ಭಾವ ಭೈರಾಗಿ
ಪುಸ್ತಕ ವಿಮರ್ಶೆ | ಮೋಹದ ಮೋಡಗಳು

- ಸಿಂಪಲ್ ಸಿಂಚು
ಷಕೀಬ್ ಎಸ್. ಕಣದ್ಮನೆ ನವಿಲೇಹಾಳ್, ಆತ್ಮೀಯ ಸಹೋದರ ಇತ್ತೀಚಿನ ಚಿತ್ರದುರ್ಗ ಕರುನಾಡ ಹಣತೆ ಕವಿ ಬಳಗದ ಸಮ್ಮೇಳನದಲ್ಲಿ ಪರಿಚಿತರಾಗಿ, ಕಡಿಮೆ ಸಮಯದಲ್ಲಿ ಮಮತೆಯಿಂದ ಮನಗೆದ್ದ ಸಹೋದರ ಷಕೀಬ್ ಅಣ್ಣ. ಇವರ ಸರಳತೆ ಎಂತಹ ವ್ಯಕ್ತಿಗೂ ಮಾದರಿ. ತಲೆ ಹೋಗುವ ಸಮಸ್ಯೆಯಿದ್ದರೂ ಹೂ ನಗೆ ಚೆಲ್ಲುವ ಶ್ರಮಜೀವಿ.
ವಿದ್ಯಾರ್ಥಿ ಜೀವನದ ಜೊತೆಜೊತೆಗೆ ರೈತನ ಪಟ್ಟ ಹೊತ್ತಿರುವ ಯಾವಾಗಲೂ ತೋಟ -ಜಮೀನು ಕೆಲಸಗಳಲ್ಲಿ ತೊಡಗಿ ಭೂಮಿಯ ಸ್ವರ್ಗವ ಕಾಣುವ, ವ್ಯಕ್ತಿತ್ವ ಒಂದೆಡೆಯಾದರೆ, ದೇಶಭಕ್ತಿ , ಪ್ರೇಮಭಕ್ತಿ , ಪ್ರಕೃತಿ ಆರಾಧನೆ, ಮೂರನ್ನು ಒಟ್ಟೊಟ್ಟಿಗೆ ಮೋಹದ ಮೋಡಗಳು ಕವನಸಂಕಲನದಲ್ಲಿ ಮಜಬೂತಾಗಿ ವರ್ಣಿಸಿರುವುದು ವಿಶೇಷವೇ ಸರಿ.
ತಮ್ಮ ತವರೂರಾದ ನವಿಲುರೂನಿಂದ ಹಿಡಿದು, ಭಾರತ ದೇಶದ ಬಗ್ಗೆಯೂ ಕವಿತೆಗಳನ್ನು ರಚಿಸಿ ದೇಶಪ್ರೇಮ ಮೆರೆದಿದ್ದಾರೆ. ತನ್ನ ಪ್ರೇಯಸಿಯನ್ನು ಕವಿತೆಗಳ ಮೂಲಕ ಕಾಡಿ, ಬೇಡಿ, ಆರಾಧಿಸಿ, ಹೊಟ್ಟೆ ಉರಿಸಿಕೊಂಡಿರುವ ಪ್ರೇಮ ಲಹರಿ ಒಂದೆಡೆ ಅದ್ಭುತವಾಗಿ ಮೂಡಿ ಬಂದಿದೆ.
ಜೊತೆಗೆ ಪ್ರಕೃತಿಯ ಮಡಿಲಿನಲ್ಲಿ ಜೀವನ ನಡೆಸುವ ಇವರು ತಮ್ಮ ಕವನ ಸಂಕಲನದಲ್ಲಿ ಪ್ರಕೃತಿಯ ವಿವಿಧ ರೀತಿಯ ಮಜಲುಗಳನ್ನು ತುಂಬಾ ಮೋಹಕವಾಗಿ ವರ್ಣಿಸಿದ್ದಾರೆ ಒಂದೆರಡು ಕವಿತೆಗಳಾದ, ಹೀಗೇಕೆ?, ಕಣ್ಣೀರ ಮಳೆ ನಾನು ತುಂಬಾ ಭಾವುಕಳಾದ ಕವಿತೆಗಳು. ತಮ್ಮ ತಂಗಿಯರಿಗೆ ಕವಿತೆ ಬರೆದು ಅಣ್ಣನ ವಾಸ್ತಲ್ಯವನ್ನು ಮೆರೆದಿರುವುದು ಬಾಂಧವ್ಯಗಳಿಗೆ ಸಂಬಂಧಗಳಿಗೆ ಇವರು ನೀಡುವ ಪ್ರಾಮುಖ್ಯತೆಯನ್ನು ಕಲಿಸಿಕೊಡುತ್ತವೆ.
ಭಾರತದ ಬೆನ್ನೆಲುಬು ರೈತ, ಮತ್ತು ಯೋಧರಿಗೆ ನೈಜ್ಯತೆಯ ವಂದನಾರ್ಪಣೆ ಸಲ್ಲಿಸಿದ್ದಾರೆ. “ಈ ಪುಸ್ತಕದ ಪ್ರತಿ ಪುಟಗಳ ತೆನೆ ಹಿಡಿದ ಕೈಗಳು ಚಿಹ್ನೆಯೂ” ಕವಿಯ ರೈತನ ಮೇಲಿನ ಅಭಿಮಾನ ತಿಳಿಸಿಕೊಡುತ್ತದೆ.
ಮೊಟ್ಟಮೊದಲ ಪ್ರಯತ್ನವೇ ರಂಗುರಂಗಾಗಿದ್ದರು, ಮೋಹದ ಮೋಡಗಳಂತೆ ತಿಳಿಯಾಗಿರುವಂತೆ ಬಾಸವಾಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಅತಿ ಹೆಚ್ಚು ವಿಮರ್ಶೆ, ಕಥೆ, ಕವನ, ಕಾದಂಬರಿ ನಿಮ್ಮಿಂದ ಕರುನಾಡಿಗೆ ಕೊಡುಗೆ ಆಗಲಿ ಕನ್ನಡ ಲೋಕದ ಜ್ಞಾನಪೀಠಗಳ ಹೃದಯದ ಸಾಲಿನಲ್ಲಿ ನೀವು ಸೇರಿ ಶುಭವಾಗಲಿ ಎಂದು ಆಶಿಸುವ ನಿಮ್ಮ ಪ್ರೀತಿಯ ಸಹೋದರಿ ಸಿಂಪಲ್ ಸಿಂಚು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಅನ್ನಕ್ಕೆ ಯಾವ ಧರ್ಮ..? ಮತ್ತು ಇತರೆ ಕವಿತೆಗಳು

~ವಿಜಯ್ ನವಿಲೇಹಾಳು
ನನ್ನ ಮನವ, ಹಸಿದ ತೋಳಗಳಂತೆ ಕಿತ್ತು ತಿಂದು ಅದೆಷ್ಟೋ ದಿನಗಳಿಂದ ಎದೆನಡುಗಿಸುತ್ತ ರಣಕೇಕೆ ಹಾಕುತ್ತಿರುವ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ
ಮಾರಮ್ಮನ ಜಾತ್ರೆಯ ಪ್ರಸಾದ,
ಮೊಹರಮ್ ನ ಚೋಂಗಿ ಕೂಡಿ ಉಂಡು
ಅಡುಗೆ ರುಚಿಯೂ; ಮಾಯಾ ದೀವಿಗೆಯನು
ತಿಕ್ಕಿದಾಗ ಬರುವ ಜೀನಿಯಂತೆ ಅದ್ಭುತ ವಾಗಿತ್ತು
ಪಂಕ್ತಿಯಲ್ಲಿ ಹಿಂದುವೋ, ಮುಸಲ್ಮಾನನೋ, ಕ್ರಿಶ್ಚಿಯನ್ನನೋ, ಯಾರಾದರೇನು? ಅನ್ನಕ್ಕೆ ಯಾವ ಧರ್ಮ ?
ಈಗ ಅಲ್ಲೆಲ್ಲೊ ಯಾರೋ ಕೆಲವರು ಜಾತಿ ಧರ್ಮದ ವಿಷವನು ಹನಿ ಹನಿ ಉಣಬಡಿಸಿ ಊರಿಗೂರಿಗೆ ದ್ವೇಷದ ನಶೆಯೇರಿಸಿದ್ದಾರೆ
ಈಗೀಗ ಅವರ ಹಸಿವು ನೀಗುತ್ತಿರುವುದು ಕ್ರೌರ್ಯದ ಕತ್ತಿಯಿಂದ ಜಿನಿಗುತ್ತಿರುವ ರಕ್ತದಿಂದ
ನಾನೆಂದು ಕವಿತೆ ಬರೆದವನಲ್ಲ ಎದೆಯೊಳಗಿನ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ.
ಇತರೆ ಕವಿತೆಗಳು
೧..
ಅವಳ ಮಾತುಗಳು ಅಲ್ಪ ಪ್ರಾಣಗಳಂತೆ
ಕಿವಿಗಳಿಗೆ ನಾಟುತ್ತವೆ
ಅವಳ ಮೌನ ಮಹಾ ಪ್ರಾಣಗಳಂತೆ
ಸೀದ ಹೃದಯಕ್ಕೆ ಅಪ್ಪಳಿಸುತ್ತವೆ
ಅವಳ ಮಾತು ಮತ್ತು ಮೌನದ ಕೊನೆಯಲಿ
ನಾನು ಅನುನಾಸಿಕದಂತೆ.
೨..
ಮಡಿವಂತಿಕೆಯೇ ಶ್ರೇಷ್ಟ ಮೈಲಿಗೆಯು ಅನಿಷ್ಟ ಅಂದುಕೊಂಡಿದ್ದರೆ ಊರಾಚೆಗಿನ ಕಲ್ಲು ಬಂಡೆ ವಿಗ್ರಹವಾಗುತ್ತಿರಲಿಲ್ಲ.
೩..
ಅವಳು ಅಣು ಅಣುವಾಗಿ ಹೃದಯದ
ಆಳವನು ಸೇರಿಕೊಂಡು ಬೇರು ಬಿಟ್ಟಳು
ಅವಳ ಒಲವಿನ ಆಕ್ರಮಣಕೆ
ನಾ ಮರುಮಾತುಗಳಾಡದೆ ಹೆಪ್ಪುಗಟ್ಟಿದೆ. (ಕವಿ:ವಿಜಯ್ ನವಿಲೇಹಾಳು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ

- ಅನಿತ ಮಂಜುನಾಥ
ಪ್ರೀತಿ,
ಅಜ್ಞಾತ ಅನೂಹ್ಯ.
ಭಾವಯಾನದ
ಬಾನ ಕೆಳಗೆ.
…….
ಸುರಿಯುವ ಮಳೆಯಲ್ಲಿ
ಕೊಡೆ ಮರೆತೆ,
ಆಗ ನೀ ನೆನಪಾದೆ.
…….
ನನ್ನ
ವಿರಹಗಳಿಗೆ,
ಕಾವ್ಯವೇ ಮದ್ದು ನನಗೆ,
ಮನದೊಳಗೊಂದು
ಸುಖ ಸದ್ದು !
…….
ಮಾತು ವಚನಗಳು,
ಮನ ಕಲಹಗಳಾಗದಿರಲಿ,
ಆಗಲಿ ಬಾಳಿನ ಆಶಾಕಿರಣ.
(ಅನಿತ ಮಂಜುನಾಥ ಅವರ ‘ ಬೆಳಕಿನ ಬೆನ್ನ ಹಿಂದೆ – ಹನಿಗವಿತೆಗಳ ಕವನ ಸಂಕಲನದಿಂದ ಈ ಮೇಲಿನ ಹನಿಗಳನ್ನು ಆಯ್ದುಕೊಳ್ಳಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಯಾವ ಕಾಲದ ಶಾಸ್ತ್ರವೇನು ಹೇಳಿದರೇನು..?

- ಕುವೆಂಪು
ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ?
ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !
ನೀರಡಿಸಿ ಬಂದ ಸೋದರಗೆ ನೀರನು ಕೊಡಲು
ಮನುಧರ್ಮಶಾಸ್ತ್ರವೆನಗೊರೆಯಬೇಕೇನು ?
ನೊಂದವರ ಕಂಬನಿಯನೊರಸಿ ಸಂತೈಸುವೊಡೆ
ಶಾಸ್ತ್ರ ಪ್ರಮಾಣವದಕಿರಲೆ ಬೇಕೇನು ?
ಪಂಚಮರ ಶಿಶುವೊಂದು ಕೆರೆಯಲ್ಲಿ ಮುಳುಗುತಿರೆ
ದಡದಲ್ಲಿ ಮಿಯುತ್ತ ನಿಂತಿರುವ ನಾನು
ಮುಟ್ಟಿದರೆ ಬ್ರಹ್ಮತ್ವ ಕೆಟ್ಟುಹೋಗುವುದೆಂದು
ಸುಮ್ಮನಿದ್ದರೆ ಶಾಸ್ತ್ರಸಮ್ಮತವದೇನು?
ಅಂತು ಮನು ತಾನು ಹೆಲಿರಲಾರನಯ್ಯಯ್ಯೊ!
ಹೇಳಿದ್ದರವನನೂ ಶಾಸ್ತ್ರದೊಳೆ ಸುತ್ತಿ,
ಸ್ವರ್ಗ ಹೋಗಲಿ, ಮತ್ತೆ ನರಕ ಬಂದರು ಬರಲಿ,
ಎದೆಯ ಧೈರ್ಯವ ಮಾಡಿ ಬಿಸುಡಾಚೆಗೆತ್ತಿ!
ಸ್ವರ್ಗ ಹೋಗುವುದಿಲ್ಲ, ನರಕ ಬರುವುದು ಇಲ್ಲ;
ಸ್ವರ್ಗ ನರಕಗಳೇನು ಶಾಸ್ತ್ರಸ್ಥವಲ್ಲ .
ಎದೆಯ ದನಿ ಧರ್ಮನಿಧಿ ! ಕರ್ತವ್ಯವದುವೆ ವಿಧಿ !
ನಂಬದನು; ಅದನುಳಿದು ಋಷಿಯು ಬೇರಿಲ್ಲ!
ಹಿಂದಿನಾ ಋಷಿಗಳೂ ಮಾನವರೆ ನಮ್ಮಂತೆ,
ಅವರ ಶಾಸ್ತ್ರವು ಅವರ ಕಾಲಕ್ಕೆ ಮಾತ್ರ;
ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ,
ನಮ್ಮ ಹೃದಯವೆ ನಮೆಗೆ ಶ್ರೀಧರ್ಮಸೂತ್ರ !(ರಾಷ್ಟ್ರಕವಿ ಕುವೆಂಪು ಅವರ ‘ಕೋಗಿಲೆ ಮತ್ತು ಸೋವಿಯಟ್ ರಷ್ಯ’ ಕವನಸಂಕಲನದಿಂದ )
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ