ದಿನದ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನವರಿ 1 ರಿಂದ 2022 ರ ಡಿಸೆಂಬರ್ 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರಬೇಕು.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೊಂದಣಿ ಅಂಚೆ ಅಥವಾ ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ.ಎನ್.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version