ದಿನದ ಸುದ್ದಿ
‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ ಮಾಧ್ಯಮಕ್ಕೆ ಹೊಸ ಆಯಾಮ ಅಗತ್ಯ: ವೀರೇಂದ್ರ ಪಿ.ಎಂ

ಸುದ್ದಿದಿನ,ಉಜಿರೆ: ಆಧುನಿಕ ಸುದ್ದಿಮಾಧ್ಯಮ ವಲಯವು ವಾಚಾಳಿತನದ ಶಾಪಕ್ಕೀಡಾಗಿದ್ದು, ಇದರ ನಕಾರಾತ್ಮಕ ಪರಿಣಾಮಗಳನ್ನು ತಡೆದು ಹೊಸ ಆಯಾಮ ನೀಡುವ ವೃತ್ತಿಪರ ಬದ್ಧತೆಯ ಅನಿವಾರ್ಯತೆ ಇದೆ ಎಂದು ಪತ್ರಕರ್ತ, ತುಂಗಭದ್ರಾ ನ್ಯೂಸ್ ಪೋರ್ಟಲ್ ಸಂಪಾದಕ ವೀರೇಂದ್ರ ಪಿ.ಎಂ ಅಭಿಪ್ರಾಯಪಟ್ಟರು.
ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿತವಾದ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ನಲ್ಲಿ ಕೃತಿಯ ಕುರಿತು ಅವರು ಮಾತನಾಡಿದರು.
ಯಾವಾಗ ಒಬ್ಬ ಪತ್ರಕರ್ತ ವಾಚಾಳಿತನಕ್ಕೆ ಬೀಳುತ್ತಾನೋ ಆಗ ಮಾಧ್ಯಮ ನಿರೀಕ್ಷಿಸುವ ವೃತ್ತಿಬದ್ಧತೆಯಿಂದನುಣುಚಿಕೊಳ್ಳಲಾರಂಭಿಸುತ್ತಾನೆ. ಮಾತಿನ ಮಂಟಪ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಸುದ್ದಿಲೋಕಕ್ಕೆ ಬೇಕಾದದ್ದು ವಾಚಾಳಿತನವಲ್ಲ. ಸುದ್ದಿಮಾಧ್ಯಮವು ಸಂಯಮಪೂರ್ಣ ಚಿಂತನೆ ಮತ್ತು ಅದಕ್ಕೆ ಅನುಗುಣವಾದ ಕಾರ್ಯನಿರ್ವಹಣೆಯನ್ನು ವರದಿಗಾರರು, ಸಂಪಾದಕರಿಂದ ನಿರೀಕ್ಷಿಸುತ್ತದೆ ಎಂದು ಹೇಳಿದರು.
ವರದಿಗಾರನಾದವನು ಕಣ್ಣು ಮತ್ತು ಕಿವಿಯನ್ನು ಸದಾ ಕಾಲ ಜಾಗೃತ ಸ್ಥಿತಿಯಲ್ಲಿಡಬೇಕು. ಆಗ ಮಾತ್ರ ವಿವಿಧ ವಿಚಾರಗಳನ್ನು ಭಿನ್ನವಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆ. ಸುದ್ದಿಗೆ ಕಲೆ ಮತ್ತು ವಿಜ್ಞಾನದ ಆಯಾಮವೂ ಇದೆ ಎಂಬುದನ್ನು ಗ್ರಹಿಸಿಕೊಂಡ ವರದಿಗಾರರು ಸುದ್ದಿ ಮಾಧ್ಯಮದಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳಲು ಸಾಧ್ಯ.
ಈ ಬಗೆಯ ಗ್ರಹಿಕೆಯು ವೃತ್ತಿಪರ ಯಶಸ್ಸನ್ನು ಕಂಡುಕೊಳ್ಳುವುದಕ್ಕೆ ಪೂರಕವಾಗುವುದಲ್ಲದೇ ಬರಹ-ಚಿಂತನೆಯ ಮೂಲಕ ಸಾಮಾಜಿಕ ಕೊಡುಗೆಯನ್ನೂ ನೀಡಬಹುದು. ಈ ಅಂಶವನ್ನು ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿಯು ಆಪ್ತವಾಗಿ ಕಟ್ಟಿಕೊಟ್ಟಿದೆ ಎಂದರು.
ವಿವಿಧ ಬಗೆಯ ಸಮಸ್ಯೆಗಳನ್ನು ಗ್ರಹಿಸುವ ವಿಧಾನ ಸುದ್ದಿ ಬರವಣಿಗೆಯಲ್ಲಿ ಬಹಳ ಮುಖ್ಯವಾದುದು. ಈ ಗ್ರಹಿಕೆಯ ನೆರವಿನೊಂದಿಗೇ ಜನರಿಗೆ ಮಾಹಿತಿ ನೀಡಿ ಅವರೊಳಗೆ ಜಾಗೃತಿ ಮೂಡಿಸಬಹುದಾದ ಸುದ್ದಿಸಂಸ್ಕೃತಿಯನ್ನು ಹುಟ್ಟುಹಾಕಬಹುದು. ಈ ಆಶಾವಾದದೊಂದಿಗೇ ಎಲ್ಲ ಸುದ್ದಿ ಮಾಧ್ಯಮ ವೃತ್ತಿಪರರು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ನುಡಿದರು.
‘ಸುದ್ದಿ ಸಂವಿಧಾನ’ ಕೃತಿಯನ್ನು ಬಿಡುಗಡೆಗೊಳಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಭಾಸ್ಕರ ಹೆಗಡೆ ಮಾತನಾಡಿದರು. ಬಹುಮಾಧ್ಯಮಗಳು ತರಹೇವಾರಿ ಮಾಹಿತಿಯನ್ನು ನೀಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಯಾವುದು ನಿಜವಾದ ಸುದ್ದಿ ಎಂಬುದನ್ನು ಮನಗಾಣಿಸುವಲ್ಲಿ ಎನ್.ಕೆ.ಪದ್ಮನಾಭ ಅವರ ಕೃತಿ ಯಶಸ್ವಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃತಿಯ ಲೇಖಕ ಡಾ.ಎನ್.ಕೆ.ಪದ್ಮನಾಭ ಪರಂಪರೆಯ ಚಲನಶೀಲತೆಯನ್ನು ಮುನ್ನಡೆಸುವ ಪಾತ್ರ ಸುದ್ದಿಯಿಂದ ನಿರ್ವಹಿಸಲ್ಪಡಬೇಕಾದ ಅಗತ್ಯವಿದೆ ಎಂದರು. ಸುದ್ದಿಮಾಧ್ಯಮವನ್ನು ಪ್ರಜಾಪ್ರಭುತ್ವದ ಕಾವಲುನಾಯಿ ಎಂದು ಹೇಳಲಾಗುತ್ತದೆ. ಆದರೆ, ಈ ಕಾವಲು ನಾಯಿಯ ಸ್ಥಾನವನ್ನು ಧನದಾಹದ ಸಂಕುಚಿತತೆಯನ್ನೇ ಗುಣಲಕ್ಷಣವನ್ನಾಗಿಸಿಕೊಂಡ ರಾಕ್ಷಸಪ್ರಾಣಿ ಆಕ್ರಮಿಸಿಕೊಂಡಿದೆ. ಇದರ ಹಿಡಿತದಿಂದ ಈ ಸ್ಥಾನವನ್ನು ವಿಮುಕ್ತಗೊಳಿಸಿ ಕಾವಲುನಾಯಿಯ ಪಾತ್ರ ನಿರಂತರವಾಗಬೇಕಿದೆ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಕೃತಿಯ ಮುಖಪುಟ ರಚಿಸಿದ ಸುಷ್ಮಾ ಉಪ್ಪಿನ್ ಇಸಳೂರು, ಗ್ರಾಫಿಕ್ ಸ್ಪರ್ಶ ನೀಡಿದ ಕೃಷ್ಣಪ್ರಶಾಂತ್, ಸಹಾಯಕ ಪ್ರಾಧ್ಯಾಪಕರಾದ ಸುನೀಲ್ ಹೆಗ್ಡೆ, ಡಾ.ಹಂಪೀಶ್, ಗೀತಾ ವಸಂತ್ ಇಜಿಮಾನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮಾ.10ರಂದು ಅಂಗವಿಕಲರಿಗೆ ಕಿಟ್ ವಿತರಣೆ

ಸುದ್ದಿದಿನ,ದಾವಣಗೆರೆ : ಮಾ.10 ರಂದು ಬೆಳಿಗ್ಗೆ 10.30 ಕ್ಕೆ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸಿಬಲಿಟಿ, ಜಿಲ್ಲಾ ಅಂಗವಿಕಲರ ಅಭಿವೃದ್ದಿ ಕಾರ್ಯಕ್ರಮ #1027, 1ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಎಸ್.ಬಿ.ಎಂ ಬ್ಯಾಂಕ್ ಹತ್ತಿರ, ನಿಟ್ಟುವಳ್ಳಿ ಹೊಸ ಬಡಾವಣೆ ದಾವಣಗೆರೆ ಇಲ್ಲಿ ಅಂಗವಿಕಲರಿಗೆ ವೈದ್ಯಕೀಯ ಉಪಕರಣಗಳು ಹಾಗೂ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಎಸ್ ಎಸ್ ಸಿ ವತಿಯಿಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಸಿ ವತಿಯಿಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ssc) ವತಿಯಿಂದ ನಾನ್-ಟೆಕ್ನಿಕಲ್(ತಾಂತ್ರಿಕೇತರ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳ ವಯೋಮಿತಿ 27 ವರ್ಷ. ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸಲು ಮಾ.21 ಕೊನೆಯ ದಿನಾಂಕವಾಗಿದ್ದು, ಈ ವೆಬ್ಸೈಟ್
https://ssc.nic.in or www.ssckkr.kar.nic.in
ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ | ದಾವಣಗೆರೆ | ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು : ನ್ಯಾ.ಗೀತಾ.ಕೆ.ಬಿ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ನಂ: 08025502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ: 08192-259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್.ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಗರದಲ್ಲಿಂದು ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 220/66 ಕೆ.ವಿ. ಕೇಂದ್ರದಿಂದ ಎಸ್.ಆರ್.ಎಸ್.ನಿಂದ ಸರಬರಾಜಾಗುವ 66 ಕೆ.ವಿ. ದಾವಣಗೆರೆ ಹಾಗೂ ಯರಗುಂಟ ವಿತರಣಾ ಮಾರ್ಗದಲ್ಲಿ ತುರ್ತಾಗಿ ನಿರ್ವಾಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.09 ರಂದು ಬೆಳಿಗ್ಗೆ 9 ಗಂಟೆಯಿಂದ ಮದ್ಯಾಹ್ನ 4 ಗಂಟೆಯವರೆಗೆ 66/11 ಕೆ.ವಿ. ದಾವಣಗೆರೆ, 220/66 ಕೆ.ವಿ. ದಾವಣಗೆರೆ ಎಸ್.ಆರ್.ಎಸ್. ಮತ್ತು 66/11ಕೆ.ವಿ. ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?
ದಾವಣಗೆರೆ ತಾಲೂಕಿನ ದಾವಣಗೆರೆ ನಗರದ ಎಲ್ಲಾ ಪ್ರದೇಶಗಳಲ್ಲಿ ಹಾಗೂ ಬೆಳವನೂರು, ಶಿರಮಗೊಂಡನಹಳ್ಳಿ, ಶಾಮನೂರು, ಕುಂದವಾಡ, ಬಾತಿ ಅಮೃತನಗರ, ನೀಲನಹಳ್ಳಿ, ಬೂದಿಹಾಳ್, ಕಕ್ಕರಗೊಳ್ಳ ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ5 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ದಿನದ ಸುದ್ದಿ6 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ದಿನದ ಸುದ್ದಿ5 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ದಿನದ ಸುದ್ದಿ5 days ago
ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು
-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ4 days ago
ಸುಳ್ಳಿನ ಸುಳಿಯಲ್ಲಿ ಸುಲ್ತಾನ
-
ದಿನದ ಸುದ್ದಿ5 days ago
ಮಾಧ್ಯಮ ಉದ್ಯಮವಾಗಿರುವ ಈ ಕಾಲಘಟ್ಟದಲ್ಲಿ ಜನರೇ ಜನಾಭಿಪ್ರಾಯ ರೂಪಿಸುವ ಹೊಣೆ ಹೊರಬೇಕು : ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ
-
ದಿನದ ಸುದ್ದಿ5 days ago
ವಿದ್ಯಾರ್ಥಿ ವೇತನ | ಆನ್ಲೈನ್ ಅರ್ಜಿ ಅವಧಿ ವಿಸ್ತರಣೆ