ದಿನದ ಸುದ್ದಿ
ಜೂನ್ 2 ರಂದು ‘ಪ್ರೇಮಾನುರಾಗ’ ಪುಸ್ತಕ ಲೋಕಾರ್ಪಣೆ ಮತ್ತು ಕವಿ ಕಾವ್ಯ ಸಮ್ಮಿಲನ
ಸುದ್ದಿದಿನ,ರಾಣೆಬೆನ್ನೂರು : ಪ್ರೇಮಗಂಗ ಹೆಲ್ಪ್ ಕೇರ್ ಮತ್ತು ಕಾವ್ಯ ಮಿತ್ರ ಪ್ರಕಾಶನದ ಸಹಯೋಗದಲ್ಲಿ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲ್ಲೂಕಿನ ಐರಣಿ ಗ್ರಾಮದಲ್ಲಿ ಜೂನ್ 2 ರ ಭಾನುವಾರ ಬೆಳಗ್ಗೆ 9:30 ಕ್ಕೆ ಕವಿ ಪ್ರೇಮಾರ್ಜುನ ಐರಣಿಯವರ ಪ್ರೇಮಾನುರಾಗ ಪುಸ್ತಕ ಲೋಕಾರ್ಪಣೆ ಹಾಗೂ ಕವಿ ಕಾವ್ಯ ಸಮ್ಮಿಲನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9:30 ಕ್ಕೆ ಚಿಂಚಲಿ ಮಾಯಮ್ಮ ವೇದಿಕೆಯಲ್ಲಿ ಐರಣಿ ಗ್ರಾಪಂ ಅಧ್ಯಕ್ಷ ಬಿ.ಬಿ ಬಣಕಾರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕವಯಿತ್ರಿ ತುಮಕೂರಿನ ರತ್ನ ಬಡವನಹಳ್ಳಿ ಉದ್ಘಾಟಿಸುವರು. ರಾಣೆಬೆನ್ನೂರು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಭಾರತಿ ಜಂಬಗಿ ಪುಸ್ತಕ ಅನಾವರಣ ಮಾಡುವರು. ಸಾಹಿತಿ ಮೈಸೂರಿನ ದೊರೆಸ್ವಾಮಿ ಸಿದ್ದೇಗೌಡ್ರು ಪುಸ್ತಕ ಪರಿಚಯ ಮಾಡುವರು.
ಮುಖ್ಯ ಅತಿಥಿಗಳಾಗಿ ಅಲ್ಲಾಗಿರಿ ರಾಜ್ ಕನಕಗಿರಿ, ಕಸ್ತೂರಮ್ಮ, ಪ್ರಕಾಶ್ ಬುರಡಿಕಟ್ಟಿ, ರಾಘವೇಂದ್ರ ಓಲೇಕಾರ್, ಶಶಿಕಾಂತ್ ರಾವ್, ಸುರೇಶ್ ಕೊರಕೊಪ್ಪ, ರೇಖಾ ಕೊಟ್ಟೂರು ಭಾಗವಹಿಸುವರು. ಲೇಖಕ ಪ್ರೇಮಾರ್ಜುನ ಐರಣಿ ಉಪಸ್ಥಿತರಿರುವರು.
ಮಧ್ಯಾಹ್ನ 12:30ಕ್ಕೆ ಸಾಹಿತಿ ಹಾವೇರಿಯ ಪೀರ್ಸಾಬ್ ನದಾಫ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯ ಮುಖ್ಯ ಅತಿಥಿಗಳಾಗಿ ಸಾಹಿತ್ಯ ವಲಯದ ಶಂಕರ್ ದೊಡ್ಡಮನಿ, ಪ್ರಕಾಶ್ ಎನ್ ಜಿಂಗಾಡೆ, ಚಂದ್ರಶೇಖರ ಮಾಡಲಗೇರಿ, ಲಿಂಗಯ್ಯ ಹಿರೇಮಠ, ಅಣ್ಣಪ್ಪ ಮೇಟಿಗೌಡ, ಕನಕ ಪ್ರೀತೀಶ್, ಪಾಪುಗುರು ದಾವಣಗೆರೆ, ಸಂತೋಷ್ ಬಿದರಗಡ್ಡೆ, ವೀರೇಶ್ ಹಿತ್ತಲಮನಿ ಹಾಗೂ ಪ್ರಸಾದ್ ಕುಲಕರ್ಣಿ, ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಗಂಗಪ್ಪ ಕೊಟ್ರಪ್ಪ ಚಳಗೇರಿ ಹಾಗೂ ಪ್ರೇಮ ಗಂಗಪ್ಪ ಅವರಿಗೆ ವಿಶೇಷ ಗೌರವಾರ್ಪಣೆ, ಕವಿಗಳಾದ ದಾವಣಗೆರೆಯ ಡಾ.ಆನಂದ್ ಋಗ್ವೇದಿ, ಫೈಜ್ ನಟ್ರಾಜ್, ರೇಣುಕಾ ರಮಾನಂದ್ ಹಾಗೂ ಮುದಲ್ ವಿಜಯ್, ಉದಯೋನ್ಮುಖ ಕವಿ ವೈ.ಜೆ ಮೆಹಬೂಬ್ ಅವರಿಗೆ ಸನ್ಮಾನ ಹಾಗೂ ಎಸ್ಸೆಸ್ಸಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸುವ ಕವಿಗಳು ಕವನ ವಾಚಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


