ದಿನದ ಸುದ್ದಿ
ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು
![](https://suddidina.com/wp-content/uploads/2023/07/b_srinivasa_book_suddidina-1.jpg)
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.
ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.
- ಬಸವರಾಜ ಹೂಗಾರ
ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.
ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.
- ಡಾ.ರಹಮತ್ ತರೀಕೆರೆ
ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.
- ಬಿ.ಶ್ರೀನಿವಾಸ,ಕೃತಿ ಲೇಖಕ
ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.
ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.
“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.
ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.
ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.
ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ
- ಡಾ.ರಾಮಚಂದ್ರ ಹಂಸನೂರು, ಬೆಟಗೇರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!