Connect with us

ದಿನದ ಸುದ್ದಿ

‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ ಮಾಧ್ಯಮಕ್ಕೆ ಹೊಸ ಆಯಾಮ ಅಗತ್ಯ: ವೀರೇಂದ್ರ ಪಿ.ಎಂ

Published

on

ಸುದ್ದಿದಿನ,ಉಜಿರೆ: ಆಧುನಿಕ ಸುದ್ದಿಮಾಧ್ಯಮ ವಲಯವು ವಾಚಾಳಿತನದ ಶಾಪಕ್ಕೀಡಾಗಿದ್ದು, ಇದರ ನಕಾರಾತ್ಮಕ ಪರಿಣಾಮಗಳನ್ನು ತಡೆದು ಹೊಸ ಆಯಾಮ ನೀಡುವ ವೃತ್ತಿಪರ ಬದ್ಧತೆಯ ಅನಿವಾರ್ಯತೆ ಇದೆ ಎಂದು ಪತ್ರಕರ್ತ, ತುಂಗಭದ್ರಾ ನ್ಯೂಸ್ ಪೋರ್ಟಲ್ ಸಂಪಾದಕ ವೀರೇಂದ್ರ ಪಿ.ಎಂ ಅಭಿಪ್ರಾಯಪಟ್ಟರು.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿತವಾದ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್‌ನಲ್ಲಿ ಕೃತಿಯ ಕುರಿತು ಅವರು ಮಾತನಾಡಿದರು.

ಯಾವಾಗ ಒಬ್ಬ ಪತ್ರಕರ್ತ ವಾಚಾಳಿತನಕ್ಕೆ ಬೀಳುತ್ತಾನೋ ಆಗ ಮಾಧ್ಯಮ ನಿರೀಕ್ಷಿಸುವ ವೃತ್ತಿಬದ್ಧತೆಯಿಂದನುಣುಚಿಕೊಳ್ಳಲಾರಂಭಿಸುತ್ತಾನೆ. ಮಾತಿನ ಮಂಟಪ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಸುದ್ದಿಲೋಕಕ್ಕೆ ಬೇಕಾದದ್ದು ವಾಚಾಳಿತನವಲ್ಲ. ಸುದ್ದಿಮಾಧ್ಯಮವು ಸಂಯಮಪೂರ್ಣ ಚಿಂತನೆ ಮತ್ತು ಅದಕ್ಕೆ ಅನುಗುಣವಾದ ಕಾರ್ಯನಿರ್ವಹಣೆಯನ್ನು ವರದಿಗಾರರು, ಸಂಪಾದಕರಿಂದ ನಿರೀಕ್ಷಿಸುತ್ತದೆ ಎಂದು ಹೇಳಿದರು.

ವರದಿಗಾರನಾದವನು ಕಣ್ಣು ಮತ್ತು ಕಿವಿಯನ್ನು ಸದಾ ಕಾಲ ಜಾಗೃತ ಸ್ಥಿತಿಯಲ್ಲಿಡಬೇಕು. ಆಗ ಮಾತ್ರ ವಿವಿಧ ವಿಚಾರಗಳನ್ನು ಭಿನ್ನವಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆ. ಸುದ್ದಿಗೆ ಕಲೆ ಮತ್ತು ವಿಜ್ಞಾನದ ಆಯಾಮವೂ ಇದೆ ಎಂಬುದನ್ನು ಗ್ರಹಿಸಿಕೊಂಡ ವರದಿಗಾರರು ಸುದ್ದಿ ಮಾಧ್ಯಮದಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳಲು ಸಾಧ್ಯ.

ಈ ಬಗೆಯ ಗ್ರಹಿಕೆಯು ವೃತ್ತಿಪರ ಯಶಸ್ಸನ್ನು ಕಂಡುಕೊಳ್ಳುವುದಕ್ಕೆ ಪೂರಕವಾಗುವುದಲ್ಲದೇ ಬರಹ-ಚಿಂತನೆಯ ಮೂಲಕ ಸಾಮಾಜಿಕ ಕೊಡುಗೆಯನ್ನೂ ನೀಡಬಹುದು. ಈ ಅಂಶವನ್ನು ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿಯು ಆಪ್ತವಾಗಿ ಕಟ್ಟಿಕೊಟ್ಟಿದೆ ಎಂದರು.

ವಿವಿಧ ಬಗೆಯ ಸಮಸ್ಯೆಗಳನ್ನು ಗ್ರಹಿಸುವ ವಿಧಾನ ಸುದ್ದಿ ಬರವಣಿಗೆಯಲ್ಲಿ ಬಹಳ ಮುಖ್ಯವಾದುದು. ಈ ಗ್ರಹಿಕೆಯ ನೆರವಿನೊಂದಿಗೇ ಜನರಿಗೆ ಮಾಹಿತಿ ನೀಡಿ ಅವರೊಳಗೆ ಜಾಗೃತಿ ಮೂಡಿಸಬಹುದಾದ ಸುದ್ದಿಸಂಸ್ಕೃತಿಯನ್ನು ಹುಟ್ಟುಹಾಕಬಹುದು. ಈ ಆಶಾವಾದದೊಂದಿಗೇ ಎಲ್ಲ ಸುದ್ದಿ ಮಾಧ್ಯಮ ವೃತ್ತಿಪರರು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ನುಡಿದರು.

ಸುದ್ದಿ ಸಂವಿಧಾನ’ ಕೃತಿಯನ್ನು ಬಿಡುಗಡೆಗೊಳಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಭಾಸ್ಕರ ಹೆಗಡೆ ಮಾತನಾಡಿದರು. ಬಹುಮಾಧ್ಯಮಗಳು ತರಹೇವಾರಿ ಮಾಹಿತಿಯನ್ನು ನೀಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಯಾವುದು ನಿಜವಾದ ಸುದ್ದಿ ಎಂಬುದನ್ನು ಮನಗಾಣಿಸುವಲ್ಲಿ ಎನ್.ಕೆ.ಪದ್ಮನಾಭ ಅವರ ಕೃತಿ ಯಶಸ್ವಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃತಿಯ ಲೇಖಕ ಡಾ.ಎನ್.ಕೆ.ಪದ್ಮನಾಭ ಪರಂಪರೆಯ ಚಲನಶೀಲತೆಯನ್ನು ಮುನ್ನಡೆಸುವ ಪಾತ್ರ ಸುದ್ದಿಯಿಂದ ನಿರ್ವಹಿಸಲ್ಪಡಬೇಕಾದ ಅಗತ್ಯವಿದೆ ಎಂದರು. ಸುದ್ದಿಮಾಧ್ಯಮವನ್ನು ಪ್ರಜಾಪ್ರಭುತ್ವದ ಕಾವಲುನಾಯಿ ಎಂದು ಹೇಳಲಾಗುತ್ತದೆ. ಆದರೆ, ಈ ಕಾವಲು ನಾಯಿಯ ಸ್ಥಾನವನ್ನು ಧನದಾಹದ ಸಂಕುಚಿತತೆಯನ್ನೇ ಗುಣಲಕ್ಷಣವನ್ನಾಗಿಸಿಕೊಂಡ ರಾಕ್ಷಸಪ್ರಾಣಿ ಆಕ್ರಮಿಸಿಕೊಂಡಿದೆ. ಇದರ ಹಿಡಿತದಿಂದ ಈ ಸ್ಥಾನವನ್ನು ವಿಮುಕ್ತಗೊಳಿಸಿ ಕಾವಲುನಾಯಿಯ ಪಾತ್ರ ನಿರಂತರವಾಗಬೇಕಿದೆ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಕೃತಿಯ ಮುಖಪುಟ ರಚಿಸಿದ ಸುಷ್ಮಾ ಉಪ್ಪಿನ್ ಇಸಳೂರು, ಗ್ರಾಫಿಕ್ ಸ್ಪರ್ಶ ನೀಡಿದ ಕೃಷ್ಣಪ್ರಶಾಂತ್, ಸಹಾಯಕ ಪ್ರಾಧ್ಯಾಪಕರಾದ ಸುನೀಲ್ ಹೆಗ್ಡೆ, ಡಾ.ಹಂಪೀಶ್, ಗೀತಾ ವಸಂತ್ ಇಜಿಮಾನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending