ದಿನದ ಸುದ್ದಿ
ಪುಸ್ತಕ ಬಹುಮಾನ ; ಜಾನಪದ ಕೃತಿಗಳ ಆಹ್ವಾನ
ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುತ್ತಿದ್ದು, ಕೃತಿಗಳನ್ನು ಆಹ್ವಾನಿಸಿದೆ.
ಆಸಕ್ತ ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 20 ರೊಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ಅಥವಾ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243