ದಿನದ ಸುದ್ದಿ
ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.
ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.
- ಬಸವರಾಜ ಹೂಗಾರ
ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.
ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.
- ಡಾ.ರಹಮತ್ ತರೀಕೆರೆ
ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.
- ಬಿ.ಶ್ರೀನಿವಾಸ,ಕೃತಿ ಲೇಖಕ
ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.
ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.
“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.
ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.
ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.
ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ
- ಡಾ.ರಾಮಚಂದ್ರ ಹಂಸನೂರು, ಬೆಟಗೇರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

