Connect with us

ದಿನದ ಸುದ್ದಿ

ಪುಸ್ತಕ ಬಹುಮಾನ | ಲೇಖಕ ; ಪ್ರಕಾಶಕರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪ್ರಥಮ ಆವೃತ್ತಿ ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ , ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳಾದ ಸಂಗೀತ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 080-22113146 ದೂರವಾಣಿಗೆ ಸಂಪರ್ಕಿಸಲು ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಗ್ರಾಮಸಹಾಯಕ ತಳವಾರರು, ತೋಟೆಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು, ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ.

ಅರ್ಜಿಯೊಂದಿಗೆ ಜನ್ಮ ದಿನಾಂಕ (ವರ್ಗಾವಣೆ ಪತ್ರ, ಎಸ್.ಎಸ್.ಎಲ್ ಸಿ ಅಂಕಪಟ್ಟಿ ಲಗತ್ತಿಸುವುದು ), ವಾಸಸ್ಥಳ ದೃಢೀಕರಣ, (ಸಂಬಂಧಿಸಿದ ಉಪತಹಸೀಲ್ದಾರರಿಂದ ) ಪಡೆದ ಪತ್ರ ಲಗತ್ತಿಸುವುದು, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ, ಪಡಿತರ ಚೀಟಿ, ವ್ಯಾಸಾಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಚೇರಿ ಸಲ್ಲಿಸಬೇಕೆಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಕಲಚೇತನರಿಗೆ ರಾಷ್ಟ್ರಪ್ರಶಸ್ತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ : ಸಚಿವ ನಿತಿನ್ ಗಡ್ಕರಿ

Published

on

ಸುದ್ದಿದಿನಡೆಸ್ಕ್:ಬಿಜೆಪಿ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಚುನಾವಣೆ ಸಂದರ್ಭದಲ್ಲಿ ಅಪ ಪ್ರಚಾರ ಮಾಡಲಾಗಿತ್ತು. ಸ್ವಾರ್ಥಕ್ಕಾಗಿ ಸಂವಿಧಾನವನ್ನು ಬದಲಿಸಿದ, ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಜನರಲ್ಲಿ ಗೊಂದಲ ಉಂಟು ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿತ್ತು. 1975ರಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳಿಗೆ ದೇಶ ಸಾಕ್ಷಿಯಾಗಿದೆ. ಬೆಂಗಳೂರಿನ ಸೆರೆಮನೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ, ಸಮಾಜವಾದಿ ಮುಖಂಡ ಜಾರ್ಜ್ ಫರ್ನಾಂಡಿಸ್ ಮೊದಲಾದವರನ್ನು ಇರಿಸಲಾಗಿತ್ತು ಎಂದು ವಿವರಿಸಿದರು.

ತುರ್ತು ಪರಿಸ್ಥಿತಿಯ ವಿರುದ್ಧ ಭಾರತೀಯ ಜನಸಂಘ ಹೋರಾಡಿ ಪ್ರಜಾಸತ್ತೆಯನ್ನು ಉಳಿಸುವ ಕೆಲಸ ಮಾಡಿತ್ತು. ಪ್ರಜಾತಂತ್ರವು ೪ ಸ್ಥಂಭಗಳ ಮೇಲೆ ನಿಂತಿದೆ. ಇವೆಲ್ಲವುಗಳ ಬಗ್ಗೆ ಸಂವಿಧಾನದಲ್ಲಿ ಬರೆಯಲಾಗಿದೆ. ಸಂವಿಧಾನವನ್ನು ಕಡೆಗಣಿಸಿ ಹಲವಾರು ತಿದ್ದುಪಡಿಗಳನ್ನು ಮಾಡಲಾಗಿತ್ತು ಎಂದು ಟೀಕಿಸಿದರು.

ಸ್ವಾಮಿ ವಿವೇಕಾನಂದರು ಷಿಕಾಗೋದಲ್ಲಿ ಮಾಡಿದ ಭಾಷಣವನ್ನು ಅವರು ಉಲ್ಲೇಖಿಸಿ. ಮುಂದೆ ಹಿಂದುಸ್ತಾನದ ಜನರ ಶತಮಾನ ಬರಲಿದೆ ಎಂದು ಅವರು ಹೇಳಿದ್ದನ್ನು ನೆನಪಿಸಿದರು. 10 ಕೋಟಿಗೂ ಅಡುಗೆ ಅನಿಲ ಸಂಪರ್ಕ ನೀಡಿರುವುದು ನಮ್ಮ ಸರ್ಕಾರದ ಸಾಧನೆಯಾಗಿದೆ.
ಚೆನ್ನೈ- ಬೆಂಗಳೂರು ಹೆದ್ದಾರಿ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ. ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಈ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರಾರಂಭವಾಗಿ ಶ್ರೀ ಪರಂಬೂರಿಗೆ ತಲುಪುವ 258ಕಿಲೋಮೀಟರ್ ಉದ್ದದ ಹೆದ್ದಾರಿಗೆ 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಕೃಷಿ, ಕೈಗಾರಿಕೆ, ಸೇವಾ ಕ್ಷೇತ್ರಗಳನ್ನು ನಾವು ಬಲಪಡಿಸಬೇಕಿದೆ. ಸ್ವದೇಶಿ, ಸ್ವಾವಲಂಬನೆ ಮೂಲಕ ಅಭಿವೃದ್ಧಿ ಕಡೆ ನಾವು ಗಮನ ಕೊಡುತ್ತಿದ್ದೇವೆ. ಸಮಸ್ಯೆಗಳನ್ನು ಸವಾಲನ್ನಾಗಿ ಪರಿವರ್ತನೆ ಮಾಡಿಕೊಂಡು ಮುನ್ನಡೆಯೋಣ ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending