ದಿನದ ಸುದ್ದಿ
ಮುಂದಿನ ಚುನಾವಣೆಯೊಳಗೆ ಬಾಂಬೆ ಡೇಸ್ ಪುಸ್ತಕ ಬಿಡುಗಡೆ : ಹೆಚ್.ವಿಶ್ವನಾಥ್

ಸುದ್ದಿದಿನ,ಮೈಸೂರು ; ಮುಂದಿನ ಚುನಾವಣೆಯೊಳಗೆ ಬಾಂಬೆ ಡೇಸ್ ಪುಸ್ತಕ ಬಿಡುಗಡೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಇಂದು ಕಾಡಾ ಕಚೇರಿಯಲ್ಲಿ ತಮ್ಮ ನೂತನ ಕಚೇರಿ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು ಹೆಚ್. ವಿಶ್ವನಾಥ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಅಂಶಗಳನ್ನ ಒಳಗೊಂಡಿರುವ ಬಾಂಬೆ ಡೇಸ್ ಪುಸ್ತಕ ಮುಂದಿನ ವಿಧಾನಸಭಾ ಚುನಾವಣೆಯ ಒಳಗೆ ಬಿಡುಗಡೆ ಆಗಲಿದ್ದು, ಬಾಂಬೆ ಡೇಸ್ ಪುಸ್ತಕವನ್ನ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ರೀತಿಯಲ್ಲಿ ಬಾಂಬೆ ಫೈಲ್ಸ್ ಎಂದು ಬದಲಾಯಿಸಿದ್ದು, ಅದು ವಾಸ್ತವ ಸತ್ಯಗಳ ಬಿಂಬವಾಗಿದೆ ಎಂದರು.
ಚಕ್ರತೀರ್ಥ ನೇತೃತ್ವದಲ್ಲಿ ಆಗಿರುವ ಪರಿಷ್ಕರಣೆ ಪಠ್ಯ ಪುಸ್ತಕ ವಿತರಣೆಯನ್ನು ಮಾಡಬೇಡಿ, ಹಳೆಯ ಪಠ್ಯ ಪುಸ್ತಕಗಳನ್ನೇ ಮುಂದುವರೆಸಿ. ಅಕ್ಷರ ವಿಚಾರದಲ್ಲಿ ಸರ್ಕಾರ ಹಠ ಮಾಡಬಾರದು, ಪರಿಷ್ಕರಣೆ ಆಗಿರುವ ಪಠ್ಯ ಪುಸ್ತಕಕ್ಕೆ ರಾಜ್ಯಾದ್ಯಂತ ವಿರೋಧವಾಗಿದೆ. ಜನಾಭಿಪ್ರಾಯಕ್ಕೆ ಸರ್ಕಾರ ಮನ್ನಣೆ ಕೊಡಬೇಕು. ಈ ವಿಚಾರದಲ್ಲಿ ಸರ್ಕಾರ ಹಠ ಮಾಡಬಾರದು, ಶಿಕ್ಷಣ ವಿಚಾರದಲ್ಲಿ ಶಿಕ್ಷಣ ಸಚಿವರು ಮಾತನಾಡಬೇಕು, ಈ ವಿಚಾರದಲ್ಲಿ ಕಂದಾಯ ಸಚಿವರು, ನಗರಾಭಿವೃದ್ಧಿ ಸಚಿವರು ಮಾತನಾಡುವುದು ಸರಿಯಲ್ಲ ಎಂದರು.
ಸರ್ಕಾರ ಈ ಬಾರಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ರಚನೆಯಾದ ಪಠ್ಯ ಪುಸ್ತಕಗಳನ್ನೇ ಮುಂದುವರಿಸಬೇಕು, ಮುಂದಿನ ವರ್ಷ ಸಾಹಿತಿಗಳು, ತಜ್ಞರನ್ನು ಸೇರಿಸಿಕೊಂಡು ಒಂದು ಸಮಿತಿ ಮಾಡಿ ಪಠ್ಯ ಪುಸ್ತಕಗಳನ್ನ ಪರಿಷ್ಕರಣೆ ಮಾಡಬೇಕು ಎಂದು ಸರ್ಕಾರಕ್ಕೆ ವಿಶ್ವನಾಥ್ ಸಲಹೆ ನೀಡಿದರು.
ಮಹಾರಾಷ್ಟ್ರದಲ್ಲಿ ಸರ್ಕಾರದ ಅಸ್ಥಿರತೆ ವಿಚಾರ ಕರ್ನಾಟಕದಲ್ಲಿ ಆಗಿದ್ದೇ ಅಲ್ಲೂ ಆಗುತ್ತಿದೆ. ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರ ಸರ್ವಾಧಿಕಾರಿ ನಡವಳಿಕೆಗಳು ಈ ಘಟನೆಗೆ ಕಾರಣವಾಗಿದ್ದು, ಅಲ್ಲಿನ ಸಿಎಂ ಮಗನ ಆಡಳಿತ ಹಸ್ತಕ್ಷೇಪವು ಇದಕ್ಕೆ ಕಾರಣವಾಗಿದೆ. 2019 ರಲ್ಲಿ ಕರ್ನಾಟಕದಲ್ಲಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ದರ್ಪ ದೌರ್ಜನ್ಯದಿಂದ ಕರ್ನಾಟಕದಲ್ಲಿ ಆದ ದಂಗೆ ಮಹಾರಾಷ್ಟ್ರದಲ್ಲೂ ಆಗುತ್ತಿದೆ. ಈ ಘಟನೆಗಳಿಗೆ ಬಿಜೆಪಿ ಕಾರಣ ಎಂದು ಹೇಳಲು ಆಗುವುದಿಲ್ಲ ಎಂದರು.
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಈ ದೇಶ ಕಂಡ ದೊಡ್ಡ ಸಾಹಿತಿ. ಆದರೆ, ಅವರು ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಒಂದು ಪಕ್ಷದ ವಕ್ತಾರರ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಹಾಗೆ ಮಾತನಾಡಬಾರದು, ಅದು ಅವರಿಗೆ ಶೋಭೆ ತರುವುದಿಲ್ಲ ಎಂದ ವಿಶ್ವನಾಥ್, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ನಮಗೆ ಏನು ಬೇಕು ಎಂದು ಪ್ರಧಾನಿಯ ಬಳಿ ಬೆಂಗಳೂರು ಮತ್ತು ಮೈಸೂರಿನ ಜನಪ್ರತಿನಿಧಿಗಳು ಒಂದು ಮನವಿಯನ್ನು ಸಹಾ ಕೊಡಲು ಧೈರ್ಯ ತೋರಲಿಲ್ಲ, ಯಾಕೆ ಹೀಗೆ ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ