ದಿನದ ಸುದ್ದಿ
‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ ಮಾಧ್ಯಮಕ್ಕೆ ಹೊಸ ಆಯಾಮ ಅಗತ್ಯ: ವೀರೇಂದ್ರ ಪಿ.ಎಂ

ಸುದ್ದಿದಿನ,ಉಜಿರೆ: ಆಧುನಿಕ ಸುದ್ದಿಮಾಧ್ಯಮ ವಲಯವು ವಾಚಾಳಿತನದ ಶಾಪಕ್ಕೀಡಾಗಿದ್ದು, ಇದರ ನಕಾರಾತ್ಮಕ ಪರಿಣಾಮಗಳನ್ನು ತಡೆದು ಹೊಸ ಆಯಾಮ ನೀಡುವ ವೃತ್ತಿಪರ ಬದ್ಧತೆಯ ಅನಿವಾರ್ಯತೆ ಇದೆ ಎಂದು ಪತ್ರಕರ್ತ, ತುಂಗಭದ್ರಾ ನ್ಯೂಸ್ ಪೋರ್ಟಲ್ ಸಂಪಾದಕ ವೀರೇಂದ್ರ ಪಿ.ಎಂ ಅಭಿಪ್ರಾಯಪಟ್ಟರು.
ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿತವಾದ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ನಲ್ಲಿ ಕೃತಿಯ ಕುರಿತು ಅವರು ಮಾತನಾಡಿದರು.
ಯಾವಾಗ ಒಬ್ಬ ಪತ್ರಕರ್ತ ವಾಚಾಳಿತನಕ್ಕೆ ಬೀಳುತ್ತಾನೋ ಆಗ ಮಾಧ್ಯಮ ನಿರೀಕ್ಷಿಸುವ ವೃತ್ತಿಬದ್ಧತೆಯಿಂದನುಣುಚಿಕೊಳ್ಳಲಾರಂಭಿಸುತ್ತಾನೆ. ಮಾತಿನ ಮಂಟಪ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಸುದ್ದಿಲೋಕಕ್ಕೆ ಬೇಕಾದದ್ದು ವಾಚಾಳಿತನವಲ್ಲ. ಸುದ್ದಿಮಾಧ್ಯಮವು ಸಂಯಮಪೂರ್ಣ ಚಿಂತನೆ ಮತ್ತು ಅದಕ್ಕೆ ಅನುಗುಣವಾದ ಕಾರ್ಯನಿರ್ವಹಣೆಯನ್ನು ವರದಿಗಾರರು, ಸಂಪಾದಕರಿಂದ ನಿರೀಕ್ಷಿಸುತ್ತದೆ ಎಂದು ಹೇಳಿದರು.
ವರದಿಗಾರನಾದವನು ಕಣ್ಣು ಮತ್ತು ಕಿವಿಯನ್ನು ಸದಾ ಕಾಲ ಜಾಗೃತ ಸ್ಥಿತಿಯಲ್ಲಿಡಬೇಕು. ಆಗ ಮಾತ್ರ ವಿವಿಧ ವಿಚಾರಗಳನ್ನು ಭಿನ್ನವಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆ. ಸುದ್ದಿಗೆ ಕಲೆ ಮತ್ತು ವಿಜ್ಞಾನದ ಆಯಾಮವೂ ಇದೆ ಎಂಬುದನ್ನು ಗ್ರಹಿಸಿಕೊಂಡ ವರದಿಗಾರರು ಸುದ್ದಿ ಮಾಧ್ಯಮದಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳಲು ಸಾಧ್ಯ.
ಈ ಬಗೆಯ ಗ್ರಹಿಕೆಯು ವೃತ್ತಿಪರ ಯಶಸ್ಸನ್ನು ಕಂಡುಕೊಳ್ಳುವುದಕ್ಕೆ ಪೂರಕವಾಗುವುದಲ್ಲದೇ ಬರಹ-ಚಿಂತನೆಯ ಮೂಲಕ ಸಾಮಾಜಿಕ ಕೊಡುಗೆಯನ್ನೂ ನೀಡಬಹುದು. ಈ ಅಂಶವನ್ನು ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿಯು ಆಪ್ತವಾಗಿ ಕಟ್ಟಿಕೊಟ್ಟಿದೆ ಎಂದರು.
ವಿವಿಧ ಬಗೆಯ ಸಮಸ್ಯೆಗಳನ್ನು ಗ್ರಹಿಸುವ ವಿಧಾನ ಸುದ್ದಿ ಬರವಣಿಗೆಯಲ್ಲಿ ಬಹಳ ಮುಖ್ಯವಾದುದು. ಈ ಗ್ರಹಿಕೆಯ ನೆರವಿನೊಂದಿಗೇ ಜನರಿಗೆ ಮಾಹಿತಿ ನೀಡಿ ಅವರೊಳಗೆ ಜಾಗೃತಿ ಮೂಡಿಸಬಹುದಾದ ಸುದ್ದಿಸಂಸ್ಕೃತಿಯನ್ನು ಹುಟ್ಟುಹಾಕಬಹುದು. ಈ ಆಶಾವಾದದೊಂದಿಗೇ ಎಲ್ಲ ಸುದ್ದಿ ಮಾಧ್ಯಮ ವೃತ್ತಿಪರರು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ನುಡಿದರು.
‘ಸುದ್ದಿ ಸಂವಿಧಾನ’ ಕೃತಿಯನ್ನು ಬಿಡುಗಡೆಗೊಳಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಭಾಸ್ಕರ ಹೆಗಡೆ ಮಾತನಾಡಿದರು. ಬಹುಮಾಧ್ಯಮಗಳು ತರಹೇವಾರಿ ಮಾಹಿತಿಯನ್ನು ನೀಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಯಾವುದು ನಿಜವಾದ ಸುದ್ದಿ ಎಂಬುದನ್ನು ಮನಗಾಣಿಸುವಲ್ಲಿ ಎನ್.ಕೆ.ಪದ್ಮನಾಭ ಅವರ ಕೃತಿ ಯಶಸ್ವಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃತಿಯ ಲೇಖಕ ಡಾ.ಎನ್.ಕೆ.ಪದ್ಮನಾಭ ಪರಂಪರೆಯ ಚಲನಶೀಲತೆಯನ್ನು ಮುನ್ನಡೆಸುವ ಪಾತ್ರ ಸುದ್ದಿಯಿಂದ ನಿರ್ವಹಿಸಲ್ಪಡಬೇಕಾದ ಅಗತ್ಯವಿದೆ ಎಂದರು. ಸುದ್ದಿಮಾಧ್ಯಮವನ್ನು ಪ್ರಜಾಪ್ರಭುತ್ವದ ಕಾವಲುನಾಯಿ ಎಂದು ಹೇಳಲಾಗುತ್ತದೆ. ಆದರೆ, ಈ ಕಾವಲು ನಾಯಿಯ ಸ್ಥಾನವನ್ನು ಧನದಾಹದ ಸಂಕುಚಿತತೆಯನ್ನೇ ಗುಣಲಕ್ಷಣವನ್ನಾಗಿಸಿಕೊಂಡ ರಾಕ್ಷಸಪ್ರಾಣಿ ಆಕ್ರಮಿಸಿಕೊಂಡಿದೆ. ಇದರ ಹಿಡಿತದಿಂದ ಈ ಸ್ಥಾನವನ್ನು ವಿಮುಕ್ತಗೊಳಿಸಿ ಕಾವಲುನಾಯಿಯ ಪಾತ್ರ ನಿರಂತರವಾಗಬೇಕಿದೆ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಕೃತಿಯ ಮುಖಪುಟ ರಚಿಸಿದ ಸುಷ್ಮಾ ಉಪ್ಪಿನ್ ಇಸಳೂರು, ಗ್ರಾಫಿಕ್ ಸ್ಪರ್ಶ ನೀಡಿದ ಕೃಷ್ಣಪ್ರಶಾಂತ್, ಸಹಾಯಕ ಪ್ರಾಧ್ಯಾಪಕರಾದ ಸುನೀಲ್ ಹೆಗ್ಡೆ, ಡಾ.ಹಂಪೀಶ್, ಗೀತಾ ವಸಂತ್ ಇಜಿಮಾನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ