಲೋನ್ಗಳು ರೂಪುಗೊಳ್ಳುತ್ತವೆ. ಕೆಲವೇ ನಿಮಿಷಗಳಲ್ಲಿ ರೂಪುಗೊಂಡು ಪ್ರಚಂಡ ವೇಗದಲ್ಲಿ ಬೀಸಲಾರಂಭಿಸುತ್ತವೆ.ವಾತಾವರಣದ ಒತ್ತಡ ಕಡಿಮೆಯಾದಷ್ಟೂ, ಬಿರುಗಾಳಿಯ ತೀವ್ರತೆ ಹೆಚ್ಚಿರುತ್ತದೆ.
ಕಾರ್ಯಚಟುವಟಿಕೆ ಹೇಗೆ?: ವಾತಾವರಣದಲ್ಲಿ ಉಷ್ಣಗಾಳಿ ಮತ್ತು ಶೀತಗಾಳಿಗಳೆರಡೂ ಸಂಧಿಸಿದಾಗ ವಾತಾವರಣದಲ್ಲಿ ಭಾರಿ ವಾಯುಭಾರ ಕುಸಿತವಾಗುತ್ತದೆ. ಭೂಮಿ ಚಲನೆಯ ಪರಿಣಾಮ ಗಾಳಿಯೂ ಚಲಿಸಲಾರಂಭಿಸುತ್ತದೆ. ಇದರಿಂದ ಚಂಡಮಾರುತ ಉಂಟಾಗುತ್ತದೆ. ಈ ರೀತಿ ಉಂಟಾಗುವ ಚಂಡಮಾರುತಗಳು ಉತ್ತರಗೋಳಾರ್ಧದಲ್ಲಿ ಅಪ್ರದಕ್ಷಿಣವಾಗಿ (Counterclockwise) ಸುತ್ತುತ್ತವೆ.
ಹರಿಕೇನ್, ಸೈಕ್ಲೋನ್, ಟೈಫೋನ್ಗಳ ವ್ಯತ್ಯಾಸ:
ಹರಿಕೇನ್, ಸೈಕ್ಲೋನ್ ಹಾಗೂ ಟೈಫೋನ್ಗಳೆಲ್ಲವೂ ಉಷ್ಣವಲಯದ ಬಿರುಗಾಳಿಗಳಾಗಿವೆ. ಇವೆಲ್ಲವುಗಳ ಗುಣಗಳು ಒಂದೇ ಆಗಿದ್ದು, ವಿವಿಧ ಪ್ರದೇಶಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗಿದೆ.
ಈ ಚಂಡಮಾರುತಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸಿದವೆಂದರೆ ಆಸ್ತಿ ಹಾಗೂ ಜೀವ ಹಾನಿ ಉಂಟುಮಾಡುತ್ತವೆ. ಉತ್ತರ ಅಟ್ಲಾಂಟಿಕ್ ಹಾಗೂ ಈಶಾನ್ಯ ಪೆಸಿಫಿಕ್ ಸಾಗರಗಳಲ್ಲಿ ಉಂಟಾಗುವ ಚಂಡಮಾರುತಗಳಿಗೆ ಹರಿಕೇನ್ ಎನ್ನುತ್ತಾರೆ.
ದಕ್ಷಿಣ ಪೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಸೈಕ್ಲೋನ್ ಎಂದೂ, ವಾಯವ್ಯ ಪೆಸಿಫಿಕ್ ಭಾಗದಲ್ಲಿ ಉಂಟಾಗುವ ಚಂಡಮಾರುತಗಳಿಗೆ ಟೈಪೋನ್ಗಳೆಂದು ಕರೆಯುತ್ತಾರೆ. ಇದಲ್ಲದೆ ಸ್ಥಳೀಯವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.
ಪ್ರಪಂಚದ ಮುಖ್ಯ ಸ್ಥಳೀಯ ಮಾರುತಗಳು:
* ಪೋಹನ್ – ಮಧ್ಯ ಯೂರೋಪ್
* ಚಿನೂಕ್ – ರಾಕಿ ಪರ್ವತ
* ಸಾಂತಾ ಆನಾ – ಕ್ಯಾಲಿಫೋರ್ನಿಯಾ
* ಯಾಮೋ- ಜಪಾನ್
* ಜೋಂಡಾ – ಅರ್ಜೆಂಟೈನಾದ ಆ್ಯಂಡೀಸ್’
* ಪರ್ವತ
* ಬ್ರಿಕ್ ಫೀಲ್ಡರ್ – ಆಸ್ಟ್ರೇಲಿಯಾ
* ಖಾಮ್ಸಿನ್ – ಈಜಿಪ್
* ಸಿಮೂನ್ – ಸಹರಾ ಮರುಭೂಮಿ
* ಬ್ಯಾಕ್ ರೋಲರ್ – ಯುಎಸ್ಎ
* ನಾರ್ವೆಸ್ಟರ್- ಆಸ್ಟ್ರೇಲಿಯಾ ಹಾಗೂ ಪಶ್ಚಿಮ ಭಾರತ
(ಸಂಗ್ರಹ)
ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
