Connect with us

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending